Homeಕರ್ನಾಟಕಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

- Advertisement -
- Advertisement -

ಕೇಂದ್ರ ಸರಕಾರ ದೇಶದ ಬಂದರುಗಳನ್ನು ಆಧುನೀಕರಿಸುವುದು, ಬಂದರುಗಳ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಮತ್ತು ಬಂದರುಗಳ ಸಂಪರ್ಕಿಸುವ ಕೈಗಾರಿಕಾ ಪ್ರದೇಶಗಳ ಗುಚ್ಛವನ್ನು ರಚಿಸಲು ಸಾಗರ ಮಾಲಾ ಎಂಬ ಯೋಜನೆ ಕೈಗೆತ್ತಿಕೊಂಡಿದೆ. ಈ ಯೋಜನೆಯಲ್ಲಿ 189 ಬಂದರುಗಳ ಆಧುನೀಕರಣ, 170 ಬಂದರುಗಳ ಸಂಪರ್ಕ ಹೆಚ್ಛಿಸುವುದು ಮತ್ತು ಹೊಸ ಬಂದರುಗಳ ಸ್ಥಾಪನೆಯಂಥ 415 ಪ್ರಾಜೆಕ್ಟ್‌ಗಳು ಸೇರಿವೆ. ಒಟ್ಟು 7.985 ಲಕ್ಷ ಕೋಟಿ ಮೊತ್ತದ ಸದ್ರಿ ಯೋಜನೆಯಿಂದ ಕರ್ನಾಟಕ ಕರಾವಳಿಯ ಬೆಸ್ತರು ನಲೆ ತಪ್ಪುವ ಭೀತಿಯಿಂದ ಕಂಗಾಲಾಗಿ ಹೋಗಿದ್ದಾರೆ!

ಮಂಗಳೂರಿನಿಂದ ಕಾರವಾರದವರೆಗಿನ ಕಡಲ ತಡಿಯ ಮೀನುಗಾರರು ಸಾಗರ ಮಾಲಾ ಯೋಜನೆಗಳು ತಮ್ಮ ತುತ್ತಿಗಾಧಾರವಾದ ದುಡಿಮೆಗೆ ಸಂಚಕಾರ ತರುತ್ತದೆಂದು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. 274 ಕೋಟಿ ರೂ.ವೆಚ್ಚದಲ್ಲಿ ಬೈತಖೋಲ್ ಬಂದರಿನ 250 ಮೀಟರ್ ಜಟ್ಟಿ ಮತ್ತು 880 ಮೀಟರ್ ಅಲೆ ತಡೆ ಗೋಡೆ ಕಾಮಗಾರಿಯನ್ನು 2019ರಲ್ಲಿ ಪ್ರಾರಂಭಿಸಲಾಗಿತ್ತು. ಅದನ್ನು ವಿರೋಧಿಸಿ ಮೀನುಗಾರರು ಬೃಹತ್ ರ್‍ಯಾಲಿ, ಪ್ರತಿಭಟನೆ ನಡೆಸಿದ್ದರು. ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮೀನುಗಾರರ ಸಂಘಟನೆ ಸಲ್ಲಿಸಿತ್ತು. 2020ರಲ್ಲಿ ಹೈಕೋರ್ಟ್ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಈಚೆಗೆ ಹೈಕೋರ್ಟ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೈತಖೋಲ್ ವಾಣಿಜ್ಯ ಬಂದರಿನ ಎರಡನೆ ಹಂತದ ಕಾಮಗಾರಿಗೆ ನೀಡಿರುವ ಅನುಮತಿ ಕಾನೂನುಬಾಹಿರವೆಂದು ಪರಿಗಣಿಸಿದೆ! ಕಾಯಿದೆಗಳನ್ನು ಕಡೆಗಣಿಸಿ ಪರವಾನಿಗೆ ಕೊಡಲಾಗಿದೆ; ಯೋಜನೆಯಿಂದ ಆಗಬಹುದಾದ ವಾಯು ಮತ್ತು ಜಲ ಮಾಲಿನ್ಯದ ವ್ಯಾಪ್ತಿ ಮತ್ತು ಯಾವ ರೀತಿ ಎದುರಾಗಬಹುದೆಂಬುದನ್ನು ಪರಿಸರ ಅಧಿಕಾರಿ ವಿಚಾರಣೆ ನಡೆಸಿಲ್ಲವೆಂದು ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಹೊನ್ನಾವರದ ಕಾಸರಕೋಡು ಟೊಂಕದಲ್ಲಿ ನಿರ್ಮಾಣವಾಗುವ ಖಾಸಗಿ ಬಂದರು ಕಾಮಗಾರಿಗೂ ಮೀನುಗಾರ ಸಂಘಟನೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ. ಆದರೂ ಪೊಲೀಸ್ ಬಲದಲ್ಲಿ ಕಾಮಗಾರಿಗೆ ಪ್ರಯತ್ನ ನಡೆದಾಗ ಮೀನುಗಾರರು ಸಾಮೂಹಿಕವಾಗಿ ಸಮುದ್ರಕ್ಕ ಹಾರಿ ಆತ್ಮಹತ್ಯೆಗೆ ಹೋದಾಗ ಕಾಮಗಾರಿ ನಿಲ್ಲಿಸಲಾಗಿದೆ. ಈಗ ಮಂಗಳೂರು ನಗರ ಕಸ್ಬಾ ಬೆಂಗರೆಯ ಫಲ್ಗುಣಿ ನದಿ ದಂಡೆ ಆಕ್ರಮಿಸಿ ಕೋಸ್ಟಲ್ ಬರ್ತ್ ಯೋಜನೆ ಕಾರ್ಯಗತಗೊಳಿಸುವ ತರಾತುರಿ ನಡೆಯುತ್ತಿದ್ದು, ಇದರಿಂದ ತಮ್ಮ ಕಸಬು ಮತ್ತು ಬದುಕಿಗೆ ತೊಂದರೆಯಾಗುತ್ತದೆಂದು ಸಾಂಪ್ರದಾಯಿಕ ಮೀನುಗಾರರು ಪ್ರತಿಭಟನೆಗಿಳಿದಿದ್ದಾರೆ. ಸಾಗರ ಮಾಲಾ, ಕೋಸ್ಟಲ್ ಬರ್ತ್ ಯೋಜನೆ ಬಗ್ಗೆ ಸ್ಥಳೀಯರಿಗೆ ಯಾವುದೇ ಮಾಹಿತಿ ಕೊಡದೆ ಬಲವಂತದಿಂದ ಹೇರಲಾಗುತ್ತಿದೆಯೆಂದು ಫಲ್ಗಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳುತ್ತಾರೆ.

