Homeಕರ್ನಾಟಕಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

- Advertisement -
- Advertisement -

ಕೇಂದ್ರ ಸರಕಾರ ದೇಶದ ಬಂದರುಗಳನ್ನು ಆಧುನೀಕರಿಸುವುದು, ಬಂದರುಗಳ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಮತ್ತು ಬಂದರುಗಳ ಸಂಪರ್ಕಿಸುವ ಕೈಗಾರಿಕಾ ಪ್ರದೇಶಗಳ ಗುಚ್ಛವನ್ನು ರಚಿಸಲು ಸಾಗರ ಮಾಲಾ ಎಂಬ ಯೋಜನೆ ಕೈಗೆತ್ತಿಕೊಂಡಿದೆ. ಈ ಯೋಜನೆಯಲ್ಲಿ 189 ಬಂದರುಗಳ ಆಧುನೀಕರಣ, 170 ಬಂದರುಗಳ ಸಂಪರ್ಕ ಹೆಚ್ಛಿಸುವುದು ಮತ್ತು ಹೊಸ ಬಂದರುಗಳ ಸ್ಥಾಪನೆಯಂಥ 415 ಪ್ರಾಜೆಕ್ಟ್‌ಗಳು ಸೇರಿವೆ. ಒಟ್ಟು 7.985 ಲಕ್ಷ ಕೋಟಿ ಮೊತ್ತದ ಸದ್ರಿ ಯೋಜನೆಯಿಂದ ಕರ್ನಾಟಕ ಕರಾವಳಿಯ ಬೆಸ್ತರು ನಲೆ ತಪ್ಪುವ ಭೀತಿಯಿಂದ ಕಂಗಾಲಾಗಿ ಹೋಗಿದ್ದಾರೆ!

ಮಂಗಳೂರಿನಿಂದ ಕಾರವಾರದವರೆಗಿನ ಕಡಲ ತಡಿಯ ಮೀನುಗಾರರು ಸಾಗರ ಮಾಲಾ ಯೋಜನೆಗಳು ತಮ್ಮ ತುತ್ತಿಗಾಧಾರವಾದ ದುಡಿಮೆಗೆ ಸಂಚಕಾರ ತರುತ್ತದೆಂದು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. 274 ಕೋಟಿ ರೂ.ವೆಚ್ಚದಲ್ಲಿ ಬೈತಖೋಲ್ ಬಂದರಿನ 250 ಮೀಟರ್ ಜಟ್ಟಿ ಮತ್ತು 880 ಮೀಟರ್ ಅಲೆ ತಡೆ ಗೋಡೆ ಕಾಮಗಾರಿಯನ್ನು 2019ರಲ್ಲಿ ಪ್ರಾರಂಭಿಸಲಾಗಿತ್ತು. ಅದನ್ನು ವಿರೋಧಿಸಿ ಮೀನುಗಾರರು ಬೃಹತ್ ರ್‍ಯಾಲಿ, ಪ್ರತಿಭಟನೆ ನಡೆಸಿದ್ದರು. ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮೀನುಗಾರರ ಸಂಘಟನೆ ಸಲ್ಲಿಸಿತ್ತು. 2020ರಲ್ಲಿ ಹೈಕೋರ್ಟ್ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಈಚೆಗೆ ಹೈಕೋರ್ಟ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೈತಖೋಲ್ ವಾಣಿಜ್ಯ ಬಂದರಿನ ಎರಡನೆ ಹಂತದ ಕಾಮಗಾರಿಗೆ ನೀಡಿರುವ ಅನುಮತಿ ಕಾನೂನುಬಾಹಿರವೆಂದು ಪರಿಗಣಿಸಿದೆ! ಕಾಯಿದೆಗಳನ್ನು ಕಡೆಗಣಿಸಿ ಪರವಾನಿಗೆ ಕೊಡಲಾಗಿದೆ; ಯೋಜನೆಯಿಂದ ಆಗಬಹುದಾದ ವಾಯು ಮತ್ತು ಜಲ ಮಾಲಿನ್ಯದ ವ್ಯಾಪ್ತಿ ಮತ್ತು ಯಾವ ರೀತಿ ಎದುರಾಗಬಹುದೆಂಬುದನ್ನು ಪರಿಸರ ಅಧಿಕಾರಿ ವಿಚಾರಣೆ ನಡೆಸಿಲ್ಲವೆಂದು ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಹೊನ್ನಾವರದ ಕಾಸರಕೋಡು ಟೊಂಕದಲ್ಲಿ ನಿರ್ಮಾಣವಾಗುವ ಖಾಸಗಿ ಬಂದರು ಕಾಮಗಾರಿಗೂ ಮೀನುಗಾರ ಸಂಘಟನೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ. ಆದರೂ ಪೊಲೀಸ್ ಬಲದಲ್ಲಿ ಕಾಮಗಾರಿಗೆ ಪ್ರಯತ್ನ ನಡೆದಾಗ ಮೀನುಗಾರರು ಸಾಮೂಹಿಕವಾಗಿ ಸಮುದ್ರಕ್ಕ ಹಾರಿ ಆತ್ಮಹತ್ಯೆಗೆ ಹೋದಾಗ ಕಾಮಗಾರಿ ನಿಲ್ಲಿಸಲಾಗಿದೆ. ಈಗ ಮಂಗಳೂರು ನಗರ ಕಸ್ಬಾ ಬೆಂಗರೆಯ ಫಲ್ಗುಣಿ ನದಿ ದಂಡೆ ಆಕ್ರಮಿಸಿ ಕೋಸ್ಟಲ್ ಬರ್ತ್ ಯೋಜನೆ ಕಾರ್ಯಗತಗೊಳಿಸುವ ತರಾತುರಿ ನಡೆಯುತ್ತಿದ್ದು, ಇದರಿಂದ ತಮ್ಮ ಕಸಬು ಮತ್ತು ಬದುಕಿಗೆ ತೊಂದರೆಯಾಗುತ್ತದೆಂದು ಸಾಂಪ್ರದಾಯಿಕ ಮೀನುಗಾರರು ಪ್ರತಿಭಟನೆಗಿಳಿದಿದ್ದಾರೆ. ಸಾಗರ ಮಾಲಾ, ಕೋಸ್ಟಲ್ ಬರ್ತ್ ಯೋಜನೆ ಬಗ್ಗೆ ಸ್ಥಳೀಯರಿಗೆ ಯಾವುದೇ ಮಾಹಿತಿ ಕೊಡದೆ ಬಲವಂತದಿಂದ ಹೇರಲಾಗುತ್ತಿದೆಯೆಂದು ಫಲ್ಗಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳುತ್ತಾರೆ.

