Homeಚಳವಳಿಭಾರತದ ಮರೆತುಹೋದ ಮಹಿಳಾ ಸಾಧಕಿಯರಿವರು... : ಕೊನೆಯ ಕಂತು...

ಭಾರತದ ಮರೆತುಹೋದ ಮಹಿಳಾ ಸಾಧಕಿಯರಿವರು… : ಕೊನೆಯ ಕಂತು…

- Advertisement -
- Advertisement -

ಭಾರತದ ಸಂವಿಧಾನವನ್ನು 1949ರ ನವಂಬರ್ 26ರಂದು ಚುನಾಯಿತ ಸಂವಿಧಾನ ಸಭೆಯು ಅಂಗೀಕರಿಸಿತು. ಅದು ಜನವರಿ 26, 1950ರಲ್ಲಿ ಜಾರಿಗೆ ಬಂತು. ಸಂವಿಧಾನ ಸಭೆಯಲ್ಲಿ ಒಟ್ಟು 389 ಸದಸ್ಯರಿದ್ದರು. ಆದರೆ, ಸಂವಿಧಾನ ಸಭೆಯಲ್ಲಿದ್ದ ಆ ಕಾಲದ ಕೇವಲ 15 ಮಹಿಳೆಯರನ್ನು ನಾವು ಸಂಪೂರ್ಣ ಮರೆತುಬಿಟ್ಟಿದ್ದೇವೆ. ಅವರಲ್ಲಿ ಹತ್ತು ಮಂದಿಯ ಕಿರುಪರಿಚಯವನ್ನು ಮೊದಲ ಎರಡು ಭಾಗಗಳಲ್ಲಿ ನೀಡಲಾಗಿತ್ತು. ಈ ಮೂರನೆಯ ಭಾಗದಲ್ಲಿ ಇನ್ನೂ ಐವರು ಸಾಧಕಿಯರ ಪರಿಚಯ ನೀಡಲಾಗಿದೆ.

ಕೃಪೆ: ಫೆಮಿನಿಸಂ ಇನ್‌ ಇಂಡಿಯಾ

ಅನುವಾದ: ನಿಖಿಲ್ ಕೋಲ್ಪೆ

11. ರೇಣುಕಾ ರಾಯ್

ರೇಣುಕಾ ರಾಯ್ ಅವರು ಐಸಿಎಸ್ ಅಧಿಕಾರಿ ಸತೀಶ್ಚಂದ್ರ ರಾಯ್ ಮತ್ತು ಸಮಾಜ ಸೇವಕಿ ಹಾಗೂ ಆಲ್ ಇಂಡಿಯಾ ವುಮನ್ಸ್ ಕಾನ್ಫರೆನ್ಸ್ (ಎಐಡಬ್ಲ್ಯೂಸಿ) ಸದಸ್ಯೆಯಾಗಿದ್ದ ಚಾರುಲತಾ ಮುಖರ್ಜಿ ಅವರ ಮಗಳು. ಅವರು ಆ ಹೊತ್ತಿಗೇ ಲಂಡನ್ ಸ್ಕೂಲ್ ಆಫ್ ಇಕನಾಮಿಕ್ಸ್‌ನಿಂದ  ಬಿಎ ಪದವಿ ಪಡೆದಿದ್ದರು.

ಚಿತ್ರಕೃಪೆ: ಇಂಡಿಯಾ ನೆಟ್‌ಝೋನ್

1934ರಲ್ಲಿ ಅವರು ಎಐಡಬ್ಲ್ಯೂಸಿಯ ಕಾನೂನು ಕಾರ್ಯದರ್ಶಿಯಾಗಿ ‘ಭಾರತದಲ್ಲಿ ಮಹಿಳೆಯರ ಕಾನೂನು ದೌರ್ಬಲ್ಯ: ತನಿಖಾ ಆಯೋಗಕ್ಕಾಗಿ ಒಂದು ಮನವಿ’ ಎಂಬ ದಾಖಲೆಯನ್ನು ಸರಕಾರಕ್ಕೆ ಸಲ್ಲಿಸಿದ್ದರು. ಇದು ಶಾರದಾ ಮಸೂದೆಗೆ ಸಂಬಂಧಿಸಿದಂತೆ ಎಐಡಬ್ಲ್ಯೂಸಿಗೆ ಇದ್ದ ಅಸಮಾಧಾನವನ್ನು ಕ್ರೋಢೀಕರಿಸಿ, ಕಾನೂನಿಗೆ ಸಂಬಂಧಿಸಿ ಭಾರತೀಯ ಮಹಿಳೆಯರ ಸ್ಥಾನಮಾನ ಕುರಿತ ಹೋರಾಟಕ್ಕೆ ಅದರ ಬದ್ಧತೆಯನ್ನು ದೃಢಗೊಳಿಸಿತು. ರೇಣುಕಾ ಅವರು ಸಮಾನ ವೈಯಕ್ತಿಕ ಕಾನೂನಿಗಾಗಿ ವಾದಿಸಿದರು. ಭಾರತದಲ್ಲಿ ಮಹಿಳೆಯರ ಸ್ಥಾನಮಾನವು ಜಗತ್ತಿನಲ್ಲಿಯೇ ಅತ್ಯಂತ ತಾರತಮ್ಯದ್ದಾಗಿದೆ ಎಂಬುದು ಅವರ ವಾದವಾಗಿತ್ತು.

