Homeಕರ್ನಾಟಕಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

- Advertisement -
- Advertisement -

ಕೇಂದ್ರ ಸರಕಾರ ದೇಶದ ಬಂದರುಗಳನ್ನು ಆಧುನೀಕರಿಸುವುದು, ಬಂದರುಗಳ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಮತ್ತು ಬಂದರುಗಳ ಸಂಪರ್ಕಿಸುವ ಕೈಗಾರಿಕಾ ಪ್ರದೇಶಗಳ ಗುಚ್ಛವನ್ನು ರಚಿಸಲು ಸಾಗರ ಮಾಲಾ ಎಂಬ ಯೋಜನೆ ಕೈಗೆತ್ತಿಕೊಂಡಿದೆ. ಈ ಯೋಜನೆಯಲ್ಲಿ 189 ಬಂದರುಗಳ ಆಧುನೀಕರಣ, 170 ಬಂದರುಗಳ ಸಂಪರ್ಕ ಹೆಚ್ಛಿಸುವುದು ಮತ್ತು ಹೊಸ ಬಂದರುಗಳ ಸ್ಥಾಪನೆಯಂಥ 415 ಪ್ರಾಜೆಕ್ಟ್‌ಗಳು ಸೇರಿವೆ. ಒಟ್ಟು 7.985 ಲಕ್ಷ ಕೋಟಿ ಮೊತ್ತದ ಸದ್ರಿ ಯೋಜನೆಯಿಂದ ಕರ್ನಾಟಕ ಕರಾವಳಿಯ ಬೆಸ್ತರು ನಲೆ ತಪ್ಪುವ ಭೀತಿಯಿಂದ ಕಂಗಾಲಾಗಿ ಹೋಗಿದ್ದಾರೆ!

ಮಂಗಳೂರಿನಿಂದ ಕಾರವಾರದವರೆಗಿನ ಕಡಲ ತಡಿಯ ಮೀನುಗಾರರು ಸಾಗರ ಮಾಲಾ ಯೋಜನೆಗಳು ತಮ್ಮ ತುತ್ತಿಗಾಧಾರವಾದ ದುಡಿಮೆಗೆ ಸಂಚಕಾರ ತರುತ್ತದೆಂದು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. 274 ಕೋಟಿ ರೂ.ವೆಚ್ಚದಲ್ಲಿ ಬೈತಖೋಲ್ ಬಂದರಿನ 250 ಮೀಟರ್ ಜಟ್ಟಿ ಮತ್ತು 880 ಮೀಟರ್ ಅಲೆ ತಡೆ ಗೋಡೆ ಕಾಮಗಾರಿಯನ್ನು 2019ರಲ್ಲಿ ಪ್ರಾರಂಭಿಸಲಾಗಿತ್ತು. ಅದನ್ನು ವಿರೋಧಿಸಿ ಮೀನುಗಾರರು ಬೃಹತ್ ರ್‍ಯಾಲಿ, ಪ್ರತಿಭಟನೆ ನಡೆಸಿದ್ದರು. ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮೀನುಗಾರರ ಸಂಘಟನೆ ಸಲ್ಲಿಸಿತ್ತು. 2020ರಲ್ಲಿ ಹೈಕೋರ್ಟ್ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಈಚೆಗೆ ಹೈಕೋರ್ಟ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೈತಖೋಲ್ ವಾಣಿಜ್ಯ ಬಂದರಿನ ಎರಡನೆ ಹಂತದ ಕಾಮಗಾರಿಗೆ ನೀಡಿರುವ ಅನುಮತಿ ಕಾನೂನುಬಾಹಿರವೆಂದು ಪರಿಗಣಿಸಿದೆ! ಕಾಯಿದೆಗಳನ್ನು ಕಡೆಗಣಿಸಿ ಪರವಾನಿಗೆ ಕೊಡಲಾಗಿದೆ; ಯೋಜನೆಯಿಂದ ಆಗಬಹುದಾದ ವಾಯು ಮತ್ತು ಜಲ ಮಾಲಿನ್ಯದ ವ್ಯಾಪ್ತಿ ಮತ್ತು ಯಾವ ರೀತಿ ಎದುರಾಗಬಹುದೆಂಬುದನ್ನು ಪರಿಸರ ಅಧಿಕಾರಿ ವಿಚಾರಣೆ ನಡೆಸಿಲ್ಲವೆಂದು ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಹೊನ್ನಾವರದ ಕಾಸರಕೋಡು ಟೊಂಕದಲ್ಲಿ ನಿರ್ಮಾಣವಾಗುವ ಖಾಸಗಿ ಬಂದರು ಕಾಮಗಾರಿಗೂ ಮೀನುಗಾರ ಸಂಘಟನೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ. ಆದರೂ ಪೊಲೀಸ್ ಬಲದಲ್ಲಿ ಕಾಮಗಾರಿಗೆ ಪ್ರಯತ್ನ ನಡೆದಾಗ ಮೀನುಗಾರರು ಸಾಮೂಹಿಕವಾಗಿ ಸಮುದ್ರಕ್ಕ ಹಾರಿ ಆತ್ಮಹತ್ಯೆಗೆ ಹೋದಾಗ ಕಾಮಗಾರಿ ನಿಲ್ಲಿಸಲಾಗಿದೆ. ಈಗ ಮಂಗಳೂರು ನಗರ ಕಸ್ಬಾ ಬೆಂಗರೆಯ ಫಲ್ಗುಣಿ ನದಿ ದಂಡೆ ಆಕ್ರಮಿಸಿ ಕೋಸ್ಟಲ್ ಬರ್ತ್ ಯೋಜನೆ ಕಾರ್ಯಗತಗೊಳಿಸುವ ತರಾತುರಿ ನಡೆಯುತ್ತಿದ್ದು, ಇದರಿಂದ ತಮ್ಮ ಕಸಬು ಮತ್ತು ಬದುಕಿಗೆ ತೊಂದರೆಯಾಗುತ್ತದೆಂದು ಸಾಂಪ್ರದಾಯಿಕ ಮೀನುಗಾರರು ಪ್ರತಿಭಟನೆಗಿಳಿದಿದ್ದಾರೆ. ಸಾಗರ ಮಾಲಾ, ಕೋಸ್ಟಲ್ ಬರ್ತ್ ಯೋಜನೆ ಬಗ್ಗೆ ಸ್ಥಳೀಯರಿಗೆ ಯಾವುದೇ ಮಾಹಿತಿ ಕೊಡದೆ ಬಲವಂತದಿಂದ ಹೇರಲಾಗುತ್ತಿದೆಯೆಂದು ಫಲ್ಗಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳುತ್ತಾರೆ.

