Homeಅಂತರಾಷ್ಟ್ರೀಯನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

- Advertisement -
- Advertisement -

ನೇಪಾಳದಲ್ಲಿ ಯುವ ಜನರ ಹಿಂಸಾತ್ಮಕ ಹೋರಾಟದ ಪರಿಣಾಮ ಕೆ.ಪಿ ಶರ್ಮಾ ಓಲಿ ನೇತೃತ್ವದ ಸರ್ಕಾರ ಪತನಗೊಂಡ ಬಳಿಕ, ಸುಶೀಲಾ ಕರ್ಕಿ ಶುಕ್ರವಾರ (ಸೆ.12) ಮಧ್ಯಂತರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸರ್ಕಾರವನ್ನು ಮುನ್ನಡೆಸಲಿದ್ದಾರೆ.

ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ರಾಷ್ಟ್ರಪತಿ ಕಚೇರಿಯಾದ ಶೀತಲ್ ನಿವಾಸ್‌ನಲ್ಲಿ ನಡೆದ ಸಮಾರಂಭದಲ್ಲಿ ಕರ್ಕಿ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ.

ಆರು ತಿಂಗಳೊಳಗೆ ಚುನಾವಣೆ ನಡೆಸಿ ಹೊಸ ಸರ್ಕಾರ ರಚನೆ ಮಾಡುವ ಜವಾಬ್ದಾರಿ ಈಗ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಹೆಗಲಿಗೆ ಬಿದ್ದಿದೆ.

ಭಾರತದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಹಳೆಯ ವಿದ್ಯಾರ್ಥಿಯಾಗಿರುವ ಕರ್ಕಿ, ಅಧ್ಯಕ್ಷ ಪೌಡೆಲ್, ಸೇನಾ ಮುಖ್ಯಸ್ಥ ಜನರಲ್ ಅಶೋಕ್ ರಾಜ್ ಸಿಗ್ಡೆಲ್ ಮತ್ತು ‘ಜೆನ್‌ ಝೀ’ ಎಂದು ಕರೆಯಲ್ಪಡುವ ಯುವ ಪ್ರತಿಭಟನಾಕಾರರ ಪ್ರತಿನಿಧಿಗಳ ಸಮಾಲೋಚನೆಯ ನಂತರ ಅಂತಿಮವಾಗಿ ಆಯ್ಕೆಯಾದ ಮೊದಲು ನಾಲ್ವರು ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದರು.

ನೇಪಾಳ ವಿದ್ಯುತ್ ಪ್ರಾಧಿಕಾರದ ಮಾಜಿ ಮುಖ್ಯಸ್ಥ ಕುಲ್ಮನ್ ಘಿಸಿಂಗ್, ಕಠ್ಮಂಡು ಮೇಯರ್ ಬಾಲೇಂದ್ರ ಶಾ ಮತ್ತು ಧರಣ್ ಮೇಯರ್ ಹರ್ಕಾ ಸಂಪಂಗ್ ಪ್ರಧಾನಿ ಹುದ್ದೆಯ ರೇಸ್‌ನಲ್ಲಿದ್ದ ಇತರ ನಾಯಕರು.

ನೇಪಾಳದಲ್ಲಿ ಆರಂಭದಲ್ಲಿ, ಸರ್ಕಾರದ ಸಾಮಾಜಿಕ ಮಾಧ್ಯಮ ನಿಷೇಧ ಆದೇಶದ ವಿರುದ್ದ ಭುಗಿಲೆದ್ದ ಯುವಜನರ ಪ್ರತಿಭಟನೆ ಬಳಿಕ ಹಿಂಸಾತ್ಮಕ ರೂಪ ಪಡೆದಿತ್ತು. ‘ಜೆನ್‌ ಝೀ’ ಯುವಜನರು, ವಿದ್ಯಾರ್ಥಿಗಳು ಸಂಸತ್ ಭವನ, ಪ್ರಧಾನಿ ಮತ್ತು ಸಚಿವರ ಮನೆಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿದ್ದರು.

ಕೆಲ ಸಚಿವರನ್ನು ಪ್ರತಿಭಟನಾಕಾರರು ಅಟ್ಟಾಡಿಸಿ ಥಳಿಸಿದ್ದರು. ಈ ನಡುವೆ ತನ್ನ ಹುದ್ದೆಗೆ ರಾಜೀನಾಮೆ ಕೊಟ್ಟ ಪ್ರಧಾನಿ ಕೆ.ಪಿ ಶರ್ಮಾ ಓಲಿ, ದೇಶ ಬಿಟ್ಟು ಪಲಾಯನ ಮಾಡಿದ್ದಾರೆ ಎನ್ನಲಾಗಿದೆ.

ಯುವಜನರ ಪ್ರತಿಭಟನೆ ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ದ ಪ್ರಾರಂಭಗೊಂಡರೂ, ಬಳಿಕ ಅದು ಪಡೆದುಕೊಂಡ ಸ್ವರೂಪ ರಾಜಕಾರಣಿಗಳ ಮಿತಿ ಮೀರಿದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಸೇರಿದಂತೆ ಜನ ವಿರೋಧಿ ನಡೆಗಳ ವಿರುದ್ದ ಆಕ್ರೋಶದ ಕಟ್ಟೆ ಒಡೆದಿರುವುದಾಗಿ ಎಂದು ವರದಿಗಳು ಹೇಳಿವೆ.

