Homeಚಳವಳಿಭಾರತದ ಮರೆತುಹೋದ ಮಹಿಳಾ ಸಾಧಕಿಯರಿವರು... : ಕೊನೆಯ ಕಂತು...

ಭಾರತದ ಮರೆತುಹೋದ ಮಹಿಳಾ ಸಾಧಕಿಯರಿವರು… : ಕೊನೆಯ ಕಂತು…

- Advertisement -
- Advertisement -

ಭಾರತದ ಸಂವಿಧಾನವನ್ನು 1949ರ ನವಂಬರ್ 26ರಂದು ಚುನಾಯಿತ ಸಂವಿಧಾನ ಸಭೆಯು ಅಂಗೀಕರಿಸಿತು. ಅದು ಜನವರಿ 26, 1950ರಲ್ಲಿ ಜಾರಿಗೆ ಬಂತು. ಸಂವಿಧಾನ ಸಭೆಯಲ್ಲಿ ಒಟ್ಟು 389 ಸದಸ್ಯರಿದ್ದರು. ಆದರೆ, ಸಂವಿಧಾನ ಸಭೆಯಲ್ಲಿದ್ದ ಆ ಕಾಲದ ಕೇವಲ 15 ಮಹಿಳೆಯರನ್ನು ನಾವು ಸಂಪೂರ್ಣ ಮರೆತುಬಿಟ್ಟಿದ್ದೇವೆ. ಅವರಲ್ಲಿ ಹತ್ತು ಮಂದಿಯ ಕಿರುಪರಿಚಯವನ್ನು ಮೊದಲ ಎರಡು ಭಾಗಗಳಲ್ಲಿ ನೀಡಲಾಗಿತ್ತು. ಈ ಮೂರನೆಯ ಭಾಗದಲ್ಲಿ ಇನ್ನೂ ಐವರು ಸಾಧಕಿಯರ ಪರಿಚಯ ನೀಡಲಾಗಿದೆ.

ಕೃಪೆ: ಫೆಮಿನಿಸಂ ಇನ್‌ ಇಂಡಿಯಾ

ಅನುವಾದ: ನಿಖಿಲ್ ಕೋಲ್ಪೆ

11. ರೇಣುಕಾ ರಾಯ್

ರೇಣುಕಾ ರಾಯ್ ಅವರು ಐಸಿಎಸ್ ಅಧಿಕಾರಿ ಸತೀಶ್ಚಂದ್ರ ರಾಯ್ ಮತ್ತು ಸಮಾಜ ಸೇವಕಿ ಹಾಗೂ ಆಲ್ ಇಂಡಿಯಾ ವುಮನ್ಸ್ ಕಾನ್ಫರೆನ್ಸ್ (ಎಐಡಬ್ಲ್ಯೂಸಿ) ಸದಸ್ಯೆಯಾಗಿದ್ದ ಚಾರುಲತಾ ಮುಖರ್ಜಿ ಅವರ ಮಗಳು. ಅವರು ಆ ಹೊತ್ತಿಗೇ ಲಂಡನ್ ಸ್ಕೂಲ್ ಆಫ್ ಇಕನಾಮಿಕ್ಸ್‌ನಿಂದ  ಬಿಎ ಪದವಿ ಪಡೆದಿದ್ದರು.

ಚಿತ್ರಕೃಪೆ: ಇಂಡಿಯಾ ನೆಟ್‌ಝೋನ್

1934ರಲ್ಲಿ ಅವರು ಎಐಡಬ್ಲ್ಯೂಸಿಯ ಕಾನೂನು ಕಾರ್ಯದರ್ಶಿಯಾಗಿ ‘ಭಾರತದಲ್ಲಿ ಮಹಿಳೆಯರ ಕಾನೂನು ದೌರ್ಬಲ್ಯ: ತನಿಖಾ ಆಯೋಗಕ್ಕಾಗಿ ಒಂದು ಮನವಿ’ ಎಂಬ ದಾಖಲೆಯನ್ನು ಸರಕಾರಕ್ಕೆ ಸಲ್ಲಿಸಿದ್ದರು. ಇದು ಶಾರದಾ ಮಸೂದೆಗೆ ಸಂಬಂಧಿಸಿದಂತೆ ಎಐಡಬ್ಲ್ಯೂಸಿಗೆ ಇದ್ದ ಅಸಮಾಧಾನವನ್ನು ಕ್ರೋಢೀಕರಿಸಿ, ಕಾನೂನಿಗೆ ಸಂಬಂಧಿಸಿ ಭಾರತೀಯ ಮಹಿಳೆಯರ ಸ್ಥಾನಮಾನ ಕುರಿತ ಹೋರಾಟಕ್ಕೆ ಅದರ ಬದ್ಧತೆಯನ್ನು ದೃಢಗೊಳಿಸಿತು. ರೇಣುಕಾ ಅವರು ಸಮಾನ ವೈಯಕ್ತಿಕ ಕಾನೂನಿಗಾಗಿ ವಾದಿಸಿದರು. ಭಾರತದಲ್ಲಿ ಮಹಿಳೆಯರ ಸ್ಥಾನಮಾನವು ಜಗತ್ತಿನಲ್ಲಿಯೇ ಅತ್ಯಂತ ತಾರತಮ್ಯದ್ದಾಗಿದೆ ಎಂಬುದು ಅವರ ವಾದವಾಗಿತ್ತು.

