Homeಅಂತರಾಷ್ಟ್ರೀಯನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

- Advertisement -
- Advertisement -

ನೇಪಾಳದಲ್ಲಿ ಯುವ ಜನರ ಹಿಂಸಾತ್ಮಕ ಹೋರಾಟದ ಪರಿಣಾಮ ಕೆ.ಪಿ ಶರ್ಮಾ ಓಲಿ ನೇತೃತ್ವದ ಸರ್ಕಾರ ಪತನಗೊಂಡ ಬಳಿಕ, ಸುಶೀಲಾ ಕರ್ಕಿ ಶುಕ್ರವಾರ (ಸೆ.12) ಮಧ್ಯಂತರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸರ್ಕಾರವನ್ನು ಮುನ್ನಡೆಸಲಿದ್ದಾರೆ.

ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ರಾಷ್ಟ್ರಪತಿ ಕಚೇರಿಯಾದ ಶೀತಲ್ ನಿವಾಸ್‌ನಲ್ಲಿ ನಡೆದ ಸಮಾರಂಭದಲ್ಲಿ ಕರ್ಕಿ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ.

ಆರು ತಿಂಗಳೊಳಗೆ ಚುನಾವಣೆ ನಡೆಸಿ ಹೊಸ ಸರ್ಕಾರ ರಚನೆ ಮಾಡುವ ಜವಾಬ್ದಾರಿ ಈಗ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಹೆಗಲಿಗೆ ಬಿದ್ದಿದೆ.

ಭಾರತದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಹಳೆಯ ವಿದ್ಯಾರ್ಥಿಯಾಗಿರುವ ಕರ್ಕಿ, ಅಧ್ಯಕ್ಷ ಪೌಡೆಲ್, ಸೇನಾ ಮುಖ್ಯಸ್ಥ ಜನರಲ್ ಅಶೋಕ್ ರಾಜ್ ಸಿಗ್ಡೆಲ್ ಮತ್ತು ‘ಜೆನ್‌ ಝೀ’ ಎಂದು ಕರೆಯಲ್ಪಡುವ ಯುವ ಪ್ರತಿಭಟನಾಕಾರರ ಪ್ರತಿನಿಧಿಗಳ ಸಮಾಲೋಚನೆಯ ನಂತರ ಅಂತಿಮವಾಗಿ ಆಯ್ಕೆಯಾದ ಮೊದಲು ನಾಲ್ವರು ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದರು.

ನೇಪಾಳ ವಿದ್ಯುತ್ ಪ್ರಾಧಿಕಾರದ ಮಾಜಿ ಮುಖ್ಯಸ್ಥ ಕುಲ್ಮನ್ ಘಿಸಿಂಗ್, ಕಠ್ಮಂಡು ಮೇಯರ್ ಬಾಲೇಂದ್ರ ಶಾ ಮತ್ತು ಧರಣ್ ಮೇಯರ್ ಹರ್ಕಾ ಸಂಪಂಗ್ ಪ್ರಧಾನಿ ಹುದ್ದೆಯ ರೇಸ್‌ನಲ್ಲಿದ್ದ ಇತರ ನಾಯಕರು.

ನೇಪಾಳದಲ್ಲಿ ಆರಂಭದಲ್ಲಿ, ಸರ್ಕಾರದ ಸಾಮಾಜಿಕ ಮಾಧ್ಯಮ ನಿಷೇಧ ಆದೇಶದ ವಿರುದ್ದ ಭುಗಿಲೆದ್ದ ಯುವಜನರ ಪ್ರತಿಭಟನೆ ಬಳಿಕ ಹಿಂಸಾತ್ಮಕ ರೂಪ ಪಡೆದಿತ್ತು. ‘ಜೆನ್‌ ಝೀ’ ಯುವಜನರು, ವಿದ್ಯಾರ್ಥಿಗಳು ಸಂಸತ್ ಭವನ, ಪ್ರಧಾನಿ ಮತ್ತು ಸಚಿವರ ಮನೆಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿದ್ದರು.

ಕೆಲ ಸಚಿವರನ್ನು ಪ್ರತಿಭಟನಾಕಾರರು ಅಟ್ಟಾಡಿಸಿ ಥಳಿಸಿದ್ದರು. ಈ ನಡುವೆ ತನ್ನ ಹುದ್ದೆಗೆ ರಾಜೀನಾಮೆ ಕೊಟ್ಟ ಪ್ರಧಾನಿ ಕೆ.ಪಿ ಶರ್ಮಾ ಓಲಿ, ದೇಶ ಬಿಟ್ಟು ಪಲಾಯನ ಮಾಡಿದ್ದಾರೆ ಎನ್ನಲಾಗಿದೆ.

ಯುವಜನರ ಪ್ರತಿಭಟನೆ ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ದ ಪ್ರಾರಂಭಗೊಂಡರೂ, ಬಳಿಕ ಅದು ಪಡೆದುಕೊಂಡ ಸ್ವರೂಪ ರಾಜಕಾರಣಿಗಳ ಮಿತಿ ಮೀರಿದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಸೇರಿದಂತೆ ಜನ ವಿರೋಧಿ ನಡೆಗಳ ವಿರುದ್ದ ಆಕ್ರೋಶದ ಕಟ್ಟೆ ಒಡೆದಿರುವುದಾಗಿ ಎಂದು ವರದಿಗಳು ಹೇಳಿವೆ.

