Homeಅಂತರಾಷ್ಟ್ರೀಯBRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

BRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

- Advertisement -
- Advertisement -

ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟ ಬ್ರಿಕ್ಸ್‌ಗೆ (BRICS) ಹೊಸದಾಗಿ ಐದು ರಾಷ್ಟ್ರಗಳನ್ನು ಸೇರಿಸಲಾಗಿದ್ದು, ಹೊಸದಾಗಿ ಸೇರ್ಪಡೆಗೊಂಡ ರಾಷ್ಟ್ರಗಳಿಗೆ ಬ್ರಿಕ್ಸ್‌ ಪೂರ್ಣ ಸದಸ್ಯತ್ವವನ್ನು ನೀಡಲಾಗಿದೆ.

BRICS ಒಕ್ಕೂಟಕ್ಕೆ ಹೊಸದಾಗಿ ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳನ್ನು ಸೇರ್ಪಡೆಗೊಳಿಸಲಾಗಿದೆ.

ಬ್ರಿಕ್ಸ್‌ನ ಅಧ್ಯಕ್ಷ ಸ್ಥಾನವನ್ನು ಮಾಸ್ಕೋ ವಹಿಸಿಕೊಂಡ ಬಳಿಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು  ಈ ಗುಂಪು 10-ರಾಷ್ಟ್ರಗಳ ಸಂಸ್ಥೆಯಾಗಿ ಮಾರ್ಪಟ್ಟಿದ್ದು, ಹೊಸ ಸದಸ್ಯರಾಗಿ ಐದು ರಾಷ್ಟ್ರಗಳು ಸೇರ್ಪಡೆಗೊಂಡಿವೆ ಎಂದು ಘೋಷಿಸಿದ್ದಾರೆ.

ಆಗಸ್ಟ್‌ನಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಬ್ರಿಕ್ಸ್‌ ಶೃಂಗಸಭೆಯಲ್ಲಿ ಬ್ರಿಕ್ಸ್‌ ನಾಯಕರು ಅರ್ಜೆಂಟೀನಾ ಸೇರಿದಂತೆ ಆರು ದೇಶಗಳನ್ನು ಜ.1ರಿಂದ ಜಾರಿಗೆ ಬರುವಂತೆ ಒಕ್ಕೂಟಕ್ಕೆ ಸೇರಿಸುವ ಪ್ರಸ್ತಾಪವನ್ನು ಅನುಮೋದಿಸಿದ್ದರು. ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ನಲ್ಲಿ ನಡೆದ 15ನೇ ಬ್ರಿಕ್ಸ್‌ ಶೃಂಗ ಸಭೆಯಲ್ಲಿ ಒಕ್ಕೂಟದ ವಿಸ್ತರಣೆಯ ಅಗತ್ಯತೆಯನ್ನು ಪ್ರತಿಪಾದಿಸಲಾಗಿತ್ತು. ಒಕ್ಕೂಟದ ವಿಸ್ತರಣೆಯ ಭಾಗವಾಗಿ ಅರ್ಜೆಂಟೀನಾ, ಈಜಿಪ್ಟ್, ಇಥಿಯೋಪಿಯಾ, ಇರಾನ್‌, ಸೌದಿ ಅರೇಬಿಯಾ ಮತ್ತು ಯುಎಇಯನ್ನು ಬ್ರಿಕ್ಸ್‌ ಒಕ್ಕೂಟವನ್ನು ಸೇರಿಸಿಕೊಳ್ಳಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿತ್ತು.

ಆದರೆ ಅರ್ಜೆಂಟೀನಾದ ಹೊಸ ಅಧ್ಯಕ್ಷ ಜೇವಿಯರ್ ಮಿಲೀ ಅವರು ತಮ್ಮ ದೇಶವನ್ನು ಬ್ರಿಕ್ಸ್ ಸದಸ್ಯತ್ವದಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದರು. ಹೀಗಾಗಿ ಉಳಿದ ಐದು ದೇಶಗಳಿಗೆ ಸದಸ್ಯತ್ವ ನೀಡಲಾಗಿದೆ. ಹೊಸ ಸದಸ್ಯ ರಾಷ್ಟ್ರಗಳು ಒಕ್ಕೂಟಕ್ಕೆ ಬರುವುದರಿಂದ ಜಾಗತಿಕ ತೈಲ ರಫ್ತು ವಹಿವಾಟಿನ 80 ಪ್ರತಿಶತ ಬ್ರಿಕ್ಸ್ ಒಕ್ಕೂಟದ ತೆಕ್ಕೆಗೆ ಬರಲಿದೆ ಎನ್ನಲಾಗಿದೆ.