1943ರಿಂದ 1946ರ ತನಕ ಅವರು ಕೇಂದ್ರೀಯ ವಿಧಾನ ಸಭೆ (Central Legislative Assembly) ಮತ್ತು ತಾತ್ಕಾಲಿಕ ಸಂಸತ್ತಿನ ಸದಸ್ಯೆಯಾಗಿದ್ದರು. 1952-57ರಲ್ಲಿ ಅವರು ಪಶ್ಚಿಮ ಬಂಗಾಳದ ವಿಧಾನಸಭೆಯ ಸದಸ್ಯೆಯಾಗಿದ್ದರು ಮತ್ತು ಪರಿಹಾರ ಹಾಗೂ ಪುನರ್ವಸತಿ ಸಚಿವೆಯೂ ಆಗಿದ್ದರು. 1957ರಲ್ಲಿ ಮತ್ತು ಮತ್ತೆ 1962ರಲ್ಲಿ ಮಾಲ್ಡಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

12. ಸರೋಜಿನಿ ನಾಯ್ಡು
ಸರೋಜಿನಿ ನಾಯ್ಡು ಅವರು ಫೆಬ್ರವರಿ 13, 1879ರಲ್ಲಿ ಹೈದರಾಬಾದ್‌ನಲ್ಲಿ ಜನಿಸಿದರು. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಮತ್ತು ರಾಜ್ಯಪಾಲೆಯಾಗಿ ನೇಮಕಗೊಂಡ ಮೊದಲ ಮಹಿಳೆ. ಕವಯಿತ್ರಿಯಾಗಿದ್ದ ಅವರನ್ನು ಜನಪ್ರಿಯವಾಗಿ ಭಾರತದ ಕೋಗಿಲೆ (ನೈಟಿಂಗೇಲ್ ಆಫ್ ಇಂಡಿಯಾ) ಎಂದು ಕರೆಯಲಾಗುತ್ತಿತ್ತು.

ಚಿತ್ರಕೃಪೆ: ಫೇಮಸ್‌ ಪೀಪಲ್‌

ಲಂಡನ್‌ನ ಕಿಂಗ್ಸ್ ಕಾಲೇಜಿನಲ್ಲಿ, ನಂತರ ಕ್ಯಾಂಬ್ರಿಜ್‌ನ ಗರ್ಟನ್ ಕಾಲೇಜಿನಲ್ಲಿ ಅಧ್ಯಯನ ನಡೆಸಿದ್ದರು. ಮಹಿಳೆಯರ ಮತದಾನದ ಹಕ್ಕುಗಳಿಗಾಗಿ ಇಂಗ್ಲೆಂಡ್‌ನಲ್ಲಿ ನಡೆದ ಹೋರಾಟದ ಅನುಭವ ಪಡೆದ ಅವರು, ಭಾರತಕ್ಕೆ ಹಿಂತಿರುಗಿದ ಬಳಿಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿ ಗಾಂಧೀಜಿಯವರ ಅಸಹಕಾರ ಚಳವಳಿಯಲ್ಲಿ ಪಾಲುಗೊಂಡರು.

