Homeಕರ್ನಾಟಕಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

- Advertisement -
- Advertisement -

ಕೇಂದ್ರ ಸರಕಾರ ದೇಶದ ಬಂದರುಗಳನ್ನು ಆಧುನೀಕರಿಸುವುದು, ಬಂದರುಗಳ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಮತ್ತು ಬಂದರುಗಳ ಸಂಪರ್ಕಿಸುವ ಕೈಗಾರಿಕಾ ಪ್ರದೇಶಗಳ ಗುಚ್ಛವನ್ನು ರಚಿಸಲು ಸಾಗರ ಮಾಲಾ ಎಂಬ ಯೋಜನೆ ಕೈಗೆತ್ತಿಕೊಂಡಿದೆ. ಈ ಯೋಜನೆಯಲ್ಲಿ 189 ಬಂದರುಗಳ ಆಧುನೀಕರಣ, 170 ಬಂದರುಗಳ ಸಂಪರ್ಕ ಹೆಚ್ಛಿಸುವುದು ಮತ್ತು ಹೊಸ ಬಂದರುಗಳ ಸ್ಥಾಪನೆಯಂಥ 415 ಪ್ರಾಜೆಕ್ಟ್‌ಗಳು ಸೇರಿವೆ. ಒಟ್ಟು 7.985 ಲಕ್ಷ ಕೋಟಿ ಮೊತ್ತದ ಸದ್ರಿ ಯೋಜನೆಯಿಂದ ಕರ್ನಾಟಕ ಕರಾವಳಿಯ ಬೆಸ್ತರು ನಲೆ ತಪ್ಪುವ ಭೀತಿಯಿಂದ ಕಂಗಾಲಾಗಿ ಹೋಗಿದ್ದಾರೆ!

ಮಂಗಳೂರಿನಿಂದ ಕಾರವಾರದವರೆಗಿನ ಕಡಲ ತಡಿಯ ಮೀನುಗಾರರು ಸಾಗರ ಮಾಲಾ ಯೋಜನೆಗಳು ತಮ್ಮ ತುತ್ತಿಗಾಧಾರವಾದ ದುಡಿಮೆಗೆ ಸಂಚಕಾರ ತರುತ್ತದೆಂದು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. 274 ಕೋಟಿ ರೂ.ವೆಚ್ಚದಲ್ಲಿ ಬೈತಖೋಲ್ ಬಂದರಿನ 250 ಮೀಟರ್ ಜಟ್ಟಿ ಮತ್ತು 880 ಮೀಟರ್ ಅಲೆ ತಡೆ ಗೋಡೆ ಕಾಮಗಾರಿಯನ್ನು 2019ರಲ್ಲಿ ಪ್ರಾರಂಭಿಸಲಾಗಿತ್ತು. ಅದನ್ನು ವಿರೋಧಿಸಿ ಮೀನುಗಾರರು ಬೃಹತ್ ರ್‍ಯಾಲಿ, ಪ್ರತಿಭಟನೆ ನಡೆಸಿದ್ದರು. ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮೀನುಗಾರರ ಸಂಘಟನೆ ಸಲ್ಲಿಸಿತ್ತು. 2020ರಲ್ಲಿ ಹೈಕೋರ್ಟ್ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಈಚೆಗೆ ಹೈಕೋರ್ಟ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೈತಖೋಲ್ ವಾಣಿಜ್ಯ ಬಂದರಿನ ಎರಡನೆ ಹಂತದ ಕಾಮಗಾರಿಗೆ ನೀಡಿರುವ ಅನುಮತಿ ಕಾನೂನುಬಾಹಿರವೆಂದು ಪರಿಗಣಿಸಿದೆ! ಕಾಯಿದೆಗಳನ್ನು ಕಡೆಗಣಿಸಿ ಪರವಾನಿಗೆ ಕೊಡಲಾಗಿದೆ; ಯೋಜನೆಯಿಂದ ಆಗಬಹುದಾದ ವಾಯು ಮತ್ತು ಜಲ ಮಾಲಿನ್ಯದ ವ್ಯಾಪ್ತಿ ಮತ್ತು ಯಾವ ರೀತಿ ಎದುರಾಗಬಹುದೆಂಬುದನ್ನು ಪರಿಸರ ಅಧಿಕಾರಿ ವಿಚಾರಣೆ ನಡೆಸಿಲ್ಲವೆಂದು ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಹೊನ್ನಾವರದ ಕಾಸರಕೋಡು ಟೊಂಕದಲ್ಲಿ ನಿರ್ಮಾಣವಾಗುವ ಖಾಸಗಿ ಬಂದರು ಕಾಮಗಾರಿಗೂ ಮೀನುಗಾರ ಸಂಘಟನೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ. ಆದರೂ ಪೊಲೀಸ್ ಬಲದಲ್ಲಿ ಕಾಮಗಾರಿಗೆ ಪ್ರಯತ್ನ ನಡೆದಾಗ ಮೀನುಗಾರರು ಸಾಮೂಹಿಕವಾಗಿ ಸಮುದ್ರಕ್ಕ ಹಾರಿ ಆತ್ಮಹತ್ಯೆಗೆ ಹೋದಾಗ ಕಾಮಗಾರಿ ನಿಲ್ಲಿಸಲಾಗಿದೆ. ಈಗ ಮಂಗಳೂರು ನಗರ ಕಸ್ಬಾ ಬೆಂಗರೆಯ ಫಲ್ಗುಣಿ ನದಿ ದಂಡೆ ಆಕ್ರಮಿಸಿ ಕೋಸ್ಟಲ್ ಬರ್ತ್ ಯೋಜನೆ ಕಾರ್ಯಗತಗೊಳಿಸುವ ತರಾತುರಿ ನಡೆಯುತ್ತಿದ್ದು, ಇದರಿಂದ ತಮ್ಮ ಕಸಬು ಮತ್ತು ಬದುಕಿಗೆ ತೊಂದರೆಯಾಗುತ್ತದೆಂದು ಸಾಂಪ್ರದಾಯಿಕ ಮೀನುಗಾರರು ಪ್ರತಿಭಟನೆಗಿಳಿದಿದ್ದಾರೆ. ಸಾಗರ ಮಾಲಾ, ಕೋಸ್ಟಲ್ ಬರ್ತ್ ಯೋಜನೆ ಬಗ್ಗೆ ಸ್ಥಳೀಯರಿಗೆ ಯಾವುದೇ ಮಾಹಿತಿ ಕೊಡದೆ ಬಲವಂತದಿಂದ ಹೇರಲಾಗುತ್ತಿದೆಯೆಂದು ಫಲ್ಗಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳುತ್ತಾರೆ.

