Homeಕರ್ನಾಟಕಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

- Advertisement -
- Advertisement -

ಕೇಂದ್ರ ಸರಕಾರ ದೇಶದ ಬಂದರುಗಳನ್ನು ಆಧುನೀಕರಿಸುವುದು, ಬಂದರುಗಳ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಮತ್ತು ಬಂದರುಗಳ ಸಂಪರ್ಕಿಸುವ ಕೈಗಾರಿಕಾ ಪ್ರದೇಶಗಳ ಗುಚ್ಛವನ್ನು ರಚಿಸಲು ಸಾಗರ ಮಾಲಾ ಎಂಬ ಯೋಜನೆ ಕೈಗೆತ್ತಿಕೊಂಡಿದೆ. ಈ ಯೋಜನೆಯಲ್ಲಿ 189 ಬಂದರುಗಳ ಆಧುನೀಕರಣ, 170 ಬಂದರುಗಳ ಸಂಪರ್ಕ ಹೆಚ್ಛಿಸುವುದು ಮತ್ತು ಹೊಸ ಬಂದರುಗಳ ಸ್ಥಾಪನೆಯಂಥ 415 ಪ್ರಾಜೆಕ್ಟ್‌ಗಳು ಸೇರಿವೆ. ಒಟ್ಟು 7.985 ಲಕ್ಷ ಕೋಟಿ ಮೊತ್ತದ ಸದ್ರಿ ಯೋಜನೆಯಿಂದ ಕರ್ನಾಟಕ ಕರಾವಳಿಯ ಬೆಸ್ತರು ನಲೆ ತಪ್ಪುವ ಭೀತಿಯಿಂದ ಕಂಗಾಲಾಗಿ ಹೋಗಿದ್ದಾರೆ!

ಮಂಗಳೂರಿನಿಂದ ಕಾರವಾರದವರೆಗಿನ ಕಡಲ ತಡಿಯ ಮೀನುಗಾರರು ಸಾಗರ ಮಾಲಾ ಯೋಜನೆಗಳು ತಮ್ಮ ತುತ್ತಿಗಾಧಾರವಾದ ದುಡಿಮೆಗೆ ಸಂಚಕಾರ ತರುತ್ತದೆಂದು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. 274 ಕೋಟಿ ರೂ.ವೆಚ್ಚದಲ್ಲಿ ಬೈತಖೋಲ್ ಬಂದರಿನ 250 ಮೀಟರ್ ಜಟ್ಟಿ ಮತ್ತು 880 ಮೀಟರ್ ಅಲೆ ತಡೆ ಗೋಡೆ ಕಾಮಗಾರಿಯನ್ನು 2019ರಲ್ಲಿ ಪ್ರಾರಂಭಿಸಲಾಗಿತ್ತು. ಅದನ್ನು ವಿರೋಧಿಸಿ ಮೀನುಗಾರರು ಬೃಹತ್ ರ್‍ಯಾಲಿ, ಪ್ರತಿಭಟನೆ ನಡೆಸಿದ್ದರು. ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮೀನುಗಾರರ ಸಂಘಟನೆ ಸಲ್ಲಿಸಿತ್ತು. 2020ರಲ್ಲಿ ಹೈಕೋರ್ಟ್ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಈಚೆಗೆ ಹೈಕೋರ್ಟ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೈತಖೋಲ್ ವಾಣಿಜ್ಯ ಬಂದರಿನ ಎರಡನೆ ಹಂತದ ಕಾಮಗಾರಿಗೆ ನೀಡಿರುವ ಅನುಮತಿ ಕಾನೂನುಬಾಹಿರವೆಂದು ಪರಿಗಣಿಸಿದೆ! ಕಾಯಿದೆಗಳನ್ನು ಕಡೆಗಣಿಸಿ ಪರವಾನಿಗೆ ಕೊಡಲಾಗಿದೆ; ಯೋಜನೆಯಿಂದ ಆಗಬಹುದಾದ ವಾಯು ಮತ್ತು ಜಲ ಮಾಲಿನ್ಯದ ವ್ಯಾಪ್ತಿ ಮತ್ತು ಯಾವ ರೀತಿ ಎದುರಾಗಬಹುದೆಂಬುದನ್ನು ಪರಿಸರ ಅಧಿಕಾರಿ ವಿಚಾರಣೆ ನಡೆಸಿಲ್ಲವೆಂದು ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಹೊನ್ನಾವರದ ಕಾಸರಕೋಡು ಟೊಂಕದಲ್ಲಿ ನಿರ್ಮಾಣವಾಗುವ ಖಾಸಗಿ ಬಂದರು ಕಾಮಗಾರಿಗೂ ಮೀನುಗಾರ ಸಂಘಟನೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ. ಆದರೂ ಪೊಲೀಸ್ ಬಲದಲ್ಲಿ ಕಾಮಗಾರಿಗೆ ಪ್ರಯತ್ನ ನಡೆದಾಗ ಮೀನುಗಾರರು ಸಾಮೂಹಿಕವಾಗಿ ಸಮುದ್ರಕ್ಕ ಹಾರಿ ಆತ್ಮಹತ್ಯೆಗೆ ಹೋದಾಗ ಕಾಮಗಾರಿ ನಿಲ್ಲಿಸಲಾಗಿದೆ. ಈಗ ಮಂಗಳೂರು ನಗರ ಕಸ್ಬಾ ಬೆಂಗರೆಯ ಫಲ್ಗುಣಿ ನದಿ ದಂಡೆ ಆಕ್ರಮಿಸಿ ಕೋಸ್ಟಲ್ ಬರ್ತ್ ಯೋಜನೆ ಕಾರ್ಯಗತಗೊಳಿಸುವ ತರಾತುರಿ ನಡೆಯುತ್ತಿದ್ದು, ಇದರಿಂದ ತಮ್ಮ ಕಸಬು ಮತ್ತು ಬದುಕಿಗೆ ತೊಂದರೆಯಾಗುತ್ತದೆಂದು ಸಾಂಪ್ರದಾಯಿಕ ಮೀನುಗಾರರು ಪ್ರತಿಭಟನೆಗಿಳಿದಿದ್ದಾರೆ. ಸಾಗರ ಮಾಲಾ, ಕೋಸ್ಟಲ್ ಬರ್ತ್ ಯೋಜನೆ ಬಗ್ಗೆ ಸ್ಥಳೀಯರಿಗೆ ಯಾವುದೇ ಮಾಹಿತಿ ಕೊಡದೆ ಬಲವಂತದಿಂದ ಹೇರಲಾಗುತ್ತಿದೆಯೆಂದು ಫಲ್ಗಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳುತ್ತಾರೆ.

