Homeಕರ್ನಾಟಕಕಣ್ಮರೆಯಾಗಿದ್ದ ಸಮುದ್ರ ಹವಾಮಾನ ಯಂತ್ರ ಹುಡುಕಿ ತಂದ ಉತ್ತರ ಕನ್ನಡದ ಮೀನುಗಾರರು

ಕಣ್ಮರೆಯಾಗಿದ್ದ ಸಮುದ್ರ ಹವಾಮಾನ ಯಂತ್ರ ಹುಡುಕಿ ತಂದ ಉತ್ತರ ಕನ್ನಡದ ಮೀನುಗಾರರು

- Advertisement -
- Advertisement -

ಲಕ್ಷದ್ವೀಪದಲ್ಲಿ ಅಳವಡಿಸಲಾಗಿದ್ದ ಸಮುದ್ರ ಹವಾಮಾನದ ಮುನ್ಸೂಚನೆ ಕೊಡುವ ಅತ್ಯಾಧುನಿಕ ರಕ್ಷಣಾ ಸಂಶೋಧನಾ ಯಂತ್ರ (ಬೋಯ್) ಕಳೆದ ಅಕ್ಟೋಬರ್ 2ರಂದು ಕಾಣೆಯಾಗಿ ಆತಂಕ ಸೃಷ್ಟಿಯಾಗಿತ್ತು. ನಂತರ ಅದು ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕಡಲಲ್ಲಿ ಕಾಣಿಸಿಕೊಂಡಿತ್ತಾದರು ಅದನ್ನು ದಡಕ್ಕೆ ತರಲು ನೌಕಾ ದಳ, ಕೋಸ್ಟ್ ಗಾರ್ಡ್ ಮತ್ತು ಕೇರಳ, ದಕ್ಷಿಣ ಕನ್ನಡದ ಮೀನುಗಾರರಿಂದಲೂ ಸಾಧ್ಯವಾಗಿರಲಿಲ್ಲ. ಆದರೆ ಮಹಾರಾಷ್ಟ್ರದ ಮಾಲ್ವನ್ ಕಡಲಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಉತ್ತರ ಕನ್ನಡದ ಕುಮಟಾದ ನಾಲ್ವರು ಬೆಸ್ತರು ಬೋಯ್ ಅನ್ನು ಸುರಕ್ಷಿತವಾಗಿ ತಮ್ಮ ಬೋಟ್‌ನಲ್ಲಿ ಹಾಕಿಕೊಂಡು ಕಾರವಾರದ ಸಾಗರ ವಿಜ್ಞಾನ ಕೇಂದ್ರದ ಅಧಿಕಾರಿಗಳಿಗೆ ಕೊಟ್ಟಿದ್ದಾರೆ! ಅಲ್ಲಿಗೆ ರಾಷ್ರೀಯ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಲಕ್ಷದ್ವೀಪ ನಡುಗಡ್ಡೆಯ 15\69 ಅಕ್ಷಾಂಶ-ರೇಖಾಂಶದಲ್ಲಿ ಚೆನ್ನೈನ ರಾಷ್ಟ್ರೀಯ ಸಾಗರ ವಿಜ್ಞಾನ ಕೇಂದ್ರ ಬೋಯ್ ಸ್ಥಾಪಿಸಿತ್ತು. ಈ ಅತ್ಯಾಧುನಿಕ ಯಂತ್ರ ಸಾಗರದಲ್ಲಿನ ಗಾಳಿಯ ದಿಕ್ಕು, ವೇಗ, ಉಷ್ಣತೆ ಮತ್ತು ತೇವಾಂಶ ತಿಳಿಸುತ್ತದೆ; ಸಮುದ್ರ ಮಟ್ಟದ ಒತ್ತಡ ಮತ್ತು ನೀರಿನ ಡೌನ್ ವೆಲ್ಲಿಂಗ್ ಹೇಳುತ್ತದೆ. ನೀರಿನ ಮೇಲ್ಪದರದಿಂದ 500 ಮೀಟರ್ ಆಳದ ವರೆಗಿನ ನೀರಿನ ಉಷ್ಣತೆ ಮತ್ತು ಉಪ್ಪಿನಾಂಶವನ್ನು ಅಳೆಯುತ್ತದೆ. ನೀರಿನ ಒಳಹರಿವಿನ ದಿಕ್ಕನ್ನು 240 ಮೀಟರ್ ವರೆಗೆ ಅಳತೆ ಮಾಡಬಲ್ಲದು. ಈ ಮಾಹಿತಿಯನ್ನೆಲ್ಲ ಬೋಯ್ ತಾಸಿಗೊಮ್ಮೆ ಉಪಗ್ರಹದ ಮೂಲಕ ಚೆನ್ನೈನ ರಾಷ್ಟ್ರೀಯ ಸಾಗರ ವಿಜ್ಞಾನ ಕೇಂದ್ರಕ್ಕೆ ರವಾನಿಸುತ್ತದೆ. ಇಂಥ 12 ಯಂತ್ರಗಳನ್ನು ದೇಶದ ವಿವಿಧ ಸಮುದ್ರ ಪ್ರದೇಶದಲ್ಲಿ ಅಳವಡಿಸಲಾಗಿದ್ದು, ಸದ್ರಿ ನೆಟ್‌ವರ್ಕ್ ದೇಶದ ಮಹತ್ವದ ಸಾಗರ ಸ್ಥಿತಿ-ಗತಿ ಒದಗಿಸುತ್ತದೆ. ಬೋಯ್ ಸಿಗದಿದ್ದರೆ ದುರುಪಯೋಗವಾಗುವ ಭಯವಿತ್ತು. ಉತ್ತರ ಕನ್ನಡದ ಮೀನುಗಾರರ ಸಾಹಸದಿಂದ ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಆವರಿಸಿದ್ದ ಆತಂಕ ದೂರಾದಂತಾಗಿದೆ.