ಮೀನುಗಾರರೆ ಹೆಚ್ಚಿರುವ ಜನದಟ್ಟಣೆಯ ಕಸ್ಬಾ ಬೆಂಗರೆ ಗ್ರಾಮಸ್ಥರು ತಮ್ಮ ಬದುಕನ್ನು ಧ್ವಂಸ ಮಾಡುವ ಸದ್ರಿ ಯೋಜನೆ ಬೇಡವೆಂದು ಒಕ್ಕೊರಲಿಂದ ವಿರೋಧಿಸುತ್ತಿದ್ದಾರೆ. ಗ್ರಾಮಸ್ಥರ ಭಾವನೆ ಕಡೆಗಣಿಸಿ ಪೊಲೀಸ್ ಬಲದಿಂದ ಜಿಲ್ಲಾಡಳಿತ ಬಿರುಸಿನಿಂದ ಕೋಸ್ಟಲ್ ಬರ್ತ್ ಕಾಮಗಾರಿ ನಡೆಸುತ್ತಿದೆ. ಇದೀಗ ಸಾಂಪ್ರದಾಯಿಕ ಮೀನುಗಾರರು ನಾಡದೋಣಿ ಕಟ್ಟಿ ಇಡುವ ಪ್ರದೇಶಕ್ಕೆ ಕಾಮಗಾರಿ ವಿಸ್ತರಣೆಗೊಂಡಿದೆ. ಇಲ್ಲಿ ನೂರಾರು ನಾಡದೋಣಿ ತಂಗುತ್ತವೆ. ಫಲ್ಗುಣಿ ನದಿ ತೀರದ ಬೆಂಗರೆಯಲ್ಲಿ ತಲತಲಾಂತದಿಂದ ಸಾಂಪ್ರದಾಯಿಕ ಮೀನುಗಾರರು ದೋಣಿ ಕಟ್ಟಿ ಮೀನುಗಾರಿಕೆ ನಡೆಸುತ್ತಿದ್ದಾರೆ. ಎರಡು ತಿಂಗಳಿಂದ ಮೀನುಗಾರರು ಅಧಿಕೃತ ಮಾತುಕತೆ-ಪರ್ಯಾಯ ಜಾಗ ತೋರಿಸದೆ ದೋಣಿಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲವೆಂದು ಹೇಳುತ್ತಲೇ ಇದ್ದಾರೆ. ಇದ್ಯಾವುದನ್ನು ಕೇಳದ ಜಿಲ್ಲಾಡಳಿತ ಈಗ ಹಠಾತ್ತಾಗಿ ಪೋಲೀಸ್ ಬಲದಿಂದ ದೋಣಿ ತೆರವುಗೊಳಿಸಲು ಮುಂದಾಗಿದೆ. ಅಧಿಕಾರಿಗಳು ಸರ್ವಾಧಿಕಾರದಿಂದ ವರ್ತಿಸುತ್ತಿದ್ದು, ಜಿಲ್ಲಾಡಳಿತ ಸಭೆ ನಡೆಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಸಾಂಪ್ರದಾಯಿಕ ಮೀನುಗಾರರ ಸಂಘ ಎಚ್ಚರಿಸಿದೆ.

