Homeಕರ್ನಾಟಕಕಣ್ಮರೆಯಾಗಿದ್ದ ಸಮುದ್ರ ಹವಾಮಾನ ಯಂತ್ರ ಹುಡುಕಿ ತಂದ ಉತ್ತರ ಕನ್ನಡದ ಮೀನುಗಾರರು

ಕಣ್ಮರೆಯಾಗಿದ್ದ ಸಮುದ್ರ ಹವಾಮಾನ ಯಂತ್ರ ಹುಡುಕಿ ತಂದ ಉತ್ತರ ಕನ್ನಡದ ಮೀನುಗಾರರು

- Advertisement -
- Advertisement -

ಲಕ್ಷದ್ವೀಪದಲ್ಲಿ ಅಳವಡಿಸಲಾಗಿದ್ದ ಸಮುದ್ರ ಹವಾಮಾನದ ಮುನ್ಸೂಚನೆ ಕೊಡುವ ಅತ್ಯಾಧುನಿಕ ರಕ್ಷಣಾ ಸಂಶೋಧನಾ ಯಂತ್ರ (ಬೋಯ್) ಕಳೆದ ಅಕ್ಟೋಬರ್ 2ರಂದು ಕಾಣೆಯಾಗಿ ಆತಂಕ ಸೃಷ್ಟಿಯಾಗಿತ್ತು. ನಂತರ ಅದು ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕಡಲಲ್ಲಿ ಕಾಣಿಸಿಕೊಂಡಿತ್ತಾದರು ಅದನ್ನು ದಡಕ್ಕೆ ತರಲು ನೌಕಾ ದಳ, ಕೋಸ್ಟ್ ಗಾರ್ಡ್ ಮತ್ತು ಕೇರಳ, ದಕ್ಷಿಣ ಕನ್ನಡದ ಮೀನುಗಾರರಿಂದಲೂ ಸಾಧ್ಯವಾಗಿರಲಿಲ್ಲ. ಆದರೆ ಮಹಾರಾಷ್ಟ್ರದ ಮಾಲ್ವನ್ ಕಡಲಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಉತ್ತರ ಕನ್ನಡದ ಕುಮಟಾದ ನಾಲ್ವರು ಬೆಸ್ತರು ಬೋಯ್ ಅನ್ನು ಸುರಕ್ಷಿತವಾಗಿ ತಮ್ಮ ಬೋಟ್‌ನಲ್ಲಿ ಹಾಕಿಕೊಂಡು ಕಾರವಾರದ ಸಾಗರ ವಿಜ್ಞಾನ ಕೇಂದ್ರದ ಅಧಿಕಾರಿಗಳಿಗೆ ಕೊಟ್ಟಿದ್ದಾರೆ! ಅಲ್ಲಿಗೆ ರಾಷ್ರೀಯ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಲಕ್ಷದ್ವೀಪ ನಡುಗಡ್ಡೆಯ 15\69 ಅಕ್ಷಾಂಶ-ರೇಖಾಂಶದಲ್ಲಿ ಚೆನ್ನೈನ ರಾಷ್ಟ್ರೀಯ ಸಾಗರ ವಿಜ್ಞಾನ ಕೇಂದ್ರ ಬೋಯ್ ಸ್ಥಾಪಿಸಿತ್ತು. ಈ ಅತ್ಯಾಧುನಿಕ ಯಂತ್ರ ಸಾಗರದಲ್ಲಿನ ಗಾಳಿಯ ದಿಕ್ಕು, ವೇಗ, ಉಷ್ಣತೆ ಮತ್ತು ತೇವಾಂಶ ತಿಳಿಸುತ್ತದೆ; ಸಮುದ್ರ ಮಟ್ಟದ ಒತ್ತಡ ಮತ್ತು ನೀರಿನ ಡೌನ್ ವೆಲ್ಲಿಂಗ್ ಹೇಳುತ್ತದೆ. ನೀರಿನ ಮೇಲ್ಪದರದಿಂದ 500 ಮೀಟರ್ ಆಳದ ವರೆಗಿನ ನೀರಿನ ಉಷ್ಣತೆ ಮತ್ತು ಉಪ್ಪಿನಾಂಶವನ್ನು ಅಳೆಯುತ್ತದೆ. ನೀರಿನ ಒಳಹರಿವಿನ ದಿಕ್ಕನ್ನು 240 ಮೀಟರ್ ವರೆಗೆ ಅಳತೆ ಮಾಡಬಲ್ಲದು. ಈ ಮಾಹಿತಿಯನ್ನೆಲ್ಲ ಬೋಯ್ ತಾಸಿಗೊಮ್ಮೆ ಉಪಗ್ರಹದ ಮೂಲಕ ಚೆನ್ನೈನ ರಾಷ್ಟ್ರೀಯ ಸಾಗರ ವಿಜ್ಞಾನ ಕೇಂದ್ರಕ್ಕೆ ರವಾನಿಸುತ್ತದೆ. ಇಂಥ 12 ಯಂತ್ರಗಳನ್ನು ದೇಶದ ವಿವಿಧ ಸಮುದ್ರ ಪ್ರದೇಶದಲ್ಲಿ ಅಳವಡಿಸಲಾಗಿದ್ದು, ಸದ್ರಿ ನೆಟ್‌ವರ್ಕ್ ದೇಶದ ಮಹತ್ವದ ಸಾಗರ ಸ್ಥಿತಿ-ಗತಿ ಒದಗಿಸುತ್ತದೆ. ಬೋಯ್ ಸಿಗದಿದ್ದರೆ ದುರುಪಯೋಗವಾಗುವ ಭಯವಿತ್ತು. ಉತ್ತರ ಕನ್ನಡದ ಮೀನುಗಾರರ ಸಾಹಸದಿಂದ ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಆವರಿಸಿದ್ದ ಆತಂಕ ದೂರಾದಂತಾಗಿದೆ.

