Homeಚಳವಳಿಭಾರತದ ಮರೆತುಹೋದ ಮಹಿಳಾ ಸಾಧಕಿಯರಿವರು... : ಕೊನೆಯ ಕಂತು...

ಭಾರತದ ಮರೆತುಹೋದ ಮಹಿಳಾ ಸಾಧಕಿಯರಿವರು… : ಕೊನೆಯ ಕಂತು…

- Advertisement -
- Advertisement -

ಭಾರತದ ಸಂವಿಧಾನವನ್ನು 1949ರ ನವಂಬರ್ 26ರಂದು ಚುನಾಯಿತ ಸಂವಿಧಾನ ಸಭೆಯು ಅಂಗೀಕರಿಸಿತು. ಅದು ಜನವರಿ 26, 1950ರಲ್ಲಿ ಜಾರಿಗೆ ಬಂತು. ಸಂವಿಧಾನ ಸಭೆಯಲ್ಲಿ ಒಟ್ಟು 389 ಸದಸ್ಯರಿದ್ದರು. ಆದರೆ, ಸಂವಿಧಾನ ಸಭೆಯಲ್ಲಿದ್ದ ಆ ಕಾಲದ ಕೇವಲ 15 ಮಹಿಳೆಯರನ್ನು ನಾವು ಸಂಪೂರ್ಣ ಮರೆತುಬಿಟ್ಟಿದ್ದೇವೆ. ಅವರಲ್ಲಿ ಹತ್ತು ಮಂದಿಯ ಕಿರುಪರಿಚಯವನ್ನು ಮೊದಲ ಎರಡು ಭಾಗಗಳಲ್ಲಿ ನೀಡಲಾಗಿತ್ತು. ಈ ಮೂರನೆಯ ಭಾಗದಲ್ಲಿ ಇನ್ನೂ ಐವರು ಸಾಧಕಿಯರ ಪರಿಚಯ ನೀಡಲಾಗಿದೆ.

ಕೃಪೆ: ಫೆಮಿನಿಸಂ ಇನ್‌ ಇಂಡಿಯಾ

ಅನುವಾದ: ನಿಖಿಲ್ ಕೋಲ್ಪೆ

11. ರೇಣುಕಾ ರಾಯ್

ರೇಣುಕಾ ರಾಯ್ ಅವರು ಐಸಿಎಸ್ ಅಧಿಕಾರಿ ಸತೀಶ್ಚಂದ್ರ ರಾಯ್ ಮತ್ತು ಸಮಾಜ ಸೇವಕಿ ಹಾಗೂ ಆಲ್ ಇಂಡಿಯಾ ವುಮನ್ಸ್ ಕಾನ್ಫರೆನ್ಸ್ (ಎಐಡಬ್ಲ್ಯೂಸಿ) ಸದಸ್ಯೆಯಾಗಿದ್ದ ಚಾರುಲತಾ ಮುಖರ್ಜಿ ಅವರ ಮಗಳು. ಅವರು ಆ ಹೊತ್ತಿಗೇ ಲಂಡನ್ ಸ್ಕೂಲ್ ಆಫ್ ಇಕನಾಮಿಕ್ಸ್‌ನಿಂದ  ಬಿಎ ಪದವಿ ಪಡೆದಿದ್ದರು.

ಚಿತ್ರಕೃಪೆ: ಇಂಡಿಯಾ ನೆಟ್‌ಝೋನ್

1934ರಲ್ಲಿ ಅವರು ಎಐಡಬ್ಲ್ಯೂಸಿಯ ಕಾನೂನು ಕಾರ್ಯದರ್ಶಿಯಾಗಿ ‘ಭಾರತದಲ್ಲಿ ಮಹಿಳೆಯರ ಕಾನೂನು ದೌರ್ಬಲ್ಯ: ತನಿಖಾ ಆಯೋಗಕ್ಕಾಗಿ ಒಂದು ಮನವಿ’ ಎಂಬ ದಾಖಲೆಯನ್ನು ಸರಕಾರಕ್ಕೆ ಸಲ್ಲಿಸಿದ್ದರು. ಇದು ಶಾರದಾ ಮಸೂದೆಗೆ ಸಂಬಂಧಿಸಿದಂತೆ ಎಐಡಬ್ಲ್ಯೂಸಿಗೆ ಇದ್ದ ಅಸಮಾಧಾನವನ್ನು ಕ್ರೋಢೀಕರಿಸಿ, ಕಾನೂನಿಗೆ ಸಂಬಂಧಿಸಿ ಭಾರತೀಯ ಮಹಿಳೆಯರ ಸ್ಥಾನಮಾನ ಕುರಿತ ಹೋರಾಟಕ್ಕೆ ಅದರ ಬದ್ಧತೆಯನ್ನು ದೃಢಗೊಳಿಸಿತು. ರೇಣುಕಾ ಅವರು ಸಮಾನ ವೈಯಕ್ತಿಕ ಕಾನೂನಿಗಾಗಿ ವಾದಿಸಿದರು. ಭಾರತದಲ್ಲಿ ಮಹಿಳೆಯರ ಸ್ಥಾನಮಾನವು ಜಗತ್ತಿನಲ್ಲಿಯೇ ಅತ್ಯಂತ ತಾರತಮ್ಯದ್ದಾಗಿದೆ ಎಂಬುದು ಅವರ ವಾದವಾಗಿತ್ತು.

