Homeಮುಖಪುಟಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

ಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ದಾರಿ ಮತ್ತು ಹೊಸ ನಾಯಕತ್ವವನ್ನು ತೋರಿಸಲು ಹೊಸ ರಾಜಕೀಯ ಪಕ್ಷವನ್ನು ಐವರು ಅಪರಿಚಿತರು ಆರಂಭಿಸಿದ್ದಾರೆ! 370ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆದ ದೊಡ್ಡ ರಾಜಕೀಯ ಬೆಳವಣಿಗೆ ಇದಾಗಿದ್ದು ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆ ಈಗ ಎಲ್ಲರಲ್ಲಿ ಮೂಡಿದೆ.

ಐವರು ಪುರುಷರು ತಮ್ಮ ಪಕ್ಷವನ್ನು ಜಮ್ಮು ಕಾಶ್ಮೀರ ರಾಜಕೀಯ ಚಳವಳಿ- I ಎಂದು ಗುರುತಿಸಿದ್ದಾರೆ. “ಭಾರತ”ದೊಂದಿಗೆ ಭದ್ರವಾಗಿ ನಿಲ್ಲುತ್ತೇವೆ ಎಂದು ಘೋಷಿಸಿರುವ ಅವರನ್ನು ವಕ್ತಾರ ಶಾಹಿದ್ ಖಾನ್, ವಕೀಲ ರಾಜಾ ಅಶ್ರಫ್, ಮತ್ತು ಮುಷ್ತಾಕ್ ತಂತರಿ ಎಂದು ಗುರುತಿಸಲಾಗಿದೆ.

ಆಗಸ್ಟ್ 5ರ ನಂತರ ಕಾಶ್ಮೀರದಲ್ಲಿ ನಡೆದ ಮೊದಲ “ಅಧಿಕೃತೇತರ” ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬೇರೆ ಯಾರೂ ಮಾಡದ” ಸಮಯದಲ್ಲಿ ಮಾತನಾಡಲು ಧೈರ್ಯ ಮಾಡುವ ಮೂಲಕ ತಮ್ಮ ಜೀವನವನ್ನು ಅಪಾಯದಲ್ಲಿಟ್ಟಿದ್ದೇವೆ ಎಂದು ಘೋಷಿಸಿಕೊಂಡಿದ್ದಾರೆ.

ತಾವು ಪ್ರಗತಿಪರ ಮನಸ್ಸನ್ನು ಹೊಂದಿದ್ದಾರೆಂದು ಹೇಳಿಕೊಂಡಿರುವ ಅವರು “370ನೇ ವಿಧಿ ರದ್ದತಿ ನಂತರ ಕಾಶ್ಮೀರದ ಬಗ್ಗೆ ಮಾಧ್ಯಮಗಳು ನಕಾರಾತ್ಮಕತೆಯನ್ನು ತೋರಿಸುವುದನ್ನು ಬಿಟ್ಟು ಸಕಾರಾತ್ಮಕತೆಯನ್ನು ತೋರಿಸಬೇಕೆಂದು ಮಾಧ್ಯಮವನ್ನು ಒತ್ತಾಯಿಸಿದರು.

ಶಾಹಿದ್ ಖಾನ್ ಅವರು ತಮ್ಮನ್ನು ಮಾಜಿ ಪತ್ರಕರ್ತ ಎಂದು ಪರಿಚಯಿಸಿಕೊಂಡಿದ್ದಲ್ಲದೇ ನನ್ನನ್ನು ಇಲ್ಲಿರುವ ಅನೇಕರ ಬಲ್ಲರು ಎಂದರು. ಆದರೆ ಹಾಜರಿದ್ದ ವರದಿಗಾರರು ಆತನನ್ನು ತಿಳಿದಿಲ್ಲವೆಂದು ಹೇಳಿದ್ದಾರೆ.

