Homeಕರ್ನಾಟಕಕಣ್ಮರೆಯಾಗಿದ್ದ ಸಮುದ್ರ ಹವಾಮಾನ ಯಂತ್ರ ಹುಡುಕಿ ತಂದ ಉತ್ತರ ಕನ್ನಡದ ಮೀನುಗಾರರು

ಕಣ್ಮರೆಯಾಗಿದ್ದ ಸಮುದ್ರ ಹವಾಮಾನ ಯಂತ್ರ ಹುಡುಕಿ ತಂದ ಉತ್ತರ ಕನ್ನಡದ ಮೀನುಗಾರರು

- Advertisement -
- Advertisement -

ಲಕ್ಷದ್ವೀಪದಲ್ಲಿ ಅಳವಡಿಸಲಾಗಿದ್ದ ಸಮುದ್ರ ಹವಾಮಾನದ ಮುನ್ಸೂಚನೆ ಕೊಡುವ ಅತ್ಯಾಧುನಿಕ ರಕ್ಷಣಾ ಸಂಶೋಧನಾ ಯಂತ್ರ (ಬೋಯ್) ಕಳೆದ ಅಕ್ಟೋಬರ್ 2ರಂದು ಕಾಣೆಯಾಗಿ ಆತಂಕ ಸೃಷ್ಟಿಯಾಗಿತ್ತು. ನಂತರ ಅದು ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕಡಲಲ್ಲಿ ಕಾಣಿಸಿಕೊಂಡಿತ್ತಾದರು ಅದನ್ನು ದಡಕ್ಕೆ ತರಲು ನೌಕಾ ದಳ, ಕೋಸ್ಟ್ ಗಾರ್ಡ್ ಮತ್ತು ಕೇರಳ, ದಕ್ಷಿಣ ಕನ್ನಡದ ಮೀನುಗಾರರಿಂದಲೂ ಸಾಧ್ಯವಾಗಿರಲಿಲ್ಲ. ಆದರೆ ಮಹಾರಾಷ್ಟ್ರದ ಮಾಲ್ವನ್ ಕಡಲಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಉತ್ತರ ಕನ್ನಡದ ಕುಮಟಾದ ನಾಲ್ವರು ಬೆಸ್ತರು ಬೋಯ್ ಅನ್ನು ಸುರಕ್ಷಿತವಾಗಿ ತಮ್ಮ ಬೋಟ್‌ನಲ್ಲಿ ಹಾಕಿಕೊಂಡು ಕಾರವಾರದ ಸಾಗರ ವಿಜ್ಞಾನ ಕೇಂದ್ರದ ಅಧಿಕಾರಿಗಳಿಗೆ ಕೊಟ್ಟಿದ್ದಾರೆ! ಅಲ್ಲಿಗೆ ರಾಷ್ರೀಯ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಲಕ್ಷದ್ವೀಪ ನಡುಗಡ್ಡೆಯ 15\69 ಅಕ್ಷಾಂಶ-ರೇಖಾಂಶದಲ್ಲಿ ಚೆನ್ನೈನ ರಾಷ್ಟ್ರೀಯ ಸಾಗರ ವಿಜ್ಞಾನ ಕೇಂದ್ರ ಬೋಯ್ ಸ್ಥಾಪಿಸಿತ್ತು. ಈ ಅತ್ಯಾಧುನಿಕ ಯಂತ್ರ ಸಾಗರದಲ್ಲಿನ ಗಾಳಿಯ ದಿಕ್ಕು, ವೇಗ, ಉಷ್ಣತೆ ಮತ್ತು ತೇವಾಂಶ ತಿಳಿಸುತ್ತದೆ; ಸಮುದ್ರ ಮಟ್ಟದ ಒತ್ತಡ ಮತ್ತು ನೀರಿನ ಡೌನ್ ವೆಲ್ಲಿಂಗ್ ಹೇಳುತ್ತದೆ. ನೀರಿನ ಮೇಲ್ಪದರದಿಂದ 500 ಮೀಟರ್ ಆಳದ ವರೆಗಿನ ನೀರಿನ ಉಷ್ಣತೆ ಮತ್ತು ಉಪ್ಪಿನಾಂಶವನ್ನು ಅಳೆಯುತ್ತದೆ. ನೀರಿನ ಒಳಹರಿವಿನ ದಿಕ್ಕನ್ನು 240 ಮೀಟರ್ ವರೆಗೆ ಅಳತೆ ಮಾಡಬಲ್ಲದು. ಈ ಮಾಹಿತಿಯನ್ನೆಲ್ಲ ಬೋಯ್ ತಾಸಿಗೊಮ್ಮೆ ಉಪಗ್ರಹದ ಮೂಲಕ ಚೆನ್ನೈನ ರಾಷ್ಟ್ರೀಯ ಸಾಗರ ವಿಜ್ಞಾನ ಕೇಂದ್ರಕ್ಕೆ ರವಾನಿಸುತ್ತದೆ. ಇಂಥ 12 ಯಂತ್ರಗಳನ್ನು ದೇಶದ ವಿವಿಧ ಸಮುದ್ರ ಪ್ರದೇಶದಲ್ಲಿ ಅಳವಡಿಸಲಾಗಿದ್ದು, ಸದ್ರಿ ನೆಟ್‌ವರ್ಕ್ ದೇಶದ ಮಹತ್ವದ ಸಾಗರ ಸ್ಥಿತಿ-ಗತಿ ಒದಗಿಸುತ್ತದೆ. ಬೋಯ್ ಸಿಗದಿದ್ದರೆ ದುರುಪಯೋಗವಾಗುವ ಭಯವಿತ್ತು. ಉತ್ತರ ಕನ್ನಡದ ಮೀನುಗಾರರ ಸಾಹಸದಿಂದ ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಆವರಿಸಿದ್ದ ಆತಂಕ ದೂರಾದಂತಾಗಿದೆ.

