Homeಕರ್ನಾಟಕಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

- Advertisement -
- Advertisement -

ಕೇಂದ್ರ ಸರಕಾರ ದೇಶದ ಬಂದರುಗಳನ್ನು ಆಧುನೀಕರಿಸುವುದು, ಬಂದರುಗಳ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಮತ್ತು ಬಂದರುಗಳ ಸಂಪರ್ಕಿಸುವ ಕೈಗಾರಿಕಾ ಪ್ರದೇಶಗಳ ಗುಚ್ಛವನ್ನು ರಚಿಸಲು ಸಾಗರ ಮಾಲಾ ಎಂಬ ಯೋಜನೆ ಕೈಗೆತ್ತಿಕೊಂಡಿದೆ. ಈ ಯೋಜನೆಯಲ್ಲಿ 189 ಬಂದರುಗಳ ಆಧುನೀಕರಣ, 170 ಬಂದರುಗಳ ಸಂಪರ್ಕ ಹೆಚ್ಛಿಸುವುದು ಮತ್ತು ಹೊಸ ಬಂದರುಗಳ ಸ್ಥಾಪನೆಯಂಥ 415 ಪ್ರಾಜೆಕ್ಟ್‌ಗಳು ಸೇರಿವೆ. ಒಟ್ಟು 7.985 ಲಕ್ಷ ಕೋಟಿ ಮೊತ್ತದ ಸದ್ರಿ ಯೋಜನೆಯಿಂದ ಕರ್ನಾಟಕ ಕರಾವಳಿಯ ಬೆಸ್ತರು ನಲೆ ತಪ್ಪುವ ಭೀತಿಯಿಂದ ಕಂಗಾಲಾಗಿ ಹೋಗಿದ್ದಾರೆ!

ಮಂಗಳೂರಿನಿಂದ ಕಾರವಾರದವರೆಗಿನ ಕಡಲ ತಡಿಯ ಮೀನುಗಾರರು ಸಾಗರ ಮಾಲಾ ಯೋಜನೆಗಳು ತಮ್ಮ ತುತ್ತಿಗಾಧಾರವಾದ ದುಡಿಮೆಗೆ ಸಂಚಕಾರ ತರುತ್ತದೆಂದು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. 274 ಕೋಟಿ ರೂ.ವೆಚ್ಚದಲ್ಲಿ ಬೈತಖೋಲ್ ಬಂದರಿನ 250 ಮೀಟರ್ ಜಟ್ಟಿ ಮತ್ತು 880 ಮೀಟರ್ ಅಲೆ ತಡೆ ಗೋಡೆ ಕಾಮಗಾರಿಯನ್ನು 2019ರಲ್ಲಿ ಪ್ರಾರಂಭಿಸಲಾಗಿತ್ತು. ಅದನ್ನು ವಿರೋಧಿಸಿ ಮೀನುಗಾರರು ಬೃಹತ್ ರ್‍ಯಾಲಿ, ಪ್ರತಿಭಟನೆ ನಡೆಸಿದ್ದರು. ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮೀನುಗಾರರ ಸಂಘಟನೆ ಸಲ್ಲಿಸಿತ್ತು. 2020ರಲ್ಲಿ ಹೈಕೋರ್ಟ್ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಈಚೆಗೆ ಹೈಕೋರ್ಟ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೈತಖೋಲ್ ವಾಣಿಜ್ಯ ಬಂದರಿನ ಎರಡನೆ ಹಂತದ ಕಾಮಗಾರಿಗೆ ನೀಡಿರುವ ಅನುಮತಿ ಕಾನೂನುಬಾಹಿರವೆಂದು ಪರಿಗಣಿಸಿದೆ! ಕಾಯಿದೆಗಳನ್ನು ಕಡೆಗಣಿಸಿ ಪರವಾನಿಗೆ ಕೊಡಲಾಗಿದೆ; ಯೋಜನೆಯಿಂದ ಆಗಬಹುದಾದ ವಾಯು ಮತ್ತು ಜಲ ಮಾಲಿನ್ಯದ ವ್ಯಾಪ್ತಿ ಮತ್ತು ಯಾವ ರೀತಿ ಎದುರಾಗಬಹುದೆಂಬುದನ್ನು ಪರಿಸರ ಅಧಿಕಾರಿ ವಿಚಾರಣೆ ನಡೆಸಿಲ್ಲವೆಂದು ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಹೊನ್ನಾವರದ ಕಾಸರಕೋಡು ಟೊಂಕದಲ್ಲಿ ನಿರ್ಮಾಣವಾಗುವ ಖಾಸಗಿ ಬಂದರು ಕಾಮಗಾರಿಗೂ ಮೀನುಗಾರ ಸಂಘಟನೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ. ಆದರೂ ಪೊಲೀಸ್ ಬಲದಲ್ಲಿ ಕಾಮಗಾರಿಗೆ ಪ್ರಯತ್ನ ನಡೆದಾಗ ಮೀನುಗಾರರು ಸಾಮೂಹಿಕವಾಗಿ ಸಮುದ್ರಕ್ಕ ಹಾರಿ ಆತ್ಮಹತ್ಯೆಗೆ ಹೋದಾಗ ಕಾಮಗಾರಿ ನಿಲ್ಲಿಸಲಾಗಿದೆ. ಈಗ ಮಂಗಳೂರು ನಗರ ಕಸ್ಬಾ ಬೆಂಗರೆಯ ಫಲ್ಗುಣಿ ನದಿ ದಂಡೆ ಆಕ್ರಮಿಸಿ ಕೋಸ್ಟಲ್ ಬರ್ತ್ ಯೋಜನೆ ಕಾರ್ಯಗತಗೊಳಿಸುವ ತರಾತುರಿ ನಡೆಯುತ್ತಿದ್ದು, ಇದರಿಂದ ತಮ್ಮ ಕಸಬು ಮತ್ತು ಬದುಕಿಗೆ ತೊಂದರೆಯಾಗುತ್ತದೆಂದು ಸಾಂಪ್ರದಾಯಿಕ ಮೀನುಗಾರರು ಪ್ರತಿಭಟನೆಗಿಳಿದಿದ್ದಾರೆ. ಸಾಗರ ಮಾಲಾ, ಕೋಸ್ಟಲ್ ಬರ್ತ್ ಯೋಜನೆ ಬಗ್ಗೆ ಸ್ಥಳೀಯರಿಗೆ ಯಾವುದೇ ಮಾಹಿತಿ ಕೊಡದೆ ಬಲವಂತದಿಂದ ಹೇರಲಾಗುತ್ತಿದೆಯೆಂದು ಫಲ್ಗಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳುತ್ತಾರೆ.