ಮೀನುಗಾರರೆ ಹೆಚ್ಚಿರುವ ಜನದಟ್ಟಣೆಯ ಕಸ್ಬಾ ಬೆಂಗರೆ ಗ್ರಾಮಸ್ಥರು ತಮ್ಮ ಬದುಕನ್ನು ಧ್ವಂಸ ಮಾಡುವ ಸದ್ರಿ ಯೋಜನೆ ಬೇಡವೆಂದು ಒಕ್ಕೊರಲಿಂದ ವಿರೋಧಿಸುತ್ತಿದ್ದಾರೆ. ಗ್ರಾಮಸ್ಥರ ಭಾವನೆ ಕಡೆಗಣಿಸಿ ಪೊಲೀಸ್ ಬಲದಿಂದ ಜಿಲ್ಲಾಡಳಿತ ಬಿರುಸಿನಿಂದ ಕೋಸ್ಟಲ್ ಬರ್ತ್ ಕಾಮಗಾರಿ ನಡೆಸುತ್ತಿದೆ. ಇದೀಗ ಸಾಂಪ್ರದಾಯಿಕ ಮೀನುಗಾರರು ನಾಡದೋಣಿ ಕಟ್ಟಿ ಇಡುವ ಪ್ರದೇಶಕ್ಕೆ ಕಾಮಗಾರಿ ವಿಸ್ತರಣೆಗೊಂಡಿದೆ. ಇಲ್ಲಿ ನೂರಾರು ನಾಡದೋಣಿ ತಂಗುತ್ತವೆ. ಫಲ್ಗುಣಿ ನದಿ ತೀರದ ಬೆಂಗರೆಯಲ್ಲಿ ತಲತಲಾಂತದಿಂದ ಸಾಂಪ್ರದಾಯಿಕ ಮೀನುಗಾರರು ದೋಣಿ ಕಟ್ಟಿ ಮೀನುಗಾರಿಕೆ ನಡೆಸುತ್ತಿದ್ದಾರೆ. ಎರಡು ತಿಂಗಳಿಂದ ಮೀನುಗಾರರು ಅಧಿಕೃತ ಮಾತುಕತೆ-ಪರ್ಯಾಯ ಜಾಗ ತೋರಿಸದೆ ದೋಣಿಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲವೆಂದು ಹೇಳುತ್ತಲೇ ಇದ್ದಾರೆ. ಇದ್ಯಾವುದನ್ನು ಕೇಳದ ಜಿಲ್ಲಾಡಳಿತ ಈಗ ಹಠಾತ್ತಾಗಿ ಪೋಲೀಸ್ ಬಲದಿಂದ ದೋಣಿ ತೆರವುಗೊಳಿಸಲು ಮುಂದಾಗಿದೆ. ಅಧಿಕಾರಿಗಳು ಸರ್ವಾಧಿಕಾರದಿಂದ ವರ್ತಿಸುತ್ತಿದ್ದು, ಜಿಲ್ಲಾಡಳಿತ ಸಭೆ ನಡೆಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಸಾಂಪ್ರದಾಯಿಕ ಮೀನುಗಾರರ ಸಂಘ ಎಚ್ಚರಿಸಿದೆ.