1924ರಲ್ಲಿ ಅವರು ಆಫ್ರಿಕಾಕ್ಕೆ ಪ್ರವಾಸ ಕೈಗೊಂಡು ಅಲ್ಲಿನ ಭಾರತೀಯರ ಪರವಾಗಿ ಹೋರಾಡಿದರು. 1928-29ರಲ್ಲಿ ಅವರು ಉತ್ತರ ಅಮೆರಿಕಾ ಪ್ರವಾಸ ಕೈಗೊಂಡು ಕಾಂಗ್ರೆಸ್ ಚಳವಳಿಯ ಕುರಿತು ಉಪನ್ಯಾಸಗಳನ್ನು ನೀಡಿದರು. ಭಾರತದಕ್ಕೆ ಮರಳಿದ ಬಳಿಕ ಅವರ ಬ್ರಿಟಿಷ್ ವಿರೋಧಿ ನಿಲುವು ಹಲವು ಬಾರಿ ಜೈಲಿಗೆ ಹೋಗುವುದಕ್ಕೆ ಕಾರಣವಾಯಿತು (1930, 1932 ಮತ್ತು 1942-43). 1931ರಲ್ಲಿ ಎರಡನೇ ದುಂಡುಮೇಜಿನ ಪರಿಷತ್ತಿನಲ್ಲಿ ಭಾಗವಹಿಸಲು ಅವರು ಗಾಂಧೀಜಿಯವರ ಜೊತೆ ಲಂಡನ್‌ಗೆ ತೆರಳಿದರು. ಸಾಹಿತ್ಯದಲ್ಲಿಯೂ ಸಾಧನೆ ಮಾಡಿದ್ದ ಅವರು, ರಾಯಲ್ ಸೊಸೈಟಿ ಆಫ್ ಲಿಟರೇಚರ್‌ನ ಫೆಲೋ ಆಗಿಯೂ ಆಯ್ಕೆಯಾಗಿದ್ದರು.

13. ಸುಚೇತಾ ಕೃಪಲಾನಿ
ಸುಚೇತಾ ಕೃಪಲಾನಿ ಅವರು ಈಗಿನ ಹರ್ಯಾಣದಲ್ಲಿರುವ ಅಂಬಾಲ ಪಟ್ಟಣದಲ್ಲಿ 1908ರಲ್ಲಿ ಹುಟ್ಟಿದರು. ಅವರನ್ನು ವಿಶೇಷವಾಗಿ 1942ರ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಅವರ ಪಾತ್ರಕ್ಕಾಗಿ ನೆನಪಿಸಿಕೊಳ್ಳಲಾಗುತ್ತದೆ. 1940ರಲ್ಲಿ ಅವರು ಕಾಂಗ್ರೆಸ್‌ನ ಮಹಿಳಾ ಘಟಕವನ್ನು ಸ್ಥಾಪಿಸಿದರು.

ಚಿತ್ರಕೃಪೆ: ಇಂಡಿಯಾ

ಸ್ವಾತಂತ್ರ್ಯೋತ್ತರದಲ್ಲಿ ಅವರು ಹೊಸದಿಲ್ಲಿಯಿಂದ ಲೋಕಸಭಾ ಸದಸ್ಯೆಯಾಗಿ ಆಯ್ಕೆಯಾದರು. ನಂತರ ಉತ್ತರ ಪ್ರದೇಶ ಸರಕಾರದಲ್ಲಿ ಕಾರ್ಮಿಕ, ಸಮುದಾಯ ಅಭಿವೃದ್ಧಿ ಹಾಗೂ ಕೈಗಾರಿಕಾ ಸಚಿವೆಯಾಗಿಯೂ ಸೇವೆ ಸಲ್ಲಿಸಿದರು. 1967ರಲ್ಲಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಅವರು ಭಾರತದ ಮೊದಲ ಮಹಿಳಾ ಮುಖ್ಯಮಂತ್ರಿ.

14. ವಿಜಯಲಕ್ಷ್ಮೀ ಪಂಡಿತ್
ವಿಜಯಲಕ್ಷ್ಮೀ ಪಂಡಿತ್ ಅವರು ಜವಾಹರಲಾಲ್ ನೆಹರೂ ಅವರ ತಂಗಿಯಾಗಿದ್ದು, ಆಗಸ್ಟ್ 18, 1900ರಂದು ಅಲಹಾಬಾದ್‌‌ನಲ್ಲಿ ಜನಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಾಗಿ 1933, 1940 ಮತ್ತು 1942-43ರಲ್ಲಿ ಮೂರು ಬಾರಿ ಸೆರೆವಾಸ ಅನುಭವಿಸಿದ್ದರು.