PC : TV9 Kannada

ಅಕ್ಟೋಬರ್ 2ರಂದು ಬೋಯ್ ಇದ್ದಕ್ಕಿದ್ದಂತೆ ಲಕ್ಷದ್ವೀಪದಿಂದ ಕಳಚಿಕೊಂಡು ಸಮುದ್ರ ಪಾಲಾಗಿತ್ತು. ಅ.5ರಂದು ಕೇರಳದ ಅರಬ್ಭೀ ಸಮುದ್ರದಲ್ಲಿ ತೇಲುತ್ತಿದ್ದ ಈ ಯಂತ್ರ ಅ.13ರಂದು ಕುಮಟಾದ ಧಾರೇಶ್ವರ ಕಡಲಲ್ಲಿ ಕಾಣಿಸಿಕೊಂಡಿತ್ತು. ಕೋಸ್ಟ್‌ಗಾರ್ಡ್ ಸಿಬ್ಬಂದಿ ದೂರದಿಂದಲೆ ನೋಡಿ ಇದನ್ನು ದಡಕ್ಕೆ ತರುವುದು ಕಷ್ಟವೆಂದು ವಾಪಸ್ಸಾಗಿತ್ತು. ದಕ್ಷಿಣ ಕನ್ನಡದ ಮೀನುಗಾರರ ಕಣ್ಣಿಗೂ ಬಿದ್ದಿದ್ದ ಬೋಯ್ ತರಲಾಗಿರಲಿಲ್ಲ. ಅ.14ರಂದು ಕಾರವಾರದ ಸೀ ಬರ್ಡ್ ನೌಕಾನೆಲೆಯ ಆಳ ಸಮುದ್ರ ಪ್ರದೇಶದಲ್ಲಿತ್ತು. ಆದರೆ ನೌಕಾ ಪಡೆಯವರಿಂದಲೂ ಈ ಅಮೂಲ್ಯ ಯಂತ್ರ ಹಿಡಿಯಲಾಗಿರಲಿಲ್ಲ! ಅ.16ರಂದು ಮಹಾರಾಷ್ಟ್ರದ ಮಾಲ್ವನ್ ಸಾಗರದಲ್ಲಿ ಬೋಯ್ ಇರುವುದು ಚೆನ್ನೈ ರಾಷ್ಟ್ರೀಯ ಸಾಗರ ವಿಜ್ಞಾನ ಸಂಸ್ಥೆಗೆ ತಿಳಿದಿತ್ತು.

