Homeಮುಖಪುಟತಮಿಳುನಾಡಿನಲ್ಲಿ ಮೊದಲ ಟ್ರಾನ್ಸ್‌ಜೆಂಡರ್‌ ನರ್ಸ್‌ ಆಗಿ ನೇಮಕಕೊಂಡ ಅನ್ಬು ರೂಬಿ...

ತಮಿಳುನಾಡಿನಲ್ಲಿ ಮೊದಲ ಟ್ರಾನ್ಸ್‌ಜೆಂಡರ್‌ ನರ್ಸ್‌ ಆಗಿ ನೇಮಕಕೊಂಡ ಅನ್ಬು ರೂಬಿ…

ನಾನು ಸಾಧ್ಯವಾದಷ್ಟು ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಶುಶ್ರೂಷಕಿ ಕೆಲಸವನ್ನು ಆಯ್ದುಕೊಂಡೆ" ಎನ್ನುತ್ತಾರೆ ಅನ್ಬು ರೂಬಿ

- Advertisement -
- Advertisement -

25 ವರ್ಷದ ಅನ್ಬು ರೂಬಿ ಅವರು ತಮಿಳುನಾಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದಾದಿಯಾಗಿ ನೇಮಕಗೊಂಡ ಮೊದಲ ಟ್ರಾನ್ಸ್‌ಜೆಂಡರ್‌ ಆಗಿದ್ದಾರೆ. ಅನ್ಬು ರೂಬಿಯು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಆರೋಗ್ಯ ಸಚಿವ ಸಿ ವಿಜಯಬಾಸ್ಕರ್ ಅವರಿಂದ ನಿನ್ನೆ ನೇಮಕಾತಿ ಆದೇಶವನ್ನು ಪಡೆದರು.

“ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ಇತಿಹಾಸದಲ್ಲಿ ಮೊದಲ ಬಾರಿಗೆ ನಾವು ಟ್ರಾನ್ಸ್‌ಜೆಂಡರ್‌ರನ್ನು ದಾದಿಯಾಗಿ ನೇಮಕ ಮಾಡಿಕೊಂಡಿದ್ದೇವೆ. ಇದು ರಾಜ್ಯಕ್ಕೆ ಬಹಳ ಹೆಮ್ಮೆಯ ಕ್ಷಣವಾಗಿದೆ” ಎಂದು ವಿಜಯಬಾಸ್ಕರ್ ಎಎನ್‌ಐಗೆ ತಿಳಿಸಿದ್ದಾರೆ.

ಸರ್ಕಾರಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ ರೂಬಿ, “ಈ ಬಗ್ಗೆ ನನಗೆ ನಿಜಕ್ಕೂ ಸಂತೋಷವಾಗಿದೆ. ನಾನು ದಾದಿಯಾಗಿ ನೇಮಕಗೊಂಡ ಭಾರತದ ಮೊದಲ ಟ್ರಾನ್ಸ್‌ಜೆಂಡರ್‌ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದೇನೆ. ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ನನ್ನ ಎದೆಯಾಳದ ಕೃತಜ್ಞತೆಯನ್ನು ಅರ್ಪಿಸುತ್ತೇನೆ” ಎಂದು ಹೇಳಿದ್ದಾರೆ.

ತೂತುಕುಡಿ ಮೂಲದ ರೂಬಿ, ತಿರುನೆಲ್ವೇಲಿಯ ಖಾಸಗಿ ಕಾಲೇಜಿನಲ್ಲಿ 2016 ರಲ್ಲಿ ಬಿಎಸ್ಸಿ ನರ್ಸಿಂಗ್ ಮುಗಿಸಿದರು. ನಂತರ ಎಂಬಿಎಯಲ್ಲಿ ಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ ಕೋರ್ಸ್ ಅನ್ನು ದೂರ ಶಿಕ್ಷಣ ವಿಭಾಗದಲ್ಲಿ ಅಧ್ಯಯನ ಮಾಡಿದ್ದಾರೆ.

“ನನ್ನ ಸಮುದಾಯಕ್ಕೆ ನಾನು ಉದಾಹರಣೆಯಾಗಲು ಬಯಸುತ್ತೇನೆ. ನಮ್ಮವರಲ್ಲಿ ಅನೇಕರು ಕಟ್ಟುಪಾಡಿಗಳಿಂದ ಹೊರಬಂದು ತಮ್ಮ ಜೀವನದಲ್ಲಿ ಮಹತ್ತರವಾದುದ್ದನ್ನು ಸಾಧಿಸಬೇಕು. ನಾನು ಸಾಧ್ಯವಾದಷ್ಟು ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಶುಶ್ರೂಷಕಿ ಕೆಲಸವನ್ನು ಆಯ್ದುಕೊಂಡೆ” ಎಂದು ಅನ್ಬು ರೂಬಿ ಅಭಿಪ್ರಾಯಪಟ್ಟಿದ್ದಾರೆ.

ತಾನು ಶಿಕ್ಷಣ ಪಡೆಯಲು ಪಟ್ಟ ಶ್ರಮದ ಬಗ್ಗೆಯೂ ರೂಬಿ ಹೇಳಿಕೊಂಡಿದ್ದಾರೆ. “ನಾನು ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದವಳು ಮತ್ತು ಸಾಕಷ್ಟು ಹೋರಾಟದಿಂದ ನನ್ನ ಶಿಕ್ಷಣವನ್ನು ಪಡೆದಿದ್ದೇನೆ. ನನ್ನ ಚಿಕ್ಕ ವಯಸ್ಸಿನಲ್ಲಿ ನನ್ನ ತಂದೆ ದೃಷ್ಟಿ ಕಳೆದುಕೊಂಡರು. ನಂತರ ನನ್ನ ತಾಯಿ ನಮ್ಮ ಕುಟುಂಬ ಮತ್ತು ನನ್ನ ಶಿಕ್ಷಣಕ್ಕಾಗಿ ಹಣ ಸಂಪಾದಿಸಲು ಬಾಳೆ ಎಲೆಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು” ಎಂದಿದ್ದಾರೆ.

ಟ್ರಾನ್ಸ್‌ಜೆಂಡರ್‌ಗಳ ಬಗ್ಗೆ ಸಮಾಜವು ಹೊಂದಿರುವ ಜಾಗೃತಿಯ ಮಟ್ಟ ಕುರಿತು ಮಾತನಾಡಿದ ಅವರು “ಸಮಾಜವು ಟ್ರಾನ್ಸ್‌ಜೆಂಡರ್‌ ಜನರ ಬಗ್ಗೆ ಹೆಚ್ಚು ತಿಳಿದಿಲ್ಲ. ಅವರು ಟ್ರಾನ್ಸ್‌ಜೆಂಡರ್‌‌ಗಳನ್ನು ಮೊದಲು ಒಪ್ಪಿಕೊಳ್ಳಬೇಕು. ಒಪ್ಪಿಕೊಳ್ಳುವುದೇ ಒಂದು ದೊಡ್ಡ ಪರಿಹಾರವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...