PC : TV9 Kannada

ಅಕ್ಟೋಬರ್ 2ರಂದು ಬೋಯ್ ಇದ್ದಕ್ಕಿದ್ದಂತೆ ಲಕ್ಷದ್ವೀಪದಿಂದ ಕಳಚಿಕೊಂಡು ಸಮುದ್ರ ಪಾಲಾಗಿತ್ತು. ಅ.5ರಂದು ಕೇರಳದ ಅರಬ್ಭೀ ಸಮುದ್ರದಲ್ಲಿ ತೇಲುತ್ತಿದ್ದ ಈ ಯಂತ್ರ ಅ.13ರಂದು ಕುಮಟಾದ ಧಾರೇಶ್ವರ ಕಡಲಲ್ಲಿ ಕಾಣಿಸಿಕೊಂಡಿತ್ತು. ಕೋಸ್ಟ್‌ಗಾರ್ಡ್ ಸಿಬ್ಬಂದಿ ದೂರದಿಂದಲೆ ನೋಡಿ ಇದನ್ನು ದಡಕ್ಕೆ ತರುವುದು ಕಷ್ಟವೆಂದು ವಾಪಸ್ಸಾಗಿತ್ತು. ದಕ್ಷಿಣ ಕನ್ನಡದ ಮೀನುಗಾರರ ಕಣ್ಣಿಗೂ ಬಿದ್ದಿದ್ದ ಬೋಯ್ ತರಲಾಗಿರಲಿಲ್ಲ. ಅ.14ರಂದು ಕಾರವಾರದ ಸೀ ಬರ್ಡ್ ನೌಕಾನೆಲೆಯ ಆಳ ಸಮುದ್ರ ಪ್ರದೇಶದಲ್ಲಿತ್ತು. ಆದರೆ ನೌಕಾ ಪಡೆಯವರಿಂದಲೂ ಈ ಅಮೂಲ್ಯ ಯಂತ್ರ ಹಿಡಿಯಲಾಗಿರಲಿಲ್ಲ! ಅ.16ರಂದು ಮಹಾರಾಷ್ಟ್ರದ ಮಾಲ್ವನ್ ಸಾಗರದಲ್ಲಿ ಬೋಯ್ ಇರುವುದು ಚೆನ್ನೈ ರಾಷ್ಟ್ರೀಯ ಸಾಗರ ವಿಜ್ಞಾನ ಸಂಸ್ಥೆಗೆ ತಿಳಿದಿತ್ತು.

