Homeಸಿನಿಮಾಕ್ರೀಡೆಫುಟ್ಬಾಲ್‌ನಲ್ಲಿ ಮೊದಲ ಬಾರಿಗೆ ‘ವೈಟ್ ಕಾರ್ಡ್’ ಬಳಕೆ: ಏನಿದರೆ ಸೂಚನೆ?

ಫುಟ್ಬಾಲ್‌ನಲ್ಲಿ ಮೊದಲ ಬಾರಿಗೆ ‘ವೈಟ್ ಕಾರ್ಡ್’ ಬಳಕೆ: ಏನಿದರೆ ಸೂಚನೆ?

- Advertisement -
- Advertisement -

ಪೋರ್ಚುಗಲ್‌ನಲ್ಲಿ ಬೆನ್ಫಿಕಾ ಮತ್ತು ಸ್ಪೋರ್ಟಿಂಗ್ ಲಿಸ್ಬನ್ ನಡುವೆ ನಡೆದ ಮಹಿಳಾ ಪುಟ್ಬಾಲ್‌ ಪಂದ್ಯದ ಸಂದರ್ಭದಲ್ಲಿ ರೆಫರಿಯು ‘ಬಿಳಿ (ವೈಟ್‌) ಕಾರ್ಡ್’ ಅನ್ನು ಬಳಸಿದ್ದಾರೆ. ಫುಟ್ಬಾಲ್‌ನಲ್ಲಿ ಇದೇ ಮೊದಲ ಬಾರಿಗೆ ವೈಟ್‌ ಕಾರ್ಡ್ ಬಳಸಲಾಗಿದೆ ಎಂದು ವರದಿಯಾಗಿದೆ.

1970ರ ಫಿಫಾ ವಿಶ್ವಕಪ್‌ ನಂತರದಲ್ಲಿ ಫುಟ್ಬಾಲ್‌ನಲ್ಲಿ ಹಳದಿ (ಯೆಲ್ಲೋ) ಮತ್ತು ಕೆಂಪು (ರೆಡ್) ಕಾರ್ಡ್‌ಗಳನ್ನು ಬಳಸಲಾಗುತ್ತಿದೆ. ಆಟಗಾರರು ನಿಯಮ ಮೀರಿ ನಡೆದುಕೊಂಡು ಎದುರಾಳಿಗೆ ತೊಂದರೆ ನೀಡಿದ ತೀವ್ರತೆಯ ಆಧಾರದಲ್ಲಿ ಹಳದಿ ಮತ್ತು ಕೆಂಪು ಕಾರ್ಡ್‌ಗಳನ್ನು ರೆಫರಿಗಳು ತೋರಿಸುತ್ತಾರೆ. ಆದರೆ, ಆಟದಲ್ಲಿ ಬಿಳಿ ಕಾರ್ಡ್ ಬಳಸಿದ್ದು ಇದೇ ಮೊದಲು.

ಮೊದಲಾರ್ಧದಲ್ಲಿ ಬೆನ್‌ಫಿಕಾ 3-0 ಮುನ್ನಡೆಯಲ್ಲಿದ್ದಾಗ ಡಗೌಟ್‌ಗಳಲ್ಲಿ ಬೆಂಚ್‌ನಲ್ಲಿದ್ದ ಆಟಗಾರನೊಬ್ಬ ಕೊನೆಯಲ್ಲಿ ಅಸ್ವಸ್ಥಗೊಂಡಾಗ ಸಹಾಯ ಮಾಡಲು ಎರಡೂ ಕ್ಲಬ್‌ಗಳ ವೈದ್ಯಕೀಯ ಸಿಬ್ಬಂದಿ ಧಾವಿಸಿದ ನಂತರ ವೈಟ್‌ ಕಾರ್ಡ್ ಅನ್ನು ತೋರಿಸಲಾಯಿತು.

ರೆಫರಿ ಕ್ಯಾಟರೀನಾ ಕ್ಯಾಂಪೋಸ್ ಅವರು ಎರಡೂ ತಂಡಗಳಿಗೆ ಬಿಳಿ ಕಾರ್ಡ್ ಅನ್ನು ತೋರಿಸಿದರು. ಈ ಕಾರ್ಡ್ ಕ್ರೀಡೆಯಲ್ಲಿ ನ್ಯಾಯಯುತ ಆಟದ ಕ್ರಿಯೆಗಳನ್ನು ಅನುಸರಿಸುವಂತೆ ಗುರುತಿಸಿದೆ.