1943ರಿಂದ 1946ರ ತನಕ ಅವರು ಕೇಂದ್ರೀಯ ವಿಧಾನ ಸಭೆ (Central Legislative Assembly) ಮತ್ತು ತಾತ್ಕಾಲಿಕ ಸಂಸತ್ತಿನ ಸದಸ್ಯೆಯಾಗಿದ್ದರು. 1952-57ರಲ್ಲಿ ಅವರು ಪಶ್ಚಿಮ ಬಂಗಾಳದ ವಿಧಾನಸಭೆಯ ಸದಸ್ಯೆಯಾಗಿದ್ದರು ಮತ್ತು ಪರಿಹಾರ ಹಾಗೂ ಪುನರ್ವಸತಿ ಸಚಿವೆಯೂ ಆಗಿದ್ದರು. 1957ರಲ್ಲಿ ಮತ್ತು ಮತ್ತೆ 1962ರಲ್ಲಿ ಮಾಲ್ಡಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

12. ಸರೋಜಿನಿ ನಾಯ್ಡು
ಸರೋಜಿನಿ ನಾಯ್ಡು ಅವರು ಫೆಬ್ರವರಿ 13, 1879ರಲ್ಲಿ ಹೈದರಾಬಾದ್‌ನಲ್ಲಿ ಜನಿಸಿದರು. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಮತ್ತು ರಾಜ್ಯಪಾಲೆಯಾಗಿ ನೇಮಕಗೊಂಡ ಮೊದಲ ಮಹಿಳೆ. ಕವಯಿತ್ರಿಯಾಗಿದ್ದ ಅವರನ್ನು ಜನಪ್ರಿಯವಾಗಿ ಭಾರತದ ಕೋಗಿಲೆ (ನೈಟಿಂಗೇಲ್ ಆಫ್ ಇಂಡಿಯಾ) ಎಂದು ಕರೆಯಲಾಗುತ್ತಿತ್ತು.

ಚಿತ್ರಕೃಪೆ: ಫೇಮಸ್‌ ಪೀಪಲ್‌

ಲಂಡನ್‌ನ ಕಿಂಗ್ಸ್ ಕಾಲೇಜಿನಲ್ಲಿ, ನಂತರ ಕ್ಯಾಂಬ್ರಿಜ್‌ನ ಗರ್ಟನ್ ಕಾಲೇಜಿನಲ್ಲಿ ಅಧ್ಯಯನ ನಡೆಸಿದ್ದರು. ಮಹಿಳೆಯರ ಮತದಾನದ ಹಕ್ಕುಗಳಿಗಾಗಿ ಇಂಗ್ಲೆಂಡ್‌ನಲ್ಲಿ ನಡೆದ ಹೋರಾಟದ ಅನುಭವ ಪಡೆದ ಅವರು, ಭಾರತಕ್ಕೆ ಹಿಂತಿರುಗಿದ ಬಳಿಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿ ಗಾಂಧೀಜಿಯವರ ಅಸಹಕಾರ ಚಳವಳಿಯಲ್ಲಿ ಪಾಲುಗೊಂಡರು.

