Homeಅಂತರಾಷ್ಟ್ರೀಯಶ್ರೀಲಂಕಾ ವಿರುದ್ಧ ಮೊದಲ ಟಿ20 ಕ್ರಿಕೆಟ್ ಪಂದ್ಯ: ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಶ್ರೀಲಂಕಾ ವಿರುದ್ಧ ಮೊದಲ ಟಿ20 ಕ್ರಿಕೆಟ್ ಪಂದ್ಯ: ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಇಂದು ಭಾರತದಿಂದ ಕಣಕ್ಕಿಳಿಯುವ ಹನ್ನೊಂದರ ಬಳಗದ ವಿವರ ಇಲ್ಲಿದೆ.

- Advertisement -
- Advertisement -

ಭಾರತ ಶ್ರೀಲಂಕಾ ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲೇ ಭಾರತ ಗೆಲುವಿನೊಂದಿಗೆ ಸರಣಿ ಆರಂಭಿಸುವ ಗುರಿಯನ್ನು ಹೊಂದಿದೆ. ಆದರೆ, ವಿರಾಟ್‌ ಕೊಹ್ಲಿ, ರಿಷಭ್ ಪಂತ್ ಮತ್ತು ದೀಪಕ್‌ ಚಹರ್‌ ಅನುಪಸ್ಥಿತಿಯಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ನಾಯಕ ರೋಹಿತ್‌ ಶರ್ಮಾ ಯಾರಿಗೆಲ್ಲಾ ಸ್ಥಾನ ನೀಡಲಿದ್ದಾರೆ? ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.

ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಈಗಾಗಲೇ ವೆಸ್ಟ್‌ ಇಂಡೀಸ್‌ ವಿರುದ್ಧ ತವರಿನಲ್ಲಿ ನಡೆದ ಏಕದಿನ ಮತ್ತು ಟಿ20 ಸರಣಿಯಲ್ಲಿ ಕ್ಲೀನ್‌ ಸ್ವೀಪ್ ಸಾಧಿಸಿದೆ. ಹೀಗಾಗಿ ಇಂದಿನಿಂದ ಆರಂಭವಾಗಲಿರುವ ಸರಣಿಯ ಮೇಲೂ ಸಾಕಷ್ಟು ನಿರೀಕ್ಷೆಗಳು ಇವೆ. ಆದರೆ, ವಿಂಡೀಸ್‌ ವಿರುದ್ಧದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಆಟಗಾರರ ಅಲಭ್ಯತೆಯಲ್ಲಿ ಶ್ರೀಲಂಕಾ ವಿರುದ್ಧ ಬಿಸಿಸಿಐ ಆಯ್ಕೆ ಸಮಿತಿ ಹೊಸ ಯುವಕರ ತಂಡವನ್ನು ಘೋಷಿಸಿದ್ದು, ಯುವಕರ ಮೇಲೆ ಸಾಕಷ್ಟು ನಿರೀಕ್ಷೆಗಳು ಮೂಡಿವೆ.

ಹೀಗಿರಲಿದೆ ಭಾರತದ ಹನ್ನೊಂದರ ಬಳಗ

ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ನಾಯಕ ರೋಹಿತ್‌ ಶರ್ಮಾ ಮತ್ತು ಇಶಾನ್ ಕಿಶನ್‌ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಒಂದು ವೇಳೆ ಋತುರಾಜ್ ಗಾಯಕ್ವಾ‌ಡ್ ತಂಡದಲ್ಲಿ ಅವಕಾಶ ಪಡೆದರೆ ರೋಹಿತ್‌ ಶರ್ಮಾ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌, ಸಂಜು ಸ್ಯಾಮ್ಸನ್, ವೆಂಕಟೇಶ್ ಅಯ್ಯರ್‌, ದೀಪಲ್ ಹೂಡಾ ಮತ್ತು ರವೀಂದ್ರ ಜಡೇಜಾ ತಂಡಕ್ಕೆ ಬಲ ತುಂಬಲಿದ್ದಾರೆ.

ಇನ್ನೂ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್‌ ಬುಮ್ರಾ ತಂಡಕ್ಕೆ ಮರಳಿರುವುದು ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ತುಂಬಲಿದೆ. ಬುಮ್ರಾ ಜೊತೆಗೆ ಭುವನೇಶ್ವರ್‌ ಕುಮಾರ್‌, ಹರ್ಷಲ್ ಪಟೇಲ್, ಮಹಮ್ಮದ್ ಸಿರಾಜ್ ಮತ್ತು ರವಿ ಬಿಷ್ಣೋಯ್ ಸಾಥ್ ನೀಡಲಿದ್ದಾರೆ.

ಇದನ್ನೂ ಓದಿ:ರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ:…

ಗೆಲುವಿನ ಭರವಸೆಯಲ್ಲಿ ಶ್ರೀಲಂಕಾ

ಸತತ ಸೋಲಿನಿಂದ ಕಂಗೆಟ್ಟಿರುವ ಶ್ರೀಲಂಕಾ ತಂಡ ಸರಣಿ ಗೆಲುವಿನ ಹುಡುಕಾಟದಲ್ಲಿದೆ. ಕಳೆದ ವಾರ ಮುಕ್ತಾಯವಾದ ಆಸ್ಟ್ರೇಲಿಯಾ ಪ್ರವಾಸದಲ್ಲಿ 3-2 ಅಂತರದಲ್ಲಿ ಟಿ20 ಸರಣಿಯನ್ನು ಶ್ರೀಲಂಕಾ ಸೋತಿತ್ತು. ಆದರೆ, ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು ತಂಡದಲ್ಲಿ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಾಗಲು ಕಾರಣವಾಗಿದೆ. ಆದರೆ, ತಂಡದ ಬ್ಯಾಟಿಂಗ್ ವಿಭಾಗದ ಕಳಪೆ ಪ್ರದರ್ಶನ ಶ್ರೀಲಂಕಾ ನಾಯಕ ದಾಸುನ್ ಶನಕ ತಲೆ ನೋವಿಗೆ ಕಾರಣವಾಗಿದೆ.

 

ತಂಡಗಳು ಹೀಗಿದೆ

ಭಾರತದ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಮಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಯಜುವೇಂದ್ರ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್.

ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್, ಚರಿತ್ ಅಸಲಂಕಾ (ಉಪನಾಯಕ), ದಿನೇಶ್ ಚಂಡಿಮಲ್, ದನುಷ್ಕ ಗುಣತಿಲಕ, ಕಮಿಲ್ ಮಿಶ್ರಾ, ಜನಿತ್ ಲಿಯಾನಗೆ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ದುಷ್ಮಂತ ಚಮೀರ, ಲಹಿರು ಕುಮಾರ, ಭಿರುರನ್, ಬಿನುರ ಫೆರ್ನಾಂಡೋ, ಮಹೇಶ್ ತೀಕ್ಷಣ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ಆಶಿಯನ್ ಡೇನಿಯಲ್.


ಇದನ್ನೂ ಓದಿ; ಉದ್ಯಮವಾಗಿ ರೂಪುಗೊಳ್ಳುತ್ತಿರುವ ಕ್ರಿಕೆಟ್ ಮೈದಾನಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...