Homeಅಂತರಾಷ್ಟ್ರೀಯನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

- Advertisement -
- Advertisement -

ನೇಪಾಳದಲ್ಲಿ ಯುವ ಜನರ ಹಿಂಸಾತ್ಮಕ ಹೋರಾಟದ ಪರಿಣಾಮ ಕೆ.ಪಿ ಶರ್ಮಾ ಓಲಿ ನೇತೃತ್ವದ ಸರ್ಕಾರ ಪತನಗೊಂಡ ಬಳಿಕ, ಸುಶೀಲಾ ಕರ್ಕಿ ಶುಕ್ರವಾರ (ಸೆ.12) ಮಧ್ಯಂತರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸರ್ಕಾರವನ್ನು ಮುನ್ನಡೆಸಲಿದ್ದಾರೆ.

ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ರಾಷ್ಟ್ರಪತಿ ಕಚೇರಿಯಾದ ಶೀತಲ್ ನಿವಾಸ್‌ನಲ್ಲಿ ನಡೆದ ಸಮಾರಂಭದಲ್ಲಿ ಕರ್ಕಿ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ.

ಆರು ತಿಂಗಳೊಳಗೆ ಚುನಾವಣೆ ನಡೆಸಿ ಹೊಸ ಸರ್ಕಾರ ರಚನೆ ಮಾಡುವ ಜವಾಬ್ದಾರಿ ಈಗ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಹೆಗಲಿಗೆ ಬಿದ್ದಿದೆ.

ಭಾರತದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಹಳೆಯ ವಿದ್ಯಾರ್ಥಿಯಾಗಿರುವ ಕರ್ಕಿ, ಅಧ್ಯಕ್ಷ ಪೌಡೆಲ್, ಸೇನಾ ಮುಖ್ಯಸ್ಥ ಜನರಲ್ ಅಶೋಕ್ ರಾಜ್ ಸಿಗ್ಡೆಲ್ ಮತ್ತು ‘ಜೆನ್‌ ಝೀ’ ಎಂದು ಕರೆಯಲ್ಪಡುವ ಯುವ ಪ್ರತಿಭಟನಾಕಾರರ ಪ್ರತಿನಿಧಿಗಳ ಸಮಾಲೋಚನೆಯ ನಂತರ ಅಂತಿಮವಾಗಿ ಆಯ್ಕೆಯಾದ ಮೊದಲು ನಾಲ್ವರು ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದರು.

ನೇಪಾಳ ವಿದ್ಯುತ್ ಪ್ರಾಧಿಕಾರದ ಮಾಜಿ ಮುಖ್ಯಸ್ಥ ಕುಲ್ಮನ್ ಘಿಸಿಂಗ್, ಕಠ್ಮಂಡು ಮೇಯರ್ ಬಾಲೇಂದ್ರ ಶಾ ಮತ್ತು ಧರಣ್ ಮೇಯರ್ ಹರ್ಕಾ ಸಂಪಂಗ್ ಪ್ರಧಾನಿ ಹುದ್ದೆಯ ರೇಸ್‌ನಲ್ಲಿದ್ದ ಇತರ ನಾಯಕರು.

ನೇಪಾಳದಲ್ಲಿ ಆರಂಭದಲ್ಲಿ, ಸರ್ಕಾರದ ಸಾಮಾಜಿಕ ಮಾಧ್ಯಮ ನಿಷೇಧ ಆದೇಶದ ವಿರುದ್ದ ಭುಗಿಲೆದ್ದ ಯುವಜನರ ಪ್ರತಿಭಟನೆ ಬಳಿಕ ಹಿಂಸಾತ್ಮಕ ರೂಪ ಪಡೆದಿತ್ತು. ‘ಜೆನ್‌ ಝೀ’ ಯುವಜನರು, ವಿದ್ಯಾರ್ಥಿಗಳು ಸಂಸತ್ ಭವನ, ಪ್ರಧಾನಿ ಮತ್ತು ಸಚಿವರ ಮನೆಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿದ್ದರು.

ಕೆಲ ಸಚಿವರನ್ನು ಪ್ರತಿಭಟನಾಕಾರರು ಅಟ್ಟಾಡಿಸಿ ಥಳಿಸಿದ್ದರು. ಈ ನಡುವೆ ತನ್ನ ಹುದ್ದೆಗೆ ರಾಜೀನಾಮೆ ಕೊಟ್ಟ ಪ್ರಧಾನಿ ಕೆ.ಪಿ ಶರ್ಮಾ ಓಲಿ, ದೇಶ ಬಿಟ್ಟು ಪಲಾಯನ ಮಾಡಿದ್ದಾರೆ ಎನ್ನಲಾಗಿದೆ.

ಯುವಜನರ ಪ್ರತಿಭಟನೆ ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ದ ಪ್ರಾರಂಭಗೊಂಡರೂ, ಬಳಿಕ ಅದು ಪಡೆದುಕೊಂಡ ಸ್ವರೂಪ ರಾಜಕಾರಣಿಗಳ ಮಿತಿ ಮೀರಿದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಸೇರಿದಂತೆ ಜನ ವಿರೋಧಿ ನಡೆಗಳ ವಿರುದ್ದ ಆಕ್ರೋಶದ ಕಟ್ಟೆ ಒಡೆದಿರುವುದಾಗಿ ಎಂದು ವರದಿಗಳು ಹೇಳಿವೆ.

