Homeಸಿನಿಮಾಕ್ರೀಡೆಫುಟ್ಬಾಲ್‌ನಲ್ಲಿ ಮೊದಲ ಬಾರಿಗೆ ‘ವೈಟ್ ಕಾರ್ಡ್’ ಬಳಕೆ: ಏನಿದರೆ ಸೂಚನೆ?

ಫುಟ್ಬಾಲ್‌ನಲ್ಲಿ ಮೊದಲ ಬಾರಿಗೆ ‘ವೈಟ್ ಕಾರ್ಡ್’ ಬಳಕೆ: ಏನಿದರೆ ಸೂಚನೆ?

- Advertisement -
- Advertisement -

ಪೋರ್ಚುಗಲ್‌ನಲ್ಲಿ ಬೆನ್ಫಿಕಾ ಮತ್ತು ಸ್ಪೋರ್ಟಿಂಗ್ ಲಿಸ್ಬನ್ ನಡುವೆ ನಡೆದ ಮಹಿಳಾ ಪುಟ್ಬಾಲ್‌ ಪಂದ್ಯದ ಸಂದರ್ಭದಲ್ಲಿ ರೆಫರಿಯು ‘ಬಿಳಿ (ವೈಟ್‌) ಕಾರ್ಡ್’ ಅನ್ನು ಬಳಸಿದ್ದಾರೆ. ಫುಟ್ಬಾಲ್‌ನಲ್ಲಿ ಇದೇ ಮೊದಲ ಬಾರಿಗೆ ವೈಟ್‌ ಕಾರ್ಡ್ ಬಳಸಲಾಗಿದೆ ಎಂದು ವರದಿಯಾಗಿದೆ.

1970ರ ಫಿಫಾ ವಿಶ್ವಕಪ್‌ ನಂತರದಲ್ಲಿ ಫುಟ್ಬಾಲ್‌ನಲ್ಲಿ ಹಳದಿ (ಯೆಲ್ಲೋ) ಮತ್ತು ಕೆಂಪು (ರೆಡ್) ಕಾರ್ಡ್‌ಗಳನ್ನು ಬಳಸಲಾಗುತ್ತಿದೆ. ಆಟಗಾರರು ನಿಯಮ ಮೀರಿ ನಡೆದುಕೊಂಡು ಎದುರಾಳಿಗೆ ತೊಂದರೆ ನೀಡಿದ ತೀವ್ರತೆಯ ಆಧಾರದಲ್ಲಿ ಹಳದಿ ಮತ್ತು ಕೆಂಪು ಕಾರ್ಡ್‌ಗಳನ್ನು ರೆಫರಿಗಳು ತೋರಿಸುತ್ತಾರೆ. ಆದರೆ, ಆಟದಲ್ಲಿ ಬಿಳಿ ಕಾರ್ಡ್ ಬಳಸಿದ್ದು ಇದೇ ಮೊದಲು.

ಮೊದಲಾರ್ಧದಲ್ಲಿ ಬೆನ್‌ಫಿಕಾ 3-0 ಮುನ್ನಡೆಯಲ್ಲಿದ್ದಾಗ ಡಗೌಟ್‌ಗಳಲ್ಲಿ ಬೆಂಚ್‌ನಲ್ಲಿದ್ದ ಆಟಗಾರನೊಬ್ಬ ಕೊನೆಯಲ್ಲಿ ಅಸ್ವಸ್ಥಗೊಂಡಾಗ ಸಹಾಯ ಮಾಡಲು ಎರಡೂ ಕ್ಲಬ್‌ಗಳ ವೈದ್ಯಕೀಯ ಸಿಬ್ಬಂದಿ ಧಾವಿಸಿದ ನಂತರ ವೈಟ್‌ ಕಾರ್ಡ್ ಅನ್ನು ತೋರಿಸಲಾಯಿತು.

ರೆಫರಿ ಕ್ಯಾಟರೀನಾ ಕ್ಯಾಂಪೋಸ್ ಅವರು ಎರಡೂ ತಂಡಗಳಿಗೆ ಬಿಳಿ ಕಾರ್ಡ್ ಅನ್ನು ತೋರಿಸಿದರು. ಈ ಕಾರ್ಡ್ ಕ್ರೀಡೆಯಲ್ಲಿ ನ್ಯಾಯಯುತ ಆಟದ ಕ್ರಿಯೆಗಳನ್ನು ಅನುಸರಿಸುವಂತೆ ಗುರುತಿಸಿದೆ.

