Homeಅಂತರಾಷ್ಟ್ರೀಯBRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

BRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

- Advertisement -
- Advertisement -

ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟ ಬ್ರಿಕ್ಸ್‌ಗೆ (BRICS) ಹೊಸದಾಗಿ ಐದು ರಾಷ್ಟ್ರಗಳನ್ನು ಸೇರಿಸಲಾಗಿದ್ದು, ಹೊಸದಾಗಿ ಸೇರ್ಪಡೆಗೊಂಡ ರಾಷ್ಟ್ರಗಳಿಗೆ ಬ್ರಿಕ್ಸ್‌ ಪೂರ್ಣ ಸದಸ್ಯತ್ವವನ್ನು ನೀಡಲಾಗಿದೆ.

BRICS ಒಕ್ಕೂಟಕ್ಕೆ ಹೊಸದಾಗಿ ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳನ್ನು ಸೇರ್ಪಡೆಗೊಳಿಸಲಾಗಿದೆ.

ಬ್ರಿಕ್ಸ್‌ನ ಅಧ್ಯಕ್ಷ ಸ್ಥಾನವನ್ನು ಮಾಸ್ಕೋ ವಹಿಸಿಕೊಂಡ ಬಳಿಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು  ಈ ಗುಂಪು 10-ರಾಷ್ಟ್ರಗಳ ಸಂಸ್ಥೆಯಾಗಿ ಮಾರ್ಪಟ್ಟಿದ್ದು, ಹೊಸ ಸದಸ್ಯರಾಗಿ ಐದು ರಾಷ್ಟ್ರಗಳು ಸೇರ್ಪಡೆಗೊಂಡಿವೆ ಎಂದು ಘೋಷಿಸಿದ್ದಾರೆ.

ಆಗಸ್ಟ್‌ನಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಬ್ರಿಕ್ಸ್‌ ಶೃಂಗಸಭೆಯಲ್ಲಿ ಬ್ರಿಕ್ಸ್‌ ನಾಯಕರು ಅರ್ಜೆಂಟೀನಾ ಸೇರಿದಂತೆ ಆರು ದೇಶಗಳನ್ನು ಜ.1ರಿಂದ ಜಾರಿಗೆ ಬರುವಂತೆ ಒಕ್ಕೂಟಕ್ಕೆ ಸೇರಿಸುವ ಪ್ರಸ್ತಾಪವನ್ನು ಅನುಮೋದಿಸಿದ್ದರು. ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ನಲ್ಲಿ ನಡೆದ 15ನೇ ಬ್ರಿಕ್ಸ್‌ ಶೃಂಗ ಸಭೆಯಲ್ಲಿ ಒಕ್ಕೂಟದ ವಿಸ್ತರಣೆಯ ಅಗತ್ಯತೆಯನ್ನು ಪ್ರತಿಪಾದಿಸಲಾಗಿತ್ತು. ಒಕ್ಕೂಟದ ವಿಸ್ತರಣೆಯ ಭಾಗವಾಗಿ ಅರ್ಜೆಂಟೀನಾ, ಈಜಿಪ್ಟ್, ಇಥಿಯೋಪಿಯಾ, ಇರಾನ್‌, ಸೌದಿ ಅರೇಬಿಯಾ ಮತ್ತು ಯುಎಇಯನ್ನು ಬ್ರಿಕ್ಸ್‌ ಒಕ್ಕೂಟವನ್ನು ಸೇರಿಸಿಕೊಳ್ಳಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿತ್ತು.

ಆದರೆ ಅರ್ಜೆಂಟೀನಾದ ಹೊಸ ಅಧ್ಯಕ್ಷ ಜೇವಿಯರ್ ಮಿಲೀ ಅವರು ತಮ್ಮ ದೇಶವನ್ನು ಬ್ರಿಕ್ಸ್ ಸದಸ್ಯತ್ವದಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದರು. ಹೀಗಾಗಿ ಉಳಿದ ಐದು ದೇಶಗಳಿಗೆ ಸದಸ್ಯತ್ವ ನೀಡಲಾಗಿದೆ. ಹೊಸ ಸದಸ್ಯ ರಾಷ್ಟ್ರಗಳು ಒಕ್ಕೂಟಕ್ಕೆ ಬರುವುದರಿಂದ ಜಾಗತಿಕ ತೈಲ ರಫ್ತು ವಹಿವಾಟಿನ 80 ಪ್ರತಿಶತ ಬ್ರಿಕ್ಸ್ ಒಕ್ಕೂಟದ ತೆಕ್ಕೆಗೆ ಬರಲಿದೆ ಎನ್ನಲಾಗಿದೆ.