ನಾಲ್ಕೈದು ದಿನಗಳ ಹಿಂಸಾತ್ಮಕ ಪ್ರತಿಭಟನೆಯಿಂದ ನೇಪಾಳದಲ್ಲಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಸುಮಾರು 20ರಷ್ಟು ಜನರು ಸಾವಿಗೀಡಾಗಿದ್ದಾರೆ. ದೇಶವನ್ನು ಹೊಸದಾಗಿ ಕಟ್ಟುವ ಜವಾಬ್ದಾರಿ ಮಧ್ಯಂತರ ಸರ್ಕಾರ ಮೇಲಿದೆ.

ಪ್ರಸ್ತುತ ಪ್ರತಿಭಟನೆಗಳು ಕಡಿಮೆಯಾಗಿವೆ. ಪರಿಸ್ಥಿತಿಯ ಸೇನೆಯ ನಿಯಂತ್ರಣಕ್ಕೆ ಬಂದಿದೆ.

ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಯಾರು?

ಜುಲೈ 2016ರಲ್ಲಿ ನೇಪಾಳದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುವ ಮೂಲಕ ಸುಶೀಲಾ ಕರ್ಕಿ ಅವರು ಇತಿಹಾಸ ನಿರ್ಮಿಸಿದ್ದರು. ಆದಾಗ್ಯೂ, ಜನಪ್ರತಿನಿಧಿಗಳು ಪಕ್ಷಪಾತದ ತೀರ್ಪುಗಳನ್ನು ನೀಡಿದ್ದಾರೆ ಮತ್ತು ಕಾರ್ಯಾಂಗದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಿ ಪದಚ್ಯುತಿ ನಿರ್ಣಯ ಮಂಡಿಸಿದ ನಂತರ ಅವರ ಅಧಿಕಾರಾವಧಿಯು ಒಂದು ವರ್ಷದೊಳಗೆ ಕೊನೆಗೊಂಡಿತ್ತು.

ನೇಪಾಳ ಸುಪ್ರೀಂ ಕೋರ್ಟ್ ಪೊಲೀಸ್ ಮುಖ್ಯಸ್ಥರ ನೇಮಕಾತಿಗಳ ಕುರಿತ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ನಂತರ ಕರ್ಕಿ ಅವರನ್ನು ನ್ಯಾಯಮೂರ್ತಿ ಹುದ್ದೆಯಿಂದ ಕೆಳಗಿಳಿಸಲಾಗಿತ್ತು. ಹಿರಿತನವನ್ನು ಅನ್ಯಾಯವಾಗಿ ನಿರ್ಲಕ್ಷಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ತನಿಖೆ ಬಾಕಿ ಇರುವಾಗಲೇ ಕರ್ಕಿ ಅವರನ್ನು ಅಮಾನತುಗೊಳಿಸಲಾಗಿದ್ದರೂ, ಜೂನ್ 2017ರಲ್ಲಿ ಅವರ ನಿವೃತ್ತಿಗೆ ಮೊದಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ಸಾಧ್ಯವಾಗದೆ ಪದಚ್ಯುತಿ ನಿರ್ಣಯ ವಿಫಲಗೊಂಡಿತ್ತು.

ಜೂನ್ 7,1952 ರಂದು ಬಿರಾಟ್‌ನಗರದಲ್ಲಿ ಜನಿಸಿದ ಸುಶೀಲಾ ಕರ್ಕಿ, 1975 ರಲ್ಲಿ ಬಿಎಚ್‌ಯುನಲ್ಲಿ ರಾಜಕೀಯ ವಿಜ್ಞಾನವನ್ನು ಮತ್ತು 1978ರಲ್ಲಿ ತ್ರಿಭುವನ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದರು. ಮುಖ್ಯ ನ್ಯಾಯಾಧೀಶರಾಗುವ ಮೊದಲು, ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶೆ, ಹಿರಿಯ ವಕೀಲೆ ಮತ್ತು ಕಾನೂನು ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದರು. ಲಿಂಗ ಸಮಾನತೆಯ ಕುರಿತು ಲೇಖಕಿಯೂ ಆಗಿದ್ದ ಸುಶೀಲಾ ಕರ್ಕಿ, ಮಾನವ ಹಕ್ಕುಗಳು ಮತ್ತು ಮಹಿಳಾ ನ್ಯಾಯಾಂಗ ಸಂಸ್ಥೆಗಳಲ್ಲಿ ದೀರ್ಘಕಾಲ ತೊಡಗಿಸಿಕೊಂಡಿದ್ದರು.

ನೇಪಾಳದಲ್ಲಿ ಜೈಲು ಘರ್ಷಣೆ: 15,000ಕ್ಕೂ ಹೆಚ್ಚು ಕೈದಿಗಳ ಪರಾರಿ, ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...