Homeಮುಖಪುಟಉತ್ತರಖಂಡ: ಸುರಂಗದಲ್ಲಿ ಸಿಲುಕಿಕೊಂಡ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ

ಉತ್ತರಖಂಡ: ಸುರಂಗದಲ್ಲಿ ಸಿಲುಕಿಕೊಂಡ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ

- Advertisement -
- Advertisement -

ಉತ್ತರಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋವನ್ನು ರಕ್ಷಣಾ ಸಿಬ್ಬಂದಿ ಮಂಗಳವಾರ ಬಿಡುಗಡೆ ಮಾಡಿದ್ದಾರೆ.

ಸೋಮವಾರ ಕುಸಿದ ಸುರಂಗದ ಅವಶೇಷಗಳಡಿಯಲ್ಲಿ 6 ಇಂಚಿನ ಪೈಪ್‌ಲೈನ್ ಮೂಲಕ ಕಳುಹಿಸಲಾದ ಎಂಡೋಸ್ಕೋಪಿಕ್ ಕ್ಯಾಮೆರಾವನ್ನು ಬಳಸಿಕೊಂಡು ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಸೋಮವಾರ ಸಂಜೆ ದೆಹಲಿಯಿಂದ ಕ್ಯಾಮೆರಾ ತರಿಸಿ ಸುರಂಗಕ್ಕೆ ಕಳುಹಿಸಲಾಗಿದೆ.

ವೀಡಿಯೊದಲ್ಲಿ ಕಾರ್ಮಿಕರು ಹಳದಿ ಮತ್ತು ಬಿಳಿ ಹೆಲ್ಮೆಟ್‌ಗಳನ್ನು ಧರಿಸಿ ಪೈಪ್‌ಲೈನ್ ಮೂಲಕ ಕಳುಹಿಸಲಾದ ಆಹಾರ ಪದಾರ್ಥಗಳನ್ನು ಸ್ವೀಕರಿಸಿ ಪರಸ್ಪರ ಮಾತನಾಡುತ್ತಿರುವುದು ಕಂಡುಬರುತ್ತದೆ. ವಿಡಿಯೋ ವೈರಲ್‌ ಬಳಿಕ ಕಾರ್ಮಿಕರ ಕುಟುಂಬಗಳು ಕೊಂಚ ಸಮಾಧಾನದಲ್ಲಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (ಎನ್‌ಎಚ್‌ಐಡಿಸಿಎಲ್) ನಿರ್ದೇಶಕ ಅಂಶು ಮನೀಶ್ ಖಲ್ಖೋ ಈ ಮೊದಲು ಮಾತನಾಡಿ,  ಕಾರ್ಮಿಕರು ಹೇಗಿದ್ದಾರೆ ಎಂಬುದನ್ನು ನೋಡಲು ಪೈಪ್‌ಲೈನ್ ಮೂಲಕ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಹೇಳಿದ್ದರು.

ನ.12ರಂದು ಭೂಕುಸಿತದಲ್ಲಿ ಸುರಂಗದ ಭಾಗಗಳು ಕುಸಿದ ಬೆನ್ನಲ್ಲೇ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. 41 ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ಸೋಮವಾರದವರೆಗೆ ಸುರಂಗದ ಕುಸಿದ ಭಾಗದ ಅವಶೇಷಗಳ ಒಳಗೆ ಆಮ್ಲಜನಕ ಮತ್ತು ಹಣ್ಣುಗಳು ಮತ್ತು ಔಷಧಿಗಳಂತಹ ವಸ್ತುಗಳನ್ನು ಪೂರೈಸಲು 4 ಇಂಚಿನ ಟ್ಯೂಬ್‌ನ್ನು ಬಳಸಲಾಗುತ್ತಿತ್ತು. ಈಗ ಬಳಕೆ ಮಾಡುತ್ತಿರುವ 6 ಇಂಚಿನ ಪೈಪ್‌ಲೈನ್ ಹೆಚ್ಚಿನ ಪ್ರಮಾಣದ ಆಹಾರವನ್ನು ಕಳುಹಿಸಲು ಸಹಾಯ ಮಾಡುತ್ತದೆ.

ಅಧಿಕಾರಿಗಳ ಪ್ರಕಾರ ಗಂಜಿ, ತುಂಡರಿಸಿದ ಸೇಬು ಮತ್ತು ಬಾಳೆಹಣ್ಣುಗಳನ್ನು ಹೊಸ ಪೈಪ್‌ಲೈನ್ ಮೂಲಕ ಕಳುಹಿಸಿಕೊಡಲಾಗುತ್ತಿದೆ. ಇದಲ್ಲದೆ ಕಾರ್ಮಿಕರಿಗೆ ಮೊಬೈಲ್ ಫೋನ್ ಮತ್ತು ಚಾರ್ಜರ್‌ಗಳನ್ನು ಕಳುಹಿಸಿಕೊಡಲಾಗುತ್ತಿದೆ.

ಉತ್ತರಕಾಶಿ ಜಿಲ್ಲಾ ಕೇಂದ್ರದಿಂದ ಸುಮಾರು 30ಕಿ.ಮೀ ದೂರದಲ್ಲಿರುವ ಮತ್ತು ಉತ್ತರಾಖಂಡ ರಾಜಧಾನಿ ಡೆಹ್ರಾಡೂನ್‌ನಿಂದ 7 ಗಂಟೆಗಳ ಪ್ರಯಾಣದ ದೂರದಲ್ಲಿರುವ ‘ಸಿಲ್ಕ್ಯಾರಾ ಸುರಂಗ’ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಚಾರ್ ಧಾಮ್ ಸರ್ವಋತು ರಸ್ತೆ ಯೋಜನೆಯ ಭಾಗವಾಗಿದೆ. ನಾಲ್ಕೂವರೆ ಕಿಲೋಮೀಟರ್ ಉದ್ದದ ಸುರಂಗದಲ್ಲಿ 150 ಮೀಟರ್ ಉದ್ದದಷ್ಟು ಕುಸಿದಿದೆ.

ಇದನ್ನು ಓದಿ: ದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ನಿರ್ದೇಶನವನ್ನು ಪಾಲಿಸಲಾಗಿದೆ: ಕೇಂದ್ರ ಸರಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...