1924ರಲ್ಲಿ ಅವರು ಆಫ್ರಿಕಾಕ್ಕೆ ಪ್ರವಾಸ ಕೈಗೊಂಡು ಅಲ್ಲಿನ ಭಾರತೀಯರ ಪರವಾಗಿ ಹೋರಾಡಿದರು. 1928-29ರಲ್ಲಿ ಅವರು ಉತ್ತರ ಅಮೆರಿಕಾ ಪ್ರವಾಸ ಕೈಗೊಂಡು ಕಾಂಗ್ರೆಸ್ ಚಳವಳಿಯ ಕುರಿತು ಉಪನ್ಯಾಸಗಳನ್ನು ನೀಡಿದರು. ಭಾರತದಕ್ಕೆ ಮರಳಿದ ಬಳಿಕ ಅವರ ಬ್ರಿಟಿಷ್ ವಿರೋಧಿ ನಿಲುವು ಹಲವು ಬಾರಿ ಜೈಲಿಗೆ ಹೋಗುವುದಕ್ಕೆ ಕಾರಣವಾಯಿತು (1930, 1932 ಮತ್ತು 1942-43). 1931ರಲ್ಲಿ ಎರಡನೇ ದುಂಡುಮೇಜಿನ ಪರಿಷತ್ತಿನಲ್ಲಿ ಭಾಗವಹಿಸಲು ಅವರು ಗಾಂಧೀಜಿಯವರ ಜೊತೆ ಲಂಡನ್‌ಗೆ ತೆರಳಿದರು. ಸಾಹಿತ್ಯದಲ್ಲಿಯೂ ಸಾಧನೆ ಮಾಡಿದ್ದ ಅವರು, ರಾಯಲ್ ಸೊಸೈಟಿ ಆಫ್ ಲಿಟರೇಚರ್‌ನ ಫೆಲೋ ಆಗಿಯೂ ಆಯ್ಕೆಯಾಗಿದ್ದರು.

13. ಸುಚೇತಾ ಕೃಪಲಾನಿ
ಸುಚೇತಾ ಕೃಪಲಾನಿ ಅವರು ಈಗಿನ ಹರ್ಯಾಣದಲ್ಲಿರುವ ಅಂಬಾಲ ಪಟ್ಟಣದಲ್ಲಿ 1908ರಲ್ಲಿ ಹುಟ್ಟಿದರು. ಅವರನ್ನು ವಿಶೇಷವಾಗಿ 1942ರ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಅವರ ಪಾತ್ರಕ್ಕಾಗಿ ನೆನಪಿಸಿಕೊಳ್ಳಲಾಗುತ್ತದೆ. 1940ರಲ್ಲಿ ಅವರು ಕಾಂಗ್ರೆಸ್‌ನ ಮಹಿಳಾ ಘಟಕವನ್ನು ಸ್ಥಾಪಿಸಿದರು.

ಚಿತ್ರಕೃಪೆ: ಇಂಡಿಯಾ

ಸ್ವಾತಂತ್ರ್ಯೋತ್ತರದಲ್ಲಿ ಅವರು ಹೊಸದಿಲ್ಲಿಯಿಂದ ಲೋಕಸಭಾ ಸದಸ್ಯೆಯಾಗಿ ಆಯ್ಕೆಯಾದರು. ನಂತರ ಉತ್ತರ ಪ್ರದೇಶ ಸರಕಾರದಲ್ಲಿ ಕಾರ್ಮಿಕ, ಸಮುದಾಯ ಅಭಿವೃದ್ಧಿ ಹಾಗೂ ಕೈಗಾರಿಕಾ ಸಚಿವೆಯಾಗಿಯೂ ಸೇವೆ ಸಲ್ಲಿಸಿದರು. 1967ರಲ್ಲಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಅವರು ಭಾರತದ ಮೊದಲ ಮಹಿಳಾ ಮುಖ್ಯಮಂತ್ರಿ.

14. ವಿಜಯಲಕ್ಷ್ಮೀ ಪಂಡಿತ್
ವಿಜಯಲಕ್ಷ್ಮೀ ಪಂಡಿತ್ ಅವರು ಜವಾಹರಲಾಲ್ ನೆಹರೂ ಅವರ ತಂಗಿಯಾಗಿದ್ದು, ಆಗಸ್ಟ್ 18, 1900ರಂದು ಅಲಹಾಬಾದ್‌‌ನಲ್ಲಿ ಜನಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಾಗಿ 1933, 1940 ಮತ್ತು 1942-43ರಲ್ಲಿ ಮೂರು ಬಾರಿ ಸೆರೆವಾಸ ಅನುಭವಿಸಿದ್ದರು.

