Homeಕರ್ನಾಟಕಹೆದ್ದಾರಿ ಕಾಮಗಾರಿ ವಿಳಂಬ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮೀನುಗಾರ ಮುಖಂಡರಿಂದ ತೀವ್ರ ತರಾಟೆ

ಹೆದ್ದಾರಿ ಕಾಮಗಾರಿ ವಿಳಂಬ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮೀನುಗಾರ ಮುಖಂಡರಿಂದ ತೀವ್ರ ತರಾಟೆ

- Advertisement -
- Advertisement -

ಉಡುಪಿಯ ಮಲ್ಪೆ ಬಂದರನ್ನು ಸಂಪರ್ಕಿಸುವ ಪ್ರಮುಖ ಕರಾವಳಿ ಬೈಪಾಸ್- ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಮೀನುಗಾರ ಮುಖಂಡರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಕರೆಯಲಾದ ಸಭೆ ಆರಂಭವಾಗುತ್ತಿದ್ದಂತೆ ಹೆದ್ದಾರಿ ನಿರ್ಮಾಣ ವಿಳಂಬ ವಿಷಯವನ್ನು ಪ್ರಸ್ತಾಪಿಸಿದ ಮೀನುಗಾರ ಮುಖಂಡ ಕಿಶೋರ್ ಸುವರ್ಣ, “ಕೋಟ್ಯಾಂತರ ರೂ. ಆದಾಯ ಬರುವ ಮತ್ತು ಲಕ್ಷಾಂತರ ಮಂದಿಗೆ ಉದ್ಯೋಗ ನೀಡುವ ಕೇಂದ್ರವಾಗಿರುವ ಮಲ್ಪೆ ಬಂದರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತ ಸರ್ವೆ, ಅಗಲ, ಉದ್ದ ಮತ್ತು ಪರಿಹಾರದ ಬಗ್ಗೆ ಜನರಿಗೆ ಸಾಕಷ್ಟು ಗೊಂದಲಗಳಿವೆ. ಇದರ ವಿರುದ್ಧ ಹಲವು ಮಂದಿ ಕೋರ್ಟ್‌ಗೆ ಹೋಗಿದ್ದಾರೆ” ಎಂದರು.

“ಇಲ್ಲಿ ಪರಿಹಾರ ಕಾರ್ಯ ಕೂಡ ವೈಜ್ಞಾನಿಕವಾಗಿ ನಡೆದಿಲ್ಲ. ಹಣಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಆದರೆ ಕೋಟ್ಯಾಂತರ ರೂ. ಆದಾಯ ಬರುವ ಈ ರಸ್ತೆಗೆ ಸಂಬಂಧಿಸಿ ಪರಿಹಾರಕ್ಕೆ ಕೇವಲ 50 ಕೋಟಿ ರೂ. ಕೊಡಲು ಹಿಂದೇಟು ಹಾಕುವುದರಲ್ಲಿ ಅರ್ಥ ಇದೆಯೇ?” ಎಂದು ಸಚಿವರ ವಿರುದ್ಧ ಕಿಡಿಕಾರಿದರು.