ಮೀನುಗಾರರೆ ಹೆಚ್ಚಿರುವ ಜನದಟ್ಟಣೆಯ ಕಸ್ಬಾ ಬೆಂಗರೆ ಗ್ರಾಮಸ್ಥರು ತಮ್ಮ ಬದುಕನ್ನು ಧ್ವಂಸ ಮಾಡುವ ಸದ್ರಿ ಯೋಜನೆ ಬೇಡವೆಂದು ಒಕ್ಕೊರಲಿಂದ ವಿರೋಧಿಸುತ್ತಿದ್ದಾರೆ. ಗ್ರಾಮಸ್ಥರ ಭಾವನೆ ಕಡೆಗಣಿಸಿ ಪೊಲೀಸ್ ಬಲದಿಂದ ಜಿಲ್ಲಾಡಳಿತ ಬಿರುಸಿನಿಂದ ಕೋಸ್ಟಲ್ ಬರ್ತ್ ಕಾಮಗಾರಿ ನಡೆಸುತ್ತಿದೆ. ಇದೀಗ ಸಾಂಪ್ರದಾಯಿಕ ಮೀನುಗಾರರು ನಾಡದೋಣಿ ಕಟ್ಟಿ ಇಡುವ ಪ್ರದೇಶಕ್ಕೆ ಕಾಮಗಾರಿ ವಿಸ್ತರಣೆಗೊಂಡಿದೆ. ಇಲ್ಲಿ ನೂರಾರು ನಾಡದೋಣಿ ತಂಗುತ್ತವೆ. ಫಲ್ಗುಣಿ ನದಿ ತೀರದ ಬೆಂಗರೆಯಲ್ಲಿ ತಲತಲಾಂತದಿಂದ ಸಾಂಪ್ರದಾಯಿಕ ಮೀನುಗಾರರು ದೋಣಿ ಕಟ್ಟಿ ಮೀನುಗಾರಿಕೆ ನಡೆಸುತ್ತಿದ್ದಾರೆ. ಎರಡು ತಿಂಗಳಿಂದ ಮೀನುಗಾರರು ಅಧಿಕೃತ ಮಾತುಕತೆ-ಪರ್ಯಾಯ ಜಾಗ ತೋರಿಸದೆ ದೋಣಿಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲವೆಂದು ಹೇಳುತ್ತಲೇ ಇದ್ದಾರೆ. ಇದ್ಯಾವುದನ್ನು ಕೇಳದ ಜಿಲ್ಲಾಡಳಿತ ಈಗ ಹಠಾತ್ತಾಗಿ ಪೋಲೀಸ್ ಬಲದಿಂದ ದೋಣಿ ತೆರವುಗೊಳಿಸಲು ಮುಂದಾಗಿದೆ. ಅಧಿಕಾರಿಗಳು ಸರ್ವಾಧಿಕಾರದಿಂದ ವರ್ತಿಸುತ್ತಿದ್ದು, ಜಿಲ್ಲಾಡಳಿತ ಸಭೆ ನಡೆಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಸಾಂಪ್ರದಾಯಿಕ ಮೀನುಗಾರರ ಸಂಘ ಎಚ್ಚರಿಸಿದೆ.