ಚಿತ್ರಕೃಪೆ: ಎನ್‌ಸೈಕ್ಲೋಪಿಡಿಯಾ

ಮೊದಲಿಗೆ ಅಲಹಾಬಾದ್ ಮುನಿಸಿಪಲ್ ಬೋರ್ಡ್‌ಗೆ ಆಯ್ಕೆಯಾದ ಅವರು, 1936ರಲ್ಲಿ ಯುನೈಟೆಡ್ ಪ್ರಾವಿನ್ಸಸ್ (ಹೆಚ್ಚುಕಡಿಮೆ ಈಗಿನ ಉತ್ತರ ಪ್ರದೇಶ) ವಿಧಾನಸಭೆಯ ಸದಸ್ಯೆಯಾದರು. 1937ರಲ್ಲಿ ಸ್ಥಳೀಯಾಡಳಿತ ಮತ್ತು ಸಾರ್ವಜನಿಕ ಆರೋಗ್ಯ ಸಚಿವೆಯಾದರು. ಅವರು ಕ್ಯಾಬಿನೆಟ್ ದರ್ಜೆಯ ಸಚಿವೆಯಾಗಿ ನೇಮಕಗೊಂಡ ಭಾರತದ ಮೊದಲ ಮಹಿಳೆ.

ಎರಡನೇ ವಿಶ್ವಯುದ್ಧದಲ್ಲಿ ಭಾರತವೂ ಪಾಲುದಾರ ಎಂಬ ಬ್ರಿಟಿಷ್ ಸರಕಾರದ ಘೋಷಣೆಯನ್ನು ಪ್ರತಿಭಟಿಸಿ 1939ರಲ್ಲಿ ಎಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಂತೆ ಅವರೂ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. 1953 ಸೆಪ್ಟೆಂಬರ್‌ನಲ್ಲಿ ಅವರು ವಿಶ್ವಸಂಸ್ಥೆಯ ಜನರಲ್ ಅಸ್ಸೆಂಬ್ಲಿಯ ಅಧ್ಯಕ್ಷೆಯಾಗಿ ನೇಮಕಗೊಂಡರು. ಈ ಹುದ್ದೆಗೆ ನೇಮಕಗೊಂಡ ಮೊದಲ ಮಹಿಳೆ ಹಾಗೂ ಮೊದಲ ಏಷ್ಯನ್ ಅವರಾಗಿದ್ದಾರೆ.

15. ಆನಿ ಮಸ್ಕರೇನ್
ಆನಿ ಮಸ್ಕರೇನ್ ಅವರು ಕೇರಳದ ತಿರುವನಂತಪುರದ ಕೆಥೋಲಿಕ್ ಕುಟುಂಬದಲ್ಲಿ ಜನಿಸಿದರು. ಅವರು ತಿರುವಾಂಕೂರು ಪ್ರಾಂತ್ಯ ಕಾಂಗ್ರೆಸ್ ಸೇರಿದ ಮೊದಲ ಮಹಿಳೆಯರಲ್ಲಿ ಒಬ್ಬರು. ತಿರುವಾಂಕೂರು ಪ್ರಾಂತ್ಯ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದ ಮೊದಲ ಮಹಿಳೆ. ಸ್ವಾತಂತ್ರ್ಯಕ್ಕಾಗಿ ಮತ್ತು ತಿರುವಾಂಕೂರು ರಾಜ್ಯವನ್ನು ಭಾರತದಲ್ಲಿ ವಿಲೀನಗೊಳಿಸಬೇಕೆಂದು ನಡೆದ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಚಿತ್ರಕೃಪೆ: ವೀಥಿ

ತನ್ನ ರಾಜಕೀಯ ಚಟುವಟಿಕೆಗಳಿಗಾಗಿ 1939-1947ರ ನಡುವೆ ಹಲವಾರು ಬಾರಿ ಸೆರೆವಾಸ ಅನುಭವಿಸಿದರು. 1951ರ ಚುನಾವಣೆಯಲ್ಲಿ ಮೊದಲ ಲೋಕಸಭೆಗೆ ಆಯ್ಕೆಯಾದರು. ಅವರು ಕೇರಳದ ಮೊದಲ ಸಂಸತ್ಸದಸ್ಯೆ. ಆಗ ಆಯ್ಕೆಯಾಗಿದ್ಜ ಕೇವಲ ಹತ್ತು ಮಹಿಳೆಯರಲ್ಲಿ ಒಬ್ಬರು. ಸಂಸತ್ತಿಗೆ ಆಯ್ಕೆಯಾಗುವ ಮೊದಲು ಅವರು ಅಲ್ಪಾವಧಿಗೆ ಆರೋಗ್ಯ ಮತ್ತು ವಿದ್ಯುತ್ ಖಾತೆಯ ಉಸ್ತುವಾರಿ ಸಚಿವೆಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...