ಮೀನುಗಾರರೆ ಹೆಚ್ಚಿರುವ ಜನದಟ್ಟಣೆಯ ಕಸ್ಬಾ ಬೆಂಗರೆ ಗ್ರಾಮಸ್ಥರು ತಮ್ಮ ಬದುಕನ್ನು ಧ್ವಂಸ ಮಾಡುವ ಸದ್ರಿ ಯೋಜನೆ ಬೇಡವೆಂದು ಒಕ್ಕೊರಲಿಂದ ವಿರೋಧಿಸುತ್ತಿದ್ದಾರೆ. ಗ್ರಾಮಸ್ಥರ ಭಾವನೆ ಕಡೆಗಣಿಸಿ ಪೊಲೀಸ್ ಬಲದಿಂದ ಜಿಲ್ಲಾಡಳಿತ ಬಿರುಸಿನಿಂದ ಕೋಸ್ಟಲ್ ಬರ್ತ್ ಕಾಮಗಾರಿ ನಡೆಸುತ್ತಿದೆ. ಇದೀಗ ಸಾಂಪ್ರದಾಯಿಕ ಮೀನುಗಾರರು ನಾಡದೋಣಿ ಕಟ್ಟಿ ಇಡುವ ಪ್ರದೇಶಕ್ಕೆ ಕಾಮಗಾರಿ ವಿಸ್ತರಣೆಗೊಂಡಿದೆ. ಇಲ್ಲಿ ನೂರಾರು ನಾಡದೋಣಿ ತಂಗುತ್ತವೆ. ಫಲ್ಗುಣಿ ನದಿ ತೀರದ ಬೆಂಗರೆಯಲ್ಲಿ ತಲತಲಾಂತದಿಂದ ಸಾಂಪ್ರದಾಯಿಕ ಮೀನುಗಾರರು ದೋಣಿ ಕಟ್ಟಿ ಮೀನುಗಾರಿಕೆ ನಡೆಸುತ್ತಿದ್ದಾರೆ. ಎರಡು ತಿಂಗಳಿಂದ ಮೀನುಗಾರರು ಅಧಿಕೃತ ಮಾತುಕತೆ-ಪರ್ಯಾಯ ಜಾಗ ತೋರಿಸದೆ ದೋಣಿಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲವೆಂದು ಹೇಳುತ್ತಲೇ ಇದ್ದಾರೆ. ಇದ್ಯಾವುದನ್ನು ಕೇಳದ ಜಿಲ್ಲಾಡಳಿತ ಈಗ ಹಠಾತ್ತಾಗಿ ಪೋಲೀಸ್ ಬಲದಿಂದ ದೋಣಿ ತೆರವುಗೊಳಿಸಲು ಮುಂದಾಗಿದೆ. ಅಧಿಕಾರಿಗಳು ಸರ್ವಾಧಿಕಾರದಿಂದ ವರ್ತಿಸುತ್ತಿದ್ದು, ಜಿಲ್ಲಾಡಳಿತ ಸಭೆ ನಡೆಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಸಾಂಪ್ರದಾಯಿಕ ಮೀನುಗಾರರ ಸಂಘ ಎಚ್ಚರಿಸಿದೆ.