ಬ್ರಿಕ್ಸ್ ಅಥವಾ ಬ್ರಿಕ್ಸ್ ಸಂಘಟನೆ ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ಮತ್ತು ಐದು ರಾಷ್ಟ್ರಗಳನ್ನು ಒಳಗೊಂಡ ಒಂದು ಒಕ್ಕೂಟವಾಗಿದೆ. ಈ ದೇಶಗಳ ಮೊದಲಕ್ಷರಗಳಾದ B –ಬ್ರೆಜಿಲ್, R-ರಷ್ಯಾ, I –ಇಂಡಿಯಾ, C- ಚೀನಾ ಮತ್ತು S- ದಕ್ಷಿಣ ಆಫ್ರಿಕ (ಸೌತ್ ಆಫ್ರಿಕಾ) ಸೇರಿಸಿ  BRICS ಎಂದು ಹೆಸರಿಡಲಾಗಿತ್ತು.  2001ರಲ್ಲಿ ನಾಲ್ಕು ದೇಶಗಳನ್ನು ಒಳಗೊಂಡ ಬ್ರಿಕ್ ಆಗಿತ್ತು. 2010ರಲ್ಲಿ ದಕ್ಷಿಣ ಆಫ್ರಿಕವೂ ಸೇರಿದ ನಂತರ ಬ್ರಿಕ್ಸ್ ಆಯಿತು. 2009ರಿಂದಲೂ ಈ ಸಂಘಟನೆ ವಾರ್ಷಿಕವಾಗಿ ಶೃಂಗಸಭೆ ಸೇರುತ್ತಾ ಬಂದಿದೆ.

2015ರ ಮಾಹಿತಿಯಂತೆ ಬ್ರಿಕ್ಸ್‌ನ ಜನಸಂಖ್ಯೆ 3.6 ಲಕ್ಷ ಕೋಟಿ ಅಥವಾ ಜಾಗತಿಕ ಜನಸಂಖ್ಯೆಯ ಅರ್ಧದಷ್ಟು ಇದೆ. ಈ ದೇಶಗಳ ಒಟ್ಟಾರೆ ಜಿಡಿಪಿ ಅಥವಾ ಒಟ್ಟಾರೆ ಅಂತರಿಕ ಉತ್ಪಾದನೆ 16.6 ಲಕ್ಷ ಕೋಟಿ ಅಮೆರಿಕನ್ ಡಾಲರ್ ಆಗಿದ್ದು, ಇದು ಜಾಗತಿಕ ಒಟ್ಟಾರೆ ಉತ್ಪಾದನೆಯ ಶೇ 22ರಷ್ಟಾಗಿದೆ.

ಬ್ರಿಕ್‌ನ ಮೊದಲ ಶೃಂಗಸಭೆ 2009ರ ಜೂ.16 ರಂದು ರಷ್ಯಾದಲ್ಲಿ ನಡೆಯಿತು. ಮೊದಲ ಶೃಂಗ ಸಭೆಯಲ್ಲಿ  ಅಂದಿನ ಬ್ರೆಜಿಲ್ ಅಧ್ಯಕ್ಷರಾದ ಲುಯಿಜ್ ಇನಾಸಿಯೊ ಲುಲ ಡ ಸಿಲ್ವ, ರಷ್ಯಾದ ಅಂದಿನ ಅಧ್ಯಕ್ಷ ದಿಮಿತ್ರಿ ಮೆಡ್ವಡೇವ್, ಭಾರತದ ಅಂದಿನ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಮತ್ತು ಚೀನಾದ ಅಂದಿನ ಅಧ್ಯಕ್ಷ ಹು ಜಿಂಟಾವೊ ಹಾಜರಿದ್ದರು.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...