Homeಅಂತರಾಷ್ಟ್ರೀಯBRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

BRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

- Advertisement -
- Advertisement -

ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟ ಬ್ರಿಕ್ಸ್‌ಗೆ (BRICS) ಹೊಸದಾಗಿ ಐದು ರಾಷ್ಟ್ರಗಳನ್ನು ಸೇರಿಸಲಾಗಿದ್ದು, ಹೊಸದಾಗಿ ಸೇರ್ಪಡೆಗೊಂಡ ರಾಷ್ಟ್ರಗಳಿಗೆ ಬ್ರಿಕ್ಸ್‌ ಪೂರ್ಣ ಸದಸ್ಯತ್ವವನ್ನು ನೀಡಲಾಗಿದೆ.

BRICS ಒಕ್ಕೂಟಕ್ಕೆ ಹೊಸದಾಗಿ ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳನ್ನು ಸೇರ್ಪಡೆಗೊಳಿಸಲಾಗಿದೆ.

ಬ್ರಿಕ್ಸ್‌ನ ಅಧ್ಯಕ್ಷ ಸ್ಥಾನವನ್ನು ಮಾಸ್ಕೋ ವಹಿಸಿಕೊಂಡ ಬಳಿಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು  ಈ ಗುಂಪು 10-ರಾಷ್ಟ್ರಗಳ ಸಂಸ್ಥೆಯಾಗಿ ಮಾರ್ಪಟ್ಟಿದ್ದು, ಹೊಸ ಸದಸ್ಯರಾಗಿ ಐದು ರಾಷ್ಟ್ರಗಳು ಸೇರ್ಪಡೆಗೊಂಡಿವೆ ಎಂದು ಘೋಷಿಸಿದ್ದಾರೆ.

ಆಗಸ್ಟ್‌ನಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಬ್ರಿಕ್ಸ್‌ ಶೃಂಗಸಭೆಯಲ್ಲಿ ಬ್ರಿಕ್ಸ್‌ ನಾಯಕರು ಅರ್ಜೆಂಟೀನಾ ಸೇರಿದಂತೆ ಆರು ದೇಶಗಳನ್ನು ಜ.1ರಿಂದ ಜಾರಿಗೆ ಬರುವಂತೆ ಒಕ್ಕೂಟಕ್ಕೆ ಸೇರಿಸುವ ಪ್ರಸ್ತಾಪವನ್ನು ಅನುಮೋದಿಸಿದ್ದರು. ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ನಲ್ಲಿ ನಡೆದ 15ನೇ ಬ್ರಿಕ್ಸ್‌ ಶೃಂಗ ಸಭೆಯಲ್ಲಿ ಒಕ್ಕೂಟದ ವಿಸ್ತರಣೆಯ ಅಗತ್ಯತೆಯನ್ನು ಪ್ರತಿಪಾದಿಸಲಾಗಿತ್ತು. ಒಕ್ಕೂಟದ ವಿಸ್ತರಣೆಯ ಭಾಗವಾಗಿ ಅರ್ಜೆಂಟೀನಾ, ಈಜಿಪ್ಟ್, ಇಥಿಯೋಪಿಯಾ, ಇರಾನ್‌, ಸೌದಿ ಅರೇಬಿಯಾ ಮತ್ತು ಯುಎಇಯನ್ನು ಬ್ರಿಕ್ಸ್‌ ಒಕ್ಕೂಟವನ್ನು ಸೇರಿಸಿಕೊಳ್ಳಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿತ್ತು.

ಆದರೆ ಅರ್ಜೆಂಟೀನಾದ ಹೊಸ ಅಧ್ಯಕ್ಷ ಜೇವಿಯರ್ ಮಿಲೀ ಅವರು ತಮ್ಮ ದೇಶವನ್ನು ಬ್ರಿಕ್ಸ್ ಸದಸ್ಯತ್ವದಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದರು. ಹೀಗಾಗಿ ಉಳಿದ ಐದು ದೇಶಗಳಿಗೆ ಸದಸ್ಯತ್ವ ನೀಡಲಾಗಿದೆ. ಹೊಸ ಸದಸ್ಯ ರಾಷ್ಟ್ರಗಳು ಒಕ್ಕೂಟಕ್ಕೆ ಬರುವುದರಿಂದ ಜಾಗತಿಕ ತೈಲ ರಫ್ತು ವಹಿವಾಟಿನ 80 ಪ್ರತಿಶತ ಬ್ರಿಕ್ಸ್ ಒಕ್ಕೂಟದ ತೆಕ್ಕೆಗೆ ಬರಲಿದೆ ಎನ್ನಲಾಗಿದೆ.

