Homeಮುಖಪುಟಐದು ಮಂದಿಯನ್ನು ವಿದೇಶಿಗರು ಎಂದ ಅಸ್ಸಾಂ ಸರ್ಕಾರ : 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ

ಐದು ಮಂದಿಯನ್ನು ವಿದೇಶಿಗರು ಎಂದ ಅಸ್ಸಾಂ ಸರ್ಕಾರ : 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ

- Advertisement -
- Advertisement -

ಅಸ್ಸಾಂನ ಸೋನಿತ್‌ಪುರ ಜಿಲ್ಲಾಡಳಿತವು ಬುಧವಾರ (ನವೆಂಬರ್ 19) ಐದು ಮಂದಿಯನ್ನು ವಿದೇಶಿಯರು ಎಂದು ಘೋಷಿಸಿದ್ದು, 24 ಗಂಟೆಯೊಳಗೆ ಭಾರತ ತೊರೆಯುವಂತೆ ಅವರಿಗೆ ಆದೇಶಿಸಿದೆ.

ಸೋನಿತ್‌ಪುರ ಜಿಲ್ಲೆಯ ಧೋಬೋಕಟಾ ಗ್ರಾಮದ ಐವರು ನಿವಾಸಿಗಳಾದ ಹನುಫಾ, ಮರಿಯಮ್ ನೆಸ್ಸಾ, ಫಾತೆಮಾ, ಮೊನೊವಾರಾ ಮತ್ತು ಅಮ್ಜದ್ ಅಲಿ, ಇವರಿಗೆ 1950ರ ಅಸ್ಸಾಂನಿಂದ ವಲಸಿಗರನ್ನು ಹೊರಹಾಕುವ ಕಾಯ್ದೆಯಡಿ ದೇಶ ತೊರೆಯಲು ಸೂಚಿಸಲಾಗಿದೆ.

ತಕ್ಷಣಕ್ಕೆ ಅಸ್ಸಾಂನಿಂದ ಹೊರ ಹೋಗುವಂತೆ ಆದೇಶಿಸಲಾಗಿದೆ. ಅವರು ಭಾರತೀಯ ಪ್ರಜೆಗಳಲ್ಲ ಎಂಬ ನೆಲೆಯಲ್ಲಿ ಈ ಆದೇಶ ನೀಡಲಾಗಿದೆ. ಹಾಗಾಗಿ, ಅವರು ದೇಶದ ಇತರ ರಾಜ್ಯಗಳಲ್ಲೂ ವಾಸಿಸಲು ಸಮಸ್ಯೆಯಾಗಲಿದೆ. ಭಾರತ ತೊರೆಯುವ ಆಯ್ಕೆ ಮಾತ್ರ ಉಳಿದಿದೆ.

ಅಸ್ಸಾಂ ಸಚಿವ ಸಂಪುಟ 2025ರ ಸೆಪ್ಟೆಂಬರ್ 9ರಂದು 1950ರ ಅಸ್ಸಾಂ ವಲಸಿಗರ ಗಡಿಪಾರು ಕಾಯ್ದೆಯಡಿಯಲ್ಲಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು (ಎಸ್‌ಒಪಿ) ರೂಪಿಸಲು ಅನುಮೋದನೆ ನೀಡಿದೆ. ಇದು ವಿದೇಶಿಯರ ನ್ಯಾಯಮಂಡಳಿಗಳನ್ನು ಬೈಪಾಸ್ ಮಾಡುವ ಮೂಲಕ ರಾಜ್ಯದಿಂದ ‘ಅಕ್ರಮ ವಲಸಿಗರನ್ನು’ ಹೊರಹಾಕಲು ಜಿಲ್ಲಾಧಿಕಾರಿ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರ ನೀಡುತ್ತದೆ.

ಇದಕ್ಕೂ ಮೊದಲು, ದಾಖಲೆರಹಿತ ವಲಸಿಗರಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿದೇಶಿಯರ ನ್ಯಾಯಮಂಡಳಿಗಳು ನಿರ್ವಹಿಸುತ್ತಿದ್ದವು.

1950ರ ಕಾಯ್ದೆಯನ್ನು ಬಳಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಅನುಮೋದಿಸಲಾಗಿದೆ. ವಿದೇಶಿಯರ ನ್ಯಾಯಮಂಡಳಿಗಳ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ಸಿಎಂ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದರು.