ಸಾಗರ ಮಾಲಾದಿಂದ ಮನೆ ಕಳೆದುಕೊಳ್ಳವ ಮೀನುಗಾರರಿಗೆ ಪುನರ್ವಸತಿ, ದೋಣಿ ನಿಲ್ಲಿಸಲು ಸರಿಯಾದ ವ್ಯವಸ್ಥೆ ಕುರಿತು ಬಾಯಿ ಮಾತಿನ ಭರವಸೆ ಬದಲಿಗೆ ಅಧಿಕೃತ ಸಭೆ ಕರೆದು ಜಿಲ್ಲಾಡಳಿತ ಮೀನುಗಾರರಿಗೆ ತೊಂದರೆಯಾಗದಂಥ ತೀರ್ಮಾನ ಪ್ರಕಟಿಸಬೇಕೆಂದು ಸಾಂಪ್ರದಾಯಿಕ ಮಿನುಗಾರರ ಸಂಘ ಜಿಲ್ಲಾಡಳಿತಕ್ಕೆ ಹೇಳಿತ್ತು. ಮೂರು ವಾರದ ಹಿಂದೆ ಜಿಲ್ಲಾ ಉಸ್ತವಾರಿ ಮಂತ್ರಿಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಒಂದು ವಾರದಲ್ಲಿ ಅಧಿಕೃತ ಸಭೆ ಏರ್ಪಡಿಸುವುದಾಗಿ ಹೇಳಿದ್ದರು. ಆದರೆ ಈಗ ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಯಾವುದೆ ಸಭೆ, ಸಮಾಲೋಚನೆ ಇಲ್ಲದೆ ದೋಣಿ ತೆರವಿಗೆ ಒತ್ತಾಯಿಸುತ್ತಿದೆ; ಒಪ್ಪದಿದ್ದರೆ ಪೊಲೀಸ್ ಬಲ ಪ್ರಯೋಗಿಸುವ ಬೆದರಿಕೆ ಹಾಕುತ್ತಿದ್ದಾರೆಂದು ಮೀನುಗಾರ ಮುಖಂಡರು ಹೇಳುತ್ತಿದ್ದಾರೆ.

ಜಿಲ್ಲಾಡಳಿತದ ಈ ಸರ್ವಾಧಿಕಾರಿ ಧೋರಣೆ ಖಂಡಿಸುವುದಾಗಿ ಹೇಳಿರುವ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘ, ನ್ಯಾಯಯುತ ಪರಿಹಾರ ಘೋಷಿಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಹೆಳಿದೆ. ಬಲಾತ್ಕಾರಕ್ಕೆ ಮುಂದಾದರೆ ಮೀನುಗಾರರು ಒಗ್ಗಟ್ಟಾಗಿ ಶಾಂತಿಯುತ ಹೋರಾಟದಿಂದ ಎದುರಿಸುವುದಾಗಿ ಮೀನುಗಾರ ಮಖಂಡರು ಹೇಳುತ್ತಿದ್ದಾರೆ. ಇನ್ನಾದರು ಬಡ ಮೀನುಗಾರರಿಗೆ ನ್ಯಾಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...