ಬೋಯ್ ಕಡಲಲ್ಲಿ ಕಣ್ಣು ತಪ್ಪಿಸಿ ಓಡಾಡಿಕೊಂಡಿರವುದನ್ನು ಚೆನ್ನೈ ಎನ್‌ಐಓಟಿ ಅರಬ್ಬೀ ಸಮುದ್ರದಂಚಿನಲ್ಲಿರುವ ಸಾಗರ ವಿಜ್ಞಾನ ಕೇಂದ್ರಗಳಿಗೆ ತಿಳಿಸಿ, ಅದನ್ನು ದಂಡೆಗೆ ತರುವ ಪ್ರಯತ್ನ ಮಾಡುವಂತೆ ಹೇಳಿತ್ತು. ಕಾರವಾದ ಸಾಗರ ವಿಜ್ಞಾನ ಸಂಸ್ಥೆ ಮುಖ್ಯಸ್ಥ ಜಗನ್ನಾಥ ರಾಠೋಡ್ ಈ ಮಾಹಿತಿಯನ್ನು ಮೀನುಗಾರಿಕಾ ಇಲಾಖೆ ಮತ್ತು ಮೀನುಗಾರರ ವಾಟ್ಸ್‌ಪ್ ಗ್ರೂಪ್‌ಗಳಿಗೆ ಹಂಚಿಕೊಂಡಿದ್ದರು. ಮಾಲ್ವನ್ ಕಡಲಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಕಾರವಾರದ ಮೂಲದ ಬೋಟ್‌ನಲ್ಲಿದ್ದ ಕುಮಟಾದ ರಾಜು ಅಂಬಿಗ, ಚಂದ್ರು ಅಂಬಿಗ, ಗೋಪಾಲ್ ಅಂಬಿಗ ಮತ್ತು ಗಿರೀಶ್ ಅಂಬಿಗ ದೊಡ್ಡ ಗಾತ್ರದ ಬೋಯ್ ತಮ್ಮೆದುರು ತೇಲುತ್ತಿರುವುದನ್ನು 18ರಂದು ಕಾರವಾರ ಸಾಗರ ವಿಜ್ಞಾನ ಕೇಂದ್ರದ ಮುಖ್ಯಸ್ಥ ರಾಠೋಡ್‌ರಿಗೆ ಪೋನ್ ಮಾಡಿ ಹೇಳಿದ್ದಾರೆ. ಅದರ ಮಹತ್ವ ತಿಳಿಸಿದ ರಾಠೋಡ್ ಹೇಗಾದರೂ ಮಾಡಿ ದಂಡೆಗೆ ತನ್ನಿರಿ ಎಂದಿದ್ದಾರೆ.

ಆ ನಾಲ್ಕು ಬೆಸ್ತರು ಮೀನುಗಾರಿಕೆ ನಿಲ್ಲಿಸಿ ದೇಶದ ಮಹತ್ವದ ಬೋಯ್ ಹಿಡಿಯಲು ಪ್ರಯತ್ನಿಸಿದ್ದಾರೆ. ಮಹಾರಾಷ್ಟ್ರದ ಮೀನುಗಾರರ ನೆರವಿಂದ ಬೃಹತ್ ಬೋಯ್ ಬೋಟಿಗೆ ಹಾಕಿಕೊಂಡಿದ್ದಾರೆ. ರಾತ್ರಿ ವೇಳೆಗೆ ಕಾರವಾರದ ಸಾಗರ ವಿಜ್ಞಾನ ಸಂಸ್ಥೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಉತ್ತರ ಕನ್ನಡದ ಮೀನುಗಾರರ ಈ ಸಾಹಸಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ!


ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...