“ನಾವು ನಿಮ್ಮ ಮೇಲೆ ವಿಶ್ವಾಸ ಇಟ್ಟು ಮತ ಹಾಕಿ, ಗೆಲ್ಲಿಸಿದ್ದೇವೆ. ಆದರೆ ನೀವು ನಮ್ಮ ಮೇಲೆ ವಿಶ್ವಾಸ ಇಟ್ಟಿಲ್ಲ. ನಿಮಗೆ 10 ವರ್ಷಗಳಿಂದ ಮತ ಹಾಕಿದ್ದಕ್ಕೆ ನೀವು ನಮಗೆ ಏನು ಮಾಡಿದ್ದೀರಿ? ರಸ್ತೆಯಲ್ಲಿ ಭೂಮಿ ಕಳೆದುಕೊಳ್ಳುವವರನ್ನು ಸೇರಿಸಿ ಈವರೆಗೆ ಒಂದೇ ಒಂದು ಸಭೆ ಸಂಸದರಾಗಿ ನೀವು ಕರೆದಿಲ್ಲ. ನೀವು ನಮ್ಮ ಜನಪ್ರತಿನಿಧಿ ಅಲ್ಲವೇ? ನಿಮಗೆ ಕರ್ತವ್ಯ ಇಲ್ಲವೇ? ಜನರನ್ನು ಯಾಕೆ ನೀವು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ” ಎಂದು ತರಾಟೆಗೆ ತೆಗೆದುಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದೆ, “ನೀವು Too Much ಮಾತನಾಡಬೇಡಿ, ವೈಯಕ್ತಿಕ ಸಮಸ್ಯೆ ಹೇಳಬೇಡಿ” ಎಂದರು. ಇದರಿಂದ ಮತ್ತಷ್ಟು ಕೆರಳಿದ ಕಿಶೋರ್ ಅವರು, “ನಾನು ಜನರಿಗಾಗಿರುವ ಸಮಸ್ಯೆ ಹೇಳಿದರೆ, ಅದರಲ್ಲಿ ವೈಯಕ್ತಿಕ ಏನು? ಇಲ್ಲಿ ಕುಳಿತಿರುವವರು ಎಲ್ಲರೂ ಸಾಕ್ಷಿ ಇದ್ದಾರೆ ನಾನು ವೈಯುಕ್ತಿಕ ವಿಚಾರ ಮಾತನಾಡಿಲ್ಲ ಎಂದರು. ಈ ನಡುವೆ ವಾಗ್ವಾದ ಜೋರಾಗಿದ್ದರಿಂದ ಮೀನುಗಾರ ಮುಖಂಡನನ್ನು ಪೊಲೀಸರು ಸಮಾಧಾನಿಸಿದ್ದಾರೆ. ಈ ಕುರಿತ ವಿಡಿಯೋ ವೈರಲ್ ಆಗಿದೆ.

ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮೀನುಗಾರ ಮುಖಂಡರ ನಡುವೆ ವಾಗ್ವಾದ ನಡೆಯುತ್ತಿದ್ದಾಗ ಉಡುಪಿಯ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಕೂಡ ಸಭೆಯಲ್ಲಿದ್ದರು. ಅವರು ಯಾವುದೇ ಉತ್ತರವಿಲ್ಲದೆ ಮೌನಕ್ಕೆ ಜಾರಿದ್ದರು. ಒಂದು ಭಾರೀ ಕಿಶೋರ್ ಅವರನ್ನು ಸಮಾಧಾನಪಡಿಸಲು ಯಶ್ಪಾಲ್ ಸುವರ್ಣ ಯತ್ನಿಸಿದರೂ, ಕಿಶೋರ್ ಅವರ ನ್ಯಾಯಯುತ ಪ್ರಶ್ನೆಗಳ ಮುಂದೆ ಅವರಿಗೆ ಉತ್ತರವಿರಲಿಲ್ಲ.

ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಕ್ಷೇತ್ರದ ಅಭಿವೃದ್ದಿಯ ಕಾಳಜಿ ವಹಿಸುತ್ತಿಲ್ಲ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿರುತ್ತವೆ. ಇದಕ್ಕೆ ಪುಷ್ಠಿ ನೀಡುವಂತೆ ಉಡುಪಿಯ ಜನರೇ ತಮ್ಮ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸಂಸದರನ್ನು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಕಿಶೋರ್ ಸುವರ್ಣ ಅವರನ್ನು ಕೊಂಡಾಡಿದ್ದು, ನಮ್ಮ ಜನ ಪ್ರತಿನಿಧಿಗಳನ್ನು ಈ ರೀತಿ ಪ್ರಶ್ನಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಭಾಷೆಯ ಮೇಲೆ ಹಿಡಿತವಿರಲಿ: ಈಶ್ವರಪ್ಪ, ಅನಂತ್ ಕುಮಾರ್ ಹೆಗ್ಡೆ‌ಗೆ ಹೈಕೋರ್ಟ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...