Homeಮುಖಪುಟತಮಿಳುನಾಡಿನಲ್ಲಿ ಮೊದಲ ಟ್ರಾನ್ಸ್‌ಜೆಂಡರ್‌ ನರ್ಸ್‌ ಆಗಿ ನೇಮಕಕೊಂಡ ಅನ್ಬು ರೂಬಿ...

ತಮಿಳುನಾಡಿನಲ್ಲಿ ಮೊದಲ ಟ್ರಾನ್ಸ್‌ಜೆಂಡರ್‌ ನರ್ಸ್‌ ಆಗಿ ನೇಮಕಕೊಂಡ ಅನ್ಬು ರೂಬಿ…

ನಾನು ಸಾಧ್ಯವಾದಷ್ಟು ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಶುಶ್ರೂಷಕಿ ಕೆಲಸವನ್ನು ಆಯ್ದುಕೊಂಡೆ" ಎನ್ನುತ್ತಾರೆ ಅನ್ಬು ರೂಬಿ

- Advertisement -
- Advertisement -

25 ವರ್ಷದ ಅನ್ಬು ರೂಬಿ ಅವರು ತಮಿಳುನಾಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದಾದಿಯಾಗಿ ನೇಮಕಗೊಂಡ ಮೊದಲ ಟ್ರಾನ್ಸ್‌ಜೆಂಡರ್‌ ಆಗಿದ್ದಾರೆ. ಅನ್ಬು ರೂಬಿಯು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಆರೋಗ್ಯ ಸಚಿವ ಸಿ ವಿಜಯಬಾಸ್ಕರ್ ಅವರಿಂದ ನಿನ್ನೆ ನೇಮಕಾತಿ ಆದೇಶವನ್ನು ಪಡೆದರು.

“ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ಇತಿಹಾಸದಲ್ಲಿ ಮೊದಲ ಬಾರಿಗೆ ನಾವು ಟ್ರಾನ್ಸ್‌ಜೆಂಡರ್‌ರನ್ನು ದಾದಿಯಾಗಿ ನೇಮಕ ಮಾಡಿಕೊಂಡಿದ್ದೇವೆ. ಇದು ರಾಜ್ಯಕ್ಕೆ ಬಹಳ ಹೆಮ್ಮೆಯ ಕ್ಷಣವಾಗಿದೆ” ಎಂದು ವಿಜಯಬಾಸ್ಕರ್ ಎಎನ್‌ಐಗೆ ತಿಳಿಸಿದ್ದಾರೆ.

ಸರ್ಕಾರಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ ರೂಬಿ, “ಈ ಬಗ್ಗೆ ನನಗೆ ನಿಜಕ್ಕೂ ಸಂತೋಷವಾಗಿದೆ. ನಾನು ದಾದಿಯಾಗಿ ನೇಮಕಗೊಂಡ ಭಾರತದ ಮೊದಲ ಟ್ರಾನ್ಸ್‌ಜೆಂಡರ್‌ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದೇನೆ. ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ನನ್ನ ಎದೆಯಾಳದ ಕೃತಜ್ಞತೆಯನ್ನು ಅರ್ಪಿಸುತ್ತೇನೆ” ಎಂದು ಹೇಳಿದ್ದಾರೆ.

ತೂತುಕುಡಿ ಮೂಲದ ರೂಬಿ, ತಿರುನೆಲ್ವೇಲಿಯ ಖಾಸಗಿ ಕಾಲೇಜಿನಲ್ಲಿ 2016 ರಲ್ಲಿ ಬಿಎಸ್ಸಿ ನರ್ಸಿಂಗ್ ಮುಗಿಸಿದರು. ನಂತರ ಎಂಬಿಎಯಲ್ಲಿ ಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ ಕೋರ್ಸ್ ಅನ್ನು ದೂರ ಶಿಕ್ಷಣ ವಿಭಾಗದಲ್ಲಿ ಅಧ್ಯಯನ ಮಾಡಿದ್ದಾರೆ.

“ನನ್ನ ಸಮುದಾಯಕ್ಕೆ ನಾನು ಉದಾಹರಣೆಯಾಗಲು ಬಯಸುತ್ತೇನೆ. ನಮ್ಮವರಲ್ಲಿ ಅನೇಕರು ಕಟ್ಟುಪಾಡಿಗಳಿಂದ ಹೊರಬಂದು ತಮ್ಮ ಜೀವನದಲ್ಲಿ ಮಹತ್ತರವಾದುದ್ದನ್ನು ಸಾಧಿಸಬೇಕು. ನಾನು ಸಾಧ್ಯವಾದಷ್ಟು ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಶುಶ್ರೂಷಕಿ ಕೆಲಸವನ್ನು ಆಯ್ದುಕೊಂಡೆ” ಎಂದು ಅನ್ಬು ರೂಬಿ ಅಭಿಪ್ರಾಯಪಟ್ಟಿದ್ದಾರೆ.

ತಾನು ಶಿಕ್ಷಣ ಪಡೆಯಲು ಪಟ್ಟ ಶ್ರಮದ ಬಗ್ಗೆಯೂ ರೂಬಿ ಹೇಳಿಕೊಂಡಿದ್ದಾರೆ. “ನಾನು ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದವಳು ಮತ್ತು ಸಾಕಷ್ಟು ಹೋರಾಟದಿಂದ ನನ್ನ ಶಿಕ್ಷಣವನ್ನು ಪಡೆದಿದ್ದೇನೆ. ನನ್ನ ಚಿಕ್ಕ ವಯಸ್ಸಿನಲ್ಲಿ ನನ್ನ ತಂದೆ ದೃಷ್ಟಿ ಕಳೆದುಕೊಂಡರು. ನಂತರ ನನ್ನ ತಾಯಿ ನಮ್ಮ ಕುಟುಂಬ ಮತ್ತು ನನ್ನ ಶಿಕ್ಷಣಕ್ಕಾಗಿ ಹಣ ಸಂಪಾದಿಸಲು ಬಾಳೆ ಎಲೆಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು” ಎಂದಿದ್ದಾರೆ.

ಟ್ರಾನ್ಸ್‌ಜೆಂಡರ್‌ಗಳ ಬಗ್ಗೆ ಸಮಾಜವು ಹೊಂದಿರುವ ಜಾಗೃತಿಯ ಮಟ್ಟ ಕುರಿತು ಮಾತನಾಡಿದ ಅವರು “ಸಮಾಜವು ಟ್ರಾನ್ಸ್‌ಜೆಂಡರ್‌ ಜನರ ಬಗ್ಗೆ ಹೆಚ್ಚು ತಿಳಿದಿಲ್ಲ. ಅವರು ಟ್ರಾನ್ಸ್‌ಜೆಂಡರ್‌‌ಗಳನ್ನು ಮೊದಲು ಒಪ್ಪಿಕೊಳ್ಳಬೇಕು. ಒಪ್ಪಿಕೊಳ್ಳುವುದೇ ಒಂದು ದೊಡ್ಡ ಪರಿಹಾರವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...