ಸಾಗರ ಮಾಲಾದಿಂದ ಮನೆ ಕಳೆದುಕೊಳ್ಳವ ಮೀನುಗಾರರಿಗೆ ಪುನರ್ವಸತಿ, ದೋಣಿ ನಿಲ್ಲಿಸಲು ಸರಿಯಾದ ವ್ಯವಸ್ಥೆ ಕುರಿತು ಬಾಯಿ ಮಾತಿನ ಭರವಸೆ ಬದಲಿಗೆ ಅಧಿಕೃತ ಸಭೆ ಕರೆದು ಜಿಲ್ಲಾಡಳಿತ ಮೀನುಗಾರರಿಗೆ ತೊಂದರೆಯಾಗದಂಥ ತೀರ್ಮಾನ ಪ್ರಕಟಿಸಬೇಕೆಂದು ಸಾಂಪ್ರದಾಯಿಕ ಮಿನುಗಾರರ ಸಂಘ ಜಿಲ್ಲಾಡಳಿತಕ್ಕೆ ಹೇಳಿತ್ತು. ಮೂರು ವಾರದ ಹಿಂದೆ ಜಿಲ್ಲಾ ಉಸ್ತವಾರಿ ಮಂತ್ರಿಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಒಂದು ವಾರದಲ್ಲಿ ಅಧಿಕೃತ ಸಭೆ ಏರ್ಪಡಿಸುವುದಾಗಿ ಹೇಳಿದ್ದರು. ಆದರೆ ಈಗ ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಯಾವುದೆ ಸಭೆ, ಸಮಾಲೋಚನೆ ಇಲ್ಲದೆ ದೋಣಿ ತೆರವಿಗೆ ಒತ್ತಾಯಿಸುತ್ತಿದೆ; ಒಪ್ಪದಿದ್ದರೆ ಪೊಲೀಸ್ ಬಲ ಪ್ರಯೋಗಿಸುವ ಬೆದರಿಕೆ ಹಾಕುತ್ತಿದ್ದಾರೆಂದು ಮೀನುಗಾರ ಮುಖಂಡರು ಹೇಳುತ್ತಿದ್ದಾರೆ.

ಜಿಲ್ಲಾಡಳಿತದ ಈ ಸರ್ವಾಧಿಕಾರಿ ಧೋರಣೆ ಖಂಡಿಸುವುದಾಗಿ ಹೇಳಿರುವ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘ, ನ್ಯಾಯಯುತ ಪರಿಹಾರ ಘೋಷಿಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಹೆಳಿದೆ. ಬಲಾತ್ಕಾರಕ್ಕೆ ಮುಂದಾದರೆ ಮೀನುಗಾರರು ಒಗ್ಗಟ್ಟಾಗಿ ಶಾಂತಿಯುತ ಹೋರಾಟದಿಂದ ಎದುರಿಸುವುದಾಗಿ ಮೀನುಗಾರ ಮಖಂಡರು ಹೇಳುತ್ತಿದ್ದಾರೆ. ಇನ್ನಾದರು ಬಡ ಮೀನುಗಾರರಿಗೆ ನ್ಯಾಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...