ಮೀನುಗಾರರೆ ಹೆಚ್ಚಿರುವ ಜನದಟ್ಟಣೆಯ ಕಸ್ಬಾ ಬೆಂಗರೆ ಗ್ರಾಮಸ್ಥರು ತಮ್ಮ ಬದುಕನ್ನು ಧ್ವಂಸ ಮಾಡುವ ಸದ್ರಿ ಯೋಜನೆ ಬೇಡವೆಂದು ಒಕ್ಕೊರಲಿಂದ ವಿರೋಧಿಸುತ್ತಿದ್ದಾರೆ. ಗ್ರಾಮಸ್ಥರ ಭಾವನೆ ಕಡೆಗಣಿಸಿ ಪೊಲೀಸ್ ಬಲದಿಂದ ಜಿಲ್ಲಾಡಳಿತ ಬಿರುಸಿನಿಂದ ಕೋಸ್ಟಲ್ ಬರ್ತ್ ಕಾಮಗಾರಿ ನಡೆಸುತ್ತಿದೆ. ಇದೀಗ ಸಾಂಪ್ರದಾಯಿಕ ಮೀನುಗಾರರು ನಾಡದೋಣಿ ಕಟ್ಟಿ ಇಡುವ ಪ್ರದೇಶಕ್ಕೆ ಕಾಮಗಾರಿ ವಿಸ್ತರಣೆಗೊಂಡಿದೆ. ಇಲ್ಲಿ ನೂರಾರು ನಾಡದೋಣಿ ತಂಗುತ್ತವೆ. ಫಲ್ಗುಣಿ ನದಿ ತೀರದ ಬೆಂಗರೆಯಲ್ಲಿ ತಲತಲಾಂತದಿಂದ ಸಾಂಪ್ರದಾಯಿಕ ಮೀನುಗಾರರು ದೋಣಿ ಕಟ್ಟಿ ಮೀನುಗಾರಿಕೆ ನಡೆಸುತ್ತಿದ್ದಾರೆ. ಎರಡು ತಿಂಗಳಿಂದ ಮೀನುಗಾರರು ಅಧಿಕೃತ ಮಾತುಕತೆ-ಪರ್ಯಾಯ ಜಾಗ ತೋರಿಸದೆ ದೋಣಿಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲವೆಂದು ಹೇಳುತ್ತಲೇ ಇದ್ದಾರೆ. ಇದ್ಯಾವುದನ್ನು ಕೇಳದ ಜಿಲ್ಲಾಡಳಿತ ಈಗ ಹಠಾತ್ತಾಗಿ ಪೋಲೀಸ್ ಬಲದಿಂದ ದೋಣಿ ತೆರವುಗೊಳಿಸಲು ಮುಂದಾಗಿದೆ. ಅಧಿಕಾರಿಗಳು ಸರ್ವಾಧಿಕಾರದಿಂದ ವರ್ತಿಸುತ್ತಿದ್ದು, ಜಿಲ್ಲಾಡಳಿತ ಸಭೆ ನಡೆಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಸಾಂಪ್ರದಾಯಿಕ ಮೀನುಗಾರರ ಸಂಘ ಎಚ್ಚರಿಸಿದೆ.

