Homeಮುಖಪುಟರಾಜ್ಯದ 144 ಮೀನುಗಾರರು, 1,173 ದೋಣಿಗಳು ಪಾಕಿಸ್ತಾನದ ವಶದಲ್ಲಿ - ಒಪ್ಪಿಕೊಂಡ ಗುಜರಾತ್ ಬಿಜೆಪಿ ಸರ್ಕಾರ

ರಾಜ್ಯದ 144 ಮೀನುಗಾರರು, 1,173 ದೋಣಿಗಳು ಪಾಕಿಸ್ತಾನದ ವಶದಲ್ಲಿ – ಒಪ್ಪಿಕೊಂಡ ಗುಜರಾತ್ ಬಿಜೆಪಿ ಸರ್ಕಾರ

- Advertisement -
- Advertisement -

ರಾಜ್ಯದ 144 ಮೀನುಗಾರರು ಮತ್ತು 1,173 ದೋಣಿಗಳು ಪಾಕಿಸ್ತಾನದ ವಶದಲ್ಲಿದ್ದಾರೆ ಎಂದು ಗುಜರಾತ್ ಸರ್ಕಾರ ಬುಧವಾರ ಒಪ್ಪಿಕೊಂಡಿದೆ ಎಂದು ಪಿಟಿಐ ವರದಿ ಮಾಡಿದೆ. ಕಳೆದ ಎರಡು ವರ್ಷಗಳಲ್ಲಿ ಇಪ್ಪತ್ತೆರಡು ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಮೀನುಗಾರಿಕಾ ಸಚಿವ ರಾಘವ್‌ಜಿ ಪಟೇಲ್ ವಿಧಾನಸಭೆಗೆ ತಿಳಿಸಿದ್ದಾರೆ.

2023 ರಲ್ಲಿ ಒಂಬತ್ತು ಜನರನ್ನು ಮತ್ತು 2024 ರಲ್ಲಿ 13 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಚಿವ ಹೇಳಿದ್ದಾರೆ. ಅರಬ್ಬಿ ಸಮುದ್ರದಲ್ಲಿನ ಅಂತರರಾಷ್ಟ್ರೀಯ ಸಮುದ್ರ ಗಡಿಯನ್ನು ದಾಟಿ ಈ ಮೀನುಗಾರರು ತನ್ನ ಜಲಪ್ರದೇಶವನ್ನು ಪ್ರವೇಶಿಸಿದ್ದಾರೆ ಎಂದು ಪಾಕಿಸ್ತಾನ ಸಾಗರ ಭದ್ರತಾ ಸಂಸ್ಥೆ ಆರೋಪಿಸಿದೆ ಎಂದು ಪಿಟಿಐ ವರದಿ ಮಾಡಿದೆ. ರಾಜ್ಯದ 144 ಮೀನುಗಾರರು

ಕಳೆದ ಎರಡು ವರ್ಷಗಳಲ್ಲಿ, 432 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಬಿಡುಗಡೆ ಮಾಡಿದೆ ಎಂದು ಇದೇ ವೇಳೆ ಸಚಿವ ಹೇಳಿದ್ದಾರೆ. ಗುಜರಾತ್ ಸರ್ಕಾರವು ಮೀನುಗಾರರ ರಾಷ್ಟ್ರೀಯತೆಯ ಪುರಾವೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ನಿಯಮಿತವಾಗಿ ಸಲ್ಲಿಸುತ್ತಿದೆ ಎಂದು ಪಟೇಲ್ ವಿಧಾನಸಭೆಗೆ ತಿಳಿಸಿದ್ದಾರೆ.

ಡಿಸೆಂಬರ್ ವರೆಗೆ, ಪಾಕಿಸ್ತಾನವು ಭಾರತೀಯರಿಗೆ ಸೇರಿದ 1,173 ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಅವರು ಹೇಳಿದ್ದು, ಆದರೆ ಕಳೆದ ಎರಡು ವರ್ಷಗಳಲ್ಲಿ ಯಾವುದೇ ದೋಣಿಯನ್ನು ಹಿಂತಿರುಗಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ಬುಧವಾರ ಗುಜರಾತ್ ವಿಧಾನಸಭೆಯಲ್ಲಿ ನಡೆದ ತೀವ್ರ ವಾಗ್ವಾದದಲ್ಲಿ, ಕಾಂಗ್ರೆಸ್ ಶಾಸಕರಾದ ಶೈಲೇಶ್ ಪರ್ಮಾರ್ ಮತ್ತು ಅಮಿತ್ ಚಾವ್ಡಾ ಅವರು ಪಾಕಿಸ್ತಾನದಲ್ಲಿ ಬಂಧಿಸಲ್ಪಟ್ಟ ಮೀನುಗಾರರು ಮತ್ತು ದೋಣಿಗಳ ಭವಿಷ್ಯದ ಬಗ್ಗೆ ಮೀನುಗಾರಿಕಾ ಸಚಿವರ ಮೇಲೆ ಒತ್ತಡ ಹೇರಿದ್ದರು.

