Homeಅಂತರಾಷ್ಟ್ರೀಯBRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

BRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

- Advertisement -
- Advertisement -

ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟ ಬ್ರಿಕ್ಸ್‌ಗೆ (BRICS) ಹೊಸದಾಗಿ ಐದು ರಾಷ್ಟ್ರಗಳನ್ನು ಸೇರಿಸಲಾಗಿದ್ದು, ಹೊಸದಾಗಿ ಸೇರ್ಪಡೆಗೊಂಡ ರಾಷ್ಟ್ರಗಳಿಗೆ ಬ್ರಿಕ್ಸ್‌ ಪೂರ್ಣ ಸದಸ್ಯತ್ವವನ್ನು ನೀಡಲಾಗಿದೆ.

BRICS ಒಕ್ಕೂಟಕ್ಕೆ ಹೊಸದಾಗಿ ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳನ್ನು ಸೇರ್ಪಡೆಗೊಳಿಸಲಾಗಿದೆ.

ಬ್ರಿಕ್ಸ್‌ನ ಅಧ್ಯಕ್ಷ ಸ್ಥಾನವನ್ನು ಮಾಸ್ಕೋ ವಹಿಸಿಕೊಂಡ ಬಳಿಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು  ಈ ಗುಂಪು 10-ರಾಷ್ಟ್ರಗಳ ಸಂಸ್ಥೆಯಾಗಿ ಮಾರ್ಪಟ್ಟಿದ್ದು, ಹೊಸ ಸದಸ್ಯರಾಗಿ ಐದು ರಾಷ್ಟ್ರಗಳು ಸೇರ್ಪಡೆಗೊಂಡಿವೆ ಎಂದು ಘೋಷಿಸಿದ್ದಾರೆ.

ಆಗಸ್ಟ್‌ನಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಬ್ರಿಕ್ಸ್‌ ಶೃಂಗಸಭೆಯಲ್ಲಿ ಬ್ರಿಕ್ಸ್‌ ನಾಯಕರು ಅರ್ಜೆಂಟೀನಾ ಸೇರಿದಂತೆ ಆರು ದೇಶಗಳನ್ನು ಜ.1ರಿಂದ ಜಾರಿಗೆ ಬರುವಂತೆ ಒಕ್ಕೂಟಕ್ಕೆ ಸೇರಿಸುವ ಪ್ರಸ್ತಾಪವನ್ನು ಅನುಮೋದಿಸಿದ್ದರು. ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ನಲ್ಲಿ ನಡೆದ 15ನೇ ಬ್ರಿಕ್ಸ್‌ ಶೃಂಗ ಸಭೆಯಲ್ಲಿ ಒಕ್ಕೂಟದ ವಿಸ್ತರಣೆಯ ಅಗತ್ಯತೆಯನ್ನು ಪ್ರತಿಪಾದಿಸಲಾಗಿತ್ತು. ಒಕ್ಕೂಟದ ವಿಸ್ತರಣೆಯ ಭಾಗವಾಗಿ ಅರ್ಜೆಂಟೀನಾ, ಈಜಿಪ್ಟ್, ಇಥಿಯೋಪಿಯಾ, ಇರಾನ್‌, ಸೌದಿ ಅರೇಬಿಯಾ ಮತ್ತು ಯುಎಇಯನ್ನು ಬ್ರಿಕ್ಸ್‌ ಒಕ್ಕೂಟವನ್ನು ಸೇರಿಸಿಕೊಳ್ಳಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿತ್ತು.

ಆದರೆ ಅರ್ಜೆಂಟೀನಾದ ಹೊಸ ಅಧ್ಯಕ್ಷ ಜೇವಿಯರ್ ಮಿಲೀ ಅವರು ತಮ್ಮ ದೇಶವನ್ನು ಬ್ರಿಕ್ಸ್ ಸದಸ್ಯತ್ವದಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದರು. ಹೀಗಾಗಿ ಉಳಿದ ಐದು ದೇಶಗಳಿಗೆ ಸದಸ್ಯತ್ವ ನೀಡಲಾಗಿದೆ. ಹೊಸ ಸದಸ್ಯ ರಾಷ್ಟ್ರಗಳು ಒಕ್ಕೂಟಕ್ಕೆ ಬರುವುದರಿಂದ ಜಾಗತಿಕ ತೈಲ ರಫ್ತು ವಹಿವಾಟಿನ 80 ಪ್ರತಿಶತ ಬ್ರಿಕ್ಸ್ ಒಕ್ಕೂಟದ ತೆಕ್ಕೆಗೆ ಬರಲಿದೆ ಎನ್ನಲಾಗಿದೆ.