ಮೀನುಗಾರರೆ ಹೆಚ್ಚಿರುವ ಜನದಟ್ಟಣೆಯ ಕಸ್ಬಾ ಬೆಂಗರೆ ಗ್ರಾಮಸ್ಥರು ತಮ್ಮ ಬದುಕನ್ನು ಧ್ವಂಸ ಮಾಡುವ ಸದ್ರಿ ಯೋಜನೆ ಬೇಡವೆಂದು ಒಕ್ಕೊರಲಿಂದ ವಿರೋಧಿಸುತ್ತಿದ್ದಾರೆ. ಗ್ರಾಮಸ್ಥರ ಭಾವನೆ ಕಡೆಗಣಿಸಿ ಪೊಲೀಸ್ ಬಲದಿಂದ ಜಿಲ್ಲಾಡಳಿತ ಬಿರುಸಿನಿಂದ ಕೋಸ್ಟಲ್ ಬರ್ತ್ ಕಾಮಗಾರಿ ನಡೆಸುತ್ತಿದೆ. ಇದೀಗ ಸಾಂಪ್ರದಾಯಿಕ ಮೀನುಗಾರರು ನಾಡದೋಣಿ ಕಟ್ಟಿ ಇಡುವ ಪ್ರದೇಶಕ್ಕೆ ಕಾಮಗಾರಿ ವಿಸ್ತರಣೆಗೊಂಡಿದೆ. ಇಲ್ಲಿ ನೂರಾರು ನಾಡದೋಣಿ ತಂಗುತ್ತವೆ. ಫಲ್ಗುಣಿ ನದಿ ತೀರದ ಬೆಂಗರೆಯಲ್ಲಿ ತಲತಲಾಂತದಿಂದ ಸಾಂಪ್ರದಾಯಿಕ ಮೀನುಗಾರರು ದೋಣಿ ಕಟ್ಟಿ ಮೀನುಗಾರಿಕೆ ನಡೆಸುತ್ತಿದ್ದಾರೆ. ಎರಡು ತಿಂಗಳಿಂದ ಮೀನುಗಾರರು ಅಧಿಕೃತ ಮಾತುಕತೆ-ಪರ್ಯಾಯ ಜಾಗ ತೋರಿಸದೆ ದೋಣಿಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲವೆಂದು ಹೇಳುತ್ತಲೇ ಇದ್ದಾರೆ. ಇದ್ಯಾವುದನ್ನು ಕೇಳದ ಜಿಲ್ಲಾಡಳಿತ ಈಗ ಹಠಾತ್ತಾಗಿ ಪೋಲೀಸ್ ಬಲದಿಂದ ದೋಣಿ ತೆರವುಗೊಳಿಸಲು ಮುಂದಾಗಿದೆ. ಅಧಿಕಾರಿಗಳು ಸರ್ವಾಧಿಕಾರದಿಂದ ವರ್ತಿಸುತ್ತಿದ್ದು, ಜಿಲ್ಲಾಡಳಿತ ಸಭೆ ನಡೆಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಸಾಂಪ್ರದಾಯಿಕ ಮೀನುಗಾರರ ಸಂಘ ಎಚ್ಚರಿಸಿದೆ.