ನಾಲ್ಕೈದು ದಿನಗಳ ಹಿಂಸಾತ್ಮಕ ಪ್ರತಿಭಟನೆಯಿಂದ ನೇಪಾಳದಲ್ಲಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಸುಮಾರು 20ರಷ್ಟು ಜನರು ಸಾವಿಗೀಡಾಗಿದ್ದಾರೆ. ದೇಶವನ್ನು ಹೊಸದಾಗಿ ಕಟ್ಟುವ ಜವಾಬ್ದಾರಿ ಮಧ್ಯಂತರ ಸರ್ಕಾರ ಮೇಲಿದೆ.

ಪ್ರಸ್ತುತ ಪ್ರತಿಭಟನೆಗಳು ಕಡಿಮೆಯಾಗಿವೆ. ಪರಿಸ್ಥಿತಿಯ ಸೇನೆಯ ನಿಯಂತ್ರಣಕ್ಕೆ ಬಂದಿದೆ.

ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಯಾರು?

ಜುಲೈ 2016ರಲ್ಲಿ ನೇಪಾಳದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುವ ಮೂಲಕ ಸುಶೀಲಾ ಕರ್ಕಿ ಅವರು ಇತಿಹಾಸ ನಿರ್ಮಿಸಿದ್ದರು. ಆದಾಗ್ಯೂ, ಜನಪ್ರತಿನಿಧಿಗಳು ಪಕ್ಷಪಾತದ ತೀರ್ಪುಗಳನ್ನು ನೀಡಿದ್ದಾರೆ ಮತ್ತು ಕಾರ್ಯಾಂಗದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಿ ಪದಚ್ಯುತಿ ನಿರ್ಣಯ ಮಂಡಿಸಿದ ನಂತರ ಅವರ ಅಧಿಕಾರಾವಧಿಯು ಒಂದು ವರ್ಷದೊಳಗೆ ಕೊನೆಗೊಂಡಿತ್ತು.

ನೇಪಾಳ ಸುಪ್ರೀಂ ಕೋರ್ಟ್ ಪೊಲೀಸ್ ಮುಖ್ಯಸ್ಥರ ನೇಮಕಾತಿಗಳ ಕುರಿತ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ನಂತರ ಕರ್ಕಿ ಅವರನ್ನು ನ್ಯಾಯಮೂರ್ತಿ ಹುದ್ದೆಯಿಂದ ಕೆಳಗಿಳಿಸಲಾಗಿತ್ತು. ಹಿರಿತನವನ್ನು ಅನ್ಯಾಯವಾಗಿ ನಿರ್ಲಕ್ಷಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ತನಿಖೆ ಬಾಕಿ ಇರುವಾಗಲೇ ಕರ್ಕಿ ಅವರನ್ನು ಅಮಾನತುಗೊಳಿಸಲಾಗಿದ್ದರೂ, ಜೂನ್ 2017ರಲ್ಲಿ ಅವರ ನಿವೃತ್ತಿಗೆ ಮೊದಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ಸಾಧ್ಯವಾಗದೆ ಪದಚ್ಯುತಿ ನಿರ್ಣಯ ವಿಫಲಗೊಂಡಿತ್ತು.

ಜೂನ್ 7,1952 ರಂದು ಬಿರಾಟ್‌ನಗರದಲ್ಲಿ ಜನಿಸಿದ ಸುಶೀಲಾ ಕರ್ಕಿ, 1975 ರಲ್ಲಿ ಬಿಎಚ್‌ಯುನಲ್ಲಿ ರಾಜಕೀಯ ವಿಜ್ಞಾನವನ್ನು ಮತ್ತು 1978ರಲ್ಲಿ ತ್ರಿಭುವನ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದರು. ಮುಖ್ಯ ನ್ಯಾಯಾಧೀಶರಾಗುವ ಮೊದಲು, ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶೆ, ಹಿರಿಯ ವಕೀಲೆ ಮತ್ತು ಕಾನೂನು ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದರು. ಲಿಂಗ ಸಮಾನತೆಯ ಕುರಿತು ಲೇಖಕಿಯೂ ಆಗಿದ್ದ ಸುಶೀಲಾ ಕರ್ಕಿ, ಮಾನವ ಹಕ್ಕುಗಳು ಮತ್ತು ಮಹಿಳಾ ನ್ಯಾಯಾಂಗ ಸಂಸ್ಥೆಗಳಲ್ಲಿ ದೀರ್ಘಕಾಲ ತೊಡಗಿಸಿಕೊಂಡಿದ್ದರು.

ನೇಪಾಳದಲ್ಲಿ ಜೈಲು ಘರ್ಷಣೆ: 15,000ಕ್ಕೂ ಹೆಚ್ಚು ಕೈದಿಗಳ ಪರಾರಿ, ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...