Homeಸಿನಿಮಾಕ್ರೀಡೆಫುಟ್ಬಾಲ್‌ನಲ್ಲಿ ಮೊದಲ ಬಾರಿಗೆ ‘ವೈಟ್ ಕಾರ್ಡ್’ ಬಳಕೆ: ಏನಿದರೆ ಸೂಚನೆ?

ಫುಟ್ಬಾಲ್‌ನಲ್ಲಿ ಮೊದಲ ಬಾರಿಗೆ ‘ವೈಟ್ ಕಾರ್ಡ್’ ಬಳಕೆ: ಏನಿದರೆ ಸೂಚನೆ?

- Advertisement -
- Advertisement -

ಪೋರ್ಚುಗಲ್‌ನಲ್ಲಿ ಬೆನ್ಫಿಕಾ ಮತ್ತು ಸ್ಪೋರ್ಟಿಂಗ್ ಲಿಸ್ಬನ್ ನಡುವೆ ನಡೆದ ಮಹಿಳಾ ಪುಟ್ಬಾಲ್‌ ಪಂದ್ಯದ ಸಂದರ್ಭದಲ್ಲಿ ರೆಫರಿಯು ‘ಬಿಳಿ (ವೈಟ್‌) ಕಾರ್ಡ್’ ಅನ್ನು ಬಳಸಿದ್ದಾರೆ. ಫುಟ್ಬಾಲ್‌ನಲ್ಲಿ ಇದೇ ಮೊದಲ ಬಾರಿಗೆ ವೈಟ್‌ ಕಾರ್ಡ್ ಬಳಸಲಾಗಿದೆ ಎಂದು ವರದಿಯಾಗಿದೆ.

1970ರ ಫಿಫಾ ವಿಶ್ವಕಪ್‌ ನಂತರದಲ್ಲಿ ಫುಟ್ಬಾಲ್‌ನಲ್ಲಿ ಹಳದಿ (ಯೆಲ್ಲೋ) ಮತ್ತು ಕೆಂಪು (ರೆಡ್) ಕಾರ್ಡ್‌ಗಳನ್ನು ಬಳಸಲಾಗುತ್ತಿದೆ. ಆಟಗಾರರು ನಿಯಮ ಮೀರಿ ನಡೆದುಕೊಂಡು ಎದುರಾಳಿಗೆ ತೊಂದರೆ ನೀಡಿದ ತೀವ್ರತೆಯ ಆಧಾರದಲ್ಲಿ ಹಳದಿ ಮತ್ತು ಕೆಂಪು ಕಾರ್ಡ್‌ಗಳನ್ನು ರೆಫರಿಗಳು ತೋರಿಸುತ್ತಾರೆ. ಆದರೆ, ಆಟದಲ್ಲಿ ಬಿಳಿ ಕಾರ್ಡ್ ಬಳಸಿದ್ದು ಇದೇ ಮೊದಲು.

ಮೊದಲಾರ್ಧದಲ್ಲಿ ಬೆನ್‌ಫಿಕಾ 3-0 ಮುನ್ನಡೆಯಲ್ಲಿದ್ದಾಗ ಡಗೌಟ್‌ಗಳಲ್ಲಿ ಬೆಂಚ್‌ನಲ್ಲಿದ್ದ ಆಟಗಾರನೊಬ್ಬ ಕೊನೆಯಲ್ಲಿ ಅಸ್ವಸ್ಥಗೊಂಡಾಗ ಸಹಾಯ ಮಾಡಲು ಎರಡೂ ಕ್ಲಬ್‌ಗಳ ವೈದ್ಯಕೀಯ ಸಿಬ್ಬಂದಿ ಧಾವಿಸಿದ ನಂತರ ವೈಟ್‌ ಕಾರ್ಡ್ ಅನ್ನು ತೋರಿಸಲಾಯಿತು.

ರೆಫರಿ ಕ್ಯಾಟರೀನಾ ಕ್ಯಾಂಪೋಸ್ ಅವರು ಎರಡೂ ತಂಡಗಳಿಗೆ ಬಿಳಿ ಕಾರ್ಡ್ ಅನ್ನು ತೋರಿಸಿದರು. ಈ ಕಾರ್ಡ್ ಕ್ರೀಡೆಯಲ್ಲಿ ನ್ಯಾಯಯುತ ಆಟದ ಕ್ರಿಯೆಗಳನ್ನು ಅನುಸರಿಸುವಂತೆ ಗುರುತಿಸಿದೆ.