ಪಾಕಿಸ್ತಾನದ ಜೈಲಿನಲ್ಲಿ ಜೈಲಿನಲ್ಲಿದ್ದ ಗುಜರಾತ್‌ನ ಉನಾದ ಸೋಖ್ಡಾ ಗ್ರಾಮದ ಮೀನುಗಾರ ಬಾಬುಭಾಯಿ ಚುಡಾಸಮಾ ಅವರ ದುರಂತ ಸಾವು ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ಅನಾರೋಗ್ಯದಿಂದಾಗಿ ಅವರು ನಿಧನ ಹೊಂದಿದ್ದಾರೆ ಎಂದು ವರದಿಗಳು ವ್ಯಾಪಕವಾಗಿ ಹರಡಿದ್ದು, ಜೊತೆಗೆ ಘಟನೆಯನ್ನು ವಿವರಿಸುವ ಪತ್ರವೂ ವೈರಲ್ ಆಗಿದೆ.

ಪತ್ರದ ಪ್ರಕಾರ, ಜನವರಿ 23, 2025 ರಂದು ಬೆಳಿಗ್ಗೆ 4:30 ಕ್ಕೆ ಚುಡಾಸಮ ತೀವ್ರ ಅಸ್ವಸ್ಥರಾದರು. ಸಹ ಕೈದಿಗಳು ಅವರನ್ನು ಜೈಲಿನ ಆಸ್ಪತ್ರೆಗೆ ಸಾಗಿಸಿದರು. ಆದರೆ ಅವರ ಸ್ಥಿತಿ ಹದಗೆಟ್ಟಂತೆ, ಅವರನ್ನು ಆಂಬ್ಯುಲೆನ್ಸ್‌ನಲ್ಲಿ ನಗರದ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆದರೆ ಅವರು ದಾರಿಯಲ್ಲಿ ಸಾವನ್ನಪ್ಪಿದರು. ಅವರ ದೇಹವನ್ನು ಸಾಧ್ಯವಾದಷ್ಟು ಬೇಗ ಭಾರತಕ್ಕೆ ಕಳುಹಿಸಲಾಗುವುದು ಎಂದು ಪತ್ರವು ಹೇಳಿಕೊಂಡಿದೆ.

ಚುಡಾಸಮ ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರವೂ ನಾಲ್ಕು ವರ್ಷಗಳಿಂದ ಪಾಕಿಸ್ತಾನದ ಜೈಲಿನಲ್ಲಿ ನರಳುತ್ತಿದ್ದರು ಎಂದು ಅವರ ಕುಟುಂಬ ಸದಸ್ಯರ ಆರೋಪಿಸಿದ್ದಾರೆ.

ಅವರ ಸಾವಿನೊಂದಿಗೆ ಕಳೆದ ಎರಡು ವರ್ಷಗಳಲ್ಲಿ ಇಂತಹ ನಾಲ್ಕನೇ ದುರಂತ ಗಟನೆ ಇದಾಗಿದೆ ಎಂದು ಮಾಧ್ಯಮಗಳು ವರಿದ ಮಾಡಿದೆ. ಪಾಕಿಸ್ತಾನದ ಜೈಲಿನಲ್ಲಿ ಅನೇಕ ಮೀನುಗಾರರು ಈಗಾಗಲೇ ತಮ್ಮ ಶಿಕ್ಷೆಯನ್ನು ಅನುಭವಿಸಿದ್ದಾರೆ. ಆದರೆ ರಾಯಭಾರ ಕಚೇರಿ ಪರಿಶೀಲನೆಯಲ್ಲಿ ವಿಳಂಬ ಮಾಡುತ್ತಿರುವುದರಿಂದ ಅವರು ಜೈಲಿನಲ್ಲೆ ಕೊಳೆಯುತ್ತಿದ್ದಾರೆ ಎಂದು ಜೈಲಿನಲ್ಲಿರುವ ಮೀನುಗಾರರ ಕುಟುಂಬಗಳು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...