Homeಅಂತರಾಷ್ಟ್ರೀಯನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

- Advertisement -
- Advertisement -

ನೇಪಾಳದಲ್ಲಿ ಯುವ ಜನರ ಹಿಂಸಾತ್ಮಕ ಹೋರಾಟದ ಪರಿಣಾಮ ಕೆ.ಪಿ ಶರ್ಮಾ ಓಲಿ ನೇತೃತ್ವದ ಸರ್ಕಾರ ಪತನಗೊಂಡ ಬಳಿಕ, ಸುಶೀಲಾ ಕರ್ಕಿ ಶುಕ್ರವಾರ (ಸೆ.12) ಮಧ್ಯಂತರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸರ್ಕಾರವನ್ನು ಮುನ್ನಡೆಸಲಿದ್ದಾರೆ.

ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ರಾಷ್ಟ್ರಪತಿ ಕಚೇರಿಯಾದ ಶೀತಲ್ ನಿವಾಸ್‌ನಲ್ಲಿ ನಡೆದ ಸಮಾರಂಭದಲ್ಲಿ ಕರ್ಕಿ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ.

ಆರು ತಿಂಗಳೊಳಗೆ ಚುನಾವಣೆ ನಡೆಸಿ ಹೊಸ ಸರ್ಕಾರ ರಚನೆ ಮಾಡುವ ಜವಾಬ್ದಾರಿ ಈಗ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಹೆಗಲಿಗೆ ಬಿದ್ದಿದೆ.

ಭಾರತದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಹಳೆಯ ವಿದ್ಯಾರ್ಥಿಯಾಗಿರುವ ಕರ್ಕಿ, ಅಧ್ಯಕ್ಷ ಪೌಡೆಲ್, ಸೇನಾ ಮುಖ್ಯಸ್ಥ ಜನರಲ್ ಅಶೋಕ್ ರಾಜ್ ಸಿಗ್ಡೆಲ್ ಮತ್ತು ‘ಜೆನ್‌ ಝೀ’ ಎಂದು ಕರೆಯಲ್ಪಡುವ ಯುವ ಪ್ರತಿಭಟನಾಕಾರರ ಪ್ರತಿನಿಧಿಗಳ ಸಮಾಲೋಚನೆಯ ನಂತರ ಅಂತಿಮವಾಗಿ ಆಯ್ಕೆಯಾದ ಮೊದಲು ನಾಲ್ವರು ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದರು.

ನೇಪಾಳ ವಿದ್ಯುತ್ ಪ್ರಾಧಿಕಾರದ ಮಾಜಿ ಮುಖ್ಯಸ್ಥ ಕುಲ್ಮನ್ ಘಿಸಿಂಗ್, ಕಠ್ಮಂಡು ಮೇಯರ್ ಬಾಲೇಂದ್ರ ಶಾ ಮತ್ತು ಧರಣ್ ಮೇಯರ್ ಹರ್ಕಾ ಸಂಪಂಗ್ ಪ್ರಧಾನಿ ಹುದ್ದೆಯ ರೇಸ್‌ನಲ್ಲಿದ್ದ ಇತರ ನಾಯಕರು.

ನೇಪಾಳದಲ್ಲಿ ಆರಂಭದಲ್ಲಿ, ಸರ್ಕಾರದ ಸಾಮಾಜಿಕ ಮಾಧ್ಯಮ ನಿಷೇಧ ಆದೇಶದ ವಿರುದ್ದ ಭುಗಿಲೆದ್ದ ಯುವಜನರ ಪ್ರತಿಭಟನೆ ಬಳಿಕ ಹಿಂಸಾತ್ಮಕ ರೂಪ ಪಡೆದಿತ್ತು. ‘ಜೆನ್‌ ಝೀ’ ಯುವಜನರು, ವಿದ್ಯಾರ್ಥಿಗಳು ಸಂಸತ್ ಭವನ, ಪ್ರಧಾನಿ ಮತ್ತು ಸಚಿವರ ಮನೆಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿದ್ದರು.

ಕೆಲ ಸಚಿವರನ್ನು ಪ್ರತಿಭಟನಾಕಾರರು ಅಟ್ಟಾಡಿಸಿ ಥಳಿಸಿದ್ದರು. ಈ ನಡುವೆ ತನ್ನ ಹುದ್ದೆಗೆ ರಾಜೀನಾಮೆ ಕೊಟ್ಟ ಪ್ರಧಾನಿ ಕೆ.ಪಿ ಶರ್ಮಾ ಓಲಿ, ದೇಶ ಬಿಟ್ಟು ಪಲಾಯನ ಮಾಡಿದ್ದಾರೆ ಎನ್ನಲಾಗಿದೆ.

ಯುವಜನರ ಪ್ರತಿಭಟನೆ ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ದ ಪ್ರಾರಂಭಗೊಂಡರೂ, ಬಳಿಕ ಅದು ಪಡೆದುಕೊಂಡ ಸ್ವರೂಪ ರಾಜಕಾರಣಿಗಳ ಮಿತಿ ಮೀರಿದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಸೇರಿದಂತೆ ಜನ ವಿರೋಧಿ ನಡೆಗಳ ವಿರುದ್ದ ಆಕ್ರೋಶದ ಕಟ್ಟೆ ಒಡೆದಿರುವುದಾಗಿ ಎಂದು ವರದಿಗಳು ಹೇಳಿವೆ.

