Homeಕರ್ನಾಟಕಕಣ್ಮರೆಯಾಗಿದ್ದ ಸಮುದ್ರ ಹವಾಮಾನ ಯಂತ್ರ ಹುಡುಕಿ ತಂದ ಉತ್ತರ ಕನ್ನಡದ ಮೀನುಗಾರರು

ಕಣ್ಮರೆಯಾಗಿದ್ದ ಸಮುದ್ರ ಹವಾಮಾನ ಯಂತ್ರ ಹುಡುಕಿ ತಂದ ಉತ್ತರ ಕನ್ನಡದ ಮೀನುಗಾರರು

- Advertisement -
- Advertisement -

ಲಕ್ಷದ್ವೀಪದಲ್ಲಿ ಅಳವಡಿಸಲಾಗಿದ್ದ ಸಮುದ್ರ ಹವಾಮಾನದ ಮುನ್ಸೂಚನೆ ಕೊಡುವ ಅತ್ಯಾಧುನಿಕ ರಕ್ಷಣಾ ಸಂಶೋಧನಾ ಯಂತ್ರ (ಬೋಯ್) ಕಳೆದ ಅಕ್ಟೋಬರ್ 2ರಂದು ಕಾಣೆಯಾಗಿ ಆತಂಕ ಸೃಷ್ಟಿಯಾಗಿತ್ತು. ನಂತರ ಅದು ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕಡಲಲ್ಲಿ ಕಾಣಿಸಿಕೊಂಡಿತ್ತಾದರು ಅದನ್ನು ದಡಕ್ಕೆ ತರಲು ನೌಕಾ ದಳ, ಕೋಸ್ಟ್ ಗಾರ್ಡ್ ಮತ್ತು ಕೇರಳ, ದಕ್ಷಿಣ ಕನ್ನಡದ ಮೀನುಗಾರರಿಂದಲೂ ಸಾಧ್ಯವಾಗಿರಲಿಲ್ಲ. ಆದರೆ ಮಹಾರಾಷ್ಟ್ರದ ಮಾಲ್ವನ್ ಕಡಲಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಉತ್ತರ ಕನ್ನಡದ ಕುಮಟಾದ ನಾಲ್ವರು ಬೆಸ್ತರು ಬೋಯ್ ಅನ್ನು ಸುರಕ್ಷಿತವಾಗಿ ತಮ್ಮ ಬೋಟ್‌ನಲ್ಲಿ ಹಾಕಿಕೊಂಡು ಕಾರವಾರದ ಸಾಗರ ವಿಜ್ಞಾನ ಕೇಂದ್ರದ ಅಧಿಕಾರಿಗಳಿಗೆ ಕೊಟ್ಟಿದ್ದಾರೆ! ಅಲ್ಲಿಗೆ ರಾಷ್ರೀಯ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಲಕ್ಷದ್ವೀಪ ನಡುಗಡ್ಡೆಯ 15\69 ಅಕ್ಷಾಂಶ-ರೇಖಾಂಶದಲ್ಲಿ ಚೆನ್ನೈನ ರಾಷ್ಟ್ರೀಯ ಸಾಗರ ವಿಜ್ಞಾನ ಕೇಂದ್ರ ಬೋಯ್ ಸ್ಥಾಪಿಸಿತ್ತು. ಈ ಅತ್ಯಾಧುನಿಕ ಯಂತ್ರ ಸಾಗರದಲ್ಲಿನ ಗಾಳಿಯ ದಿಕ್ಕು, ವೇಗ, ಉಷ್ಣತೆ ಮತ್ತು ತೇವಾಂಶ ತಿಳಿಸುತ್ತದೆ; ಸಮುದ್ರ ಮಟ್ಟದ ಒತ್ತಡ ಮತ್ತು ನೀರಿನ ಡೌನ್ ವೆಲ್ಲಿಂಗ್ ಹೇಳುತ್ತದೆ. ನೀರಿನ ಮೇಲ್ಪದರದಿಂದ 500 ಮೀಟರ್ ಆಳದ ವರೆಗಿನ ನೀರಿನ ಉಷ್ಣತೆ ಮತ್ತು ಉಪ್ಪಿನಾಂಶವನ್ನು ಅಳೆಯುತ್ತದೆ. ನೀರಿನ ಒಳಹರಿವಿನ ದಿಕ್ಕನ್ನು 240 ಮೀಟರ್ ವರೆಗೆ ಅಳತೆ ಮಾಡಬಲ್ಲದು. ಈ ಮಾಹಿತಿಯನ್ನೆಲ್ಲ ಬೋಯ್ ತಾಸಿಗೊಮ್ಮೆ ಉಪಗ್ರಹದ ಮೂಲಕ ಚೆನ್ನೈನ ರಾಷ್ಟ್ರೀಯ ಸಾಗರ ವಿಜ್ಞಾನ ಕೇಂದ್ರಕ್ಕೆ ರವಾನಿಸುತ್ತದೆ. ಇಂಥ 12 ಯಂತ್ರಗಳನ್ನು ದೇಶದ ವಿವಿಧ ಸಮುದ್ರ ಪ್ರದೇಶದಲ್ಲಿ ಅಳವಡಿಸಲಾಗಿದ್ದು, ಸದ್ರಿ ನೆಟ್‌ವರ್ಕ್ ದೇಶದ ಮಹತ್ವದ ಸಾಗರ ಸ್ಥಿತಿ-ಗತಿ ಒದಗಿಸುತ್ತದೆ. ಬೋಯ್ ಸಿಗದಿದ್ದರೆ ದುರುಪಯೋಗವಾಗುವ ಭಯವಿತ್ತು. ಉತ್ತರ ಕನ್ನಡದ ಮೀನುಗಾರರ ಸಾಹಸದಿಂದ ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಆವರಿಸಿದ್ದ ಆತಂಕ ದೂರಾದಂತಾಗಿದೆ.