ಸಾಗರ ಮಾಲಾದಿಂದ ಮನೆ ಕಳೆದುಕೊಳ್ಳವ ಮೀನುಗಾರರಿಗೆ ಪುನರ್ವಸತಿ, ದೋಣಿ ನಿಲ್ಲಿಸಲು ಸರಿಯಾದ ವ್ಯವಸ್ಥೆ ಕುರಿತು ಬಾಯಿ ಮಾತಿನ ಭರವಸೆ ಬದಲಿಗೆ ಅಧಿಕೃತ ಸಭೆ ಕರೆದು ಜಿಲ್ಲಾಡಳಿತ ಮೀನುಗಾರರಿಗೆ ತೊಂದರೆಯಾಗದಂಥ ತೀರ್ಮಾನ ಪ್ರಕಟಿಸಬೇಕೆಂದು ಸಾಂಪ್ರದಾಯಿಕ ಮಿನುಗಾರರ ಸಂಘ ಜಿಲ್ಲಾಡಳಿತಕ್ಕೆ ಹೇಳಿತ್ತು. ಮೂರು ವಾರದ ಹಿಂದೆ ಜಿಲ್ಲಾ ಉಸ್ತವಾರಿ ಮಂತ್ರಿಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಒಂದು ವಾರದಲ್ಲಿ ಅಧಿಕೃತ ಸಭೆ ಏರ್ಪಡಿಸುವುದಾಗಿ ಹೇಳಿದ್ದರು. ಆದರೆ ಈಗ ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಯಾವುದೆ ಸಭೆ, ಸಮಾಲೋಚನೆ ಇಲ್ಲದೆ ದೋಣಿ ತೆರವಿಗೆ ಒತ್ತಾಯಿಸುತ್ತಿದೆ; ಒಪ್ಪದಿದ್ದರೆ ಪೊಲೀಸ್ ಬಲ ಪ್ರಯೋಗಿಸುವ ಬೆದರಿಕೆ ಹಾಕುತ್ತಿದ್ದಾರೆಂದು ಮೀನುಗಾರ ಮುಖಂಡರು ಹೇಳುತ್ತಿದ್ದಾರೆ.

ಜಿಲ್ಲಾಡಳಿತದ ಈ ಸರ್ವಾಧಿಕಾರಿ ಧೋರಣೆ ಖಂಡಿಸುವುದಾಗಿ ಹೇಳಿರುವ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘ, ನ್ಯಾಯಯುತ ಪರಿಹಾರ ಘೋಷಿಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಹೆಳಿದೆ. ಬಲಾತ್ಕಾರಕ್ಕೆ ಮುಂದಾದರೆ ಮೀನುಗಾರರು ಒಗ್ಗಟ್ಟಾಗಿ ಶಾಂತಿಯುತ ಹೋರಾಟದಿಂದ ಎದುರಿಸುವುದಾಗಿ ಮೀನುಗಾರ ಮಖಂಡರು ಹೇಳುತ್ತಿದ್ದಾರೆ. ಇನ್ನಾದರು ಬಡ ಮೀನುಗಾರರಿಗೆ ನ್ಯಾಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....