ಚಿತ್ರಕೃಪೆ: ಎನ್‌ಸೈಕ್ಲೋಪಿಡಿಯಾ

ಮೊದಲಿಗೆ ಅಲಹಾಬಾದ್ ಮುನಿಸಿಪಲ್ ಬೋರ್ಡ್‌ಗೆ ಆಯ್ಕೆಯಾದ ಅವರು, 1936ರಲ್ಲಿ ಯುನೈಟೆಡ್ ಪ್ರಾವಿನ್ಸಸ್ (ಹೆಚ್ಚುಕಡಿಮೆ ಈಗಿನ ಉತ್ತರ ಪ್ರದೇಶ) ವಿಧಾನಸಭೆಯ ಸದಸ್ಯೆಯಾದರು. 1937ರಲ್ಲಿ ಸ್ಥಳೀಯಾಡಳಿತ ಮತ್ತು ಸಾರ್ವಜನಿಕ ಆರೋಗ್ಯ ಸಚಿವೆಯಾದರು. ಅವರು ಕ್ಯಾಬಿನೆಟ್ ದರ್ಜೆಯ ಸಚಿವೆಯಾಗಿ ನೇಮಕಗೊಂಡ ಭಾರತದ ಮೊದಲ ಮಹಿಳೆ.

ಎರಡನೇ ವಿಶ್ವಯುದ್ಧದಲ್ಲಿ ಭಾರತವೂ ಪಾಲುದಾರ ಎಂಬ ಬ್ರಿಟಿಷ್ ಸರಕಾರದ ಘೋಷಣೆಯನ್ನು ಪ್ರತಿಭಟಿಸಿ 1939ರಲ್ಲಿ ಎಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಂತೆ ಅವರೂ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. 1953 ಸೆಪ್ಟೆಂಬರ್‌ನಲ್ಲಿ ಅವರು ವಿಶ್ವಸಂಸ್ಥೆಯ ಜನರಲ್ ಅಸ್ಸೆಂಬ್ಲಿಯ ಅಧ್ಯಕ್ಷೆಯಾಗಿ ನೇಮಕಗೊಂಡರು. ಈ ಹುದ್ದೆಗೆ ನೇಮಕಗೊಂಡ ಮೊದಲ ಮಹಿಳೆ ಹಾಗೂ ಮೊದಲ ಏಷ್ಯನ್ ಅವರಾಗಿದ್ದಾರೆ.

15. ಆನಿ ಮಸ್ಕರೇನ್
ಆನಿ ಮಸ್ಕರೇನ್ ಅವರು ಕೇರಳದ ತಿರುವನಂತಪುರದ ಕೆಥೋಲಿಕ್ ಕುಟುಂಬದಲ್ಲಿ ಜನಿಸಿದರು. ಅವರು ತಿರುವಾಂಕೂರು ಪ್ರಾಂತ್ಯ ಕಾಂಗ್ರೆಸ್ ಸೇರಿದ ಮೊದಲ ಮಹಿಳೆಯರಲ್ಲಿ ಒಬ್ಬರು. ತಿರುವಾಂಕೂರು ಪ್ರಾಂತ್ಯ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದ ಮೊದಲ ಮಹಿಳೆ. ಸ್ವಾತಂತ್ರ್ಯಕ್ಕಾಗಿ ಮತ್ತು ತಿರುವಾಂಕೂರು ರಾಜ್ಯವನ್ನು ಭಾರತದಲ್ಲಿ ವಿಲೀನಗೊಳಿಸಬೇಕೆಂದು ನಡೆದ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಚಿತ್ರಕೃಪೆ: ವೀಥಿ

ತನ್ನ ರಾಜಕೀಯ ಚಟುವಟಿಕೆಗಳಿಗಾಗಿ 1939-1947ರ ನಡುವೆ ಹಲವಾರು ಬಾರಿ ಸೆರೆವಾಸ ಅನುಭವಿಸಿದರು. 1951ರ ಚುನಾವಣೆಯಲ್ಲಿ ಮೊದಲ ಲೋಕಸಭೆಗೆ ಆಯ್ಕೆಯಾದರು. ಅವರು ಕೇರಳದ ಮೊದಲ ಸಂಸತ್ಸದಸ್ಯೆ. ಆಗ ಆಯ್ಕೆಯಾಗಿದ್ಜ ಕೇವಲ ಹತ್ತು ಮಹಿಳೆಯರಲ್ಲಿ ಒಬ್ಬರು. ಸಂಸತ್ತಿಗೆ ಆಯ್ಕೆಯಾಗುವ ಮೊದಲು ಅವರು ಅಲ್ಪಾವಧಿಗೆ ಆರೋಗ್ಯ ಮತ್ತು ವಿದ್ಯುತ್ ಖಾತೆಯ ಉಸ್ತುವಾರಿ ಸಚಿವೆಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....