PC : TV9 Kannada

ಅಕ್ಟೋಬರ್ 2ರಂದು ಬೋಯ್ ಇದ್ದಕ್ಕಿದ್ದಂತೆ ಲಕ್ಷದ್ವೀಪದಿಂದ ಕಳಚಿಕೊಂಡು ಸಮುದ್ರ ಪಾಲಾಗಿತ್ತು. ಅ.5ರಂದು ಕೇರಳದ ಅರಬ್ಭೀ ಸಮುದ್ರದಲ್ಲಿ ತೇಲುತ್ತಿದ್ದ ಈ ಯಂತ್ರ ಅ.13ರಂದು ಕುಮಟಾದ ಧಾರೇಶ್ವರ ಕಡಲಲ್ಲಿ ಕಾಣಿಸಿಕೊಂಡಿತ್ತು. ಕೋಸ್ಟ್‌ಗಾರ್ಡ್ ಸಿಬ್ಬಂದಿ ದೂರದಿಂದಲೆ ನೋಡಿ ಇದನ್ನು ದಡಕ್ಕೆ ತರುವುದು ಕಷ್ಟವೆಂದು ವಾಪಸ್ಸಾಗಿತ್ತು. ದಕ್ಷಿಣ ಕನ್ನಡದ ಮೀನುಗಾರರ ಕಣ್ಣಿಗೂ ಬಿದ್ದಿದ್ದ ಬೋಯ್ ತರಲಾಗಿರಲಿಲ್ಲ. ಅ.14ರಂದು ಕಾರವಾರದ ಸೀ ಬರ್ಡ್ ನೌಕಾನೆಲೆಯ ಆಳ ಸಮುದ್ರ ಪ್ರದೇಶದಲ್ಲಿತ್ತು. ಆದರೆ ನೌಕಾ ಪಡೆಯವರಿಂದಲೂ ಈ ಅಮೂಲ್ಯ ಯಂತ್ರ ಹಿಡಿಯಲಾಗಿರಲಿಲ್ಲ! ಅ.16ರಂದು ಮಹಾರಾಷ್ಟ್ರದ ಮಾಲ್ವನ್ ಸಾಗರದಲ್ಲಿ ಬೋಯ್ ಇರುವುದು ಚೆನ್ನೈ ರಾಷ್ಟ್ರೀಯ ಸಾಗರ ವಿಜ್ಞಾನ ಸಂಸ್ಥೆಗೆ ತಿಳಿದಿತ್ತು.