ಸಾಗರ ಮಾಲಾದಿಂದ ಮನೆ ಕಳೆದುಕೊಳ್ಳವ ಮೀನುಗಾರರಿಗೆ ಪುನರ್ವಸತಿ, ದೋಣಿ ನಿಲ್ಲಿಸಲು ಸರಿಯಾದ ವ್ಯವಸ್ಥೆ ಕುರಿತು ಬಾಯಿ ಮಾತಿನ ಭರವಸೆ ಬದಲಿಗೆ ಅಧಿಕೃತ ಸಭೆ ಕರೆದು ಜಿಲ್ಲಾಡಳಿತ ಮೀನುಗಾರರಿಗೆ ತೊಂದರೆಯಾಗದಂಥ ತೀರ್ಮಾನ ಪ್ರಕಟಿಸಬೇಕೆಂದು ಸಾಂಪ್ರದಾಯಿಕ ಮಿನುಗಾರರ ಸಂಘ ಜಿಲ್ಲಾಡಳಿತಕ್ಕೆ ಹೇಳಿತ್ತು. ಮೂರು ವಾರದ ಹಿಂದೆ ಜಿಲ್ಲಾ ಉಸ್ತವಾರಿ ಮಂತ್ರಿಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಒಂದು ವಾರದಲ್ಲಿ ಅಧಿಕೃತ ಸಭೆ ಏರ್ಪಡಿಸುವುದಾಗಿ ಹೇಳಿದ್ದರು. ಆದರೆ ಈಗ ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಯಾವುದೆ ಸಭೆ, ಸಮಾಲೋಚನೆ ಇಲ್ಲದೆ ದೋಣಿ ತೆರವಿಗೆ ಒತ್ತಾಯಿಸುತ್ತಿದೆ; ಒಪ್ಪದಿದ್ದರೆ ಪೊಲೀಸ್ ಬಲ ಪ್ರಯೋಗಿಸುವ ಬೆದರಿಕೆ ಹಾಕುತ್ತಿದ್ದಾರೆಂದು ಮೀನುಗಾರ ಮುಖಂಡರು ಹೇಳುತ್ತಿದ್ದಾರೆ.

ಜಿಲ್ಲಾಡಳಿತದ ಈ ಸರ್ವಾಧಿಕಾರಿ ಧೋರಣೆ ಖಂಡಿಸುವುದಾಗಿ ಹೇಳಿರುವ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘ, ನ್ಯಾಯಯುತ ಪರಿಹಾರ ಘೋಷಿಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಹೆಳಿದೆ. ಬಲಾತ್ಕಾರಕ್ಕೆ ಮುಂದಾದರೆ ಮೀನುಗಾರರು ಒಗ್ಗಟ್ಟಾಗಿ ಶಾಂತಿಯುತ ಹೋರಾಟದಿಂದ ಎದುರಿಸುವುದಾಗಿ ಮೀನುಗಾರ ಮಖಂಡರು ಹೇಳುತ್ತಿದ್ದಾರೆ. ಇನ್ನಾದರು ಬಡ ಮೀನುಗಾರರಿಗೆ ನ್ಯಾಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...