ನಾಲ್ಕೈದು ದಿನಗಳ ಹಿಂಸಾತ್ಮಕ ಪ್ರತಿಭಟನೆಯಿಂದ ನೇಪಾಳದಲ್ಲಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಸುಮಾರು 20ರಷ್ಟು ಜನರು ಸಾವಿಗೀಡಾಗಿದ್ದಾರೆ. ದೇಶವನ್ನು ಹೊಸದಾಗಿ ಕಟ್ಟುವ ಜವಾಬ್ದಾರಿ ಮಧ್ಯಂತರ ಸರ್ಕಾರ ಮೇಲಿದೆ.

ಪ್ರಸ್ತುತ ಪ್ರತಿಭಟನೆಗಳು ಕಡಿಮೆಯಾಗಿವೆ. ಪರಿಸ್ಥಿತಿಯ ಸೇನೆಯ ನಿಯಂತ್ರಣಕ್ಕೆ ಬಂದಿದೆ.

ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಯಾರು?

ಜುಲೈ 2016ರಲ್ಲಿ ನೇಪಾಳದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುವ ಮೂಲಕ ಸುಶೀಲಾ ಕರ್ಕಿ ಅವರು ಇತಿಹಾಸ ನಿರ್ಮಿಸಿದ್ದರು. ಆದಾಗ್ಯೂ, ಜನಪ್ರತಿನಿಧಿಗಳು ಪಕ್ಷಪಾತದ ತೀರ್ಪುಗಳನ್ನು ನೀಡಿದ್ದಾರೆ ಮತ್ತು ಕಾರ್ಯಾಂಗದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಿ ಪದಚ್ಯುತಿ ನಿರ್ಣಯ ಮಂಡಿಸಿದ ನಂತರ ಅವರ ಅಧಿಕಾರಾವಧಿಯು ಒಂದು ವರ್ಷದೊಳಗೆ ಕೊನೆಗೊಂಡಿತ್ತು.

ನೇಪಾಳ ಸುಪ್ರೀಂ ಕೋರ್ಟ್ ಪೊಲೀಸ್ ಮುಖ್ಯಸ್ಥರ ನೇಮಕಾತಿಗಳ ಕುರಿತ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ನಂತರ ಕರ್ಕಿ ಅವರನ್ನು ನ್ಯಾಯಮೂರ್ತಿ ಹುದ್ದೆಯಿಂದ ಕೆಳಗಿಳಿಸಲಾಗಿತ್ತು. ಹಿರಿತನವನ್ನು ಅನ್ಯಾಯವಾಗಿ ನಿರ್ಲಕ್ಷಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ತನಿಖೆ ಬಾಕಿ ಇರುವಾಗಲೇ ಕರ್ಕಿ ಅವರನ್ನು ಅಮಾನತುಗೊಳಿಸಲಾಗಿದ್ದರೂ, ಜೂನ್ 2017ರಲ್ಲಿ ಅವರ ನಿವೃತ್ತಿಗೆ ಮೊದಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ಸಾಧ್ಯವಾಗದೆ ಪದಚ್ಯುತಿ ನಿರ್ಣಯ ವಿಫಲಗೊಂಡಿತ್ತು.

ಜೂನ್ 7,1952 ರಂದು ಬಿರಾಟ್‌ನಗರದಲ್ಲಿ ಜನಿಸಿದ ಸುಶೀಲಾ ಕರ್ಕಿ, 1975 ರಲ್ಲಿ ಬಿಎಚ್‌ಯುನಲ್ಲಿ ರಾಜಕೀಯ ವಿಜ್ಞಾನವನ್ನು ಮತ್ತು 1978ರಲ್ಲಿ ತ್ರಿಭುವನ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದರು. ಮುಖ್ಯ ನ್ಯಾಯಾಧೀಶರಾಗುವ ಮೊದಲು, ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶೆ, ಹಿರಿಯ ವಕೀಲೆ ಮತ್ತು ಕಾನೂನು ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದರು. ಲಿಂಗ ಸಮಾನತೆಯ ಕುರಿತು ಲೇಖಕಿಯೂ ಆಗಿದ್ದ ಸುಶೀಲಾ ಕರ್ಕಿ, ಮಾನವ ಹಕ್ಕುಗಳು ಮತ್ತು ಮಹಿಳಾ ನ್ಯಾಯಾಂಗ ಸಂಸ್ಥೆಗಳಲ್ಲಿ ದೀರ್ಘಕಾಲ ತೊಡಗಿಸಿಕೊಂಡಿದ್ದರು.

ನೇಪಾಳದಲ್ಲಿ ಜೈಲು ಘರ್ಷಣೆ: 15,000ಕ್ಕೂ ಹೆಚ್ಚು ಕೈದಿಗಳ ಪರಾರಿ, ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...