Homeಮುಖಪುಟಐದು ಮಂದಿಯನ್ನು ವಿದೇಶಿಗರು ಎಂದ ಅಸ್ಸಾಂ ಸರ್ಕಾರ : 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ

ಐದು ಮಂದಿಯನ್ನು ವಿದೇಶಿಗರು ಎಂದ ಅಸ್ಸಾಂ ಸರ್ಕಾರ : 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ

- Advertisement -
- Advertisement -

ಅಸ್ಸಾಂನ ಸೋನಿತ್‌ಪುರ ಜಿಲ್ಲಾಡಳಿತವು ಬುಧವಾರ (ನವೆಂಬರ್ 19) ಐದು ಮಂದಿಯನ್ನು ವಿದೇಶಿಯರು ಎಂದು ಘೋಷಿಸಿದ್ದು, 24 ಗಂಟೆಯೊಳಗೆ ಭಾರತ ತೊರೆಯುವಂತೆ ಅವರಿಗೆ ಆದೇಶಿಸಿದೆ.

ಸೋನಿತ್‌ಪುರ ಜಿಲ್ಲೆಯ ಧೋಬೋಕಟಾ ಗ್ರಾಮದ ಐವರು ನಿವಾಸಿಗಳಾದ ಹನುಫಾ, ಮರಿಯಮ್ ನೆಸ್ಸಾ, ಫಾತೆಮಾ, ಮೊನೊವಾರಾ ಮತ್ತು ಅಮ್ಜದ್ ಅಲಿ, ಇವರಿಗೆ 1950ರ ಅಸ್ಸಾಂನಿಂದ ವಲಸಿಗರನ್ನು ಹೊರಹಾಕುವ ಕಾಯ್ದೆಯಡಿ ದೇಶ ತೊರೆಯಲು ಸೂಚಿಸಲಾಗಿದೆ.

ತಕ್ಷಣಕ್ಕೆ ಅಸ್ಸಾಂನಿಂದ ಹೊರ ಹೋಗುವಂತೆ ಆದೇಶಿಸಲಾಗಿದೆ. ಅವರು ಭಾರತೀಯ ಪ್ರಜೆಗಳಲ್ಲ ಎಂಬ ನೆಲೆಯಲ್ಲಿ ಈ ಆದೇಶ ನೀಡಲಾಗಿದೆ. ಹಾಗಾಗಿ, ಅವರು ದೇಶದ ಇತರ ರಾಜ್ಯಗಳಲ್ಲೂ ವಾಸಿಸಲು ಸಮಸ್ಯೆಯಾಗಲಿದೆ. ಭಾರತ ತೊರೆಯುವ ಆಯ್ಕೆ ಮಾತ್ರ ಉಳಿದಿದೆ.

ಅಸ್ಸಾಂ ಸಚಿವ ಸಂಪುಟ 2025ರ ಸೆಪ್ಟೆಂಬರ್ 9ರಂದು 1950ರ ಅಸ್ಸಾಂ ವಲಸಿಗರ ಗಡಿಪಾರು ಕಾಯ್ದೆಯಡಿಯಲ್ಲಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು (ಎಸ್‌ಒಪಿ) ರೂಪಿಸಲು ಅನುಮೋದನೆ ನೀಡಿದೆ. ಇದು ವಿದೇಶಿಯರ ನ್ಯಾಯಮಂಡಳಿಗಳನ್ನು ಬೈಪಾಸ್ ಮಾಡುವ ಮೂಲಕ ರಾಜ್ಯದಿಂದ ‘ಅಕ್ರಮ ವಲಸಿಗರನ್ನು’ ಹೊರಹಾಕಲು ಜಿಲ್ಲಾಧಿಕಾರಿ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರ ನೀಡುತ್ತದೆ.

ಇದಕ್ಕೂ ಮೊದಲು, ದಾಖಲೆರಹಿತ ವಲಸಿಗರಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿದೇಶಿಯರ ನ್ಯಾಯಮಂಡಳಿಗಳು ನಿರ್ವಹಿಸುತ್ತಿದ್ದವು.

1950ರ ಕಾಯ್ದೆಯನ್ನು ಬಳಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಅನುಮೋದಿಸಲಾಗಿದೆ. ವಿದೇಶಿಯರ ನ್ಯಾಯಮಂಡಳಿಗಳ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ಸಿಎಂ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದರು.

