Homeಕರ್ನಾಟಕನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

- Advertisement -
- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಮಾಡಿರುವ ಎಡವಟ್ಟುಗಳ ವಿರುದ್ಧ ಬಿಜೆಪಿ ನಾಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ಐವರು ಬಿಜೆಪಿ ನಾಯಕರು ಈವರೆಗೆ ಅಸಮಾಧಾನ ಹೊರಹಾಕಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವರಾದ ವಿ.ಶ್ರೀನಿವಾಸ ಪ್ರಸಾದ್‌, “ಪಠ್ಯಪುಸ್ತಕಕ್ಕೆ ಸಾಕಷ್ಟು ಪರವಿರೋಧ ಬಂದಿದೆ. ಸಮಿತಿ ಎಡವಿದೆ. ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ಶಿಲ್ಪಿ ಎಂಬುದನ್ನು ತೆಗೆದಿರುವುದಾಗಿರಬಹುದು, ಬಸವಣ್ಣನವರ ಬಗ್ಗೆ ಇರಬಹುದು ಇದನ್ನೆಲ್ಲ ಒಪ್ಪಿಕೊಳ್ಳಲೇಬೇಕು. ಇದನ್ನೆಲ್ಲವನ್ನೂ ಪುನರ್‌ ಪರಿಶೀಲನೆ ನಡೆಸುವುದಾಗಿ ಸಿಎಂ ಹೇಳಿದ್ದಾರೆ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರಕ್ಕೆ ಪತ್ರ ಬರೆದಿರುವ ನಂಜನಗೂಡು ಶಾಸಕ ಬಿ.ಹರ್ಷವರ್ದನ್‌, “ಈ ಸಾಲಿನ ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯ ಎಡವಟ್ಟಿನಿಂದಾಗಿ ರಾಜ್ಯದಲ್ಲಿ ಸಾಕಷ್ಟು ಗೊಂದಲಗಳು ಉಂಟಾಗಿದ್ದು, ಪ್ರಸ್ತುತ ಸಿದ್ಧಗೊಂಡಿರುವ ಪಠ್ಯಪುಸ್ತಕಗಳು ಯಾರಿಗೂ ತೃಪ್ತಿ ತಂದಂತಿಲ್ಲ. ಡಾ.ಬಿ.ಆರ್‌.ಅಂಬೇಡ್ಕರ್‌ರವರ ಕುರಿತ ಪಾಠದಲ್ಲಿ ‘ಸಂವಿಧಾನ ಶಿಲ್ಪಿ’ ಎನ್ನುವ ವಿಶೇಷಣವನ್ನು ಕೈಬಿಟ್ಟಿರುವುದು ಅತ್ಯಂತ ಖಂಡನೀಯ. ಆ ಪದವನ್ನು ತೆಗೆಯುವ ಏನಿತ್ತೋ ಗೊತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪಠ್ಯದಲ್ಲಿ ಬಸವಣ್ಣನವರ ಚಿತ್ರಣವೂ ಅವರ ಬದುಕು ಮತ್ತು ಆಶಯಗಳಿಗೆ ತಕ್ಕಂತೆ ಇಲ್ಲ. ಕುವೆಂಪು ಮತ್ತು ಅವರು ರಚಿಸಿರುವ ನಾಡಗೀತೆಗೆ ಪರಿಷ್ಕರಣಾ ಸಮಿತಿ ಅಧ್ಯಕ್ಷರು ಅವಮಾನಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೇ ಟಿಪ್ಪಣಿಗಳಲ್ಲಿ ಕೆಲವರಿಗೆ ಏಕವಚನ ಮತ್ತೆ ಕೆಲವರಿಗೆ ಬಹುವಚನ ಪದ ಬಳಸಿರುವ ಬರವಣಿಗೆಗಳು ಸಹ ಟೀಕೆಗೆ ಒಳಗಾಗಿವೆ. ಪರಿಷ್ಕೃತ ಪಠ್ಯಗಳ ಬಗ್ಗೆ ಕನ್ನಡಪರ ಸಂಘಟನೆಗಳು ದಲಿತಪರ ಸಂಘಟನೆಗಳು, ಮಠಾಧೀಶರು, ಶಿಕ್ಷಣತಜ್ಞರು, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರಿಷ್ಕೃತ ಪಠ್ಯಗಳಲ್ಲಿ ಇರುವ ಲೋಪದೋಷಗಳ ಕುರಿತು ಸಾರ್ವಜನಿಕ ವಲಯದಿಂದಲೂ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿದೆ” ಎಂದು ಉಲ್ಲೇಖಿಸಿದ್ದಾರೆ.

“ನಮ್ಮ ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ಗೊಂದಲದ ಗೂಡಾಗಿರುವ ಈ ಪಠ್ಯಪುಸ್ತಕಗಳನ್ನು ತಡೆಹಿಡಿದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹಳೆಯ ಪಠ್ಯಗಳನ್ನೇ ಮುಂದುವರೆಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಗತ್ಯವಾಗಿರುವ ಕ್ರಮ. ಹಾಗಾಗಿ ಪರಿಷ್ಕರಣಾ ಗೊಂದಲಗಳಿಗೆ ಆಸ್ಪದ ಕಲ್ಪಿಸದೇ ಆದಷ್ಟು ಸರ್ವ ಸಮ್ಮತ ಪಠ್ಯಪುಸ್ತಕಗಳನ್ನು ನೀಡುವ ಮೂಲಕ ಎಲ್ಲಾ ವಿವಾದಗಳಿಗೆ ತೆರೆ ಎಳೆಯಬೇಕಿದೆ” ಎಂದಿದ್ದಾರೆ.

