Homeಮುಖಪುಟಐದು ಮಂದಿಯನ್ನು ವಿದೇಶಿಗರು ಎಂದ ಅಸ್ಸಾಂ ಸರ್ಕಾರ : 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ

ಐದು ಮಂದಿಯನ್ನು ವಿದೇಶಿಗರು ಎಂದ ಅಸ್ಸಾಂ ಸರ್ಕಾರ : 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ

- Advertisement -
- Advertisement -

ಅಸ್ಸಾಂನ ಸೋನಿತ್‌ಪುರ ಜಿಲ್ಲಾಡಳಿತವು ಬುಧವಾರ (ನವೆಂಬರ್ 19) ಐದು ಮಂದಿಯನ್ನು ವಿದೇಶಿಯರು ಎಂದು ಘೋಷಿಸಿದ್ದು, 24 ಗಂಟೆಯೊಳಗೆ ಭಾರತ ತೊರೆಯುವಂತೆ ಅವರಿಗೆ ಆದೇಶಿಸಿದೆ.

ಸೋನಿತ್‌ಪುರ ಜಿಲ್ಲೆಯ ಧೋಬೋಕಟಾ ಗ್ರಾಮದ ಐವರು ನಿವಾಸಿಗಳಾದ ಹನುಫಾ, ಮರಿಯಮ್ ನೆಸ್ಸಾ, ಫಾತೆಮಾ, ಮೊನೊವಾರಾ ಮತ್ತು ಅಮ್ಜದ್ ಅಲಿ, ಇವರಿಗೆ 1950ರ ಅಸ್ಸಾಂನಿಂದ ವಲಸಿಗರನ್ನು ಹೊರಹಾಕುವ ಕಾಯ್ದೆಯಡಿ ದೇಶ ತೊರೆಯಲು ಸೂಚಿಸಲಾಗಿದೆ.

ತಕ್ಷಣಕ್ಕೆ ಅಸ್ಸಾಂನಿಂದ ಹೊರ ಹೋಗುವಂತೆ ಆದೇಶಿಸಲಾಗಿದೆ. ಅವರು ಭಾರತೀಯ ಪ್ರಜೆಗಳಲ್ಲ ಎಂಬ ನೆಲೆಯಲ್ಲಿ ಈ ಆದೇಶ ನೀಡಲಾಗಿದೆ. ಹಾಗಾಗಿ, ಅವರು ದೇಶದ ಇತರ ರಾಜ್ಯಗಳಲ್ಲೂ ವಾಸಿಸಲು ಸಮಸ್ಯೆಯಾಗಲಿದೆ. ಭಾರತ ತೊರೆಯುವ ಆಯ್ಕೆ ಮಾತ್ರ ಉಳಿದಿದೆ.

ಅಸ್ಸಾಂ ಸಚಿವ ಸಂಪುಟ 2025ರ ಸೆಪ್ಟೆಂಬರ್ 9ರಂದು 1950ರ ಅಸ್ಸಾಂ ವಲಸಿಗರ ಗಡಿಪಾರು ಕಾಯ್ದೆಯಡಿಯಲ್ಲಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು (ಎಸ್‌ಒಪಿ) ರೂಪಿಸಲು ಅನುಮೋದನೆ ನೀಡಿದೆ. ಇದು ವಿದೇಶಿಯರ ನ್ಯಾಯಮಂಡಳಿಗಳನ್ನು ಬೈಪಾಸ್ ಮಾಡುವ ಮೂಲಕ ರಾಜ್ಯದಿಂದ ‘ಅಕ್ರಮ ವಲಸಿಗರನ್ನು’ ಹೊರಹಾಕಲು ಜಿಲ್ಲಾಧಿಕಾರಿ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರ ನೀಡುತ್ತದೆ.

ಇದಕ್ಕೂ ಮೊದಲು, ದಾಖಲೆರಹಿತ ವಲಸಿಗರಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿದೇಶಿಯರ ನ್ಯಾಯಮಂಡಳಿಗಳು ನಿರ್ವಹಿಸುತ್ತಿದ್ದವು.

1950ರ ಕಾಯ್ದೆಯನ್ನು ಬಳಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಅನುಮೋದಿಸಲಾಗಿದೆ. ವಿದೇಶಿಯರ ನ್ಯಾಯಮಂಡಳಿಗಳ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ಸಿಎಂ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದರು.

