Homeಕರ್ನಾಟಕಹೆದ್ದಾರಿ ಕಾಮಗಾರಿ ವಿಳಂಬ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮೀನುಗಾರ ಮುಖಂಡರಿಂದ ತೀವ್ರ ತರಾಟೆ

ಹೆದ್ದಾರಿ ಕಾಮಗಾರಿ ವಿಳಂಬ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮೀನುಗಾರ ಮುಖಂಡರಿಂದ ತೀವ್ರ ತರಾಟೆ

- Advertisement -
- Advertisement -

ಉಡುಪಿಯ ಮಲ್ಪೆ ಬಂದರನ್ನು ಸಂಪರ್ಕಿಸುವ ಪ್ರಮುಖ ಕರಾವಳಿ ಬೈಪಾಸ್- ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಮೀನುಗಾರ ಮುಖಂಡರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಕರೆಯಲಾದ ಸಭೆ ಆರಂಭವಾಗುತ್ತಿದ್ದಂತೆ ಹೆದ್ದಾರಿ ನಿರ್ಮಾಣ ವಿಳಂಬ ವಿಷಯವನ್ನು ಪ್ರಸ್ತಾಪಿಸಿದ ಮೀನುಗಾರ ಮುಖಂಡ ಕಿಶೋರ್ ಸುವರ್ಣ, “ಕೋಟ್ಯಾಂತರ ರೂ. ಆದಾಯ ಬರುವ ಮತ್ತು ಲಕ್ಷಾಂತರ ಮಂದಿಗೆ ಉದ್ಯೋಗ ನೀಡುವ ಕೇಂದ್ರವಾಗಿರುವ ಮಲ್ಪೆ ಬಂದರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತ ಸರ್ವೆ, ಅಗಲ, ಉದ್ದ ಮತ್ತು ಪರಿಹಾರದ ಬಗ್ಗೆ ಜನರಿಗೆ ಸಾಕಷ್ಟು ಗೊಂದಲಗಳಿವೆ. ಇದರ ವಿರುದ್ಧ ಹಲವು ಮಂದಿ ಕೋರ್ಟ್‌ಗೆ ಹೋಗಿದ್ದಾರೆ” ಎಂದರು.

“ಇಲ್ಲಿ ಪರಿಹಾರ ಕಾರ್ಯ ಕೂಡ ವೈಜ್ಞಾನಿಕವಾಗಿ ನಡೆದಿಲ್ಲ. ಹಣಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಆದರೆ ಕೋಟ್ಯಾಂತರ ರೂ. ಆದಾಯ ಬರುವ ಈ ರಸ್ತೆಗೆ ಸಂಬಂಧಿಸಿ ಪರಿಹಾರಕ್ಕೆ ಕೇವಲ 50 ಕೋಟಿ ರೂ. ಕೊಡಲು ಹಿಂದೇಟು ಹಾಕುವುದರಲ್ಲಿ ಅರ್ಥ ಇದೆಯೇ?” ಎಂದು ಸಚಿವರ ವಿರುದ್ಧ ಕಿಡಿಕಾರಿದರು.

