Homeಸಿನಿಮಾಕ್ರೀಡೆಫುಟ್ಬಾಲ್‌ನಲ್ಲಿ ಮೊದಲ ಬಾರಿಗೆ ‘ವೈಟ್ ಕಾರ್ಡ್’ ಬಳಕೆ: ಏನಿದರೆ ಸೂಚನೆ?

ಫುಟ್ಬಾಲ್‌ನಲ್ಲಿ ಮೊದಲ ಬಾರಿಗೆ ‘ವೈಟ್ ಕಾರ್ಡ್’ ಬಳಕೆ: ಏನಿದರೆ ಸೂಚನೆ?

- Advertisement -
- Advertisement -

ಪೋರ್ಚುಗಲ್‌ನಲ್ಲಿ ಬೆನ್ಫಿಕಾ ಮತ್ತು ಸ್ಪೋರ್ಟಿಂಗ್ ಲಿಸ್ಬನ್ ನಡುವೆ ನಡೆದ ಮಹಿಳಾ ಪುಟ್ಬಾಲ್‌ ಪಂದ್ಯದ ಸಂದರ್ಭದಲ್ಲಿ ರೆಫರಿಯು ‘ಬಿಳಿ (ವೈಟ್‌) ಕಾರ್ಡ್’ ಅನ್ನು ಬಳಸಿದ್ದಾರೆ. ಫುಟ್ಬಾಲ್‌ನಲ್ಲಿ ಇದೇ ಮೊದಲ ಬಾರಿಗೆ ವೈಟ್‌ ಕಾರ್ಡ್ ಬಳಸಲಾಗಿದೆ ಎಂದು ವರದಿಯಾಗಿದೆ.

1970ರ ಫಿಫಾ ವಿಶ್ವಕಪ್‌ ನಂತರದಲ್ಲಿ ಫುಟ್ಬಾಲ್‌ನಲ್ಲಿ ಹಳದಿ (ಯೆಲ್ಲೋ) ಮತ್ತು ಕೆಂಪು (ರೆಡ್) ಕಾರ್ಡ್‌ಗಳನ್ನು ಬಳಸಲಾಗುತ್ತಿದೆ. ಆಟಗಾರರು ನಿಯಮ ಮೀರಿ ನಡೆದುಕೊಂಡು ಎದುರಾಳಿಗೆ ತೊಂದರೆ ನೀಡಿದ ತೀವ್ರತೆಯ ಆಧಾರದಲ್ಲಿ ಹಳದಿ ಮತ್ತು ಕೆಂಪು ಕಾರ್ಡ್‌ಗಳನ್ನು ರೆಫರಿಗಳು ತೋರಿಸುತ್ತಾರೆ. ಆದರೆ, ಆಟದಲ್ಲಿ ಬಿಳಿ ಕಾರ್ಡ್ ಬಳಸಿದ್ದು ಇದೇ ಮೊದಲು.

ಮೊದಲಾರ್ಧದಲ್ಲಿ ಬೆನ್‌ಫಿಕಾ 3-0 ಮುನ್ನಡೆಯಲ್ಲಿದ್ದಾಗ ಡಗೌಟ್‌ಗಳಲ್ಲಿ ಬೆಂಚ್‌ನಲ್ಲಿದ್ದ ಆಟಗಾರನೊಬ್ಬ ಕೊನೆಯಲ್ಲಿ ಅಸ್ವಸ್ಥಗೊಂಡಾಗ ಸಹಾಯ ಮಾಡಲು ಎರಡೂ ಕ್ಲಬ್‌ಗಳ ವೈದ್ಯಕೀಯ ಸಿಬ್ಬಂದಿ ಧಾವಿಸಿದ ನಂತರ ವೈಟ್‌ ಕಾರ್ಡ್ ಅನ್ನು ತೋರಿಸಲಾಯಿತು.

ರೆಫರಿ ಕ್ಯಾಟರೀನಾ ಕ್ಯಾಂಪೋಸ್ ಅವರು ಎರಡೂ ತಂಡಗಳಿಗೆ ಬಿಳಿ ಕಾರ್ಡ್ ಅನ್ನು ತೋರಿಸಿದರು. ಈ ಕಾರ್ಡ್ ಕ್ರೀಡೆಯಲ್ಲಿ ನ್ಯಾಯಯುತ ಆಟದ ಕ್ರಿಯೆಗಳನ್ನು ಅನುಸರಿಸುವಂತೆ ಗುರುತಿಸಿದೆ.

