Homeಮುಖಪುಟತಮಿಳುನಾಡಿನಲ್ಲಿ ಮೊದಲ ಟ್ರಾನ್ಸ್‌ಜೆಂಡರ್‌ ನರ್ಸ್‌ ಆಗಿ ನೇಮಕಕೊಂಡ ಅನ್ಬು ರೂಬಿ...

ತಮಿಳುನಾಡಿನಲ್ಲಿ ಮೊದಲ ಟ್ರಾನ್ಸ್‌ಜೆಂಡರ್‌ ನರ್ಸ್‌ ಆಗಿ ನೇಮಕಕೊಂಡ ಅನ್ಬು ರೂಬಿ…

ನಾನು ಸಾಧ್ಯವಾದಷ್ಟು ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಶುಶ್ರೂಷಕಿ ಕೆಲಸವನ್ನು ಆಯ್ದುಕೊಂಡೆ" ಎನ್ನುತ್ತಾರೆ ಅನ್ಬು ರೂಬಿ

- Advertisement -
- Advertisement -

25 ವರ್ಷದ ಅನ್ಬು ರೂಬಿ ಅವರು ತಮಿಳುನಾಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದಾದಿಯಾಗಿ ನೇಮಕಗೊಂಡ ಮೊದಲ ಟ್ರಾನ್ಸ್‌ಜೆಂಡರ್‌ ಆಗಿದ್ದಾರೆ. ಅನ್ಬು ರೂಬಿಯು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಆರೋಗ್ಯ ಸಚಿವ ಸಿ ವಿಜಯಬಾಸ್ಕರ್ ಅವರಿಂದ ನಿನ್ನೆ ನೇಮಕಾತಿ ಆದೇಶವನ್ನು ಪಡೆದರು.

“ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ಇತಿಹಾಸದಲ್ಲಿ ಮೊದಲ ಬಾರಿಗೆ ನಾವು ಟ್ರಾನ್ಸ್‌ಜೆಂಡರ್‌ರನ್ನು ದಾದಿಯಾಗಿ ನೇಮಕ ಮಾಡಿಕೊಂಡಿದ್ದೇವೆ. ಇದು ರಾಜ್ಯಕ್ಕೆ ಬಹಳ ಹೆಮ್ಮೆಯ ಕ್ಷಣವಾಗಿದೆ” ಎಂದು ವಿಜಯಬಾಸ್ಕರ್ ಎಎನ್‌ಐಗೆ ತಿಳಿಸಿದ್ದಾರೆ.

ಸರ್ಕಾರಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ ರೂಬಿ, “ಈ ಬಗ್ಗೆ ನನಗೆ ನಿಜಕ್ಕೂ ಸಂತೋಷವಾಗಿದೆ. ನಾನು ದಾದಿಯಾಗಿ ನೇಮಕಗೊಂಡ ಭಾರತದ ಮೊದಲ ಟ್ರಾನ್ಸ್‌ಜೆಂಡರ್‌ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದೇನೆ. ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ನನ್ನ ಎದೆಯಾಳದ ಕೃತಜ್ಞತೆಯನ್ನು ಅರ್ಪಿಸುತ್ತೇನೆ” ಎಂದು ಹೇಳಿದ್ದಾರೆ.

ತೂತುಕುಡಿ ಮೂಲದ ರೂಬಿ, ತಿರುನೆಲ್ವೇಲಿಯ ಖಾಸಗಿ ಕಾಲೇಜಿನಲ್ಲಿ 2016 ರಲ್ಲಿ ಬಿಎಸ್ಸಿ ನರ್ಸಿಂಗ್ ಮುಗಿಸಿದರು. ನಂತರ ಎಂಬಿಎಯಲ್ಲಿ ಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ ಕೋರ್ಸ್ ಅನ್ನು ದೂರ ಶಿಕ್ಷಣ ವಿಭಾಗದಲ್ಲಿ ಅಧ್ಯಯನ ಮಾಡಿದ್ದಾರೆ.

“ನನ್ನ ಸಮುದಾಯಕ್ಕೆ ನಾನು ಉದಾಹರಣೆಯಾಗಲು ಬಯಸುತ್ತೇನೆ. ನಮ್ಮವರಲ್ಲಿ ಅನೇಕರು ಕಟ್ಟುಪಾಡಿಗಳಿಂದ ಹೊರಬಂದು ತಮ್ಮ ಜೀವನದಲ್ಲಿ ಮಹತ್ತರವಾದುದ್ದನ್ನು ಸಾಧಿಸಬೇಕು. ನಾನು ಸಾಧ್ಯವಾದಷ್ಟು ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಶುಶ್ರೂಷಕಿ ಕೆಲಸವನ್ನು ಆಯ್ದುಕೊಂಡೆ” ಎಂದು ಅನ್ಬು ರೂಬಿ ಅಭಿಪ್ರಾಯಪಟ್ಟಿದ್ದಾರೆ.

ತಾನು ಶಿಕ್ಷಣ ಪಡೆಯಲು ಪಟ್ಟ ಶ್ರಮದ ಬಗ್ಗೆಯೂ ರೂಬಿ ಹೇಳಿಕೊಂಡಿದ್ದಾರೆ. “ನಾನು ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದವಳು ಮತ್ತು ಸಾಕಷ್ಟು ಹೋರಾಟದಿಂದ ನನ್ನ ಶಿಕ್ಷಣವನ್ನು ಪಡೆದಿದ್ದೇನೆ. ನನ್ನ ಚಿಕ್ಕ ವಯಸ್ಸಿನಲ್ಲಿ ನನ್ನ ತಂದೆ ದೃಷ್ಟಿ ಕಳೆದುಕೊಂಡರು. ನಂತರ ನನ್ನ ತಾಯಿ ನಮ್ಮ ಕುಟುಂಬ ಮತ್ತು ನನ್ನ ಶಿಕ್ಷಣಕ್ಕಾಗಿ ಹಣ ಸಂಪಾದಿಸಲು ಬಾಳೆ ಎಲೆಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು” ಎಂದಿದ್ದಾರೆ.

ಟ್ರಾನ್ಸ್‌ಜೆಂಡರ್‌ಗಳ ಬಗ್ಗೆ ಸಮಾಜವು ಹೊಂದಿರುವ ಜಾಗೃತಿಯ ಮಟ್ಟ ಕುರಿತು ಮಾತನಾಡಿದ ಅವರು “ಸಮಾಜವು ಟ್ರಾನ್ಸ್‌ಜೆಂಡರ್‌ ಜನರ ಬಗ್ಗೆ ಹೆಚ್ಚು ತಿಳಿದಿಲ್ಲ. ಅವರು ಟ್ರಾನ್ಸ್‌ಜೆಂಡರ್‌‌ಗಳನ್ನು ಮೊದಲು ಒಪ್ಪಿಕೊಳ್ಳಬೇಕು. ಒಪ್ಪಿಕೊಳ್ಳುವುದೇ ಒಂದು ದೊಡ್ಡ ಪರಿಹಾರವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...