ಈ ಕ್ರಿಯೆಯು ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಅಭಿಮಾನಿಗಳು ಚಪ್ಪಾಳೆ ತಟ್ಟುವ ಮೂಲಕ ವೈಟ್ ಕಾರ್ಡ್‌ಅನ್ನು ಸ್ವಾಗತಿಸಿ, ರೆಫರಿ ನಿರ್ಧಾರವನ್ನು ಹುರಿದುಂಬಿಸಿದರು. ಈ ಪದ್ಯದಲ್ಲಿ ಬೆನ್ಫಿಕಾ ತಂಡವು 3-0 ಅಂತರದಿಂದ ಗೆದ್ದುಕೊಂಡಿತು.

ಬಿಳಿ ಕಾರ್ಡ್ ಎಂದರೇನು ಮತ್ತು ಅದನ್ನು ಯಾವಾಗ ಬಳಸಲಾಗುತ್ತದೆ?

ಬಿಳಿ ಕಾರ್ಡ್ ಅನ್ನು ಫುಟ್‌ಬಾಲ್‌ನಲ್ಲಿ ನ್ಯಾಯೋಚಿತ ಆಟವನ್ನು ಗುರುತಿಸಲು ಮತ್ತು ಪ್ರೋತ್ಸಾಹಿಸಲು ತೋರಿಸಲಾಗಿದೆ. “ಕ್ರೀಡೆಯಲ್ಲಿ ನೈತಿಕ ಮೌಲ್ಯವನ್ನು ಸುಧಾರಿಸಲು” ಈ ಪರಿಕಲ್ಪನೆ ಹುಟ್ಟಿಕೊಂಡಿದೆ. ಇದು ಪೋರ್ಚುಗಲ್‌ನಲ್ಲಿನ ಹೊಸ ಉಪಕ್ರಮದ ಭಾಗವಾಗಿದ್ದು, ಈ ಮೂಲಕ ತಂಡಗಳು ನ್ಯಾಯಯುತ ರೀತಿಯಲ್ಲಿ ಕಾರ್ಯನಿರ್ವಹಿಸಲು ಮತ್ತು ಅದಕ್ಕಾಗಿ ತ್ವರಿತ ಮನ್ನಣೆಯನ್ನು ಪಡೆಯಲು ಪ್ರೋತ್ಸಾಹಿಸಲಾಗುತ್ತದೆ. ಸಮಯ ಇದು ಸದ್ಯಕ್ಕೆ ಪೋರ್ಚುಗಲ್‌ಗೆ ಸೀಮಿತವಾಗಿದೆ.

ಪ್ಲಾಟಿನಿಯ ಬಿಳಿ ಕಾರ್ಡ್ ಸಲಹೆ

ಯುರೋಪಿಯನ್ ಫುಟ್ಬಾಲ್ ಸಂಸ್ಥೆಗಳ ಒಕ್ಕೂಟದ (UEFA) ಮಾಜಿ ಅಧ್ಯಕ್ಷ ಮೈಕೆಲ್ ಪ್ಲಾಟಿನಿ ಒಮ್ಮೆ ಬಿಳಿ ಕಾರ್ಡ್ ಬಳಕೆಯನ್ನು ಪ್ರಸ್ತಾಪಿಸಿದ್ದರು. ಆದರೂ ಬೇರೆ ಉದ್ದೇಶವನ್ನು ಪ್ರಸ್ತಾಪಿಸಿದ್ದರು. ಬಿಳಿ ಕಾರ್ಡ್ ಅನ್ನು ಭಿನ್ನಾಭಿಪ್ರಾಯಕ್ಕೆ ಶಿಕ್ಷೆಯಾಗಿ ರೆಫರಿ ಬಳಸಬೇಕೆಂದು ತಮ್ಮ ಪುಸ್ತಕವಾದ ‘ಪರ್ಲೋನ್ಸ್ ಫುಟ್‌ಬಾಲ್ (ಲೆಟ್ಸ್ ಟಾಕ್ ಫುಟ್‌ಬಾಲ್)’ನಲ್ಲಿ, ಸೂಚಿಸಿದ್ದರು. ಅದು ತಪ್ಪಿತಸ್ಥ ಆಟಗಾರನನ್ನು 10 ನಿಮಿಷಗಳ ಕಾಲ ಆಟದ ಮೈದಾನದಿಂದ ಅಮಾನತುಗೊಳಿಸುವುದನ್ನು ಪ್ರಸ್ತಾಪಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....