Homeಮುಖಪುಟರಾಜ್ಯದ 144 ಮೀನುಗಾರರು, 1,173 ದೋಣಿಗಳು ಪಾಕಿಸ್ತಾನದ ವಶದಲ್ಲಿ - ಒಪ್ಪಿಕೊಂಡ ಗುಜರಾತ್ ಬಿಜೆಪಿ ಸರ್ಕಾರ

ರಾಜ್ಯದ 144 ಮೀನುಗಾರರು, 1,173 ದೋಣಿಗಳು ಪಾಕಿಸ್ತಾನದ ವಶದಲ್ಲಿ – ಒಪ್ಪಿಕೊಂಡ ಗುಜರಾತ್ ಬಿಜೆಪಿ ಸರ್ಕಾರ

- Advertisement -
- Advertisement -

ರಾಜ್ಯದ 144 ಮೀನುಗಾರರು ಮತ್ತು 1,173 ದೋಣಿಗಳು ಪಾಕಿಸ್ತಾನದ ವಶದಲ್ಲಿದ್ದಾರೆ ಎಂದು ಗುಜರಾತ್ ಸರ್ಕಾರ ಬುಧವಾರ ಒಪ್ಪಿಕೊಂಡಿದೆ ಎಂದು ಪಿಟಿಐ ವರದಿ ಮಾಡಿದೆ. ಕಳೆದ ಎರಡು ವರ್ಷಗಳಲ್ಲಿ ಇಪ್ಪತ್ತೆರಡು ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಮೀನುಗಾರಿಕಾ ಸಚಿವ ರಾಘವ್‌ಜಿ ಪಟೇಲ್ ವಿಧಾನಸಭೆಗೆ ತಿಳಿಸಿದ್ದಾರೆ.

2023 ರಲ್ಲಿ ಒಂಬತ್ತು ಜನರನ್ನು ಮತ್ತು 2024 ರಲ್ಲಿ 13 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಚಿವ ಹೇಳಿದ್ದಾರೆ. ಅರಬ್ಬಿ ಸಮುದ್ರದಲ್ಲಿನ ಅಂತರರಾಷ್ಟ್ರೀಯ ಸಮುದ್ರ ಗಡಿಯನ್ನು ದಾಟಿ ಈ ಮೀನುಗಾರರು ತನ್ನ ಜಲಪ್ರದೇಶವನ್ನು ಪ್ರವೇಶಿಸಿದ್ದಾರೆ ಎಂದು ಪಾಕಿಸ್ತಾನ ಸಾಗರ ಭದ್ರತಾ ಸಂಸ್ಥೆ ಆರೋಪಿಸಿದೆ ಎಂದು ಪಿಟಿಐ ವರದಿ ಮಾಡಿದೆ. ರಾಜ್ಯದ 144 ಮೀನುಗಾರರು

ಕಳೆದ ಎರಡು ವರ್ಷಗಳಲ್ಲಿ, 432 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಬಿಡುಗಡೆ ಮಾಡಿದೆ ಎಂದು ಇದೇ ವೇಳೆ ಸಚಿವ ಹೇಳಿದ್ದಾರೆ. ಗುಜರಾತ್ ಸರ್ಕಾರವು ಮೀನುಗಾರರ ರಾಷ್ಟ್ರೀಯತೆಯ ಪುರಾವೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ನಿಯಮಿತವಾಗಿ ಸಲ್ಲಿಸುತ್ತಿದೆ ಎಂದು ಪಟೇಲ್ ವಿಧಾನಸಭೆಗೆ ತಿಳಿಸಿದ್ದಾರೆ.

ಡಿಸೆಂಬರ್ ವರೆಗೆ, ಪಾಕಿಸ್ತಾನವು ಭಾರತೀಯರಿಗೆ ಸೇರಿದ 1,173 ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಅವರು ಹೇಳಿದ್ದು, ಆದರೆ ಕಳೆದ ಎರಡು ವರ್ಷಗಳಲ್ಲಿ ಯಾವುದೇ ದೋಣಿಯನ್ನು ಹಿಂತಿರುಗಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ಬುಧವಾರ ಗುಜರಾತ್ ವಿಧಾನಸಭೆಯಲ್ಲಿ ನಡೆದ ತೀವ್ರ ವಾಗ್ವಾದದಲ್ಲಿ, ಕಾಂಗ್ರೆಸ್ ಶಾಸಕರಾದ ಶೈಲೇಶ್ ಪರ್ಮಾರ್ ಮತ್ತು ಅಮಿತ್ ಚಾವ್ಡಾ ಅವರು ಪಾಕಿಸ್ತಾನದಲ್ಲಿ ಬಂಧಿಸಲ್ಪಟ್ಟ ಮೀನುಗಾರರು ಮತ್ತು ದೋಣಿಗಳ ಭವಿಷ್ಯದ ಬಗ್ಗೆ ಮೀನುಗಾರಿಕಾ ಸಚಿವರ ಮೇಲೆ ಒತ್ತಡ ಹೇರಿದ್ದರು.