ವಿವಾದದ ಆರಂಭದಲ್ಲೇ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯರಾದ ಅಡಗೂರು ಎಚ್‌.ವಿಶ್ವನಾಥ್‌, “ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞ ಅಲ್ಲ. ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿರುವುದು ದುರಂತ” ಎಂದಿದ್ದರು.

“ಮನಸ್ಸಿಗೆ ಬಹಳ ಬೇಜಾರಾಗುತ್ತಿದೆ. ಪಠ್ಯಪುಸ್ತಕ ಎಂಬುದು ರಾಜಕೀಯ ಸಂಘರ್ಷವಲ್ಲ. ಒಂದು ಸರ್ಕಾರದ ನೀತಿಯ ಮೇಲೆ ಅವುಗಳು ರಚನೆಯಾಗಬಾರದು. ಇನ್ನೊಂದು ಸರ್ಕಾರ ಅವುಗಳನ್ನು ಬದಲಿಸುವುದು ಸರಿಯಲ್ಲ” ಎಂದು ತಿಳಿಸಿದ್ದರು.

“ಇವತ್ತು ನಾವು ಶಿಕ್ಷಣವನ್ನು ಹಾಳು ಮಾಡಿದರೆ ದೇಶವನ್ನು ಹಾಳು ಮಾಡಿದ ಹಾಗೆ ಅರ್ಥ. ಈ ರೋಹಿತ್ ಚಕ್ರತೀರ್ಥ ಎಂಬುವವರು ಯಾರು? ನೀನೇನು ಪ್ರೊಫೆಸರ? ಯಾವ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡಿದ್ದೀಯ? ನೀವು ಸಂಘಪರಿವಾರದ ಕಾರ್ಯಕರ್ತ ಅಷ್ಟೇ” ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದರು.

“ಹೆಡಗೇವಾರ್ ಪಠ್ಯ ಸೇರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಟಿಪ್ಪು ಸುಲ್ತಾನ್‌ಗೂ ಹೆಡಗೇವಾರ್‌ಗೂ ಹೋಲಿಕೆ ಸಾಧ್ಯವಿಲ್ಲ. ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನೆ ಒತ್ತೆ ಇಟ್ಟವನು. ಆತ ಬ್ರೀಟಿಷರ ಎದುರು ಮಂಡಿಯೂರಲಿಲ್ಲ. ಆದರೆ ಹೆಡಗೇವಾರ್ ಯಾರು? ಅವರ ಕೊಡುಗೆಯೇನು? ಆತ ಆರ್‌ಎಸ್‌ಎಸ್‌ ಸ್ಥಾಪಕ ಅಷ್ಟೆ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, “ಸಂವಿಧಾನ ಶಿಲ್ಪಿ ಪದವನ್ನು ಪಠ್ಯದಲ್ಲಿ ಮತ್ತೆ ಹಾಕುವ ಮೂಲಕ ನಮ್ಮ ಸರ್ಕಾರ ಅಂಬೇಡ್ಕರ್‌ ಕುರಿತು ಹೊಂದಿರುವ ಗೌರವ ಮತ್ತು ಬದ್ಧತೆಯನ್ನು ಸಾಬೀತು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದ ನಮ್ಮ ಸಂವಿಧಾನ ಎಂಬ ಪಾಠದಲ್ಲಿ ಡಾ.ಅಂಬೇಡ್ಕರ್‌ ಅವರ ಆತ್ಮವೇ ಆಗಿರುವ ಸಂವಿಧಾನ ಶಿಲ್ಪಿ ಎಂಬ ನಾಮಾಂಕಿತವನ್ನು ಕೈಬಿಟ್ಟಿದ್ದು ವಿಕೃತ ನಡೆ. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಈ ಪ್ರಮಾದವನ್ನು ಸರಿಪಡಿಸಿ ಮುದ್ರಿಸುವುದಾಗಿ ಶಿಕ್ಷಣ ಸಚಿವರು ಹೇಳಿರುವುದು ಅಭಿನಂದನೀಯ” ಎಂದಿದ್ದಾರೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಜುಗೌಡ ಪ್ರತಿಕ್ರಿಯೆ ನೀಡಿದ್ದು, “6ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದ ಭಾಗ-2ರ ಪುಟ ಸಂಖ್ಯೆ 82ರಲ್ಲಿ ಸುರಪುರ ನಾಯಕರು ಶೀರ್ಷಿಕೆಯಡಿ ಸುರಪುರ ರಾಜ ವೆಂಕಟಪ್ಪ ನಾಯಕರ ಭಾವಚಿತ್ರವನ್ನು ಒಳಗೊಂಡ ವಿಸ್ತಾರವಾದ ಒಂದು ಪುಟದ ಪಠ್ಯವು ಇತ್ತು. ಶೀರ್ಷಿಕೆ ಮತ್ತು ವೆಂಕಟಪ್ಪ ನಾಯಕರ ಚಿತ್ರ ತೆಗೆದುಹಾಕಿ ಪಠ್ಯ ವಿಷಯ ಕಡಿತ ಮಾಡಿದ್ದು ಬೇಸರದ ಸಂಗತಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....