Homeಅಂತರಾಷ್ಟ್ರೀಯBRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

BRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

- Advertisement -
- Advertisement -

ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟ ಬ್ರಿಕ್ಸ್‌ಗೆ (BRICS) ಹೊಸದಾಗಿ ಐದು ರಾಷ್ಟ್ರಗಳನ್ನು ಸೇರಿಸಲಾಗಿದ್ದು, ಹೊಸದಾಗಿ ಸೇರ್ಪಡೆಗೊಂಡ ರಾಷ್ಟ್ರಗಳಿಗೆ ಬ್ರಿಕ್ಸ್‌ ಪೂರ್ಣ ಸದಸ್ಯತ್ವವನ್ನು ನೀಡಲಾಗಿದೆ.

BRICS ಒಕ್ಕೂಟಕ್ಕೆ ಹೊಸದಾಗಿ ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳನ್ನು ಸೇರ್ಪಡೆಗೊಳಿಸಲಾಗಿದೆ.

ಬ್ರಿಕ್ಸ್‌ನ ಅಧ್ಯಕ್ಷ ಸ್ಥಾನವನ್ನು ಮಾಸ್ಕೋ ವಹಿಸಿಕೊಂಡ ಬಳಿಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು  ಈ ಗುಂಪು 10-ರಾಷ್ಟ್ರಗಳ ಸಂಸ್ಥೆಯಾಗಿ ಮಾರ್ಪಟ್ಟಿದ್ದು, ಹೊಸ ಸದಸ್ಯರಾಗಿ ಐದು ರಾಷ್ಟ್ರಗಳು ಸೇರ್ಪಡೆಗೊಂಡಿವೆ ಎಂದು ಘೋಷಿಸಿದ್ದಾರೆ.

ಆಗಸ್ಟ್‌ನಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಬ್ರಿಕ್ಸ್‌ ಶೃಂಗಸಭೆಯಲ್ಲಿ ಬ್ರಿಕ್ಸ್‌ ನಾಯಕರು ಅರ್ಜೆಂಟೀನಾ ಸೇರಿದಂತೆ ಆರು ದೇಶಗಳನ್ನು ಜ.1ರಿಂದ ಜಾರಿಗೆ ಬರುವಂತೆ ಒಕ್ಕೂಟಕ್ಕೆ ಸೇರಿಸುವ ಪ್ರಸ್ತಾಪವನ್ನು ಅನುಮೋದಿಸಿದ್ದರು. ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ನಲ್ಲಿ ನಡೆದ 15ನೇ ಬ್ರಿಕ್ಸ್‌ ಶೃಂಗ ಸಭೆಯಲ್ಲಿ ಒಕ್ಕೂಟದ ವಿಸ್ತರಣೆಯ ಅಗತ್ಯತೆಯನ್ನು ಪ್ರತಿಪಾದಿಸಲಾಗಿತ್ತು. ಒಕ್ಕೂಟದ ವಿಸ್ತರಣೆಯ ಭಾಗವಾಗಿ ಅರ್ಜೆಂಟೀನಾ, ಈಜಿಪ್ಟ್, ಇಥಿಯೋಪಿಯಾ, ಇರಾನ್‌, ಸೌದಿ ಅರೇಬಿಯಾ ಮತ್ತು ಯುಎಇಯನ್ನು ಬ್ರಿಕ್ಸ್‌ ಒಕ್ಕೂಟವನ್ನು ಸೇರಿಸಿಕೊಳ್ಳಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿತ್ತು.

ಆದರೆ ಅರ್ಜೆಂಟೀನಾದ ಹೊಸ ಅಧ್ಯಕ್ಷ ಜೇವಿಯರ್ ಮಿಲೀ ಅವರು ತಮ್ಮ ದೇಶವನ್ನು ಬ್ರಿಕ್ಸ್ ಸದಸ್ಯತ್ವದಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದರು. ಹೀಗಾಗಿ ಉಳಿದ ಐದು ದೇಶಗಳಿಗೆ ಸದಸ್ಯತ್ವ ನೀಡಲಾಗಿದೆ. ಹೊಸ ಸದಸ್ಯ ರಾಷ್ಟ್ರಗಳು ಒಕ್ಕೂಟಕ್ಕೆ ಬರುವುದರಿಂದ ಜಾಗತಿಕ ತೈಲ ರಫ್ತು ವಹಿವಾಟಿನ 80 ಪ್ರತಿಶತ ಬ್ರಿಕ್ಸ್ ಒಕ್ಕೂಟದ ತೆಕ್ಕೆಗೆ ಬರಲಿದೆ ಎನ್ನಲಾಗಿದೆ.