ಬ್ರಿಕ್ಸ್ ಅಥವಾ ಬ್ರಿಕ್ಸ್ ಸಂಘಟನೆ ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ಮತ್ತು ಐದು ರಾಷ್ಟ್ರಗಳನ್ನು ಒಳಗೊಂಡ ಒಂದು ಒಕ್ಕೂಟವಾಗಿದೆ. ಈ ದೇಶಗಳ ಮೊದಲಕ್ಷರಗಳಾದ B –ಬ್ರೆಜಿಲ್, R-ರಷ್ಯಾ, I –ಇಂಡಿಯಾ, C- ಚೀನಾ ಮತ್ತು S- ದಕ್ಷಿಣ ಆಫ್ರಿಕ (ಸೌತ್ ಆಫ್ರಿಕಾ) ಸೇರಿಸಿ  BRICS ಎಂದು ಹೆಸರಿಡಲಾಗಿತ್ತು.  2001ರಲ್ಲಿ ನಾಲ್ಕು ದೇಶಗಳನ್ನು ಒಳಗೊಂಡ ಬ್ರಿಕ್ ಆಗಿತ್ತು. 2010ರಲ್ಲಿ ದಕ್ಷಿಣ ಆಫ್ರಿಕವೂ ಸೇರಿದ ನಂತರ ಬ್ರಿಕ್ಸ್ ಆಯಿತು. 2009ರಿಂದಲೂ ಈ ಸಂಘಟನೆ ವಾರ್ಷಿಕವಾಗಿ ಶೃಂಗಸಭೆ ಸೇರುತ್ತಾ ಬಂದಿದೆ.

2015ರ ಮಾಹಿತಿಯಂತೆ ಬ್ರಿಕ್ಸ್‌ನ ಜನಸಂಖ್ಯೆ 3.6 ಲಕ್ಷ ಕೋಟಿ ಅಥವಾ ಜಾಗತಿಕ ಜನಸಂಖ್ಯೆಯ ಅರ್ಧದಷ್ಟು ಇದೆ. ಈ ದೇಶಗಳ ಒಟ್ಟಾರೆ ಜಿಡಿಪಿ ಅಥವಾ ಒಟ್ಟಾರೆ ಅಂತರಿಕ ಉತ್ಪಾದನೆ 16.6 ಲಕ್ಷ ಕೋಟಿ ಅಮೆರಿಕನ್ ಡಾಲರ್ ಆಗಿದ್ದು, ಇದು ಜಾಗತಿಕ ಒಟ್ಟಾರೆ ಉತ್ಪಾದನೆಯ ಶೇ 22ರಷ್ಟಾಗಿದೆ.

ಬ್ರಿಕ್‌ನ ಮೊದಲ ಶೃಂಗಸಭೆ 2009ರ ಜೂ.16 ರಂದು ರಷ್ಯಾದಲ್ಲಿ ನಡೆಯಿತು. ಮೊದಲ ಶೃಂಗ ಸಭೆಯಲ್ಲಿ  ಅಂದಿನ ಬ್ರೆಜಿಲ್ ಅಧ್ಯಕ್ಷರಾದ ಲುಯಿಜ್ ಇನಾಸಿಯೊ ಲುಲ ಡ ಸಿಲ್ವ, ರಷ್ಯಾದ ಅಂದಿನ ಅಧ್ಯಕ್ಷ ದಿಮಿತ್ರಿ ಮೆಡ್ವಡೇವ್, ಭಾರತದ ಅಂದಿನ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಮತ್ತು ಚೀನಾದ ಅಂದಿನ ಅಧ್ಯಕ್ಷ ಹು ಜಿಂಟಾವೊ ಹಾಜರಿದ್ದರು.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...