ನಾಲ್ಕೈದು ದಿನಗಳ ಹಿಂಸಾತ್ಮಕ ಪ್ರತಿಭಟನೆಯಿಂದ ನೇಪಾಳದಲ್ಲಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಸುಮಾರು 20ರಷ್ಟು ಜನರು ಸಾವಿಗೀಡಾಗಿದ್ದಾರೆ. ದೇಶವನ್ನು ಹೊಸದಾಗಿ ಕಟ್ಟುವ ಜವಾಬ್ದಾರಿ ಮಧ್ಯಂತರ ಸರ್ಕಾರ ಮೇಲಿದೆ.

ಪ್ರಸ್ತುತ ಪ್ರತಿಭಟನೆಗಳು ಕಡಿಮೆಯಾಗಿವೆ. ಪರಿಸ್ಥಿತಿಯ ಸೇನೆಯ ನಿಯಂತ್ರಣಕ್ಕೆ ಬಂದಿದೆ.

ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಯಾರು?

ಜುಲೈ 2016ರಲ್ಲಿ ನೇಪಾಳದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುವ ಮೂಲಕ ಸುಶೀಲಾ ಕರ್ಕಿ ಅವರು ಇತಿಹಾಸ ನಿರ್ಮಿಸಿದ್ದರು. ಆದಾಗ್ಯೂ, ಜನಪ್ರತಿನಿಧಿಗಳು ಪಕ್ಷಪಾತದ ತೀರ್ಪುಗಳನ್ನು ನೀಡಿದ್ದಾರೆ ಮತ್ತು ಕಾರ್ಯಾಂಗದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಿ ಪದಚ್ಯುತಿ ನಿರ್ಣಯ ಮಂಡಿಸಿದ ನಂತರ ಅವರ ಅಧಿಕಾರಾವಧಿಯು ಒಂದು ವರ್ಷದೊಳಗೆ ಕೊನೆಗೊಂಡಿತ್ತು.

ನೇಪಾಳ ಸುಪ್ರೀಂ ಕೋರ್ಟ್ ಪೊಲೀಸ್ ಮುಖ್ಯಸ್ಥರ ನೇಮಕಾತಿಗಳ ಕುರಿತ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ನಂತರ ಕರ್ಕಿ ಅವರನ್ನು ನ್ಯಾಯಮೂರ್ತಿ ಹುದ್ದೆಯಿಂದ ಕೆಳಗಿಳಿಸಲಾಗಿತ್ತು. ಹಿರಿತನವನ್ನು ಅನ್ಯಾಯವಾಗಿ ನಿರ್ಲಕ್ಷಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ತನಿಖೆ ಬಾಕಿ ಇರುವಾಗಲೇ ಕರ್ಕಿ ಅವರನ್ನು ಅಮಾನತುಗೊಳಿಸಲಾಗಿದ್ದರೂ, ಜೂನ್ 2017ರಲ್ಲಿ ಅವರ ನಿವೃತ್ತಿಗೆ ಮೊದಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ಸಾಧ್ಯವಾಗದೆ ಪದಚ್ಯುತಿ ನಿರ್ಣಯ ವಿಫಲಗೊಂಡಿತ್ತು.

ಜೂನ್ 7,1952 ರಂದು ಬಿರಾಟ್‌ನಗರದಲ್ಲಿ ಜನಿಸಿದ ಸುಶೀಲಾ ಕರ್ಕಿ, 1975 ರಲ್ಲಿ ಬಿಎಚ್‌ಯುನಲ್ಲಿ ರಾಜಕೀಯ ವಿಜ್ಞಾನವನ್ನು ಮತ್ತು 1978ರಲ್ಲಿ ತ್ರಿಭುವನ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದರು. ಮುಖ್ಯ ನ್ಯಾಯಾಧೀಶರಾಗುವ ಮೊದಲು, ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶೆ, ಹಿರಿಯ ವಕೀಲೆ ಮತ್ತು ಕಾನೂನು ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದರು. ಲಿಂಗ ಸಮಾನತೆಯ ಕುರಿತು ಲೇಖಕಿಯೂ ಆಗಿದ್ದ ಸುಶೀಲಾ ಕರ್ಕಿ, ಮಾನವ ಹಕ್ಕುಗಳು ಮತ್ತು ಮಹಿಳಾ ನ್ಯಾಯಾಂಗ ಸಂಸ್ಥೆಗಳಲ್ಲಿ ದೀರ್ಘಕಾಲ ತೊಡಗಿಸಿಕೊಂಡಿದ್ದರು.

ನೇಪಾಳದಲ್ಲಿ ಜೈಲು ಘರ್ಷಣೆ: 15,000ಕ್ಕೂ ಹೆಚ್ಚು ಕೈದಿಗಳ ಪರಾರಿ, ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...