Homeಮುಖಪುಟಉತ್ತರಖಂಡ: ಸುರಂಗದಲ್ಲಿ ಸಿಲುಕಿಕೊಂಡ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ

ಉತ್ತರಖಂಡ: ಸುರಂಗದಲ್ಲಿ ಸಿಲುಕಿಕೊಂಡ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ

- Advertisement -
- Advertisement -

ಉತ್ತರಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋವನ್ನು ರಕ್ಷಣಾ ಸಿಬ್ಬಂದಿ ಮಂಗಳವಾರ ಬಿಡುಗಡೆ ಮಾಡಿದ್ದಾರೆ.

ಸೋಮವಾರ ಕುಸಿದ ಸುರಂಗದ ಅವಶೇಷಗಳಡಿಯಲ್ಲಿ 6 ಇಂಚಿನ ಪೈಪ್‌ಲೈನ್ ಮೂಲಕ ಕಳುಹಿಸಲಾದ ಎಂಡೋಸ್ಕೋಪಿಕ್ ಕ್ಯಾಮೆರಾವನ್ನು ಬಳಸಿಕೊಂಡು ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಸೋಮವಾರ ಸಂಜೆ ದೆಹಲಿಯಿಂದ ಕ್ಯಾಮೆರಾ ತರಿಸಿ ಸುರಂಗಕ್ಕೆ ಕಳುಹಿಸಲಾಗಿದೆ.

ವೀಡಿಯೊದಲ್ಲಿ ಕಾರ್ಮಿಕರು ಹಳದಿ ಮತ್ತು ಬಿಳಿ ಹೆಲ್ಮೆಟ್‌ಗಳನ್ನು ಧರಿಸಿ ಪೈಪ್‌ಲೈನ್ ಮೂಲಕ ಕಳುಹಿಸಲಾದ ಆಹಾರ ಪದಾರ್ಥಗಳನ್ನು ಸ್ವೀಕರಿಸಿ ಪರಸ್ಪರ ಮಾತನಾಡುತ್ತಿರುವುದು ಕಂಡುಬರುತ್ತದೆ. ವಿಡಿಯೋ ವೈರಲ್‌ ಬಳಿಕ ಕಾರ್ಮಿಕರ ಕುಟುಂಬಗಳು ಕೊಂಚ ಸಮಾಧಾನದಲ್ಲಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (ಎನ್‌ಎಚ್‌ಐಡಿಸಿಎಲ್) ನಿರ್ದೇಶಕ ಅಂಶು ಮನೀಶ್ ಖಲ್ಖೋ ಈ ಮೊದಲು ಮಾತನಾಡಿ,  ಕಾರ್ಮಿಕರು ಹೇಗಿದ್ದಾರೆ ಎಂಬುದನ್ನು ನೋಡಲು ಪೈಪ್‌ಲೈನ್ ಮೂಲಕ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಹೇಳಿದ್ದರು.

ನ.12ರಂದು ಭೂಕುಸಿತದಲ್ಲಿ ಸುರಂಗದ ಭಾಗಗಳು ಕುಸಿದ ಬೆನ್ನಲ್ಲೇ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. 41 ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ಸೋಮವಾರದವರೆಗೆ ಸುರಂಗದ ಕುಸಿದ ಭಾಗದ ಅವಶೇಷಗಳ ಒಳಗೆ ಆಮ್ಲಜನಕ ಮತ್ತು ಹಣ್ಣುಗಳು ಮತ್ತು ಔಷಧಿಗಳಂತಹ ವಸ್ತುಗಳನ್ನು ಪೂರೈಸಲು 4 ಇಂಚಿನ ಟ್ಯೂಬ್‌ನ್ನು ಬಳಸಲಾಗುತ್ತಿತ್ತು. ಈಗ ಬಳಕೆ ಮಾಡುತ್ತಿರುವ 6 ಇಂಚಿನ ಪೈಪ್‌ಲೈನ್ ಹೆಚ್ಚಿನ ಪ್ರಮಾಣದ ಆಹಾರವನ್ನು ಕಳುಹಿಸಲು ಸಹಾಯ ಮಾಡುತ್ತದೆ.

ಅಧಿಕಾರಿಗಳ ಪ್ರಕಾರ ಗಂಜಿ, ತುಂಡರಿಸಿದ ಸೇಬು ಮತ್ತು ಬಾಳೆಹಣ್ಣುಗಳನ್ನು ಹೊಸ ಪೈಪ್‌ಲೈನ್ ಮೂಲಕ ಕಳುಹಿಸಿಕೊಡಲಾಗುತ್ತಿದೆ. ಇದಲ್ಲದೆ ಕಾರ್ಮಿಕರಿಗೆ ಮೊಬೈಲ್ ಫೋನ್ ಮತ್ತು ಚಾರ್ಜರ್‌ಗಳನ್ನು ಕಳುಹಿಸಿಕೊಡಲಾಗುತ್ತಿದೆ.

ಉತ್ತರಕಾಶಿ ಜಿಲ್ಲಾ ಕೇಂದ್ರದಿಂದ ಸುಮಾರು 30ಕಿ.ಮೀ ದೂರದಲ್ಲಿರುವ ಮತ್ತು ಉತ್ತರಾಖಂಡ ರಾಜಧಾನಿ ಡೆಹ್ರಾಡೂನ್‌ನಿಂದ 7 ಗಂಟೆಗಳ ಪ್ರಯಾಣದ ದೂರದಲ್ಲಿರುವ ‘ಸಿಲ್ಕ್ಯಾರಾ ಸುರಂಗ’ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಚಾರ್ ಧಾಮ್ ಸರ್ವಋತು ರಸ್ತೆ ಯೋಜನೆಯ ಭಾಗವಾಗಿದೆ. ನಾಲ್ಕೂವರೆ ಕಿಲೋಮೀಟರ್ ಉದ್ದದ ಸುರಂಗದಲ್ಲಿ 150 ಮೀಟರ್ ಉದ್ದದಷ್ಟು ಕುಸಿದಿದೆ.

ಇದನ್ನು ಓದಿ: ದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ನಿರ್ದೇಶನವನ್ನು ಪಾಲಿಸಲಾಗಿದೆ: ಕೇಂದ್ರ ಸರಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...