ಪಾಕಿಸ್ತಾನದ ಜೈಲಿನಲ್ಲಿ ಜೈಲಿನಲ್ಲಿದ್ದ ಗುಜರಾತ್‌ನ ಉನಾದ ಸೋಖ್ಡಾ ಗ್ರಾಮದ ಮೀನುಗಾರ ಬಾಬುಭಾಯಿ ಚುಡಾಸಮಾ ಅವರ ದುರಂತ ಸಾವು ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ಅನಾರೋಗ್ಯದಿಂದಾಗಿ ಅವರು ನಿಧನ ಹೊಂದಿದ್ದಾರೆ ಎಂದು ವರದಿಗಳು ವ್ಯಾಪಕವಾಗಿ ಹರಡಿದ್ದು, ಜೊತೆಗೆ ಘಟನೆಯನ್ನು ವಿವರಿಸುವ ಪತ್ರವೂ ವೈರಲ್ ಆಗಿದೆ.

ಪತ್ರದ ಪ್ರಕಾರ, ಜನವರಿ 23, 2025 ರಂದು ಬೆಳಿಗ್ಗೆ 4:30 ಕ್ಕೆ ಚುಡಾಸಮ ತೀವ್ರ ಅಸ್ವಸ್ಥರಾದರು. ಸಹ ಕೈದಿಗಳು ಅವರನ್ನು ಜೈಲಿನ ಆಸ್ಪತ್ರೆಗೆ ಸಾಗಿಸಿದರು. ಆದರೆ ಅವರ ಸ್ಥಿತಿ ಹದಗೆಟ್ಟಂತೆ, ಅವರನ್ನು ಆಂಬ್ಯುಲೆನ್ಸ್‌ನಲ್ಲಿ ನಗರದ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆದರೆ ಅವರು ದಾರಿಯಲ್ಲಿ ಸಾವನ್ನಪ್ಪಿದರು. ಅವರ ದೇಹವನ್ನು ಸಾಧ್ಯವಾದಷ್ಟು ಬೇಗ ಭಾರತಕ್ಕೆ ಕಳುಹಿಸಲಾಗುವುದು ಎಂದು ಪತ್ರವು ಹೇಳಿಕೊಂಡಿದೆ.

ಚುಡಾಸಮ ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರವೂ ನಾಲ್ಕು ವರ್ಷಗಳಿಂದ ಪಾಕಿಸ್ತಾನದ ಜೈಲಿನಲ್ಲಿ ನರಳುತ್ತಿದ್ದರು ಎಂದು ಅವರ ಕುಟುಂಬ ಸದಸ್ಯರ ಆರೋಪಿಸಿದ್ದಾರೆ.

ಅವರ ಸಾವಿನೊಂದಿಗೆ ಕಳೆದ ಎರಡು ವರ್ಷಗಳಲ್ಲಿ ಇಂತಹ ನಾಲ್ಕನೇ ದುರಂತ ಗಟನೆ ಇದಾಗಿದೆ ಎಂದು ಮಾಧ್ಯಮಗಳು ವರಿದ ಮಾಡಿದೆ. ಪಾಕಿಸ್ತಾನದ ಜೈಲಿನಲ್ಲಿ ಅನೇಕ ಮೀನುಗಾರರು ಈಗಾಗಲೇ ತಮ್ಮ ಶಿಕ್ಷೆಯನ್ನು ಅನುಭವಿಸಿದ್ದಾರೆ. ಆದರೆ ರಾಯಭಾರ ಕಚೇರಿ ಪರಿಶೀಲನೆಯಲ್ಲಿ ವಿಳಂಬ ಮಾಡುತ್ತಿರುವುದರಿಂದ ಅವರು ಜೈಲಿನಲ್ಲೆ ಕೊಳೆಯುತ್ತಿದ್ದಾರೆ ಎಂದು ಜೈಲಿನಲ್ಲಿರುವ ಮೀನುಗಾರರ ಕುಟುಂಬಗಳು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...