1943ರಿಂದ 1946ರ ತನಕ ಅವರು ಕೇಂದ್ರೀಯ ವಿಧಾನ ಸಭೆ (Central Legislative Assembly) ಮತ್ತು ತಾತ್ಕಾಲಿಕ ಸಂಸತ್ತಿನ ಸದಸ್ಯೆಯಾಗಿದ್ದರು. 1952-57ರಲ್ಲಿ ಅವರು ಪಶ್ಚಿಮ ಬಂಗಾಳದ ವಿಧಾನಸಭೆಯ ಸದಸ್ಯೆಯಾಗಿದ್ದರು ಮತ್ತು ಪರಿಹಾರ ಹಾಗೂ ಪುನರ್ವಸತಿ ಸಚಿವೆಯೂ ಆಗಿದ್ದರು. 1957ರಲ್ಲಿ ಮತ್ತು ಮತ್ತೆ 1962ರಲ್ಲಿ ಮಾಲ್ಡಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

12. ಸರೋಜಿನಿ ನಾಯ್ಡು
ಸರೋಜಿನಿ ನಾಯ್ಡು ಅವರು ಫೆಬ್ರವರಿ 13, 1879ರಲ್ಲಿ ಹೈದರಾಬಾದ್‌ನಲ್ಲಿ ಜನಿಸಿದರು. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಮತ್ತು ರಾಜ್ಯಪಾಲೆಯಾಗಿ ನೇಮಕಗೊಂಡ ಮೊದಲ ಮಹಿಳೆ. ಕವಯಿತ್ರಿಯಾಗಿದ್ದ ಅವರನ್ನು ಜನಪ್ರಿಯವಾಗಿ ಭಾರತದ ಕೋಗಿಲೆ (ನೈಟಿಂಗೇಲ್ ಆಫ್ ಇಂಡಿಯಾ) ಎಂದು ಕರೆಯಲಾಗುತ್ತಿತ್ತು.

ಚಿತ್ರಕೃಪೆ: ಫೇಮಸ್‌ ಪೀಪಲ್‌

ಲಂಡನ್‌ನ ಕಿಂಗ್ಸ್ ಕಾಲೇಜಿನಲ್ಲಿ, ನಂತರ ಕ್ಯಾಂಬ್ರಿಜ್‌ನ ಗರ್ಟನ್ ಕಾಲೇಜಿನಲ್ಲಿ ಅಧ್ಯಯನ ನಡೆಸಿದ್ದರು. ಮಹಿಳೆಯರ ಮತದಾನದ ಹಕ್ಕುಗಳಿಗಾಗಿ ಇಂಗ್ಲೆಂಡ್‌ನಲ್ಲಿ ನಡೆದ ಹೋರಾಟದ ಅನುಭವ ಪಡೆದ ಅವರು, ಭಾರತಕ್ಕೆ ಹಿಂತಿರುಗಿದ ಬಳಿಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿ ಗಾಂಧೀಜಿಯವರ ಅಸಹಕಾರ ಚಳವಳಿಯಲ್ಲಿ ಪಾಲುಗೊಂಡರು.

