Homeಅಂತರಾಷ್ಟ್ರೀಯBRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

BRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

- Advertisement -
- Advertisement -

ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟ ಬ್ರಿಕ್ಸ್‌ಗೆ (BRICS) ಹೊಸದಾಗಿ ಐದು ರಾಷ್ಟ್ರಗಳನ್ನು ಸೇರಿಸಲಾಗಿದ್ದು, ಹೊಸದಾಗಿ ಸೇರ್ಪಡೆಗೊಂಡ ರಾಷ್ಟ್ರಗಳಿಗೆ ಬ್ರಿಕ್ಸ್‌ ಪೂರ್ಣ ಸದಸ್ಯತ್ವವನ್ನು ನೀಡಲಾಗಿದೆ.

BRICS ಒಕ್ಕೂಟಕ್ಕೆ ಹೊಸದಾಗಿ ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳನ್ನು ಸೇರ್ಪಡೆಗೊಳಿಸಲಾಗಿದೆ.

ಬ್ರಿಕ್ಸ್‌ನ ಅಧ್ಯಕ್ಷ ಸ್ಥಾನವನ್ನು ಮಾಸ್ಕೋ ವಹಿಸಿಕೊಂಡ ಬಳಿಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು  ಈ ಗುಂಪು 10-ರಾಷ್ಟ್ರಗಳ ಸಂಸ್ಥೆಯಾಗಿ ಮಾರ್ಪಟ್ಟಿದ್ದು, ಹೊಸ ಸದಸ್ಯರಾಗಿ ಐದು ರಾಷ್ಟ್ರಗಳು ಸೇರ್ಪಡೆಗೊಂಡಿವೆ ಎಂದು ಘೋಷಿಸಿದ್ದಾರೆ.

ಆಗಸ್ಟ್‌ನಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಬ್ರಿಕ್ಸ್‌ ಶೃಂಗಸಭೆಯಲ್ಲಿ ಬ್ರಿಕ್ಸ್‌ ನಾಯಕರು ಅರ್ಜೆಂಟೀನಾ ಸೇರಿದಂತೆ ಆರು ದೇಶಗಳನ್ನು ಜ.1ರಿಂದ ಜಾರಿಗೆ ಬರುವಂತೆ ಒಕ್ಕೂಟಕ್ಕೆ ಸೇರಿಸುವ ಪ್ರಸ್ತಾಪವನ್ನು ಅನುಮೋದಿಸಿದ್ದರು. ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ನಲ್ಲಿ ನಡೆದ 15ನೇ ಬ್ರಿಕ್ಸ್‌ ಶೃಂಗ ಸಭೆಯಲ್ಲಿ ಒಕ್ಕೂಟದ ವಿಸ್ತರಣೆಯ ಅಗತ್ಯತೆಯನ್ನು ಪ್ರತಿಪಾದಿಸಲಾಗಿತ್ತು. ಒಕ್ಕೂಟದ ವಿಸ್ತರಣೆಯ ಭಾಗವಾಗಿ ಅರ್ಜೆಂಟೀನಾ, ಈಜಿಪ್ಟ್, ಇಥಿಯೋಪಿಯಾ, ಇರಾನ್‌, ಸೌದಿ ಅರೇಬಿಯಾ ಮತ್ತು ಯುಎಇಯನ್ನು ಬ್ರಿಕ್ಸ್‌ ಒಕ್ಕೂಟವನ್ನು ಸೇರಿಸಿಕೊಳ್ಳಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿತ್ತು.

ಆದರೆ ಅರ್ಜೆಂಟೀನಾದ ಹೊಸ ಅಧ್ಯಕ್ಷ ಜೇವಿಯರ್ ಮಿಲೀ ಅವರು ತಮ್ಮ ದೇಶವನ್ನು ಬ್ರಿಕ್ಸ್ ಸದಸ್ಯತ್ವದಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದರು. ಹೀಗಾಗಿ ಉಳಿದ ಐದು ದೇಶಗಳಿಗೆ ಸದಸ್ಯತ್ವ ನೀಡಲಾಗಿದೆ. ಹೊಸ ಸದಸ್ಯ ರಾಷ್ಟ್ರಗಳು ಒಕ್ಕೂಟಕ್ಕೆ ಬರುವುದರಿಂದ ಜಾಗತಿಕ ತೈಲ ರಫ್ತು ವಹಿವಾಟಿನ 80 ಪ್ರತಿಶತ ಬ್ರಿಕ್ಸ್ ಒಕ್ಕೂಟದ ತೆಕ್ಕೆಗೆ ಬರಲಿದೆ ಎನ್ನಲಾಗಿದೆ.