PC : TV9 Kannada

ಅಕ್ಟೋಬರ್ 2ರಂದು ಬೋಯ್ ಇದ್ದಕ್ಕಿದ್ದಂತೆ ಲಕ್ಷದ್ವೀಪದಿಂದ ಕಳಚಿಕೊಂಡು ಸಮುದ್ರ ಪಾಲಾಗಿತ್ತು. ಅ.5ರಂದು ಕೇರಳದ ಅರಬ್ಭೀ ಸಮುದ್ರದಲ್ಲಿ ತೇಲುತ್ತಿದ್ದ ಈ ಯಂತ್ರ ಅ.13ರಂದು ಕುಮಟಾದ ಧಾರೇಶ್ವರ ಕಡಲಲ್ಲಿ ಕಾಣಿಸಿಕೊಂಡಿತ್ತು. ಕೋಸ್ಟ್‌ಗಾರ್ಡ್ ಸಿಬ್ಬಂದಿ ದೂರದಿಂದಲೆ ನೋಡಿ ಇದನ್ನು ದಡಕ್ಕೆ ತರುವುದು ಕಷ್ಟವೆಂದು ವಾಪಸ್ಸಾಗಿತ್ತು. ದಕ್ಷಿಣ ಕನ್ನಡದ ಮೀನುಗಾರರ ಕಣ್ಣಿಗೂ ಬಿದ್ದಿದ್ದ ಬೋಯ್ ತರಲಾಗಿರಲಿಲ್ಲ. ಅ.14ರಂದು ಕಾರವಾರದ ಸೀ ಬರ್ಡ್ ನೌಕಾನೆಲೆಯ ಆಳ ಸಮುದ್ರ ಪ್ರದೇಶದಲ್ಲಿತ್ತು. ಆದರೆ ನೌಕಾ ಪಡೆಯವರಿಂದಲೂ ಈ ಅಮೂಲ್ಯ ಯಂತ್ರ ಹಿಡಿಯಲಾಗಿರಲಿಲ್ಲ! ಅ.16ರಂದು ಮಹಾರಾಷ್ಟ್ರದ ಮಾಲ್ವನ್ ಸಾಗರದಲ್ಲಿ ಬೋಯ್ ಇರುವುದು ಚೆನ್ನೈ ರಾಷ್ಟ್ರೀಯ ಸಾಗರ ವಿಜ್ಞಾನ ಸಂಸ್ಥೆಗೆ ತಿಳಿದಿತ್ತು.