1924ರಲ್ಲಿ ಅವರು ಆಫ್ರಿಕಾಕ್ಕೆ ಪ್ರವಾಸ ಕೈಗೊಂಡು ಅಲ್ಲಿನ ಭಾರತೀಯರ ಪರವಾಗಿ ಹೋರಾಡಿದರು. 1928-29ರಲ್ಲಿ ಅವರು ಉತ್ತರ ಅಮೆರಿಕಾ ಪ್ರವಾಸ ಕೈಗೊಂಡು ಕಾಂಗ್ರೆಸ್ ಚಳವಳಿಯ ಕುರಿತು ಉಪನ್ಯಾಸಗಳನ್ನು ನೀಡಿದರು. ಭಾರತದಕ್ಕೆ ಮರಳಿದ ಬಳಿಕ ಅವರ ಬ್ರಿಟಿಷ್ ವಿರೋಧಿ ನಿಲುವು ಹಲವು ಬಾರಿ ಜೈಲಿಗೆ ಹೋಗುವುದಕ್ಕೆ ಕಾರಣವಾಯಿತು (1930, 1932 ಮತ್ತು 1942-43). 1931ರಲ್ಲಿ ಎರಡನೇ ದುಂಡುಮೇಜಿನ ಪರಿಷತ್ತಿನಲ್ಲಿ ಭಾಗವಹಿಸಲು ಅವರು ಗಾಂಧೀಜಿಯವರ ಜೊತೆ ಲಂಡನ್‌ಗೆ ತೆರಳಿದರು. ಸಾಹಿತ್ಯದಲ್ಲಿಯೂ ಸಾಧನೆ ಮಾಡಿದ್ದ ಅವರು, ರಾಯಲ್ ಸೊಸೈಟಿ ಆಫ್ ಲಿಟರೇಚರ್‌ನ ಫೆಲೋ ಆಗಿಯೂ ಆಯ್ಕೆಯಾಗಿದ್ದರು.

13. ಸುಚೇತಾ ಕೃಪಲಾನಿ
ಸುಚೇತಾ ಕೃಪಲಾನಿ ಅವರು ಈಗಿನ ಹರ್ಯಾಣದಲ್ಲಿರುವ ಅಂಬಾಲ ಪಟ್ಟಣದಲ್ಲಿ 1908ರಲ್ಲಿ ಹುಟ್ಟಿದರು. ಅವರನ್ನು ವಿಶೇಷವಾಗಿ 1942ರ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಅವರ ಪಾತ್ರಕ್ಕಾಗಿ ನೆನಪಿಸಿಕೊಳ್ಳಲಾಗುತ್ತದೆ. 1940ರಲ್ಲಿ ಅವರು ಕಾಂಗ್ರೆಸ್‌ನ ಮಹಿಳಾ ಘಟಕವನ್ನು ಸ್ಥಾಪಿಸಿದರು.

ಚಿತ್ರಕೃಪೆ: ಇಂಡಿಯಾ

ಸ್ವಾತಂತ್ರ್ಯೋತ್ತರದಲ್ಲಿ ಅವರು ಹೊಸದಿಲ್ಲಿಯಿಂದ ಲೋಕಸಭಾ ಸದಸ್ಯೆಯಾಗಿ ಆಯ್ಕೆಯಾದರು. ನಂತರ ಉತ್ತರ ಪ್ರದೇಶ ಸರಕಾರದಲ್ಲಿ ಕಾರ್ಮಿಕ, ಸಮುದಾಯ ಅಭಿವೃದ್ಧಿ ಹಾಗೂ ಕೈಗಾರಿಕಾ ಸಚಿವೆಯಾಗಿಯೂ ಸೇವೆ ಸಲ್ಲಿಸಿದರು. 1967ರಲ್ಲಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಅವರು ಭಾರತದ ಮೊದಲ ಮಹಿಳಾ ಮುಖ್ಯಮಂತ್ರಿ.

14. ವಿಜಯಲಕ್ಷ್ಮೀ ಪಂಡಿತ್
ವಿಜಯಲಕ್ಷ್ಮೀ ಪಂಡಿತ್ ಅವರು ಜವಾಹರಲಾಲ್ ನೆಹರೂ ಅವರ ತಂಗಿಯಾಗಿದ್ದು, ಆಗಸ್ಟ್ 18, 1900ರಂದು ಅಲಹಾಬಾದ್‌‌ನಲ್ಲಿ ಜನಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಾಗಿ 1933, 1940 ಮತ್ತು 1942-43ರಲ್ಲಿ ಮೂರು ಬಾರಿ ಸೆರೆವಾಸ ಅನುಭವಿಸಿದ್ದರು.