ಬ್ರಿಕ್ಸ್ ಅಥವಾ ಬ್ರಿಕ್ಸ್ ಸಂಘಟನೆ ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ಮತ್ತು ಐದು ರಾಷ್ಟ್ರಗಳನ್ನು ಒಳಗೊಂಡ ಒಂದು ಒಕ್ಕೂಟವಾಗಿದೆ. ಈ ದೇಶಗಳ ಮೊದಲಕ್ಷರಗಳಾದ B –ಬ್ರೆಜಿಲ್, R-ರಷ್ಯಾ, I –ಇಂಡಿಯಾ, C- ಚೀನಾ ಮತ್ತು S- ದಕ್ಷಿಣ ಆಫ್ರಿಕ (ಸೌತ್ ಆಫ್ರಿಕಾ) ಸೇರಿಸಿ  BRICS ಎಂದು ಹೆಸರಿಡಲಾಗಿತ್ತು.  2001ರಲ್ಲಿ ನಾಲ್ಕು ದೇಶಗಳನ್ನು ಒಳಗೊಂಡ ಬ್ರಿಕ್ ಆಗಿತ್ತು. 2010ರಲ್ಲಿ ದಕ್ಷಿಣ ಆಫ್ರಿಕವೂ ಸೇರಿದ ನಂತರ ಬ್ರಿಕ್ಸ್ ಆಯಿತು. 2009ರಿಂದಲೂ ಈ ಸಂಘಟನೆ ವಾರ್ಷಿಕವಾಗಿ ಶೃಂಗಸಭೆ ಸೇರುತ್ತಾ ಬಂದಿದೆ.

2015ರ ಮಾಹಿತಿಯಂತೆ ಬ್ರಿಕ್ಸ್‌ನ ಜನಸಂಖ್ಯೆ 3.6 ಲಕ್ಷ ಕೋಟಿ ಅಥವಾ ಜಾಗತಿಕ ಜನಸಂಖ್ಯೆಯ ಅರ್ಧದಷ್ಟು ಇದೆ. ಈ ದೇಶಗಳ ಒಟ್ಟಾರೆ ಜಿಡಿಪಿ ಅಥವಾ ಒಟ್ಟಾರೆ ಅಂತರಿಕ ಉತ್ಪಾದನೆ 16.6 ಲಕ್ಷ ಕೋಟಿ ಅಮೆರಿಕನ್ ಡಾಲರ್ ಆಗಿದ್ದು, ಇದು ಜಾಗತಿಕ ಒಟ್ಟಾರೆ ಉತ್ಪಾದನೆಯ ಶೇ 22ರಷ್ಟಾಗಿದೆ.

ಬ್ರಿಕ್‌ನ ಮೊದಲ ಶೃಂಗಸಭೆ 2009ರ ಜೂ.16 ರಂದು ರಷ್ಯಾದಲ್ಲಿ ನಡೆಯಿತು. ಮೊದಲ ಶೃಂಗ ಸಭೆಯಲ್ಲಿ  ಅಂದಿನ ಬ್ರೆಜಿಲ್ ಅಧ್ಯಕ್ಷರಾದ ಲುಯಿಜ್ ಇನಾಸಿಯೊ ಲುಲ ಡ ಸಿಲ್ವ, ರಷ್ಯಾದ ಅಂದಿನ ಅಧ್ಯಕ್ಷ ದಿಮಿತ್ರಿ ಮೆಡ್ವಡೇವ್, ಭಾರತದ ಅಂದಿನ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಮತ್ತು ಚೀನಾದ ಅಂದಿನ ಅಧ್ಯಕ್ಷ ಹು ಜಿಂಟಾವೊ ಹಾಜರಿದ್ದರು.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...