ಬ್ರಿಕ್ಸ್ ಅಥವಾ ಬ್ರಿಕ್ಸ್ ಸಂಘಟನೆ ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ಮತ್ತು ಐದು ರಾಷ್ಟ್ರಗಳನ್ನು ಒಳಗೊಂಡ ಒಂದು ಒಕ್ಕೂಟವಾಗಿದೆ. ಈ ದೇಶಗಳ ಮೊದಲಕ್ಷರಗಳಾದ B –ಬ್ರೆಜಿಲ್, R-ರಷ್ಯಾ, I –ಇಂಡಿಯಾ, C- ಚೀನಾ ಮತ್ತು S- ದಕ್ಷಿಣ ಆಫ್ರಿಕ (ಸೌತ್ ಆಫ್ರಿಕಾ) ಸೇರಿಸಿ  BRICS ಎಂದು ಹೆಸರಿಡಲಾಗಿತ್ತು.  2001ರಲ್ಲಿ ನಾಲ್ಕು ದೇಶಗಳನ್ನು ಒಳಗೊಂಡ ಬ್ರಿಕ್ ಆಗಿತ್ತು. 2010ರಲ್ಲಿ ದಕ್ಷಿಣ ಆಫ್ರಿಕವೂ ಸೇರಿದ ನಂತರ ಬ್ರಿಕ್ಸ್ ಆಯಿತು. 2009ರಿಂದಲೂ ಈ ಸಂಘಟನೆ ವಾರ್ಷಿಕವಾಗಿ ಶೃಂಗಸಭೆ ಸೇರುತ್ತಾ ಬಂದಿದೆ.

2015ರ ಮಾಹಿತಿಯಂತೆ ಬ್ರಿಕ್ಸ್‌ನ ಜನಸಂಖ್ಯೆ 3.6 ಲಕ್ಷ ಕೋಟಿ ಅಥವಾ ಜಾಗತಿಕ ಜನಸಂಖ್ಯೆಯ ಅರ್ಧದಷ್ಟು ಇದೆ. ಈ ದೇಶಗಳ ಒಟ್ಟಾರೆ ಜಿಡಿಪಿ ಅಥವಾ ಒಟ್ಟಾರೆ ಅಂತರಿಕ ಉತ್ಪಾದನೆ 16.6 ಲಕ್ಷ ಕೋಟಿ ಅಮೆರಿಕನ್ ಡಾಲರ್ ಆಗಿದ್ದು, ಇದು ಜಾಗತಿಕ ಒಟ್ಟಾರೆ ಉತ್ಪಾದನೆಯ ಶೇ 22ರಷ್ಟಾಗಿದೆ.

ಬ್ರಿಕ್‌ನ ಮೊದಲ ಶೃಂಗಸಭೆ 2009ರ ಜೂ.16 ರಂದು ರಷ್ಯಾದಲ್ಲಿ ನಡೆಯಿತು. ಮೊದಲ ಶೃಂಗ ಸಭೆಯಲ್ಲಿ  ಅಂದಿನ ಬ್ರೆಜಿಲ್ ಅಧ್ಯಕ್ಷರಾದ ಲುಯಿಜ್ ಇನಾಸಿಯೊ ಲುಲ ಡ ಸಿಲ್ವ, ರಷ್ಯಾದ ಅಂದಿನ ಅಧ್ಯಕ್ಷ ದಿಮಿತ್ರಿ ಮೆಡ್ವಡೇವ್, ಭಾರತದ ಅಂದಿನ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಮತ್ತು ಚೀನಾದ ಅಂದಿನ ಅಧ್ಯಕ್ಷ ಹು ಜಿಂಟಾವೊ ಹಾಜರಿದ್ದರು.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...