ಬ್ರಿಕ್ಸ್ ಅಥವಾ ಬ್ರಿಕ್ಸ್ ಸಂಘಟನೆ ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ಮತ್ತು ಐದು ರಾಷ್ಟ್ರಗಳನ್ನು ಒಳಗೊಂಡ ಒಂದು ಒಕ್ಕೂಟವಾಗಿದೆ. ಈ ದೇಶಗಳ ಮೊದಲಕ್ಷರಗಳಾದ B –ಬ್ರೆಜಿಲ್, R-ರಷ್ಯಾ, I –ಇಂಡಿಯಾ, C- ಚೀನಾ ಮತ್ತು S- ದಕ್ಷಿಣ ಆಫ್ರಿಕ (ಸೌತ್ ಆಫ್ರಿಕಾ) ಸೇರಿಸಿ  BRICS ಎಂದು ಹೆಸರಿಡಲಾಗಿತ್ತು.  2001ರಲ್ಲಿ ನಾಲ್ಕು ದೇಶಗಳನ್ನು ಒಳಗೊಂಡ ಬ್ರಿಕ್ ಆಗಿತ್ತು. 2010ರಲ್ಲಿ ದಕ್ಷಿಣ ಆಫ್ರಿಕವೂ ಸೇರಿದ ನಂತರ ಬ್ರಿಕ್ಸ್ ಆಯಿತು. 2009ರಿಂದಲೂ ಈ ಸಂಘಟನೆ ವಾರ್ಷಿಕವಾಗಿ ಶೃಂಗಸಭೆ ಸೇರುತ್ತಾ ಬಂದಿದೆ.

2015ರ ಮಾಹಿತಿಯಂತೆ ಬ್ರಿಕ್ಸ್‌ನ ಜನಸಂಖ್ಯೆ 3.6 ಲಕ್ಷ ಕೋಟಿ ಅಥವಾ ಜಾಗತಿಕ ಜನಸಂಖ್ಯೆಯ ಅರ್ಧದಷ್ಟು ಇದೆ. ಈ ದೇಶಗಳ ಒಟ್ಟಾರೆ ಜಿಡಿಪಿ ಅಥವಾ ಒಟ್ಟಾರೆ ಅಂತರಿಕ ಉತ್ಪಾದನೆ 16.6 ಲಕ್ಷ ಕೋಟಿ ಅಮೆರಿಕನ್ ಡಾಲರ್ ಆಗಿದ್ದು, ಇದು ಜಾಗತಿಕ ಒಟ್ಟಾರೆ ಉತ್ಪಾದನೆಯ ಶೇ 22ರಷ್ಟಾಗಿದೆ.

ಬ್ರಿಕ್‌ನ ಮೊದಲ ಶೃಂಗಸಭೆ 2009ರ ಜೂ.16 ರಂದು ರಷ್ಯಾದಲ್ಲಿ ನಡೆಯಿತು. ಮೊದಲ ಶೃಂಗ ಸಭೆಯಲ್ಲಿ  ಅಂದಿನ ಬ್ರೆಜಿಲ್ ಅಧ್ಯಕ್ಷರಾದ ಲುಯಿಜ್ ಇನಾಸಿಯೊ ಲುಲ ಡ ಸಿಲ್ವ, ರಷ್ಯಾದ ಅಂದಿನ ಅಧ್ಯಕ್ಷ ದಿಮಿತ್ರಿ ಮೆಡ್ವಡೇವ್, ಭಾರತದ ಅಂದಿನ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಮತ್ತು ಚೀನಾದ ಅಂದಿನ ಅಧ್ಯಕ್ಷ ಹು ಜಿಂಟಾವೊ ಹಾಜರಿದ್ದರು.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...