Homeಕರ್ನಾಟಕನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

- Advertisement -
- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಮಾಡಿರುವ ಎಡವಟ್ಟುಗಳ ವಿರುದ್ಧ ಬಿಜೆಪಿ ನಾಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ಐವರು ಬಿಜೆಪಿ ನಾಯಕರು ಈವರೆಗೆ ಅಸಮಾಧಾನ ಹೊರಹಾಕಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವರಾದ ವಿ.ಶ್ರೀನಿವಾಸ ಪ್ರಸಾದ್‌, “ಪಠ್ಯಪುಸ್ತಕಕ್ಕೆ ಸಾಕಷ್ಟು ಪರವಿರೋಧ ಬಂದಿದೆ. ಸಮಿತಿ ಎಡವಿದೆ. ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ಶಿಲ್ಪಿ ಎಂಬುದನ್ನು ತೆಗೆದಿರುವುದಾಗಿರಬಹುದು, ಬಸವಣ್ಣನವರ ಬಗ್ಗೆ ಇರಬಹುದು ಇದನ್ನೆಲ್ಲ ಒಪ್ಪಿಕೊಳ್ಳಲೇಬೇಕು. ಇದನ್ನೆಲ್ಲವನ್ನೂ ಪುನರ್‌ ಪರಿಶೀಲನೆ ನಡೆಸುವುದಾಗಿ ಸಿಎಂ ಹೇಳಿದ್ದಾರೆ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರಕ್ಕೆ ಪತ್ರ ಬರೆದಿರುವ ನಂಜನಗೂಡು ಶಾಸಕ ಬಿ.ಹರ್ಷವರ್ದನ್‌, “ಈ ಸಾಲಿನ ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯ ಎಡವಟ್ಟಿನಿಂದಾಗಿ ರಾಜ್ಯದಲ್ಲಿ ಸಾಕಷ್ಟು ಗೊಂದಲಗಳು ಉಂಟಾಗಿದ್ದು, ಪ್ರಸ್ತುತ ಸಿದ್ಧಗೊಂಡಿರುವ ಪಠ್ಯಪುಸ್ತಕಗಳು ಯಾರಿಗೂ ತೃಪ್ತಿ ತಂದಂತಿಲ್ಲ. ಡಾ.ಬಿ.ಆರ್‌.ಅಂಬೇಡ್ಕರ್‌ರವರ ಕುರಿತ ಪಾಠದಲ್ಲಿ ‘ಸಂವಿಧಾನ ಶಿಲ್ಪಿ’ ಎನ್ನುವ ವಿಶೇಷಣವನ್ನು ಕೈಬಿಟ್ಟಿರುವುದು ಅತ್ಯಂತ ಖಂಡನೀಯ. ಆ ಪದವನ್ನು ತೆಗೆಯುವ ಏನಿತ್ತೋ ಗೊತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪಠ್ಯದಲ್ಲಿ ಬಸವಣ್ಣನವರ ಚಿತ್ರಣವೂ ಅವರ ಬದುಕು ಮತ್ತು ಆಶಯಗಳಿಗೆ ತಕ್ಕಂತೆ ಇಲ್ಲ. ಕುವೆಂಪು ಮತ್ತು ಅವರು ರಚಿಸಿರುವ ನಾಡಗೀತೆಗೆ ಪರಿಷ್ಕರಣಾ ಸಮಿತಿ ಅಧ್ಯಕ್ಷರು ಅವಮಾನಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೇ ಟಿಪ್ಪಣಿಗಳಲ್ಲಿ ಕೆಲವರಿಗೆ ಏಕವಚನ ಮತ್ತೆ ಕೆಲವರಿಗೆ ಬಹುವಚನ ಪದ ಬಳಸಿರುವ ಬರವಣಿಗೆಗಳು ಸಹ ಟೀಕೆಗೆ ಒಳಗಾಗಿವೆ. ಪರಿಷ್ಕೃತ ಪಠ್ಯಗಳ ಬಗ್ಗೆ ಕನ್ನಡಪರ ಸಂಘಟನೆಗಳು ದಲಿತಪರ ಸಂಘಟನೆಗಳು, ಮಠಾಧೀಶರು, ಶಿಕ್ಷಣತಜ್ಞರು, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರಿಷ್ಕೃತ ಪಠ್ಯಗಳಲ್ಲಿ ಇರುವ ಲೋಪದೋಷಗಳ ಕುರಿತು ಸಾರ್ವಜನಿಕ ವಲಯದಿಂದಲೂ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿದೆ” ಎಂದು ಉಲ್ಲೇಖಿಸಿದ್ದಾರೆ.

“ನಮ್ಮ ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ಗೊಂದಲದ ಗೂಡಾಗಿರುವ ಈ ಪಠ್ಯಪುಸ್ತಕಗಳನ್ನು ತಡೆಹಿಡಿದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹಳೆಯ ಪಠ್ಯಗಳನ್ನೇ ಮುಂದುವರೆಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಗತ್ಯವಾಗಿರುವ ಕ್ರಮ. ಹಾಗಾಗಿ ಪರಿಷ್ಕರಣಾ ಗೊಂದಲಗಳಿಗೆ ಆಸ್ಪದ ಕಲ್ಪಿಸದೇ ಆದಷ್ಟು ಸರ್ವ ಸಮ್ಮತ ಪಠ್ಯಪುಸ್ತಕಗಳನ್ನು ನೀಡುವ ಮೂಲಕ ಎಲ್ಲಾ ವಿವಾದಗಳಿಗೆ ತೆರೆ ಎಳೆಯಬೇಕಿದೆ” ಎಂದಿದ್ದಾರೆ.

