Homeಅಂತರಾಷ್ಟ್ರೀಯಶ್ರೀಲಂಕಾ ವಿರುದ್ಧ ಮೊದಲ ಟಿ20 ಕ್ರಿಕೆಟ್ ಪಂದ್ಯ: ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಶ್ರೀಲಂಕಾ ವಿರುದ್ಧ ಮೊದಲ ಟಿ20 ಕ್ರಿಕೆಟ್ ಪಂದ್ಯ: ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಇಂದು ಭಾರತದಿಂದ ಕಣಕ್ಕಿಳಿಯುವ ಹನ್ನೊಂದರ ಬಳಗದ ವಿವರ ಇಲ್ಲಿದೆ.

- Advertisement -
- Advertisement -

ಭಾರತ ಶ್ರೀಲಂಕಾ ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲೇ ಭಾರತ ಗೆಲುವಿನೊಂದಿಗೆ ಸರಣಿ ಆರಂಭಿಸುವ ಗುರಿಯನ್ನು ಹೊಂದಿದೆ. ಆದರೆ, ವಿರಾಟ್‌ ಕೊಹ್ಲಿ, ರಿಷಭ್ ಪಂತ್ ಮತ್ತು ದೀಪಕ್‌ ಚಹರ್‌ ಅನುಪಸ್ಥಿತಿಯಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ನಾಯಕ ರೋಹಿತ್‌ ಶರ್ಮಾ ಯಾರಿಗೆಲ್ಲಾ ಸ್ಥಾನ ನೀಡಲಿದ್ದಾರೆ? ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.

ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಈಗಾಗಲೇ ವೆಸ್ಟ್‌ ಇಂಡೀಸ್‌ ವಿರುದ್ಧ ತವರಿನಲ್ಲಿ ನಡೆದ ಏಕದಿನ ಮತ್ತು ಟಿ20 ಸರಣಿಯಲ್ಲಿ ಕ್ಲೀನ್‌ ಸ್ವೀಪ್ ಸಾಧಿಸಿದೆ. ಹೀಗಾಗಿ ಇಂದಿನಿಂದ ಆರಂಭವಾಗಲಿರುವ ಸರಣಿಯ ಮೇಲೂ ಸಾಕಷ್ಟು ನಿರೀಕ್ಷೆಗಳು ಇವೆ. ಆದರೆ, ವಿಂಡೀಸ್‌ ವಿರುದ್ಧದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಆಟಗಾರರ ಅಲಭ್ಯತೆಯಲ್ಲಿ ಶ್ರೀಲಂಕಾ ವಿರುದ್ಧ ಬಿಸಿಸಿಐ ಆಯ್ಕೆ ಸಮಿತಿ ಹೊಸ ಯುವಕರ ತಂಡವನ್ನು ಘೋಷಿಸಿದ್ದು, ಯುವಕರ ಮೇಲೆ ಸಾಕಷ್ಟು ನಿರೀಕ್ಷೆಗಳು ಮೂಡಿವೆ.

ಹೀಗಿರಲಿದೆ ಭಾರತದ ಹನ್ನೊಂದರ ಬಳಗ

ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ನಾಯಕ ರೋಹಿತ್‌ ಶರ್ಮಾ ಮತ್ತು ಇಶಾನ್ ಕಿಶನ್‌ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಒಂದು ವೇಳೆ ಋತುರಾಜ್ ಗಾಯಕ್ವಾ‌ಡ್ ತಂಡದಲ್ಲಿ ಅವಕಾಶ ಪಡೆದರೆ ರೋಹಿತ್‌ ಶರ್ಮಾ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌, ಸಂಜು ಸ್ಯಾಮ್ಸನ್, ವೆಂಕಟೇಶ್ ಅಯ್ಯರ್‌, ದೀಪಲ್ ಹೂಡಾ ಮತ್ತು ರವೀಂದ್ರ ಜಡೇಜಾ ತಂಡಕ್ಕೆ ಬಲ ತುಂಬಲಿದ್ದಾರೆ.

ಇನ್ನೂ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್‌ ಬುಮ್ರಾ ತಂಡಕ್ಕೆ ಮರಳಿರುವುದು ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ತುಂಬಲಿದೆ. ಬುಮ್ರಾ ಜೊತೆಗೆ ಭುವನೇಶ್ವರ್‌ ಕುಮಾರ್‌, ಹರ್ಷಲ್ ಪಟೇಲ್, ಮಹಮ್ಮದ್ ಸಿರಾಜ್ ಮತ್ತು ರವಿ ಬಿಷ್ಣೋಯ್ ಸಾಥ್ ನೀಡಲಿದ್ದಾರೆ.

ಇದನ್ನೂ ಓದಿ:ರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ:…

ಗೆಲುವಿನ ಭರವಸೆಯಲ್ಲಿ ಶ್ರೀಲಂಕಾ

ಸತತ ಸೋಲಿನಿಂದ ಕಂಗೆಟ್ಟಿರುವ ಶ್ರೀಲಂಕಾ ತಂಡ ಸರಣಿ ಗೆಲುವಿನ ಹುಡುಕಾಟದಲ್ಲಿದೆ. ಕಳೆದ ವಾರ ಮುಕ್ತಾಯವಾದ ಆಸ್ಟ್ರೇಲಿಯಾ ಪ್ರವಾಸದಲ್ಲಿ 3-2 ಅಂತರದಲ್ಲಿ ಟಿ20 ಸರಣಿಯನ್ನು ಶ್ರೀಲಂಕಾ ಸೋತಿತ್ತು. ಆದರೆ, ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು ತಂಡದಲ್ಲಿ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಾಗಲು ಕಾರಣವಾಗಿದೆ. ಆದರೆ, ತಂಡದ ಬ್ಯಾಟಿಂಗ್ ವಿಭಾಗದ ಕಳಪೆ ಪ್ರದರ್ಶನ ಶ್ರೀಲಂಕಾ ನಾಯಕ ದಾಸುನ್ ಶನಕ ತಲೆ ನೋವಿಗೆ ಕಾರಣವಾಗಿದೆ.

 

ತಂಡಗಳು ಹೀಗಿದೆ

ಭಾರತದ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಮಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಯಜುವೇಂದ್ರ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್.

ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್, ಚರಿತ್ ಅಸಲಂಕಾ (ಉಪನಾಯಕ), ದಿನೇಶ್ ಚಂಡಿಮಲ್, ದನುಷ್ಕ ಗುಣತಿಲಕ, ಕಮಿಲ್ ಮಿಶ್ರಾ, ಜನಿತ್ ಲಿಯಾನಗೆ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ದುಷ್ಮಂತ ಚಮೀರ, ಲಹಿರು ಕುಮಾರ, ಭಿರುರನ್, ಬಿನುರ ಫೆರ್ನಾಂಡೋ, ಮಹೇಶ್ ತೀಕ್ಷಣ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ಆಶಿಯನ್ ಡೇನಿಯಲ್.


ಇದನ್ನೂ ಓದಿ; ಉದ್ಯಮವಾಗಿ ರೂಪುಗೊಳ್ಳುತ್ತಿರುವ ಕ್ರಿಕೆಟ್ ಮೈದಾನಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...