Homeಕರ್ನಾಟಕನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

- Advertisement -
- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಮಾಡಿರುವ ಎಡವಟ್ಟುಗಳ ವಿರುದ್ಧ ಬಿಜೆಪಿ ನಾಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ಐವರು ಬಿಜೆಪಿ ನಾಯಕರು ಈವರೆಗೆ ಅಸಮಾಧಾನ ಹೊರಹಾಕಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವರಾದ ವಿ.ಶ್ರೀನಿವಾಸ ಪ್ರಸಾದ್‌, “ಪಠ್ಯಪುಸ್ತಕಕ್ಕೆ ಸಾಕಷ್ಟು ಪರವಿರೋಧ ಬಂದಿದೆ. ಸಮಿತಿ ಎಡವಿದೆ. ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ಶಿಲ್ಪಿ ಎಂಬುದನ್ನು ತೆಗೆದಿರುವುದಾಗಿರಬಹುದು, ಬಸವಣ್ಣನವರ ಬಗ್ಗೆ ಇರಬಹುದು ಇದನ್ನೆಲ್ಲ ಒಪ್ಪಿಕೊಳ್ಳಲೇಬೇಕು. ಇದನ್ನೆಲ್ಲವನ್ನೂ ಪುನರ್‌ ಪರಿಶೀಲನೆ ನಡೆಸುವುದಾಗಿ ಸಿಎಂ ಹೇಳಿದ್ದಾರೆ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರಕ್ಕೆ ಪತ್ರ ಬರೆದಿರುವ ನಂಜನಗೂಡು ಶಾಸಕ ಬಿ.ಹರ್ಷವರ್ದನ್‌, “ಈ ಸಾಲಿನ ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯ ಎಡವಟ್ಟಿನಿಂದಾಗಿ ರಾಜ್ಯದಲ್ಲಿ ಸಾಕಷ್ಟು ಗೊಂದಲಗಳು ಉಂಟಾಗಿದ್ದು, ಪ್ರಸ್ತುತ ಸಿದ್ಧಗೊಂಡಿರುವ ಪಠ್ಯಪುಸ್ತಕಗಳು ಯಾರಿಗೂ ತೃಪ್ತಿ ತಂದಂತಿಲ್ಲ. ಡಾ.ಬಿ.ಆರ್‌.ಅಂಬೇಡ್ಕರ್‌ರವರ ಕುರಿತ ಪಾಠದಲ್ಲಿ ‘ಸಂವಿಧಾನ ಶಿಲ್ಪಿ’ ಎನ್ನುವ ವಿಶೇಷಣವನ್ನು ಕೈಬಿಟ್ಟಿರುವುದು ಅತ್ಯಂತ ಖಂಡನೀಯ. ಆ ಪದವನ್ನು ತೆಗೆಯುವ ಏನಿತ್ತೋ ಗೊತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪಠ್ಯದಲ್ಲಿ ಬಸವಣ್ಣನವರ ಚಿತ್ರಣವೂ ಅವರ ಬದುಕು ಮತ್ತು ಆಶಯಗಳಿಗೆ ತಕ್ಕಂತೆ ಇಲ್ಲ. ಕುವೆಂಪು ಮತ್ತು ಅವರು ರಚಿಸಿರುವ ನಾಡಗೀತೆಗೆ ಪರಿಷ್ಕರಣಾ ಸಮಿತಿ ಅಧ್ಯಕ್ಷರು ಅವಮಾನಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೇ ಟಿಪ್ಪಣಿಗಳಲ್ಲಿ ಕೆಲವರಿಗೆ ಏಕವಚನ ಮತ್ತೆ ಕೆಲವರಿಗೆ ಬಹುವಚನ ಪದ ಬಳಸಿರುವ ಬರವಣಿಗೆಗಳು ಸಹ ಟೀಕೆಗೆ ಒಳಗಾಗಿವೆ. ಪರಿಷ್ಕೃತ ಪಠ್ಯಗಳ ಬಗ್ಗೆ ಕನ್ನಡಪರ ಸಂಘಟನೆಗಳು ದಲಿತಪರ ಸಂಘಟನೆಗಳು, ಮಠಾಧೀಶರು, ಶಿಕ್ಷಣತಜ್ಞರು, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರಿಷ್ಕೃತ ಪಠ್ಯಗಳಲ್ಲಿ ಇರುವ ಲೋಪದೋಷಗಳ ಕುರಿತು ಸಾರ್ವಜನಿಕ ವಲಯದಿಂದಲೂ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿದೆ” ಎಂದು ಉಲ್ಲೇಖಿಸಿದ್ದಾರೆ.

“ನಮ್ಮ ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ಗೊಂದಲದ ಗೂಡಾಗಿರುವ ಈ ಪಠ್ಯಪುಸ್ತಕಗಳನ್ನು ತಡೆಹಿಡಿದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹಳೆಯ ಪಠ್ಯಗಳನ್ನೇ ಮುಂದುವರೆಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಗತ್ಯವಾಗಿರುವ ಕ್ರಮ. ಹಾಗಾಗಿ ಪರಿಷ್ಕರಣಾ ಗೊಂದಲಗಳಿಗೆ ಆಸ್ಪದ ಕಲ್ಪಿಸದೇ ಆದಷ್ಟು ಸರ್ವ ಸಮ್ಮತ ಪಠ್ಯಪುಸ್ತಕಗಳನ್ನು ನೀಡುವ ಮೂಲಕ ಎಲ್ಲಾ ವಿವಾದಗಳಿಗೆ ತೆರೆ ಎಳೆಯಬೇಕಿದೆ” ಎಂದಿದ್ದಾರೆ.