ಈ ಕ್ರಿಯೆಯು ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಅಭಿಮಾನಿಗಳು ಚಪ್ಪಾಳೆ ತಟ್ಟುವ ಮೂಲಕ ವೈಟ್ ಕಾರ್ಡ್‌ಅನ್ನು ಸ್ವಾಗತಿಸಿ, ರೆಫರಿ ನಿರ್ಧಾರವನ್ನು ಹುರಿದುಂಬಿಸಿದರು. ಈ ಪದ್ಯದಲ್ಲಿ ಬೆನ್ಫಿಕಾ ತಂಡವು 3-0 ಅಂತರದಿಂದ ಗೆದ್ದುಕೊಂಡಿತು.

ಬಿಳಿ ಕಾರ್ಡ್ ಎಂದರೇನು ಮತ್ತು ಅದನ್ನು ಯಾವಾಗ ಬಳಸಲಾಗುತ್ತದೆ?

ಬಿಳಿ ಕಾರ್ಡ್ ಅನ್ನು ಫುಟ್‌ಬಾಲ್‌ನಲ್ಲಿ ನ್ಯಾಯೋಚಿತ ಆಟವನ್ನು ಗುರುತಿಸಲು ಮತ್ತು ಪ್ರೋತ್ಸಾಹಿಸಲು ತೋರಿಸಲಾಗಿದೆ. “ಕ್ರೀಡೆಯಲ್ಲಿ ನೈತಿಕ ಮೌಲ್ಯವನ್ನು ಸುಧಾರಿಸಲು” ಈ ಪರಿಕಲ್ಪನೆ ಹುಟ್ಟಿಕೊಂಡಿದೆ. ಇದು ಪೋರ್ಚುಗಲ್‌ನಲ್ಲಿನ ಹೊಸ ಉಪಕ್ರಮದ ಭಾಗವಾಗಿದ್ದು, ಈ ಮೂಲಕ ತಂಡಗಳು ನ್ಯಾಯಯುತ ರೀತಿಯಲ್ಲಿ ಕಾರ್ಯನಿರ್ವಹಿಸಲು ಮತ್ತು ಅದಕ್ಕಾಗಿ ತ್ವರಿತ ಮನ್ನಣೆಯನ್ನು ಪಡೆಯಲು ಪ್ರೋತ್ಸಾಹಿಸಲಾಗುತ್ತದೆ. ಸಮಯ ಇದು ಸದ್ಯಕ್ಕೆ ಪೋರ್ಚುಗಲ್‌ಗೆ ಸೀಮಿತವಾಗಿದೆ.

ಪ್ಲಾಟಿನಿಯ ಬಿಳಿ ಕಾರ್ಡ್ ಸಲಹೆ

ಯುರೋಪಿಯನ್ ಫುಟ್ಬಾಲ್ ಸಂಸ್ಥೆಗಳ ಒಕ್ಕೂಟದ (UEFA) ಮಾಜಿ ಅಧ್ಯಕ್ಷ ಮೈಕೆಲ್ ಪ್ಲಾಟಿನಿ ಒಮ್ಮೆ ಬಿಳಿ ಕಾರ್ಡ್ ಬಳಕೆಯನ್ನು ಪ್ರಸ್ತಾಪಿಸಿದ್ದರು. ಆದರೂ ಬೇರೆ ಉದ್ದೇಶವನ್ನು ಪ್ರಸ್ತಾಪಿಸಿದ್ದರು. ಬಿಳಿ ಕಾರ್ಡ್ ಅನ್ನು ಭಿನ್ನಾಭಿಪ್ರಾಯಕ್ಕೆ ಶಿಕ್ಷೆಯಾಗಿ ರೆಫರಿ ಬಳಸಬೇಕೆಂದು ತಮ್ಮ ಪುಸ್ತಕವಾದ ‘ಪರ್ಲೋನ್ಸ್ ಫುಟ್‌ಬಾಲ್ (ಲೆಟ್ಸ್ ಟಾಕ್ ಫುಟ್‌ಬಾಲ್)’ನಲ್ಲಿ, ಸೂಚಿಸಿದ್ದರು. ಅದು ತಪ್ಪಿತಸ್ಥ ಆಟಗಾರನನ್ನು 10 ನಿಮಿಷಗಳ ಕಾಲ ಆಟದ ಮೈದಾನದಿಂದ ಅಮಾನತುಗೊಳಿಸುವುದನ್ನು ಪ್ರಸ್ತಾಪಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...