ಈ ಕ್ರಿಯೆಯು ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಅಭಿಮಾನಿಗಳು ಚಪ್ಪಾಳೆ ತಟ್ಟುವ ಮೂಲಕ ವೈಟ್ ಕಾರ್ಡ್‌ಅನ್ನು ಸ್ವಾಗತಿಸಿ, ರೆಫರಿ ನಿರ್ಧಾರವನ್ನು ಹುರಿದುಂಬಿಸಿದರು. ಈ ಪದ್ಯದಲ್ಲಿ ಬೆನ್ಫಿಕಾ ತಂಡವು 3-0 ಅಂತರದಿಂದ ಗೆದ್ದುಕೊಂಡಿತು.

ಬಿಳಿ ಕಾರ್ಡ್ ಎಂದರೇನು ಮತ್ತು ಅದನ್ನು ಯಾವಾಗ ಬಳಸಲಾಗುತ್ತದೆ?

ಬಿಳಿ ಕಾರ್ಡ್ ಅನ್ನು ಫುಟ್‌ಬಾಲ್‌ನಲ್ಲಿ ನ್ಯಾಯೋಚಿತ ಆಟವನ್ನು ಗುರುತಿಸಲು ಮತ್ತು ಪ್ರೋತ್ಸಾಹಿಸಲು ತೋರಿಸಲಾಗಿದೆ. “ಕ್ರೀಡೆಯಲ್ಲಿ ನೈತಿಕ ಮೌಲ್ಯವನ್ನು ಸುಧಾರಿಸಲು” ಈ ಪರಿಕಲ್ಪನೆ ಹುಟ್ಟಿಕೊಂಡಿದೆ. ಇದು ಪೋರ್ಚುಗಲ್‌ನಲ್ಲಿನ ಹೊಸ ಉಪಕ್ರಮದ ಭಾಗವಾಗಿದ್ದು, ಈ ಮೂಲಕ ತಂಡಗಳು ನ್ಯಾಯಯುತ ರೀತಿಯಲ್ಲಿ ಕಾರ್ಯನಿರ್ವಹಿಸಲು ಮತ್ತು ಅದಕ್ಕಾಗಿ ತ್ವರಿತ ಮನ್ನಣೆಯನ್ನು ಪಡೆಯಲು ಪ್ರೋತ್ಸಾಹಿಸಲಾಗುತ್ತದೆ. ಸಮಯ ಇದು ಸದ್ಯಕ್ಕೆ ಪೋರ್ಚುಗಲ್‌ಗೆ ಸೀಮಿತವಾಗಿದೆ.

ಪ್ಲಾಟಿನಿಯ ಬಿಳಿ ಕಾರ್ಡ್ ಸಲಹೆ

ಯುರೋಪಿಯನ್ ಫುಟ್ಬಾಲ್ ಸಂಸ್ಥೆಗಳ ಒಕ್ಕೂಟದ (UEFA) ಮಾಜಿ ಅಧ್ಯಕ್ಷ ಮೈಕೆಲ್ ಪ್ಲಾಟಿನಿ ಒಮ್ಮೆ ಬಿಳಿ ಕಾರ್ಡ್ ಬಳಕೆಯನ್ನು ಪ್ರಸ್ತಾಪಿಸಿದ್ದರು. ಆದರೂ ಬೇರೆ ಉದ್ದೇಶವನ್ನು ಪ್ರಸ್ತಾಪಿಸಿದ್ದರು. ಬಿಳಿ ಕಾರ್ಡ್ ಅನ್ನು ಭಿನ್ನಾಭಿಪ್ರಾಯಕ್ಕೆ ಶಿಕ್ಷೆಯಾಗಿ ರೆಫರಿ ಬಳಸಬೇಕೆಂದು ತಮ್ಮ ಪುಸ್ತಕವಾದ ‘ಪರ್ಲೋನ್ಸ್ ಫುಟ್‌ಬಾಲ್ (ಲೆಟ್ಸ್ ಟಾಕ್ ಫುಟ್‌ಬಾಲ್)’ನಲ್ಲಿ, ಸೂಚಿಸಿದ್ದರು. ಅದು ತಪ್ಪಿತಸ್ಥ ಆಟಗಾರನನ್ನು 10 ನಿಮಿಷಗಳ ಕಾಲ ಆಟದ ಮೈದಾನದಿಂದ ಅಮಾನತುಗೊಳಿಸುವುದನ್ನು ಪ್ರಸ್ತಾಪಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...