ಬೋಯ್ ಕಡಲಲ್ಲಿ ಕಣ್ಣು ತಪ್ಪಿಸಿ ಓಡಾಡಿಕೊಂಡಿರವುದನ್ನು ಚೆನ್ನೈ ಎನ್‌ಐಓಟಿ ಅರಬ್ಬೀ ಸಮುದ್ರದಂಚಿನಲ್ಲಿರುವ ಸಾಗರ ವಿಜ್ಞಾನ ಕೇಂದ್ರಗಳಿಗೆ ತಿಳಿಸಿ, ಅದನ್ನು ದಂಡೆಗೆ ತರುವ ಪ್ರಯತ್ನ ಮಾಡುವಂತೆ ಹೇಳಿತ್ತು. ಕಾರವಾದ ಸಾಗರ ವಿಜ್ಞಾನ ಸಂಸ್ಥೆ ಮುಖ್ಯಸ್ಥ ಜಗನ್ನಾಥ ರಾಠೋಡ್ ಈ ಮಾಹಿತಿಯನ್ನು ಮೀನುಗಾರಿಕಾ ಇಲಾಖೆ ಮತ್ತು ಮೀನುಗಾರರ ವಾಟ್ಸ್‌ಪ್ ಗ್ರೂಪ್‌ಗಳಿಗೆ ಹಂಚಿಕೊಂಡಿದ್ದರು. ಮಾಲ್ವನ್ ಕಡಲಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಕಾರವಾರದ ಮೂಲದ ಬೋಟ್‌ನಲ್ಲಿದ್ದ ಕುಮಟಾದ ರಾಜು ಅಂಬಿಗ, ಚಂದ್ರು ಅಂಬಿಗ, ಗೋಪಾಲ್ ಅಂಬಿಗ ಮತ್ತು ಗಿರೀಶ್ ಅಂಬಿಗ ದೊಡ್ಡ ಗಾತ್ರದ ಬೋಯ್ ತಮ್ಮೆದುರು ತೇಲುತ್ತಿರುವುದನ್ನು 18ರಂದು ಕಾರವಾರ ಸಾಗರ ವಿಜ್ಞಾನ ಕೇಂದ್ರದ ಮುಖ್ಯಸ್ಥ ರಾಠೋಡ್‌ರಿಗೆ ಪೋನ್ ಮಾಡಿ ಹೇಳಿದ್ದಾರೆ. ಅದರ ಮಹತ್ವ ತಿಳಿಸಿದ ರಾಠೋಡ್ ಹೇಗಾದರೂ ಮಾಡಿ ದಂಡೆಗೆ ತನ್ನಿರಿ ಎಂದಿದ್ದಾರೆ.

ಆ ನಾಲ್ಕು ಬೆಸ್ತರು ಮೀನುಗಾರಿಕೆ ನಿಲ್ಲಿಸಿ ದೇಶದ ಮಹತ್ವದ ಬೋಯ್ ಹಿಡಿಯಲು ಪ್ರಯತ್ನಿಸಿದ್ದಾರೆ. ಮಹಾರಾಷ್ಟ್ರದ ಮೀನುಗಾರರ ನೆರವಿಂದ ಬೃಹತ್ ಬೋಯ್ ಬೋಟಿಗೆ ಹಾಕಿಕೊಂಡಿದ್ದಾರೆ. ರಾತ್ರಿ ವೇಳೆಗೆ ಕಾರವಾರದ ಸಾಗರ ವಿಜ್ಞಾನ ಸಂಸ್ಥೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಉತ್ತರ ಕನ್ನಡದ ಮೀನುಗಾರರ ಈ ಸಾಹಸಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ!


ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...