“ಘೋಷಿತ ವಿದೇಶಿಯರಾಗಿರುವುದರಿಂದ, ಭಾರತ/ಅಸ್ಸಾಂನಲ್ಲಿ ನಿಮ್ಮ ಉಪಸ್ಥಿತಿಯು ಸಾರ್ವಜನಿಕರ ಹಿತಾಸಕ್ತಿಗೆ ಮತ್ತು ರಾಜ್ಯದ ಆಂತರಿಕ ಭದ್ರತೆಗೆ ಹಾನಿಕಾರಕವಾಗಿದೆ” ಎಂದು ಮಂಗಳವಾರ (ನವೆಂಬರ್ 18) ಹೊರಡಿಸಲಾದ ನೋಟಿಸ್‌ನಲ್ಲಿ ಸೋನಿತ್‌ಪುರ ಜಿಲ್ಲಾಧಿಕಾರಿ ಆನಂದ ಕುಮಾರ್ ದಾಸ್ ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

2006ರಲ್ಲಿ ತೇಜ್‌ಪುರ ಪೊಲೀಸ್ ವರಿಷ್ಠಾಧಿಕಾರಿ (ಗಡಿ) ದಾಖಲಿಸಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಸೋನಿತ್‌ಪುರ ವಿದೇಶಿಯರ ನ್ಯಾಯಮಂಡಳಿ ಅಕ್ಟೋಬರ್ 24ರಂದು ಈ ಐವರು ವ್ಯಕ್ತಿಗಳನ್ನು ವಿದೇಶಿ ಪ್ರಜೆಗಳೆಂದು ಘೋಷಿಸಿತ್ತು.

ಧುಬ್ರಿ, ಶ್ರೀಭೂಮಿ ಅಥವಾ ದಕ್ಷಿಣ ಸಲ್ಮಾರಾ-ಮಂಕಚಾರ್ ಮಾರ್ಗಗಳ ಮೂಲಕ ರಾಜ್ಯವನ್ನು ತೊರೆಯುವಂತೆ ಜಿಲ್ಲಾಧಿಕಾರಿ ಆನಂದ ಕುಮಾರ್ ದಾಸ್ ಐದು ಮಂದಿಗೂ ನಿರ್ದೇಶಿಸಿದ್ದಾರೆ.

ಮತದಾರರ ಪಟ್ಟಿಯಿಂದ ಐದು ಮಂದಿಯ ಹೆಸರುಗಳನ್ನು ಅಳಿಸಲು, ಅವರ ಪಡಿತರ ಚೀಟಿಗಳನ್ನು ರದ್ದುಗೊಳಿಸಲು, ಆಧಾರ್ ಕಾರ್ಡ್‌ಗಳನ್ನು ಸ್ಥಗಿತಗೊಳಿಸಲು ಅಥವಾ ರದ್ದುಗೊಳಿಸಲು ಮತ್ತು ಎಲ್ಲಾ ಸರ್ಕಾರಿ ಯೋಜನೆಗಳಿಂದ ಅವರನ್ನು ತೆಗೆದುಹಾಕಲು ನೋಟಿಸ್‌ನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಆದೇಶ ಪಾಲಿಸರು ಐವರು ವಿಫಲವಾದರೆ, 1950ರ ಕಾಯ್ದೆಯಡಿಯಲ್ಲಿ ಅವರನ್ನು ಅಸ್ಸಾಂನಿಂದ ಹೊರಹಾಕಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುವ ಅರೆ-ನ್ಯಾಯಾಂಗ ಸಂಸ್ಥೆಗಳಾಗಿವೆ. ಆದಾಗ್ಯೂ, ನ್ಯಾಯಮಂಡಳಿಗಳು ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳನ್ನು ಹೊಂದಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಗಳ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎನ್ನಲಾಗುತ್ತಿದೆ.

ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನದ ಪ್ರಕಾರ, ಒಬ್ಬ ವ್ಯಕ್ತಿಯು ‘ಅಕ್ರಮ ವಲಸಿಗ’ ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಥವಾ ಇತರ ಮೂಲಗಳಿಂದ ಜಿಲ್ಲಾಧಿಕಾರಿಗೆ ಮಾಹಿತಿ ಬಂದರೆ, ಅಧಿಕಾರಿಯು 10 ದಿನಗಳಲ್ಲಿ ಆ ವ್ಯಕ್ತಿಗೆ ತನ್ನ ಪೌರತ್ವದ ಪುರಾವೆಗಳನ್ನು ಒದಗಿಸುವಂತೆ ನಿರ್ದೇಶಿಸಬೇಕು.

ಸಲ್ಲಿಸಿದ ಪುರಾವೆಗಳು ತೃಪ್ತಿಕರವಾಗಿಲ್ಲ ಎಂದು ಜಿಲ್ಲಾಧಿಕಾರಿ ಕಂಡುಕೊಂಡರೆ, ಅವರು 1950ರ ಕಾಯ್ದೆಯನ್ನು ಅನ್ವಯಿಸುವ ಮೂಲಕ, ದಾಖಲೆರಹಿತ ವಲಸಿಗರನ್ನು ಅಸ್ಸಾಂನಿಂದ 24 ಗಂಟೆಗಳ ಕಾಲಾವಕಾಶ ನೀಡುವ ಮೂಲಕ ಮತ್ತು ನಿರ್ದಿಷ್ಟಪಡಿಸಿದ ಮಾರ್ಗದ ಮೂಲಕ ಹೊರದಬ್ಬುವ ಆದೇಶವನ್ನು ಹೊರಡಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...