Homeಮುಖಪುಟತಮಿಳುನಾಡಿನಲ್ಲಿ ಮೊದಲ ಟ್ರಾನ್ಸ್‌ಜೆಂಡರ್‌ ನರ್ಸ್‌ ಆಗಿ ನೇಮಕಕೊಂಡ ಅನ್ಬು ರೂಬಿ...

ತಮಿಳುನಾಡಿನಲ್ಲಿ ಮೊದಲ ಟ್ರಾನ್ಸ್‌ಜೆಂಡರ್‌ ನರ್ಸ್‌ ಆಗಿ ನೇಮಕಕೊಂಡ ಅನ್ಬು ರೂಬಿ…

ನಾನು ಸಾಧ್ಯವಾದಷ್ಟು ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಶುಶ್ರೂಷಕಿ ಕೆಲಸವನ್ನು ಆಯ್ದುಕೊಂಡೆ" ಎನ್ನುತ್ತಾರೆ ಅನ್ಬು ರೂಬಿ

- Advertisement -
- Advertisement -

25 ವರ್ಷದ ಅನ್ಬು ರೂಬಿ ಅವರು ತಮಿಳುನಾಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದಾದಿಯಾಗಿ ನೇಮಕಗೊಂಡ ಮೊದಲ ಟ್ರಾನ್ಸ್‌ಜೆಂಡರ್‌ ಆಗಿದ್ದಾರೆ. ಅನ್ಬು ರೂಬಿಯು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಆರೋಗ್ಯ ಸಚಿವ ಸಿ ವಿಜಯಬಾಸ್ಕರ್ ಅವರಿಂದ ನಿನ್ನೆ ನೇಮಕಾತಿ ಆದೇಶವನ್ನು ಪಡೆದರು.

“ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ಇತಿಹಾಸದಲ್ಲಿ ಮೊದಲ ಬಾರಿಗೆ ನಾವು ಟ್ರಾನ್ಸ್‌ಜೆಂಡರ್‌ರನ್ನು ದಾದಿಯಾಗಿ ನೇಮಕ ಮಾಡಿಕೊಂಡಿದ್ದೇವೆ. ಇದು ರಾಜ್ಯಕ್ಕೆ ಬಹಳ ಹೆಮ್ಮೆಯ ಕ್ಷಣವಾಗಿದೆ” ಎಂದು ವಿಜಯಬಾಸ್ಕರ್ ಎಎನ್‌ಐಗೆ ತಿಳಿಸಿದ್ದಾರೆ.

ಸರ್ಕಾರಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ ರೂಬಿ, “ಈ ಬಗ್ಗೆ ನನಗೆ ನಿಜಕ್ಕೂ ಸಂತೋಷವಾಗಿದೆ. ನಾನು ದಾದಿಯಾಗಿ ನೇಮಕಗೊಂಡ ಭಾರತದ ಮೊದಲ ಟ್ರಾನ್ಸ್‌ಜೆಂಡರ್‌ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದೇನೆ. ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ನನ್ನ ಎದೆಯಾಳದ ಕೃತಜ್ಞತೆಯನ್ನು ಅರ್ಪಿಸುತ್ತೇನೆ” ಎಂದು ಹೇಳಿದ್ದಾರೆ.

ತೂತುಕುಡಿ ಮೂಲದ ರೂಬಿ, ತಿರುನೆಲ್ವೇಲಿಯ ಖಾಸಗಿ ಕಾಲೇಜಿನಲ್ಲಿ 2016 ರಲ್ಲಿ ಬಿಎಸ್ಸಿ ನರ್ಸಿಂಗ್ ಮುಗಿಸಿದರು. ನಂತರ ಎಂಬಿಎಯಲ್ಲಿ ಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ ಕೋರ್ಸ್ ಅನ್ನು ದೂರ ಶಿಕ್ಷಣ ವಿಭಾಗದಲ್ಲಿ ಅಧ್ಯಯನ ಮಾಡಿದ್ದಾರೆ.

“ನನ್ನ ಸಮುದಾಯಕ್ಕೆ ನಾನು ಉದಾಹರಣೆಯಾಗಲು ಬಯಸುತ್ತೇನೆ. ನಮ್ಮವರಲ್ಲಿ ಅನೇಕರು ಕಟ್ಟುಪಾಡಿಗಳಿಂದ ಹೊರಬಂದು ತಮ್ಮ ಜೀವನದಲ್ಲಿ ಮಹತ್ತರವಾದುದ್ದನ್ನು ಸಾಧಿಸಬೇಕು. ನಾನು ಸಾಧ್ಯವಾದಷ್ಟು ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಶುಶ್ರೂಷಕಿ ಕೆಲಸವನ್ನು ಆಯ್ದುಕೊಂಡೆ” ಎಂದು ಅನ್ಬು ರೂಬಿ ಅಭಿಪ್ರಾಯಪಟ್ಟಿದ್ದಾರೆ.

ತಾನು ಶಿಕ್ಷಣ ಪಡೆಯಲು ಪಟ್ಟ ಶ್ರಮದ ಬಗ್ಗೆಯೂ ರೂಬಿ ಹೇಳಿಕೊಂಡಿದ್ದಾರೆ. “ನಾನು ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದವಳು ಮತ್ತು ಸಾಕಷ್ಟು ಹೋರಾಟದಿಂದ ನನ್ನ ಶಿಕ್ಷಣವನ್ನು ಪಡೆದಿದ್ದೇನೆ. ನನ್ನ ಚಿಕ್ಕ ವಯಸ್ಸಿನಲ್ಲಿ ನನ್ನ ತಂದೆ ದೃಷ್ಟಿ ಕಳೆದುಕೊಂಡರು. ನಂತರ ನನ್ನ ತಾಯಿ ನಮ್ಮ ಕುಟುಂಬ ಮತ್ತು ನನ್ನ ಶಿಕ್ಷಣಕ್ಕಾಗಿ ಹಣ ಸಂಪಾದಿಸಲು ಬಾಳೆ ಎಲೆಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು” ಎಂದಿದ್ದಾರೆ.

ಟ್ರಾನ್ಸ್‌ಜೆಂಡರ್‌ಗಳ ಬಗ್ಗೆ ಸಮಾಜವು ಹೊಂದಿರುವ ಜಾಗೃತಿಯ ಮಟ್ಟ ಕುರಿತು ಮಾತನಾಡಿದ ಅವರು “ಸಮಾಜವು ಟ್ರಾನ್ಸ್‌ಜೆಂಡರ್‌ ಜನರ ಬಗ್ಗೆ ಹೆಚ್ಚು ತಿಳಿದಿಲ್ಲ. ಅವರು ಟ್ರಾನ್ಸ್‌ಜೆಂಡರ್‌‌ಗಳನ್ನು ಮೊದಲು ಒಪ್ಪಿಕೊಳ್ಳಬೇಕು. ಒಪ್ಪಿಕೊಳ್ಳುವುದೇ ಒಂದು ದೊಡ್ಡ ಪರಿಹಾರವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....