ಸಾಗರ ಮಾಲಾದಿಂದ ಮನೆ ಕಳೆದುಕೊಳ್ಳವ ಮೀನುಗಾರರಿಗೆ ಪುನರ್ವಸತಿ, ದೋಣಿ ನಿಲ್ಲಿಸಲು ಸರಿಯಾದ ವ್ಯವಸ್ಥೆ ಕುರಿತು ಬಾಯಿ ಮಾತಿನ ಭರವಸೆ ಬದಲಿಗೆ ಅಧಿಕೃತ ಸಭೆ ಕರೆದು ಜಿಲ್ಲಾಡಳಿತ ಮೀನುಗಾರರಿಗೆ ತೊಂದರೆಯಾಗದಂಥ ತೀರ್ಮಾನ ಪ್ರಕಟಿಸಬೇಕೆಂದು ಸಾಂಪ್ರದಾಯಿಕ ಮಿನುಗಾರರ ಸಂಘ ಜಿಲ್ಲಾಡಳಿತಕ್ಕೆ ಹೇಳಿತ್ತು. ಮೂರು ವಾರದ ಹಿಂದೆ ಜಿಲ್ಲಾ ಉಸ್ತವಾರಿ ಮಂತ್ರಿಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಒಂದು ವಾರದಲ್ಲಿ ಅಧಿಕೃತ ಸಭೆ ಏರ್ಪಡಿಸುವುದಾಗಿ ಹೇಳಿದ್ದರು. ಆದರೆ ಈಗ ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಯಾವುದೆ ಸಭೆ, ಸಮಾಲೋಚನೆ ಇಲ್ಲದೆ ದೋಣಿ ತೆರವಿಗೆ ಒತ್ತಾಯಿಸುತ್ತಿದೆ; ಒಪ್ಪದಿದ್ದರೆ ಪೊಲೀಸ್ ಬಲ ಪ್ರಯೋಗಿಸುವ ಬೆದರಿಕೆ ಹಾಕುತ್ತಿದ್ದಾರೆಂದು ಮೀನುಗಾರ ಮುಖಂಡರು ಹೇಳುತ್ತಿದ್ದಾರೆ.

ಜಿಲ್ಲಾಡಳಿತದ ಈ ಸರ್ವಾಧಿಕಾರಿ ಧೋರಣೆ ಖಂಡಿಸುವುದಾಗಿ ಹೇಳಿರುವ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘ, ನ್ಯಾಯಯುತ ಪರಿಹಾರ ಘೋಷಿಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಹೆಳಿದೆ. ಬಲಾತ್ಕಾರಕ್ಕೆ ಮುಂದಾದರೆ ಮೀನುಗಾರರು ಒಗ್ಗಟ್ಟಾಗಿ ಶಾಂತಿಯುತ ಹೋರಾಟದಿಂದ ಎದುರಿಸುವುದಾಗಿ ಮೀನುಗಾರ ಮಖಂಡರು ಹೇಳುತ್ತಿದ್ದಾರೆ. ಇನ್ನಾದರು ಬಡ ಮೀನುಗಾರರಿಗೆ ನ್ಯಾಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...