ಈ ಕ್ರಿಯೆಯು ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಅಭಿಮಾನಿಗಳು ಚಪ್ಪಾಳೆ ತಟ್ಟುವ ಮೂಲಕ ವೈಟ್ ಕಾರ್ಡ್‌ಅನ್ನು ಸ್ವಾಗತಿಸಿ, ರೆಫರಿ ನಿರ್ಧಾರವನ್ನು ಹುರಿದುಂಬಿಸಿದರು. ಈ ಪದ್ಯದಲ್ಲಿ ಬೆನ್ಫಿಕಾ ತಂಡವು 3-0 ಅಂತರದಿಂದ ಗೆದ್ದುಕೊಂಡಿತು.

ಬಿಳಿ ಕಾರ್ಡ್ ಎಂದರೇನು ಮತ್ತು ಅದನ್ನು ಯಾವಾಗ ಬಳಸಲಾಗುತ್ತದೆ?

ಬಿಳಿ ಕಾರ್ಡ್ ಅನ್ನು ಫುಟ್‌ಬಾಲ್‌ನಲ್ಲಿ ನ್ಯಾಯೋಚಿತ ಆಟವನ್ನು ಗುರುತಿಸಲು ಮತ್ತು ಪ್ರೋತ್ಸಾಹಿಸಲು ತೋರಿಸಲಾಗಿದೆ. “ಕ್ರೀಡೆಯಲ್ಲಿ ನೈತಿಕ ಮೌಲ್ಯವನ್ನು ಸುಧಾರಿಸಲು” ಈ ಪರಿಕಲ್ಪನೆ ಹುಟ್ಟಿಕೊಂಡಿದೆ. ಇದು ಪೋರ್ಚುಗಲ್‌ನಲ್ಲಿನ ಹೊಸ ಉಪಕ್ರಮದ ಭಾಗವಾಗಿದ್ದು, ಈ ಮೂಲಕ ತಂಡಗಳು ನ್ಯಾಯಯುತ ರೀತಿಯಲ್ಲಿ ಕಾರ್ಯನಿರ್ವಹಿಸಲು ಮತ್ತು ಅದಕ್ಕಾಗಿ ತ್ವರಿತ ಮನ್ನಣೆಯನ್ನು ಪಡೆಯಲು ಪ್ರೋತ್ಸಾಹಿಸಲಾಗುತ್ತದೆ. ಸಮಯ ಇದು ಸದ್ಯಕ್ಕೆ ಪೋರ್ಚುಗಲ್‌ಗೆ ಸೀಮಿತವಾಗಿದೆ.

ಪ್ಲಾಟಿನಿಯ ಬಿಳಿ ಕಾರ್ಡ್ ಸಲಹೆ

ಯುರೋಪಿಯನ್ ಫುಟ್ಬಾಲ್ ಸಂಸ್ಥೆಗಳ ಒಕ್ಕೂಟದ (UEFA) ಮಾಜಿ ಅಧ್ಯಕ್ಷ ಮೈಕೆಲ್ ಪ್ಲಾಟಿನಿ ಒಮ್ಮೆ ಬಿಳಿ ಕಾರ್ಡ್ ಬಳಕೆಯನ್ನು ಪ್ರಸ್ತಾಪಿಸಿದ್ದರು. ಆದರೂ ಬೇರೆ ಉದ್ದೇಶವನ್ನು ಪ್ರಸ್ತಾಪಿಸಿದ್ದರು. ಬಿಳಿ ಕಾರ್ಡ್ ಅನ್ನು ಭಿನ್ನಾಭಿಪ್ರಾಯಕ್ಕೆ ಶಿಕ್ಷೆಯಾಗಿ ರೆಫರಿ ಬಳಸಬೇಕೆಂದು ತಮ್ಮ ಪುಸ್ತಕವಾದ ‘ಪರ್ಲೋನ್ಸ್ ಫುಟ್‌ಬಾಲ್ (ಲೆಟ್ಸ್ ಟಾಕ್ ಫುಟ್‌ಬಾಲ್)’ನಲ್ಲಿ, ಸೂಚಿಸಿದ್ದರು. ಅದು ತಪ್ಪಿತಸ್ಥ ಆಟಗಾರನನ್ನು 10 ನಿಮಿಷಗಳ ಕಾಲ ಆಟದ ಮೈದಾನದಿಂದ ಅಮಾನತುಗೊಳಿಸುವುದನ್ನು ಪ್ರಸ್ತಾಪಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...