“ನಾವು ನಿಮ್ಮ ಮೇಲೆ ವಿಶ್ವಾಸ ಇಟ್ಟು ಮತ ಹಾಕಿ, ಗೆಲ್ಲಿಸಿದ್ದೇವೆ. ಆದರೆ ನೀವು ನಮ್ಮ ಮೇಲೆ ವಿಶ್ವಾಸ ಇಟ್ಟಿಲ್ಲ. ನಿಮಗೆ 10 ವರ್ಷಗಳಿಂದ ಮತ ಹಾಕಿದ್ದಕ್ಕೆ ನೀವು ನಮಗೆ ಏನು ಮಾಡಿದ್ದೀರಿ? ರಸ್ತೆಯಲ್ಲಿ ಭೂಮಿ ಕಳೆದುಕೊಳ್ಳುವವರನ್ನು ಸೇರಿಸಿ ಈವರೆಗೆ ಒಂದೇ ಒಂದು ಸಭೆ ಸಂಸದರಾಗಿ ನೀವು ಕರೆದಿಲ್ಲ. ನೀವು ನಮ್ಮ ಜನಪ್ರತಿನಿಧಿ ಅಲ್ಲವೇ? ನಿಮಗೆ ಕರ್ತವ್ಯ ಇಲ್ಲವೇ? ಜನರನ್ನು ಯಾಕೆ ನೀವು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ” ಎಂದು ತರಾಟೆಗೆ ತೆಗೆದುಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದೆ, “ನೀವು Too Much ಮಾತನಾಡಬೇಡಿ, ವೈಯಕ್ತಿಕ ಸಮಸ್ಯೆ ಹೇಳಬೇಡಿ” ಎಂದರು. ಇದರಿಂದ ಮತ್ತಷ್ಟು ಕೆರಳಿದ ಕಿಶೋರ್ ಅವರು, “ನಾನು ಜನರಿಗಾಗಿರುವ ಸಮಸ್ಯೆ ಹೇಳಿದರೆ, ಅದರಲ್ಲಿ ವೈಯಕ್ತಿಕ ಏನು? ಇಲ್ಲಿ ಕುಳಿತಿರುವವರು ಎಲ್ಲರೂ ಸಾಕ್ಷಿ ಇದ್ದಾರೆ ನಾನು ವೈಯುಕ್ತಿಕ ವಿಚಾರ ಮಾತನಾಡಿಲ್ಲ ಎಂದರು. ಈ ನಡುವೆ ವಾಗ್ವಾದ ಜೋರಾಗಿದ್ದರಿಂದ ಮೀನುಗಾರ ಮುಖಂಡನನ್ನು ಪೊಲೀಸರು ಸಮಾಧಾನಿಸಿದ್ದಾರೆ. ಈ ಕುರಿತ ವಿಡಿಯೋ ವೈರಲ್ ಆಗಿದೆ.

ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮೀನುಗಾರ ಮುಖಂಡರ ನಡುವೆ ವಾಗ್ವಾದ ನಡೆಯುತ್ತಿದ್ದಾಗ ಉಡುಪಿಯ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಕೂಡ ಸಭೆಯಲ್ಲಿದ್ದರು. ಅವರು ಯಾವುದೇ ಉತ್ತರವಿಲ್ಲದೆ ಮೌನಕ್ಕೆ ಜಾರಿದ್ದರು. ಒಂದು ಭಾರೀ ಕಿಶೋರ್ ಅವರನ್ನು ಸಮಾಧಾನಪಡಿಸಲು ಯಶ್ಪಾಲ್ ಸುವರ್ಣ ಯತ್ನಿಸಿದರೂ, ಕಿಶೋರ್ ಅವರ ನ್ಯಾಯಯುತ ಪ್ರಶ್ನೆಗಳ ಮುಂದೆ ಅವರಿಗೆ ಉತ್ತರವಿರಲಿಲ್ಲ.

ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಕ್ಷೇತ್ರದ ಅಭಿವೃದ್ದಿಯ ಕಾಳಜಿ ವಹಿಸುತ್ತಿಲ್ಲ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿರುತ್ತವೆ. ಇದಕ್ಕೆ ಪುಷ್ಠಿ ನೀಡುವಂತೆ ಉಡುಪಿಯ ಜನರೇ ತಮ್ಮ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸಂಸದರನ್ನು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಕಿಶೋರ್ ಸುವರ್ಣ ಅವರನ್ನು ಕೊಂಡಾಡಿದ್ದು, ನಮ್ಮ ಜನ ಪ್ರತಿನಿಧಿಗಳನ್ನು ಈ ರೀತಿ ಪ್ರಶ್ನಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಭಾಷೆಯ ಮೇಲೆ ಹಿಡಿತವಿರಲಿ: ಈಶ್ವರಪ್ಪ, ಅನಂತ್ ಕುಮಾರ್ ಹೆಗ್ಡೆ‌ಗೆ ಹೈಕೋರ್ಟ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...