Homeಕರ್ನಾಟಕಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

- Advertisement -
- Advertisement -

ಕೇಂದ್ರ ಸರಕಾರ ದೇಶದ ಬಂದರುಗಳನ್ನು ಆಧುನೀಕರಿಸುವುದು, ಬಂದರುಗಳ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಮತ್ತು ಬಂದರುಗಳ ಸಂಪರ್ಕಿಸುವ ಕೈಗಾರಿಕಾ ಪ್ರದೇಶಗಳ ಗುಚ್ಛವನ್ನು ರಚಿಸಲು ಸಾಗರ ಮಾಲಾ ಎಂಬ ಯೋಜನೆ ಕೈಗೆತ್ತಿಕೊಂಡಿದೆ. ಈ ಯೋಜನೆಯಲ್ಲಿ 189 ಬಂದರುಗಳ ಆಧುನೀಕರಣ, 170 ಬಂದರುಗಳ ಸಂಪರ್ಕ ಹೆಚ್ಛಿಸುವುದು ಮತ್ತು ಹೊಸ ಬಂದರುಗಳ ಸ್ಥಾಪನೆಯಂಥ 415 ಪ್ರಾಜೆಕ್ಟ್‌ಗಳು ಸೇರಿವೆ. ಒಟ್ಟು 7.985 ಲಕ್ಷ ಕೋಟಿ ಮೊತ್ತದ ಸದ್ರಿ ಯೋಜನೆಯಿಂದ ಕರ್ನಾಟಕ ಕರಾವಳಿಯ ಬೆಸ್ತರು ನಲೆ ತಪ್ಪುವ ಭೀತಿಯಿಂದ ಕಂಗಾಲಾಗಿ ಹೋಗಿದ್ದಾರೆ!

ಮಂಗಳೂರಿನಿಂದ ಕಾರವಾರದವರೆಗಿನ ಕಡಲ ತಡಿಯ ಮೀನುಗಾರರು ಸಾಗರ ಮಾಲಾ ಯೋಜನೆಗಳು ತಮ್ಮ ತುತ್ತಿಗಾಧಾರವಾದ ದುಡಿಮೆಗೆ ಸಂಚಕಾರ ತರುತ್ತದೆಂದು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. 274 ಕೋಟಿ ರೂ.ವೆಚ್ಚದಲ್ಲಿ ಬೈತಖೋಲ್ ಬಂದರಿನ 250 ಮೀಟರ್ ಜಟ್ಟಿ ಮತ್ತು 880 ಮೀಟರ್ ಅಲೆ ತಡೆ ಗೋಡೆ ಕಾಮಗಾರಿಯನ್ನು 2019ರಲ್ಲಿ ಪ್ರಾರಂಭಿಸಲಾಗಿತ್ತು. ಅದನ್ನು ವಿರೋಧಿಸಿ ಮೀನುಗಾರರು ಬೃಹತ್ ರ್‍ಯಾಲಿ, ಪ್ರತಿಭಟನೆ ನಡೆಸಿದ್ದರು. ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮೀನುಗಾರರ ಸಂಘಟನೆ ಸಲ್ಲಿಸಿತ್ತು. 2020ರಲ್ಲಿ ಹೈಕೋರ್ಟ್ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಈಚೆಗೆ ಹೈಕೋರ್ಟ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೈತಖೋಲ್ ವಾಣಿಜ್ಯ ಬಂದರಿನ ಎರಡನೆ ಹಂತದ ಕಾಮಗಾರಿಗೆ ನೀಡಿರುವ ಅನುಮತಿ ಕಾನೂನುಬಾಹಿರವೆಂದು ಪರಿಗಣಿಸಿದೆ! ಕಾಯಿದೆಗಳನ್ನು ಕಡೆಗಣಿಸಿ ಪರವಾನಿಗೆ ಕೊಡಲಾಗಿದೆ; ಯೋಜನೆಯಿಂದ ಆಗಬಹುದಾದ ವಾಯು ಮತ್ತು ಜಲ ಮಾಲಿನ್ಯದ ವ್ಯಾಪ್ತಿ ಮತ್ತು ಯಾವ ರೀತಿ ಎದುರಾಗಬಹುದೆಂಬುದನ್ನು ಪರಿಸರ ಅಧಿಕಾರಿ ವಿಚಾರಣೆ ನಡೆಸಿಲ್ಲವೆಂದು ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಹೊನ್ನಾವರದ ಕಾಸರಕೋಡು ಟೊಂಕದಲ್ಲಿ ನಿರ್ಮಾಣವಾಗುವ ಖಾಸಗಿ ಬಂದರು ಕಾಮಗಾರಿಗೂ ಮೀನುಗಾರ ಸಂಘಟನೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ. ಆದರೂ ಪೊಲೀಸ್ ಬಲದಲ್ಲಿ ಕಾಮಗಾರಿಗೆ ಪ್ರಯತ್ನ ನಡೆದಾಗ ಮೀನುಗಾರರು ಸಾಮೂಹಿಕವಾಗಿ ಸಮುದ್ರಕ್ಕ ಹಾರಿ ಆತ್ಮಹತ್ಯೆಗೆ ಹೋದಾಗ ಕಾಮಗಾರಿ ನಿಲ್ಲಿಸಲಾಗಿದೆ. ಈಗ ಮಂಗಳೂರು ನಗರ ಕಸ್ಬಾ ಬೆಂಗರೆಯ ಫಲ್ಗುಣಿ ನದಿ ದಂಡೆ ಆಕ್ರಮಿಸಿ ಕೋಸ್ಟಲ್ ಬರ್ತ್ ಯೋಜನೆ ಕಾರ್ಯಗತಗೊಳಿಸುವ ತರಾತುರಿ ನಡೆಯುತ್ತಿದ್ದು, ಇದರಿಂದ ತಮ್ಮ ಕಸಬು ಮತ್ತು ಬದುಕಿಗೆ ತೊಂದರೆಯಾಗುತ್ತದೆಂದು ಸಾಂಪ್ರದಾಯಿಕ ಮೀನುಗಾರರು ಪ್ರತಿಭಟನೆಗಿಳಿದಿದ್ದಾರೆ. ಸಾಗರ ಮಾಲಾ, ಕೋಸ್ಟಲ್ ಬರ್ತ್ ಯೋಜನೆ ಬಗ್ಗೆ ಸ್ಥಳೀಯರಿಗೆ ಯಾವುದೇ ಮಾಹಿತಿ ಕೊಡದೆ ಬಲವಂತದಿಂದ ಹೇರಲಾಗುತ್ತಿದೆಯೆಂದು ಫಲ್ಗಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳುತ್ತಾರೆ.