ಚಿತ್ರಕೃಪೆ: ಎನ್‌ಸೈಕ್ಲೋಪಿಡಿಯಾ

ಮೊದಲಿಗೆ ಅಲಹಾಬಾದ್ ಮುನಿಸಿಪಲ್ ಬೋರ್ಡ್‌ಗೆ ಆಯ್ಕೆಯಾದ ಅವರು, 1936ರಲ್ಲಿ ಯುನೈಟೆಡ್ ಪ್ರಾವಿನ್ಸಸ್ (ಹೆಚ್ಚುಕಡಿಮೆ ಈಗಿನ ಉತ್ತರ ಪ್ರದೇಶ) ವಿಧಾನಸಭೆಯ ಸದಸ್ಯೆಯಾದರು. 1937ರಲ್ಲಿ ಸ್ಥಳೀಯಾಡಳಿತ ಮತ್ತು ಸಾರ್ವಜನಿಕ ಆರೋಗ್ಯ ಸಚಿವೆಯಾದರು. ಅವರು ಕ್ಯಾಬಿನೆಟ್ ದರ್ಜೆಯ ಸಚಿವೆಯಾಗಿ ನೇಮಕಗೊಂಡ ಭಾರತದ ಮೊದಲ ಮಹಿಳೆ.

ಎರಡನೇ ವಿಶ್ವಯುದ್ಧದಲ್ಲಿ ಭಾರತವೂ ಪಾಲುದಾರ ಎಂಬ ಬ್ರಿಟಿಷ್ ಸರಕಾರದ ಘೋಷಣೆಯನ್ನು ಪ್ರತಿಭಟಿಸಿ 1939ರಲ್ಲಿ ಎಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಂತೆ ಅವರೂ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. 1953 ಸೆಪ್ಟೆಂಬರ್‌ನಲ್ಲಿ ಅವರು ವಿಶ್ವಸಂಸ್ಥೆಯ ಜನರಲ್ ಅಸ್ಸೆಂಬ್ಲಿಯ ಅಧ್ಯಕ್ಷೆಯಾಗಿ ನೇಮಕಗೊಂಡರು. ಈ ಹುದ್ದೆಗೆ ನೇಮಕಗೊಂಡ ಮೊದಲ ಮಹಿಳೆ ಹಾಗೂ ಮೊದಲ ಏಷ್ಯನ್ ಅವರಾಗಿದ್ದಾರೆ.

15. ಆನಿ ಮಸ್ಕರೇನ್
ಆನಿ ಮಸ್ಕರೇನ್ ಅವರು ಕೇರಳದ ತಿರುವನಂತಪುರದ ಕೆಥೋಲಿಕ್ ಕುಟುಂಬದಲ್ಲಿ ಜನಿಸಿದರು. ಅವರು ತಿರುವಾಂಕೂರು ಪ್ರಾಂತ್ಯ ಕಾಂಗ್ರೆಸ್ ಸೇರಿದ ಮೊದಲ ಮಹಿಳೆಯರಲ್ಲಿ ಒಬ್ಬರು. ತಿರುವಾಂಕೂರು ಪ್ರಾಂತ್ಯ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದ ಮೊದಲ ಮಹಿಳೆ. ಸ್ವಾತಂತ್ರ್ಯಕ್ಕಾಗಿ ಮತ್ತು ತಿರುವಾಂಕೂರು ರಾಜ್ಯವನ್ನು ಭಾರತದಲ್ಲಿ ವಿಲೀನಗೊಳಿಸಬೇಕೆಂದು ನಡೆದ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಚಿತ್ರಕೃಪೆ: ವೀಥಿ

ತನ್ನ ರಾಜಕೀಯ ಚಟುವಟಿಕೆಗಳಿಗಾಗಿ 1939-1947ರ ನಡುವೆ ಹಲವಾರು ಬಾರಿ ಸೆರೆವಾಸ ಅನುಭವಿಸಿದರು. 1951ರ ಚುನಾವಣೆಯಲ್ಲಿ ಮೊದಲ ಲೋಕಸಭೆಗೆ ಆಯ್ಕೆಯಾದರು. ಅವರು ಕೇರಳದ ಮೊದಲ ಸಂಸತ್ಸದಸ್ಯೆ. ಆಗ ಆಯ್ಕೆಯಾಗಿದ್ಜ ಕೇವಲ ಹತ್ತು ಮಹಿಳೆಯರಲ್ಲಿ ಒಬ್ಬರು. ಸಂಸತ್ತಿಗೆ ಆಯ್ಕೆಯಾಗುವ ಮೊದಲು ಅವರು ಅಲ್ಪಾವಧಿಗೆ ಆರೋಗ್ಯ ಮತ್ತು ವಿದ್ಯುತ್ ಖಾತೆಯ ಉಸ್ತುವಾರಿ ಸಚಿವೆಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...