“ಘೋಷಿತ ವಿದೇಶಿಯರಾಗಿರುವುದರಿಂದ, ಭಾರತ/ಅಸ್ಸಾಂನಲ್ಲಿ ನಿಮ್ಮ ಉಪಸ್ಥಿತಿಯು ಸಾರ್ವಜನಿಕರ ಹಿತಾಸಕ್ತಿಗೆ ಮತ್ತು ರಾಜ್ಯದ ಆಂತರಿಕ ಭದ್ರತೆಗೆ ಹಾನಿಕಾರಕವಾಗಿದೆ” ಎಂದು ಮಂಗಳವಾರ (ನವೆಂಬರ್ 18) ಹೊರಡಿಸಲಾದ ನೋಟಿಸ್‌ನಲ್ಲಿ ಸೋನಿತ್‌ಪುರ ಜಿಲ್ಲಾಧಿಕಾರಿ ಆನಂದ ಕುಮಾರ್ ದಾಸ್ ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

2006ರಲ್ಲಿ ತೇಜ್‌ಪುರ ಪೊಲೀಸ್ ವರಿಷ್ಠಾಧಿಕಾರಿ (ಗಡಿ) ದಾಖಲಿಸಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಸೋನಿತ್‌ಪುರ ವಿದೇಶಿಯರ ನ್ಯಾಯಮಂಡಳಿ ಅಕ್ಟೋಬರ್ 24ರಂದು ಈ ಐವರು ವ್ಯಕ್ತಿಗಳನ್ನು ವಿದೇಶಿ ಪ್ರಜೆಗಳೆಂದು ಘೋಷಿಸಿತ್ತು.

ಧುಬ್ರಿ, ಶ್ರೀಭೂಮಿ ಅಥವಾ ದಕ್ಷಿಣ ಸಲ್ಮಾರಾ-ಮಂಕಚಾರ್ ಮಾರ್ಗಗಳ ಮೂಲಕ ರಾಜ್ಯವನ್ನು ತೊರೆಯುವಂತೆ ಜಿಲ್ಲಾಧಿಕಾರಿ ಆನಂದ ಕುಮಾರ್ ದಾಸ್ ಐದು ಮಂದಿಗೂ ನಿರ್ದೇಶಿಸಿದ್ದಾರೆ.

ಮತದಾರರ ಪಟ್ಟಿಯಿಂದ ಐದು ಮಂದಿಯ ಹೆಸರುಗಳನ್ನು ಅಳಿಸಲು, ಅವರ ಪಡಿತರ ಚೀಟಿಗಳನ್ನು ರದ್ದುಗೊಳಿಸಲು, ಆಧಾರ್ ಕಾರ್ಡ್‌ಗಳನ್ನು ಸ್ಥಗಿತಗೊಳಿಸಲು ಅಥವಾ ರದ್ದುಗೊಳಿಸಲು ಮತ್ತು ಎಲ್ಲಾ ಸರ್ಕಾರಿ ಯೋಜನೆಗಳಿಂದ ಅವರನ್ನು ತೆಗೆದುಹಾಕಲು ನೋಟಿಸ್‌ನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಆದೇಶ ಪಾಲಿಸರು ಐವರು ವಿಫಲವಾದರೆ, 1950ರ ಕಾಯ್ದೆಯಡಿಯಲ್ಲಿ ಅವರನ್ನು ಅಸ್ಸಾಂನಿಂದ ಹೊರಹಾಕಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುವ ಅರೆ-ನ್ಯಾಯಾಂಗ ಸಂಸ್ಥೆಗಳಾಗಿವೆ. ಆದಾಗ್ಯೂ, ನ್ಯಾಯಮಂಡಳಿಗಳು ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳನ್ನು ಹೊಂದಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಗಳ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎನ್ನಲಾಗುತ್ತಿದೆ.

ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನದ ಪ್ರಕಾರ, ಒಬ್ಬ ವ್ಯಕ್ತಿಯು ‘ಅಕ್ರಮ ವಲಸಿಗ’ ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಥವಾ ಇತರ ಮೂಲಗಳಿಂದ ಜಿಲ್ಲಾಧಿಕಾರಿಗೆ ಮಾಹಿತಿ ಬಂದರೆ, ಅಧಿಕಾರಿಯು 10 ದಿನಗಳಲ್ಲಿ ಆ ವ್ಯಕ್ತಿಗೆ ತನ್ನ ಪೌರತ್ವದ ಪುರಾವೆಗಳನ್ನು ಒದಗಿಸುವಂತೆ ನಿರ್ದೇಶಿಸಬೇಕು.

ಸಲ್ಲಿಸಿದ ಪುರಾವೆಗಳು ತೃಪ್ತಿಕರವಾಗಿಲ್ಲ ಎಂದು ಜಿಲ್ಲಾಧಿಕಾರಿ ಕಂಡುಕೊಂಡರೆ, ಅವರು 1950ರ ಕಾಯ್ದೆಯನ್ನು ಅನ್ವಯಿಸುವ ಮೂಲಕ, ದಾಖಲೆರಹಿತ ವಲಸಿಗರನ್ನು ಅಸ್ಸಾಂನಿಂದ 24 ಗಂಟೆಗಳ ಕಾಲಾವಕಾಶ ನೀಡುವ ಮೂಲಕ ಮತ್ತು ನಿರ್ದಿಷ್ಟಪಡಿಸಿದ ಮಾರ್ಗದ ಮೂಲಕ ಹೊರದಬ್ಬುವ ಆದೇಶವನ್ನು ಹೊರಡಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...