“ಘೋಷಿತ ವಿದೇಶಿಯರಾಗಿರುವುದರಿಂದ, ಭಾರತ/ಅಸ್ಸಾಂನಲ್ಲಿ ನಿಮ್ಮ ಉಪಸ್ಥಿತಿಯು ಸಾರ್ವಜನಿಕರ ಹಿತಾಸಕ್ತಿಗೆ ಮತ್ತು ರಾಜ್ಯದ ಆಂತರಿಕ ಭದ್ರತೆಗೆ ಹಾನಿಕಾರಕವಾಗಿದೆ” ಎಂದು ಮಂಗಳವಾರ (ನವೆಂಬರ್ 18) ಹೊರಡಿಸಲಾದ ನೋಟಿಸ್‌ನಲ್ಲಿ ಸೋನಿತ್‌ಪುರ ಜಿಲ್ಲಾಧಿಕಾರಿ ಆನಂದ ಕುಮಾರ್ ದಾಸ್ ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

2006ರಲ್ಲಿ ತೇಜ್‌ಪುರ ಪೊಲೀಸ್ ವರಿಷ್ಠಾಧಿಕಾರಿ (ಗಡಿ) ದಾಖಲಿಸಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಸೋನಿತ್‌ಪುರ ವಿದೇಶಿಯರ ನ್ಯಾಯಮಂಡಳಿ ಅಕ್ಟೋಬರ್ 24ರಂದು ಈ ಐವರು ವ್ಯಕ್ತಿಗಳನ್ನು ವಿದೇಶಿ ಪ್ರಜೆಗಳೆಂದು ಘೋಷಿಸಿತ್ತು.

ಧುಬ್ರಿ, ಶ್ರೀಭೂಮಿ ಅಥವಾ ದಕ್ಷಿಣ ಸಲ್ಮಾರಾ-ಮಂಕಚಾರ್ ಮಾರ್ಗಗಳ ಮೂಲಕ ರಾಜ್ಯವನ್ನು ತೊರೆಯುವಂತೆ ಜಿಲ್ಲಾಧಿಕಾರಿ ಆನಂದ ಕುಮಾರ್ ದಾಸ್ ಐದು ಮಂದಿಗೂ ನಿರ್ದೇಶಿಸಿದ್ದಾರೆ.

ಮತದಾರರ ಪಟ್ಟಿಯಿಂದ ಐದು ಮಂದಿಯ ಹೆಸರುಗಳನ್ನು ಅಳಿಸಲು, ಅವರ ಪಡಿತರ ಚೀಟಿಗಳನ್ನು ರದ್ದುಗೊಳಿಸಲು, ಆಧಾರ್ ಕಾರ್ಡ್‌ಗಳನ್ನು ಸ್ಥಗಿತಗೊಳಿಸಲು ಅಥವಾ ರದ್ದುಗೊಳಿಸಲು ಮತ್ತು ಎಲ್ಲಾ ಸರ್ಕಾರಿ ಯೋಜನೆಗಳಿಂದ ಅವರನ್ನು ತೆಗೆದುಹಾಕಲು ನೋಟಿಸ್‌ನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಆದೇಶ ಪಾಲಿಸರು ಐವರು ವಿಫಲವಾದರೆ, 1950ರ ಕಾಯ್ದೆಯಡಿಯಲ್ಲಿ ಅವರನ್ನು ಅಸ್ಸಾಂನಿಂದ ಹೊರಹಾಕಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುವ ಅರೆ-ನ್ಯಾಯಾಂಗ ಸಂಸ್ಥೆಗಳಾಗಿವೆ. ಆದಾಗ್ಯೂ, ನ್ಯಾಯಮಂಡಳಿಗಳು ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳನ್ನು ಹೊಂದಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಗಳ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎನ್ನಲಾಗುತ್ತಿದೆ.

ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನದ ಪ್ರಕಾರ, ಒಬ್ಬ ವ್ಯಕ್ತಿಯು ‘ಅಕ್ರಮ ವಲಸಿಗ’ ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಥವಾ ಇತರ ಮೂಲಗಳಿಂದ ಜಿಲ್ಲಾಧಿಕಾರಿಗೆ ಮಾಹಿತಿ ಬಂದರೆ, ಅಧಿಕಾರಿಯು 10 ದಿನಗಳಲ್ಲಿ ಆ ವ್ಯಕ್ತಿಗೆ ತನ್ನ ಪೌರತ್ವದ ಪುರಾವೆಗಳನ್ನು ಒದಗಿಸುವಂತೆ ನಿರ್ದೇಶಿಸಬೇಕು.

ಸಲ್ಲಿಸಿದ ಪುರಾವೆಗಳು ತೃಪ್ತಿಕರವಾಗಿಲ್ಲ ಎಂದು ಜಿಲ್ಲಾಧಿಕಾರಿ ಕಂಡುಕೊಂಡರೆ, ಅವರು 1950ರ ಕಾಯ್ದೆಯನ್ನು ಅನ್ವಯಿಸುವ ಮೂಲಕ, ದಾಖಲೆರಹಿತ ವಲಸಿಗರನ್ನು ಅಸ್ಸಾಂನಿಂದ 24 ಗಂಟೆಗಳ ಕಾಲಾವಕಾಶ ನೀಡುವ ಮೂಲಕ ಮತ್ತು ನಿರ್ದಿಷ್ಟಪಡಿಸಿದ ಮಾರ್ಗದ ಮೂಲಕ ಹೊರದಬ್ಬುವ ಆದೇಶವನ್ನು ಹೊರಡಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...