ಸಾಗರ ಮಾಲಾದಿಂದ ಮನೆ ಕಳೆದುಕೊಳ್ಳವ ಮೀನುಗಾರರಿಗೆ ಪುನರ್ವಸತಿ, ದೋಣಿ ನಿಲ್ಲಿಸಲು ಸರಿಯಾದ ವ್ಯವಸ್ಥೆ ಕುರಿತು ಬಾಯಿ ಮಾತಿನ ಭರವಸೆ ಬದಲಿಗೆ ಅಧಿಕೃತ ಸಭೆ ಕರೆದು ಜಿಲ್ಲಾಡಳಿತ ಮೀನುಗಾರರಿಗೆ ತೊಂದರೆಯಾಗದಂಥ ತೀರ್ಮಾನ ಪ್ರಕಟಿಸಬೇಕೆಂದು ಸಾಂಪ್ರದಾಯಿಕ ಮಿನುಗಾರರ ಸಂಘ ಜಿಲ್ಲಾಡಳಿತಕ್ಕೆ ಹೇಳಿತ್ತು. ಮೂರು ವಾರದ ಹಿಂದೆ ಜಿಲ್ಲಾ ಉಸ್ತವಾರಿ ಮಂತ್ರಿಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಒಂದು ವಾರದಲ್ಲಿ ಅಧಿಕೃತ ಸಭೆ ಏರ್ಪಡಿಸುವುದಾಗಿ ಹೇಳಿದ್ದರು. ಆದರೆ ಈಗ ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಯಾವುದೆ ಸಭೆ, ಸಮಾಲೋಚನೆ ಇಲ್ಲದೆ ದೋಣಿ ತೆರವಿಗೆ ಒತ್ತಾಯಿಸುತ್ತಿದೆ; ಒಪ್ಪದಿದ್ದರೆ ಪೊಲೀಸ್ ಬಲ ಪ್ರಯೋಗಿಸುವ ಬೆದರಿಕೆ ಹಾಕುತ್ತಿದ್ದಾರೆಂದು ಮೀನುಗಾರ ಮುಖಂಡರು ಹೇಳುತ್ತಿದ್ದಾರೆ.

ಜಿಲ್ಲಾಡಳಿತದ ಈ ಸರ್ವಾಧಿಕಾರಿ ಧೋರಣೆ ಖಂಡಿಸುವುದಾಗಿ ಹೇಳಿರುವ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘ, ನ್ಯಾಯಯುತ ಪರಿಹಾರ ಘೋಷಿಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಹೆಳಿದೆ. ಬಲಾತ್ಕಾರಕ್ಕೆ ಮುಂದಾದರೆ ಮೀನುಗಾರರು ಒಗ್ಗಟ್ಟಾಗಿ ಶಾಂತಿಯುತ ಹೋರಾಟದಿಂದ ಎದುರಿಸುವುದಾಗಿ ಮೀನುಗಾರ ಮಖಂಡರು ಹೇಳುತ್ತಿದ್ದಾರೆ. ಇನ್ನಾದರು ಬಡ ಮೀನುಗಾರರಿಗೆ ನ್ಯಾಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...