Homeಮುಖಪುಟಉತ್ತರಖಂಡ: ಸುರಂಗದಲ್ಲಿ ಸಿಲುಕಿಕೊಂಡ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ

ಉತ್ತರಖಂಡ: ಸುರಂಗದಲ್ಲಿ ಸಿಲುಕಿಕೊಂಡ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ

- Advertisement -
- Advertisement -

ಉತ್ತರಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋವನ್ನು ರಕ್ಷಣಾ ಸಿಬ್ಬಂದಿ ಮಂಗಳವಾರ ಬಿಡುಗಡೆ ಮಾಡಿದ್ದಾರೆ.

ಸೋಮವಾರ ಕುಸಿದ ಸುರಂಗದ ಅವಶೇಷಗಳಡಿಯಲ್ಲಿ 6 ಇಂಚಿನ ಪೈಪ್‌ಲೈನ್ ಮೂಲಕ ಕಳುಹಿಸಲಾದ ಎಂಡೋಸ್ಕೋಪಿಕ್ ಕ್ಯಾಮೆರಾವನ್ನು ಬಳಸಿಕೊಂಡು ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಸೋಮವಾರ ಸಂಜೆ ದೆಹಲಿಯಿಂದ ಕ್ಯಾಮೆರಾ ತರಿಸಿ ಸುರಂಗಕ್ಕೆ ಕಳುಹಿಸಲಾಗಿದೆ.

ವೀಡಿಯೊದಲ್ಲಿ ಕಾರ್ಮಿಕರು ಹಳದಿ ಮತ್ತು ಬಿಳಿ ಹೆಲ್ಮೆಟ್‌ಗಳನ್ನು ಧರಿಸಿ ಪೈಪ್‌ಲೈನ್ ಮೂಲಕ ಕಳುಹಿಸಲಾದ ಆಹಾರ ಪದಾರ್ಥಗಳನ್ನು ಸ್ವೀಕರಿಸಿ ಪರಸ್ಪರ ಮಾತನಾಡುತ್ತಿರುವುದು ಕಂಡುಬರುತ್ತದೆ. ವಿಡಿಯೋ ವೈರಲ್‌ ಬಳಿಕ ಕಾರ್ಮಿಕರ ಕುಟುಂಬಗಳು ಕೊಂಚ ಸಮಾಧಾನದಲ್ಲಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (ಎನ್‌ಎಚ್‌ಐಡಿಸಿಎಲ್) ನಿರ್ದೇಶಕ ಅಂಶು ಮನೀಶ್ ಖಲ್ಖೋ ಈ ಮೊದಲು ಮಾತನಾಡಿ,  ಕಾರ್ಮಿಕರು ಹೇಗಿದ್ದಾರೆ ಎಂಬುದನ್ನು ನೋಡಲು ಪೈಪ್‌ಲೈನ್ ಮೂಲಕ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಹೇಳಿದ್ದರು.

ನ.12ರಂದು ಭೂಕುಸಿತದಲ್ಲಿ ಸುರಂಗದ ಭಾಗಗಳು ಕುಸಿದ ಬೆನ್ನಲ್ಲೇ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. 41 ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ಸೋಮವಾರದವರೆಗೆ ಸುರಂಗದ ಕುಸಿದ ಭಾಗದ ಅವಶೇಷಗಳ ಒಳಗೆ ಆಮ್ಲಜನಕ ಮತ್ತು ಹಣ್ಣುಗಳು ಮತ್ತು ಔಷಧಿಗಳಂತಹ ವಸ್ತುಗಳನ್ನು ಪೂರೈಸಲು 4 ಇಂಚಿನ ಟ್ಯೂಬ್‌ನ್ನು ಬಳಸಲಾಗುತ್ತಿತ್ತು. ಈಗ ಬಳಕೆ ಮಾಡುತ್ತಿರುವ 6 ಇಂಚಿನ ಪೈಪ್‌ಲೈನ್ ಹೆಚ್ಚಿನ ಪ್ರಮಾಣದ ಆಹಾರವನ್ನು ಕಳುಹಿಸಲು ಸಹಾಯ ಮಾಡುತ್ತದೆ.

ಅಧಿಕಾರಿಗಳ ಪ್ರಕಾರ ಗಂಜಿ, ತುಂಡರಿಸಿದ ಸೇಬು ಮತ್ತು ಬಾಳೆಹಣ್ಣುಗಳನ್ನು ಹೊಸ ಪೈಪ್‌ಲೈನ್ ಮೂಲಕ ಕಳುಹಿಸಿಕೊಡಲಾಗುತ್ತಿದೆ. ಇದಲ್ಲದೆ ಕಾರ್ಮಿಕರಿಗೆ ಮೊಬೈಲ್ ಫೋನ್ ಮತ್ತು ಚಾರ್ಜರ್‌ಗಳನ್ನು ಕಳುಹಿಸಿಕೊಡಲಾಗುತ್ತಿದೆ.

ಉತ್ತರಕಾಶಿ ಜಿಲ್ಲಾ ಕೇಂದ್ರದಿಂದ ಸುಮಾರು 30ಕಿ.ಮೀ ದೂರದಲ್ಲಿರುವ ಮತ್ತು ಉತ್ತರಾಖಂಡ ರಾಜಧಾನಿ ಡೆಹ್ರಾಡೂನ್‌ನಿಂದ 7 ಗಂಟೆಗಳ ಪ್ರಯಾಣದ ದೂರದಲ್ಲಿರುವ ‘ಸಿಲ್ಕ್ಯಾರಾ ಸುರಂಗ’ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಚಾರ್ ಧಾಮ್ ಸರ್ವಋತು ರಸ್ತೆ ಯೋಜನೆಯ ಭಾಗವಾಗಿದೆ. ನಾಲ್ಕೂವರೆ ಕಿಲೋಮೀಟರ್ ಉದ್ದದ ಸುರಂಗದಲ್ಲಿ 150 ಮೀಟರ್ ಉದ್ದದಷ್ಟು ಕುಸಿದಿದೆ.

ಇದನ್ನು ಓದಿ: ದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ನಿರ್ದೇಶನವನ್ನು ಪಾಲಿಸಲಾಗಿದೆ: ಕೇಂದ್ರ ಸರಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...