Homeಮುಖಪುಟತಮಿಳುನಾಡಿನಲ್ಲಿ ಮೊದಲ ಟ್ರಾನ್ಸ್‌ಜೆಂಡರ್‌ ನರ್ಸ್‌ ಆಗಿ ನೇಮಕಕೊಂಡ ಅನ್ಬು ರೂಬಿ...

ತಮಿಳುನಾಡಿನಲ್ಲಿ ಮೊದಲ ಟ್ರಾನ್ಸ್‌ಜೆಂಡರ್‌ ನರ್ಸ್‌ ಆಗಿ ನೇಮಕಕೊಂಡ ಅನ್ಬು ರೂಬಿ…

ನಾನು ಸಾಧ್ಯವಾದಷ್ಟು ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಶುಶ್ರೂಷಕಿ ಕೆಲಸವನ್ನು ಆಯ್ದುಕೊಂಡೆ" ಎನ್ನುತ್ತಾರೆ ಅನ್ಬು ರೂಬಿ

- Advertisement -
- Advertisement -

25 ವರ್ಷದ ಅನ್ಬು ರೂಬಿ ಅವರು ತಮಿಳುನಾಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದಾದಿಯಾಗಿ ನೇಮಕಗೊಂಡ ಮೊದಲ ಟ್ರಾನ್ಸ್‌ಜೆಂಡರ್‌ ಆಗಿದ್ದಾರೆ. ಅನ್ಬು ರೂಬಿಯು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಆರೋಗ್ಯ ಸಚಿವ ಸಿ ವಿಜಯಬಾಸ್ಕರ್ ಅವರಿಂದ ನಿನ್ನೆ ನೇಮಕಾತಿ ಆದೇಶವನ್ನು ಪಡೆದರು.

“ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ಇತಿಹಾಸದಲ್ಲಿ ಮೊದಲ ಬಾರಿಗೆ ನಾವು ಟ್ರಾನ್ಸ್‌ಜೆಂಡರ್‌ರನ್ನು ದಾದಿಯಾಗಿ ನೇಮಕ ಮಾಡಿಕೊಂಡಿದ್ದೇವೆ. ಇದು ರಾಜ್ಯಕ್ಕೆ ಬಹಳ ಹೆಮ್ಮೆಯ ಕ್ಷಣವಾಗಿದೆ” ಎಂದು ವಿಜಯಬಾಸ್ಕರ್ ಎಎನ್‌ಐಗೆ ತಿಳಿಸಿದ್ದಾರೆ.

ಸರ್ಕಾರಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ ರೂಬಿ, “ಈ ಬಗ್ಗೆ ನನಗೆ ನಿಜಕ್ಕೂ ಸಂತೋಷವಾಗಿದೆ. ನಾನು ದಾದಿಯಾಗಿ ನೇಮಕಗೊಂಡ ಭಾರತದ ಮೊದಲ ಟ್ರಾನ್ಸ್‌ಜೆಂಡರ್‌ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದೇನೆ. ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ನನ್ನ ಎದೆಯಾಳದ ಕೃತಜ್ಞತೆಯನ್ನು ಅರ್ಪಿಸುತ್ತೇನೆ” ಎಂದು ಹೇಳಿದ್ದಾರೆ.

ತೂತುಕುಡಿ ಮೂಲದ ರೂಬಿ, ತಿರುನೆಲ್ವೇಲಿಯ ಖಾಸಗಿ ಕಾಲೇಜಿನಲ್ಲಿ 2016 ರಲ್ಲಿ ಬಿಎಸ್ಸಿ ನರ್ಸಿಂಗ್ ಮುಗಿಸಿದರು. ನಂತರ ಎಂಬಿಎಯಲ್ಲಿ ಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ ಕೋರ್ಸ್ ಅನ್ನು ದೂರ ಶಿಕ್ಷಣ ವಿಭಾಗದಲ್ಲಿ ಅಧ್ಯಯನ ಮಾಡಿದ್ದಾರೆ.

“ನನ್ನ ಸಮುದಾಯಕ್ಕೆ ನಾನು ಉದಾಹರಣೆಯಾಗಲು ಬಯಸುತ್ತೇನೆ. ನಮ್ಮವರಲ್ಲಿ ಅನೇಕರು ಕಟ್ಟುಪಾಡಿಗಳಿಂದ ಹೊರಬಂದು ತಮ್ಮ ಜೀವನದಲ್ಲಿ ಮಹತ್ತರವಾದುದ್ದನ್ನು ಸಾಧಿಸಬೇಕು. ನಾನು ಸಾಧ್ಯವಾದಷ್ಟು ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಶುಶ್ರೂಷಕಿ ಕೆಲಸವನ್ನು ಆಯ್ದುಕೊಂಡೆ” ಎಂದು ಅನ್ಬು ರೂಬಿ ಅಭಿಪ್ರಾಯಪಟ್ಟಿದ್ದಾರೆ.

ತಾನು ಶಿಕ್ಷಣ ಪಡೆಯಲು ಪಟ್ಟ ಶ್ರಮದ ಬಗ್ಗೆಯೂ ರೂಬಿ ಹೇಳಿಕೊಂಡಿದ್ದಾರೆ. “ನಾನು ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದವಳು ಮತ್ತು ಸಾಕಷ್ಟು ಹೋರಾಟದಿಂದ ನನ್ನ ಶಿಕ್ಷಣವನ್ನು ಪಡೆದಿದ್ದೇನೆ. ನನ್ನ ಚಿಕ್ಕ ವಯಸ್ಸಿನಲ್ಲಿ ನನ್ನ ತಂದೆ ದೃಷ್ಟಿ ಕಳೆದುಕೊಂಡರು. ನಂತರ ನನ್ನ ತಾಯಿ ನಮ್ಮ ಕುಟುಂಬ ಮತ್ತು ನನ್ನ ಶಿಕ್ಷಣಕ್ಕಾಗಿ ಹಣ ಸಂಪಾದಿಸಲು ಬಾಳೆ ಎಲೆಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು” ಎಂದಿದ್ದಾರೆ.

ಟ್ರಾನ್ಸ್‌ಜೆಂಡರ್‌ಗಳ ಬಗ್ಗೆ ಸಮಾಜವು ಹೊಂದಿರುವ ಜಾಗೃತಿಯ ಮಟ್ಟ ಕುರಿತು ಮಾತನಾಡಿದ ಅವರು “ಸಮಾಜವು ಟ್ರಾನ್ಸ್‌ಜೆಂಡರ್‌ ಜನರ ಬಗ್ಗೆ ಹೆಚ್ಚು ತಿಳಿದಿಲ್ಲ. ಅವರು ಟ್ರಾನ್ಸ್‌ಜೆಂಡರ್‌‌ಗಳನ್ನು ಮೊದಲು ಒಪ್ಪಿಕೊಳ್ಳಬೇಕು. ಒಪ್ಪಿಕೊಳ್ಳುವುದೇ ಒಂದು ದೊಡ್ಡ ಪರಿಹಾರವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...