ವಿವಾದದ ಆರಂಭದಲ್ಲೇ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯರಾದ ಅಡಗೂರು ಎಚ್‌.ವಿಶ್ವನಾಥ್‌, “ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞ ಅಲ್ಲ. ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿರುವುದು ದುರಂತ” ಎಂದಿದ್ದರು.

“ಮನಸ್ಸಿಗೆ ಬಹಳ ಬೇಜಾರಾಗುತ್ತಿದೆ. ಪಠ್ಯಪುಸ್ತಕ ಎಂಬುದು ರಾಜಕೀಯ ಸಂಘರ್ಷವಲ್ಲ. ಒಂದು ಸರ್ಕಾರದ ನೀತಿಯ ಮೇಲೆ ಅವುಗಳು ರಚನೆಯಾಗಬಾರದು. ಇನ್ನೊಂದು ಸರ್ಕಾರ ಅವುಗಳನ್ನು ಬದಲಿಸುವುದು ಸರಿಯಲ್ಲ” ಎಂದು ತಿಳಿಸಿದ್ದರು.

“ಇವತ್ತು ನಾವು ಶಿಕ್ಷಣವನ್ನು ಹಾಳು ಮಾಡಿದರೆ ದೇಶವನ್ನು ಹಾಳು ಮಾಡಿದ ಹಾಗೆ ಅರ್ಥ. ಈ ರೋಹಿತ್ ಚಕ್ರತೀರ್ಥ ಎಂಬುವವರು ಯಾರು? ನೀನೇನು ಪ್ರೊಫೆಸರ? ಯಾವ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡಿದ್ದೀಯ? ನೀವು ಸಂಘಪರಿವಾರದ ಕಾರ್ಯಕರ್ತ ಅಷ್ಟೇ” ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದರು.

“ಹೆಡಗೇವಾರ್ ಪಠ್ಯ ಸೇರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಟಿಪ್ಪು ಸುಲ್ತಾನ್‌ಗೂ ಹೆಡಗೇವಾರ್‌ಗೂ ಹೋಲಿಕೆ ಸಾಧ್ಯವಿಲ್ಲ. ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನೆ ಒತ್ತೆ ಇಟ್ಟವನು. ಆತ ಬ್ರೀಟಿಷರ ಎದುರು ಮಂಡಿಯೂರಲಿಲ್ಲ. ಆದರೆ ಹೆಡಗೇವಾರ್ ಯಾರು? ಅವರ ಕೊಡುಗೆಯೇನು? ಆತ ಆರ್‌ಎಸ್‌ಎಸ್‌ ಸ್ಥಾಪಕ ಅಷ್ಟೆ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, “ಸಂವಿಧಾನ ಶಿಲ್ಪಿ ಪದವನ್ನು ಪಠ್ಯದಲ್ಲಿ ಮತ್ತೆ ಹಾಕುವ ಮೂಲಕ ನಮ್ಮ ಸರ್ಕಾರ ಅಂಬೇಡ್ಕರ್‌ ಕುರಿತು ಹೊಂದಿರುವ ಗೌರವ ಮತ್ತು ಬದ್ಧತೆಯನ್ನು ಸಾಬೀತು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದ ನಮ್ಮ ಸಂವಿಧಾನ ಎಂಬ ಪಾಠದಲ್ಲಿ ಡಾ.ಅಂಬೇಡ್ಕರ್‌ ಅವರ ಆತ್ಮವೇ ಆಗಿರುವ ಸಂವಿಧಾನ ಶಿಲ್ಪಿ ಎಂಬ ನಾಮಾಂಕಿತವನ್ನು ಕೈಬಿಟ್ಟಿದ್ದು ವಿಕೃತ ನಡೆ. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಈ ಪ್ರಮಾದವನ್ನು ಸರಿಪಡಿಸಿ ಮುದ್ರಿಸುವುದಾಗಿ ಶಿಕ್ಷಣ ಸಚಿವರು ಹೇಳಿರುವುದು ಅಭಿನಂದನೀಯ” ಎಂದಿದ್ದಾರೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಜುಗೌಡ ಪ್ರತಿಕ್ರಿಯೆ ನೀಡಿದ್ದು, “6ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದ ಭಾಗ-2ರ ಪುಟ ಸಂಖ್ಯೆ 82ರಲ್ಲಿ ಸುರಪುರ ನಾಯಕರು ಶೀರ್ಷಿಕೆಯಡಿ ಸುರಪುರ ರಾಜ ವೆಂಕಟಪ್ಪ ನಾಯಕರ ಭಾವಚಿತ್ರವನ್ನು ಒಳಗೊಂಡ ವಿಸ್ತಾರವಾದ ಒಂದು ಪುಟದ ಪಠ್ಯವು ಇತ್ತು. ಶೀರ್ಷಿಕೆ ಮತ್ತು ವೆಂಕಟಪ್ಪ ನಾಯಕರ ಚಿತ್ರ ತೆಗೆದುಹಾಕಿ ಪಠ್ಯ ವಿಷಯ ಕಡಿತ ಮಾಡಿದ್ದು ಬೇಸರದ ಸಂಗತಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...