ಮೀನುಗಾರರೆ ಹೆಚ್ಚಿರುವ ಜನದಟ್ಟಣೆಯ ಕಸ್ಬಾ ಬೆಂಗರೆ ಗ್ರಾಮಸ್ಥರು ತಮ್ಮ ಬದುಕನ್ನು ಧ್ವಂಸ ಮಾಡುವ ಸದ್ರಿ ಯೋಜನೆ ಬೇಡವೆಂದು ಒಕ್ಕೊರಲಿಂದ ವಿರೋಧಿಸುತ್ತಿದ್ದಾರೆ. ಗ್ರಾಮಸ್ಥರ ಭಾವನೆ ಕಡೆಗಣಿಸಿ ಪೊಲೀಸ್ ಬಲದಿಂದ ಜಿಲ್ಲಾಡಳಿತ ಬಿರುಸಿನಿಂದ ಕೋಸ್ಟಲ್ ಬರ್ತ್ ಕಾಮಗಾರಿ ನಡೆಸುತ್ತಿದೆ. ಇದೀಗ ಸಾಂಪ್ರದಾಯಿಕ ಮೀನುಗಾರರು ನಾಡದೋಣಿ ಕಟ್ಟಿ ಇಡುವ ಪ್ರದೇಶಕ್ಕೆ ಕಾಮಗಾರಿ ವಿಸ್ತರಣೆಗೊಂಡಿದೆ. ಇಲ್ಲಿ ನೂರಾರು ನಾಡದೋಣಿ ತಂಗುತ್ತವೆ. ಫಲ್ಗುಣಿ ನದಿ ತೀರದ ಬೆಂಗರೆಯಲ್ಲಿ ತಲತಲಾಂತದಿಂದ ಸಾಂಪ್ರದಾಯಿಕ ಮೀನುಗಾರರು ದೋಣಿ ಕಟ್ಟಿ ಮೀನುಗಾರಿಕೆ ನಡೆಸುತ್ತಿದ್ದಾರೆ. ಎರಡು ತಿಂಗಳಿಂದ ಮೀನುಗಾರರು ಅಧಿಕೃತ ಮಾತುಕತೆ-ಪರ್ಯಾಯ ಜಾಗ ತೋರಿಸದೆ ದೋಣಿಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲವೆಂದು ಹೇಳುತ್ತಲೇ ಇದ್ದಾರೆ. ಇದ್ಯಾವುದನ್ನು ಕೇಳದ ಜಿಲ್ಲಾಡಳಿತ ಈಗ ಹಠಾತ್ತಾಗಿ ಪೋಲೀಸ್ ಬಲದಿಂದ ದೋಣಿ ತೆರವುಗೊಳಿಸಲು ಮುಂದಾಗಿದೆ. ಅಧಿಕಾರಿಗಳು ಸರ್ವಾಧಿಕಾರದಿಂದ ವರ್ತಿಸುತ್ತಿದ್ದು, ಜಿಲ್ಲಾಡಳಿತ ಸಭೆ ನಡೆಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಸಾಂಪ್ರದಾಯಿಕ ಮೀನುಗಾರರ ಸಂಘ ಎಚ್ಚರಿಸಿದೆ.