ಬ್ರಿಕ್ಸ್ ಅಥವಾ ಬ್ರಿಕ್ಸ್ ಸಂಘಟನೆ ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ಮತ್ತು ಐದು ರಾಷ್ಟ್ರಗಳನ್ನು ಒಳಗೊಂಡ ಒಂದು ಒಕ್ಕೂಟವಾಗಿದೆ. ಈ ದೇಶಗಳ ಮೊದಲಕ್ಷರಗಳಾದ B –ಬ್ರೆಜಿಲ್, R-ರಷ್ಯಾ, I –ಇಂಡಿಯಾ, C- ಚೀನಾ ಮತ್ತು S- ದಕ್ಷಿಣ ಆಫ್ರಿಕ (ಸೌತ್ ಆಫ್ರಿಕಾ) ಸೇರಿಸಿ  BRICS ಎಂದು ಹೆಸರಿಡಲಾಗಿತ್ತು.  2001ರಲ್ಲಿ ನಾಲ್ಕು ದೇಶಗಳನ್ನು ಒಳಗೊಂಡ ಬ್ರಿಕ್ ಆಗಿತ್ತು. 2010ರಲ್ಲಿ ದಕ್ಷಿಣ ಆಫ್ರಿಕವೂ ಸೇರಿದ ನಂತರ ಬ್ರಿಕ್ಸ್ ಆಯಿತು. 2009ರಿಂದಲೂ ಈ ಸಂಘಟನೆ ವಾರ್ಷಿಕವಾಗಿ ಶೃಂಗಸಭೆ ಸೇರುತ್ತಾ ಬಂದಿದೆ.

2015ರ ಮಾಹಿತಿಯಂತೆ ಬ್ರಿಕ್ಸ್‌ನ ಜನಸಂಖ್ಯೆ 3.6 ಲಕ್ಷ ಕೋಟಿ ಅಥವಾ ಜಾಗತಿಕ ಜನಸಂಖ್ಯೆಯ ಅರ್ಧದಷ್ಟು ಇದೆ. ಈ ದೇಶಗಳ ಒಟ್ಟಾರೆ ಜಿಡಿಪಿ ಅಥವಾ ಒಟ್ಟಾರೆ ಅಂತರಿಕ ಉತ್ಪಾದನೆ 16.6 ಲಕ್ಷ ಕೋಟಿ ಅಮೆರಿಕನ್ ಡಾಲರ್ ಆಗಿದ್ದು, ಇದು ಜಾಗತಿಕ ಒಟ್ಟಾರೆ ಉತ್ಪಾದನೆಯ ಶೇ 22ರಷ್ಟಾಗಿದೆ.

ಬ್ರಿಕ್‌ನ ಮೊದಲ ಶೃಂಗಸಭೆ 2009ರ ಜೂ.16 ರಂದು ರಷ್ಯಾದಲ್ಲಿ ನಡೆಯಿತು. ಮೊದಲ ಶೃಂಗ ಸಭೆಯಲ್ಲಿ  ಅಂದಿನ ಬ್ರೆಜಿಲ್ ಅಧ್ಯಕ್ಷರಾದ ಲುಯಿಜ್ ಇನಾಸಿಯೊ ಲುಲ ಡ ಸಿಲ್ವ, ರಷ್ಯಾದ ಅಂದಿನ ಅಧ್ಯಕ್ಷ ದಿಮಿತ್ರಿ ಮೆಡ್ವಡೇವ್, ಭಾರತದ ಅಂದಿನ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಮತ್ತು ಚೀನಾದ ಅಂದಿನ ಅಧ್ಯಕ್ಷ ಹು ಜಿಂಟಾವೊ ಹಾಜರಿದ್ದರು.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...