ಸೋಮವಾರದ ಪತ್ರಿಕಾಗೋಷ್ಟಿ ನಡೆಸಲು ಸರ್ಕಾರ ಅವರಿಗೆ ಅನುಮತಿ ನೀಡಿದೆ ಎಂದು ಅವರು ಹೇಳಿದ್ದಾರೆ. ಕಾಶ್ಮೀರದ ಮುಖ್ಯವಾಹಿನಿಯ ಮತ್ತು ಪ್ರತ್ಯೇಕತಾವಾದಿ ನಾಯಕರು ಜೈಲಿನಲ್ಲಿರುವ ಸಮಯದಲ್ಲಿ ಇದು ಹಲವರನ್ನು ಹುಬ್ಬೇರಿಸುವಂತೆ ಮಾಡಿದೆ. ಜೊತೆಗೆ ಹಲವಾರು ಟಿವಿ ಚಾನೆಲ್‌ಗಳ ಸಿಬ್ಬಂದಿಗಳು ಈ ಪತ್ರಿಕಾಗೋಷ್ಟಿಯನ್ನು ನೇರ ಪ್ರಸಾರ ಮಾಡುದ್ದಾರೆ ಮತ್ತು ಅದಕ್ಕೆ ಇನ್ನಿಲ್ಲದ ಪ್ರಾಮುಖ್ಯತೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಅವರು ಯಾರೆಂದು ಪತ್ರಕರ್ತರು ಪದೇ ಪದೇ ಕೇಳಿದಾಗ, ಅವರು “ಸಾಮಾನ್ಯ” ಮತ್ತು “ಸಾಮಾನ್ಯ” ಪುರುಷರು ಎಂದು ಸಿದ್ದಉತ್ತರ ನೀಡಿದ್ದಾರೆ.

“ನಾವು ಯಾರೆಂದು ನೀವು ಕೇಳುತ್ತಿದ್ದೀರಿ. ಅದಕ್ಕಾಗಿಯೇ ನಾವು ಮುಂದೆ ಬರಲು ಬಯಸುವುದಿಲ್ಲ. ಸದ್ಯಕ್ಕೆ ನಾವು ಏನೂ ಅಲ್ಲ…. ನಮ್ಮನ್ನು ಬಲ್ಲವರು ಹೆಚ್ಚು ಇಲ್ಲ. ಮುಂದೆ ಇಂತಹ ಪ್ರಶ್ನೆಗಳು ಉದ್ಭವಿಸುತ್ತವೆ ಮತ್ತು ಅನೇಕ ಜನರು ನಮ್ಮ ಬಗ್ಗೆ ಬಹಳಷ್ಟು ವಿಷಯಗಳನ್ನು ಹೇಳುತ್ತಾರೆ ಎಂದು ನಮಗೆ ತಿಳಿದಿದೆ” ಖಾನ್ ಹೇಳಿದ್ದಾರೆ.

ನಿಮ್ಮ ಪಕ್ಷವು ಜಮ್ಮು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಮಾಡುವುದನ್ನು ಬೆಂಬಲಿಸುತ್ತದೆಯೇ ಅಥವಾ ಅದನ್ನು ಪುನಃಸ್ಥಾಪಿಸಲು ಒತ್ತಾಯಿಸುತ್ತದೆಯೇ ಎಂಬ ಪ್ರಶ್ನೆಗೆ ಅವರ ಬಳಿ ಯಾವುದೇ ಸ್ಪಷ್ಟ ಉತ್ತರಗಳಿಲ್ಲ. “ವಿಶೇಷ ಸ್ಥಾನಮಾನ ಕಳೆದ 60-70 ವರ್ಷಗಳಿಂದ ನಮ್ಮೊಂದಿಗೆ ಇತ್ತು. ಇದನ್ನು ತೆಗೆದುಹಾಕುವಂತೆ ಯಾರೂ ಒತ್ತಾಯಿಸಲಿಲ್ಲ. ನಾವು ಬಹಳಷ್ಟು ಸಂಗತಿಗಳೊಂದಿಗೆ ಬದುಕುತ್ತೇವೆ. ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂಬುದನ್ನು ಕಾಲವೇ ಉತ್ತರಿಸಲಿದೆ”ಎಂದು ಖಾನ್ ಹೇಳಿದ್ದಾರೆ.

ಇವರ ಈ ಪತ್ರಿಕಾಗೋಷ್ಟಿಯು ಉತ್ತರ ಕೊಡುವುದರ ಬದಲು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟಿಸಿದೆ. ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಮುಂದೆ ಇದು ಯಾವ ರೀತಿಯ ತಿರುವು ತೆಗೆದುಕೊಳ್ಳುತ್ತದೆ ನೋಡಬೇಕಿದೆ.

ಮಾಹಿತಿ: ದಿ ಟೆಲಿಗ್ರಾಫ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...