ಬೋಯ್ ಕಡಲಲ್ಲಿ ಕಣ್ಣು ತಪ್ಪಿಸಿ ಓಡಾಡಿಕೊಂಡಿರವುದನ್ನು ಚೆನ್ನೈ ಎನ್‌ಐಓಟಿ ಅರಬ್ಬೀ ಸಮುದ್ರದಂಚಿನಲ್ಲಿರುವ ಸಾಗರ ವಿಜ್ಞಾನ ಕೇಂದ್ರಗಳಿಗೆ ತಿಳಿಸಿ, ಅದನ್ನು ದಂಡೆಗೆ ತರುವ ಪ್ರಯತ್ನ ಮಾಡುವಂತೆ ಹೇಳಿತ್ತು. ಕಾರವಾದ ಸಾಗರ ವಿಜ್ಞಾನ ಸಂಸ್ಥೆ ಮುಖ್ಯಸ್ಥ ಜಗನ್ನಾಥ ರಾಠೋಡ್ ಈ ಮಾಹಿತಿಯನ್ನು ಮೀನುಗಾರಿಕಾ ಇಲಾಖೆ ಮತ್ತು ಮೀನುಗಾರರ ವಾಟ್ಸ್‌ಪ್ ಗ್ರೂಪ್‌ಗಳಿಗೆ ಹಂಚಿಕೊಂಡಿದ್ದರು. ಮಾಲ್ವನ್ ಕಡಲಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಕಾರವಾರದ ಮೂಲದ ಬೋಟ್‌ನಲ್ಲಿದ್ದ ಕುಮಟಾದ ರಾಜು ಅಂಬಿಗ, ಚಂದ್ರು ಅಂಬಿಗ, ಗೋಪಾಲ್ ಅಂಬಿಗ ಮತ್ತು ಗಿರೀಶ್ ಅಂಬಿಗ ದೊಡ್ಡ ಗಾತ್ರದ ಬೋಯ್ ತಮ್ಮೆದುರು ತೇಲುತ್ತಿರುವುದನ್ನು 18ರಂದು ಕಾರವಾರ ಸಾಗರ ವಿಜ್ಞಾನ ಕೇಂದ್ರದ ಮುಖ್ಯಸ್ಥ ರಾಠೋಡ್‌ರಿಗೆ ಪೋನ್ ಮಾಡಿ ಹೇಳಿದ್ದಾರೆ. ಅದರ ಮಹತ್ವ ತಿಳಿಸಿದ ರಾಠೋಡ್ ಹೇಗಾದರೂ ಮಾಡಿ ದಂಡೆಗೆ ತನ್ನಿರಿ ಎಂದಿದ್ದಾರೆ.

ಆ ನಾಲ್ಕು ಬೆಸ್ತರು ಮೀನುಗಾರಿಕೆ ನಿಲ್ಲಿಸಿ ದೇಶದ ಮಹತ್ವದ ಬೋಯ್ ಹಿಡಿಯಲು ಪ್ರಯತ್ನಿಸಿದ್ದಾರೆ. ಮಹಾರಾಷ್ಟ್ರದ ಮೀನುಗಾರರ ನೆರವಿಂದ ಬೃಹತ್ ಬೋಯ್ ಬೋಟಿಗೆ ಹಾಕಿಕೊಂಡಿದ್ದಾರೆ. ರಾತ್ರಿ ವೇಳೆಗೆ ಕಾರವಾರದ ಸಾಗರ ವಿಜ್ಞಾನ ಸಂಸ್ಥೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಉತ್ತರ ಕನ್ನಡದ ಮೀನುಗಾರರ ಈ ಸಾಹಸಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ!


ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...