ಸಾಗರ ಮಾಲಾದಿಂದ ಮನೆ ಕಳೆದುಕೊಳ್ಳವ ಮೀನುಗಾರರಿಗೆ ಪುನರ್ವಸತಿ, ದೋಣಿ ನಿಲ್ಲಿಸಲು ಸರಿಯಾದ ವ್ಯವಸ್ಥೆ ಕುರಿತು ಬಾಯಿ ಮಾತಿನ ಭರವಸೆ ಬದಲಿಗೆ ಅಧಿಕೃತ ಸಭೆ ಕರೆದು ಜಿಲ್ಲಾಡಳಿತ ಮೀನುಗಾರರಿಗೆ ತೊಂದರೆಯಾಗದಂಥ ತೀರ್ಮಾನ ಪ್ರಕಟಿಸಬೇಕೆಂದು ಸಾಂಪ್ರದಾಯಿಕ ಮಿನುಗಾರರ ಸಂಘ ಜಿಲ್ಲಾಡಳಿತಕ್ಕೆ ಹೇಳಿತ್ತು. ಮೂರು ವಾರದ ಹಿಂದೆ ಜಿಲ್ಲಾ ಉಸ್ತವಾರಿ ಮಂತ್ರಿಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಒಂದು ವಾರದಲ್ಲಿ ಅಧಿಕೃತ ಸಭೆ ಏರ್ಪಡಿಸುವುದಾಗಿ ಹೇಳಿದ್ದರು. ಆದರೆ ಈಗ ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಯಾವುದೆ ಸಭೆ, ಸಮಾಲೋಚನೆ ಇಲ್ಲದೆ ದೋಣಿ ತೆರವಿಗೆ ಒತ್ತಾಯಿಸುತ್ತಿದೆ; ಒಪ್ಪದಿದ್ದರೆ ಪೊಲೀಸ್ ಬಲ ಪ್ರಯೋಗಿಸುವ ಬೆದರಿಕೆ ಹಾಕುತ್ತಿದ್ದಾರೆಂದು ಮೀನುಗಾರ ಮುಖಂಡರು ಹೇಳುತ್ತಿದ್ದಾರೆ.

ಜಿಲ್ಲಾಡಳಿತದ ಈ ಸರ್ವಾಧಿಕಾರಿ ಧೋರಣೆ ಖಂಡಿಸುವುದಾಗಿ ಹೇಳಿರುವ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘ, ನ್ಯಾಯಯುತ ಪರಿಹಾರ ಘೋಷಿಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಹೆಳಿದೆ. ಬಲಾತ್ಕಾರಕ್ಕೆ ಮುಂದಾದರೆ ಮೀನುಗಾರರು ಒಗ್ಗಟ್ಟಾಗಿ ಶಾಂತಿಯುತ ಹೋರಾಟದಿಂದ ಎದುರಿಸುವುದಾಗಿ ಮೀನುಗಾರ ಮಖಂಡರು ಹೇಳುತ್ತಿದ್ದಾರೆ. ಇನ್ನಾದರು ಬಡ ಮೀನುಗಾರರಿಗೆ ನ್ಯಾಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...