ವಿವಾದದ ಆರಂಭದಲ್ಲೇ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯರಾದ ಅಡಗೂರು ಎಚ್‌.ವಿಶ್ವನಾಥ್‌, “ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞ ಅಲ್ಲ. ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿರುವುದು ದುರಂತ” ಎಂದಿದ್ದರು.

“ಮನಸ್ಸಿಗೆ ಬಹಳ ಬೇಜಾರಾಗುತ್ತಿದೆ. ಪಠ್ಯಪುಸ್ತಕ ಎಂಬುದು ರಾಜಕೀಯ ಸಂಘರ್ಷವಲ್ಲ. ಒಂದು ಸರ್ಕಾರದ ನೀತಿಯ ಮೇಲೆ ಅವುಗಳು ರಚನೆಯಾಗಬಾರದು. ಇನ್ನೊಂದು ಸರ್ಕಾರ ಅವುಗಳನ್ನು ಬದಲಿಸುವುದು ಸರಿಯಲ್ಲ” ಎಂದು ತಿಳಿಸಿದ್ದರು.

“ಇವತ್ತು ನಾವು ಶಿಕ್ಷಣವನ್ನು ಹಾಳು ಮಾಡಿದರೆ ದೇಶವನ್ನು ಹಾಳು ಮಾಡಿದ ಹಾಗೆ ಅರ್ಥ. ಈ ರೋಹಿತ್ ಚಕ್ರತೀರ್ಥ ಎಂಬುವವರು ಯಾರು? ನೀನೇನು ಪ್ರೊಫೆಸರ? ಯಾವ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡಿದ್ದೀಯ? ನೀವು ಸಂಘಪರಿವಾರದ ಕಾರ್ಯಕರ್ತ ಅಷ್ಟೇ” ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದರು.

“ಹೆಡಗೇವಾರ್ ಪಠ್ಯ ಸೇರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಟಿಪ್ಪು ಸುಲ್ತಾನ್‌ಗೂ ಹೆಡಗೇವಾರ್‌ಗೂ ಹೋಲಿಕೆ ಸಾಧ್ಯವಿಲ್ಲ. ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನೆ ಒತ್ತೆ ಇಟ್ಟವನು. ಆತ ಬ್ರೀಟಿಷರ ಎದುರು ಮಂಡಿಯೂರಲಿಲ್ಲ. ಆದರೆ ಹೆಡಗೇವಾರ್ ಯಾರು? ಅವರ ಕೊಡುಗೆಯೇನು? ಆತ ಆರ್‌ಎಸ್‌ಎಸ್‌ ಸ್ಥಾಪಕ ಅಷ್ಟೆ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, “ಸಂವಿಧಾನ ಶಿಲ್ಪಿ ಪದವನ್ನು ಪಠ್ಯದಲ್ಲಿ ಮತ್ತೆ ಹಾಕುವ ಮೂಲಕ ನಮ್ಮ ಸರ್ಕಾರ ಅಂಬೇಡ್ಕರ್‌ ಕುರಿತು ಹೊಂದಿರುವ ಗೌರವ ಮತ್ತು ಬದ್ಧತೆಯನ್ನು ಸಾಬೀತು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದ ನಮ್ಮ ಸಂವಿಧಾನ ಎಂಬ ಪಾಠದಲ್ಲಿ ಡಾ.ಅಂಬೇಡ್ಕರ್‌ ಅವರ ಆತ್ಮವೇ ಆಗಿರುವ ಸಂವಿಧಾನ ಶಿಲ್ಪಿ ಎಂಬ ನಾಮಾಂಕಿತವನ್ನು ಕೈಬಿಟ್ಟಿದ್ದು ವಿಕೃತ ನಡೆ. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಈ ಪ್ರಮಾದವನ್ನು ಸರಿಪಡಿಸಿ ಮುದ್ರಿಸುವುದಾಗಿ ಶಿಕ್ಷಣ ಸಚಿವರು ಹೇಳಿರುವುದು ಅಭಿನಂದನೀಯ” ಎಂದಿದ್ದಾರೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಜುಗೌಡ ಪ್ರತಿಕ್ರಿಯೆ ನೀಡಿದ್ದು, “6ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದ ಭಾಗ-2ರ ಪುಟ ಸಂಖ್ಯೆ 82ರಲ್ಲಿ ಸುರಪುರ ನಾಯಕರು ಶೀರ್ಷಿಕೆಯಡಿ ಸುರಪುರ ರಾಜ ವೆಂಕಟಪ್ಪ ನಾಯಕರ ಭಾವಚಿತ್ರವನ್ನು ಒಳಗೊಂಡ ವಿಸ್ತಾರವಾದ ಒಂದು ಪುಟದ ಪಠ್ಯವು ಇತ್ತು. ಶೀರ್ಷಿಕೆ ಮತ್ತು ವೆಂಕಟಪ್ಪ ನಾಯಕರ ಚಿತ್ರ ತೆಗೆದುಹಾಕಿ ಪಠ್ಯ ವಿಷಯ ಕಡಿತ ಮಾಡಿದ್ದು ಬೇಸರದ ಸಂಗತಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...