ಬೋಯ್ ಕಡಲಲ್ಲಿ ಕಣ್ಣು ತಪ್ಪಿಸಿ ಓಡಾಡಿಕೊಂಡಿರವುದನ್ನು ಚೆನ್ನೈ ಎನ್‌ಐಓಟಿ ಅರಬ್ಬೀ ಸಮುದ್ರದಂಚಿನಲ್ಲಿರುವ ಸಾಗರ ವಿಜ್ಞಾನ ಕೇಂದ್ರಗಳಿಗೆ ತಿಳಿಸಿ, ಅದನ್ನು ದಂಡೆಗೆ ತರುವ ಪ್ರಯತ್ನ ಮಾಡುವಂತೆ ಹೇಳಿತ್ತು. ಕಾರವಾದ ಸಾಗರ ವಿಜ್ಞಾನ ಸಂಸ್ಥೆ ಮುಖ್ಯಸ್ಥ ಜಗನ್ನಾಥ ರಾಠೋಡ್ ಈ ಮಾಹಿತಿಯನ್ನು ಮೀನುಗಾರಿಕಾ ಇಲಾಖೆ ಮತ್ತು ಮೀನುಗಾರರ ವಾಟ್ಸ್‌ಪ್ ಗ್ರೂಪ್‌ಗಳಿಗೆ ಹಂಚಿಕೊಂಡಿದ್ದರು. ಮಾಲ್ವನ್ ಕಡಲಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಕಾರವಾರದ ಮೂಲದ ಬೋಟ್‌ನಲ್ಲಿದ್ದ ಕುಮಟಾದ ರಾಜು ಅಂಬಿಗ, ಚಂದ್ರು ಅಂಬಿಗ, ಗೋಪಾಲ್ ಅಂಬಿಗ ಮತ್ತು ಗಿರೀಶ್ ಅಂಬಿಗ ದೊಡ್ಡ ಗಾತ್ರದ ಬೋಯ್ ತಮ್ಮೆದುರು ತೇಲುತ್ತಿರುವುದನ್ನು 18ರಂದು ಕಾರವಾರ ಸಾಗರ ವಿಜ್ಞಾನ ಕೇಂದ್ರದ ಮುಖ್ಯಸ್ಥ ರಾಠೋಡ್‌ರಿಗೆ ಪೋನ್ ಮಾಡಿ ಹೇಳಿದ್ದಾರೆ. ಅದರ ಮಹತ್ವ ತಿಳಿಸಿದ ರಾಠೋಡ್ ಹೇಗಾದರೂ ಮಾಡಿ ದಂಡೆಗೆ ತನ್ನಿರಿ ಎಂದಿದ್ದಾರೆ.

ಆ ನಾಲ್ಕು ಬೆಸ್ತರು ಮೀನುಗಾರಿಕೆ ನಿಲ್ಲಿಸಿ ದೇಶದ ಮಹತ್ವದ ಬೋಯ್ ಹಿಡಿಯಲು ಪ್ರಯತ್ನಿಸಿದ್ದಾರೆ. ಮಹಾರಾಷ್ಟ್ರದ ಮೀನುಗಾರರ ನೆರವಿಂದ ಬೃಹತ್ ಬೋಯ್ ಬೋಟಿಗೆ ಹಾಕಿಕೊಂಡಿದ್ದಾರೆ. ರಾತ್ರಿ ವೇಳೆಗೆ ಕಾರವಾರದ ಸಾಗರ ವಿಜ್ಞಾನ ಸಂಸ್ಥೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಉತ್ತರ ಕನ್ನಡದ ಮೀನುಗಾರರ ಈ ಸಾಹಸಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ!


ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...