Homeಮುಖಪುಟಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

ಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ದಾರಿ ಮತ್ತು ಹೊಸ ನಾಯಕತ್ವವನ್ನು ತೋರಿಸಲು ಹೊಸ ರಾಜಕೀಯ ಪಕ್ಷವನ್ನು ಐವರು ಅಪರಿಚಿತರು ಆರಂಭಿಸಿದ್ದಾರೆ! 370ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆದ ದೊಡ್ಡ ರಾಜಕೀಯ ಬೆಳವಣಿಗೆ ಇದಾಗಿದ್ದು ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆ ಈಗ ಎಲ್ಲರಲ್ಲಿ ಮೂಡಿದೆ.

ಐವರು ಪುರುಷರು ತಮ್ಮ ಪಕ್ಷವನ್ನು ಜಮ್ಮು ಕಾಶ್ಮೀರ ರಾಜಕೀಯ ಚಳವಳಿ- I ಎಂದು ಗುರುತಿಸಿದ್ದಾರೆ. “ಭಾರತ”ದೊಂದಿಗೆ ಭದ್ರವಾಗಿ ನಿಲ್ಲುತ್ತೇವೆ ಎಂದು ಘೋಷಿಸಿರುವ ಅವರನ್ನು ವಕ್ತಾರ ಶಾಹಿದ್ ಖಾನ್, ವಕೀಲ ರಾಜಾ ಅಶ್ರಫ್, ಮತ್ತು ಮುಷ್ತಾಕ್ ತಂತರಿ ಎಂದು ಗುರುತಿಸಲಾಗಿದೆ.

ಆಗಸ್ಟ್ 5ರ ನಂತರ ಕಾಶ್ಮೀರದಲ್ಲಿ ನಡೆದ ಮೊದಲ “ಅಧಿಕೃತೇತರ” ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬೇರೆ ಯಾರೂ ಮಾಡದ” ಸಮಯದಲ್ಲಿ ಮಾತನಾಡಲು ಧೈರ್ಯ ಮಾಡುವ ಮೂಲಕ ತಮ್ಮ ಜೀವನವನ್ನು ಅಪಾಯದಲ್ಲಿಟ್ಟಿದ್ದೇವೆ ಎಂದು ಘೋಷಿಸಿಕೊಂಡಿದ್ದಾರೆ.

ತಾವು ಪ್ರಗತಿಪರ ಮನಸ್ಸನ್ನು ಹೊಂದಿದ್ದಾರೆಂದು ಹೇಳಿಕೊಂಡಿರುವ ಅವರು “370ನೇ ವಿಧಿ ರದ್ದತಿ ನಂತರ ಕಾಶ್ಮೀರದ ಬಗ್ಗೆ ಮಾಧ್ಯಮಗಳು ನಕಾರಾತ್ಮಕತೆಯನ್ನು ತೋರಿಸುವುದನ್ನು ಬಿಟ್ಟು ಸಕಾರಾತ್ಮಕತೆಯನ್ನು ತೋರಿಸಬೇಕೆಂದು ಮಾಧ್ಯಮವನ್ನು ಒತ್ತಾಯಿಸಿದರು.

ಶಾಹಿದ್ ಖಾನ್ ಅವರು ತಮ್ಮನ್ನು ಮಾಜಿ ಪತ್ರಕರ್ತ ಎಂದು ಪರಿಚಯಿಸಿಕೊಂಡಿದ್ದಲ್ಲದೇ ನನ್ನನ್ನು ಇಲ್ಲಿರುವ ಅನೇಕರ ಬಲ್ಲರು ಎಂದರು. ಆದರೆ ಹಾಜರಿದ್ದ ವರದಿಗಾರರು ಆತನನ್ನು ತಿಳಿದಿಲ್ಲವೆಂದು ಹೇಳಿದ್ದಾರೆ.

ಸೋಮವಾರದ ಪತ್ರಿಕಾಗೋಷ್ಟಿ ನಡೆಸಲು ಸರ್ಕಾರ ಅವರಿಗೆ ಅನುಮತಿ ನೀಡಿದೆ ಎಂದು ಅವರು ಹೇಳಿದ್ದಾರೆ. ಕಾಶ್ಮೀರದ ಮುಖ್ಯವಾಹಿನಿಯ ಮತ್ತು ಪ್ರತ್ಯೇಕತಾವಾದಿ ನಾಯಕರು ಜೈಲಿನಲ್ಲಿರುವ ಸಮಯದಲ್ಲಿ ಇದು ಹಲವರನ್ನು ಹುಬ್ಬೇರಿಸುವಂತೆ ಮಾಡಿದೆ. ಜೊತೆಗೆ ಹಲವಾರು ಟಿವಿ ಚಾನೆಲ್‌ಗಳ ಸಿಬ್ಬಂದಿಗಳು ಈ ಪತ್ರಿಕಾಗೋಷ್ಟಿಯನ್ನು ನೇರ ಪ್ರಸಾರ ಮಾಡುದ್ದಾರೆ ಮತ್ತು ಅದಕ್ಕೆ ಇನ್ನಿಲ್ಲದ ಪ್ರಾಮುಖ್ಯತೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಅವರು ಯಾರೆಂದು ಪತ್ರಕರ್ತರು ಪದೇ ಪದೇ ಕೇಳಿದಾಗ, ಅವರು “ಸಾಮಾನ್ಯ” ಮತ್ತು “ಸಾಮಾನ್ಯ” ಪುರುಷರು ಎಂದು ಸಿದ್ದಉತ್ತರ ನೀಡಿದ್ದಾರೆ.

“ನಾವು ಯಾರೆಂದು ನೀವು ಕೇಳುತ್ತಿದ್ದೀರಿ. ಅದಕ್ಕಾಗಿಯೇ ನಾವು ಮುಂದೆ ಬರಲು ಬಯಸುವುದಿಲ್ಲ. ಸದ್ಯಕ್ಕೆ ನಾವು ಏನೂ ಅಲ್ಲ…. ನಮ್ಮನ್ನು ಬಲ್ಲವರು ಹೆಚ್ಚು ಇಲ್ಲ. ಮುಂದೆ ಇಂತಹ ಪ್ರಶ್ನೆಗಳು ಉದ್ಭವಿಸುತ್ತವೆ ಮತ್ತು ಅನೇಕ ಜನರು ನಮ್ಮ ಬಗ್ಗೆ ಬಹಳಷ್ಟು ವಿಷಯಗಳನ್ನು ಹೇಳುತ್ತಾರೆ ಎಂದು ನಮಗೆ ತಿಳಿದಿದೆ” ಖಾನ್ ಹೇಳಿದ್ದಾರೆ.

ನಿಮ್ಮ ಪಕ್ಷವು ಜಮ್ಮು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಮಾಡುವುದನ್ನು ಬೆಂಬಲಿಸುತ್ತದೆಯೇ ಅಥವಾ ಅದನ್ನು ಪುನಃಸ್ಥಾಪಿಸಲು ಒತ್ತಾಯಿಸುತ್ತದೆಯೇ ಎಂಬ ಪ್ರಶ್ನೆಗೆ ಅವರ ಬಳಿ ಯಾವುದೇ ಸ್ಪಷ್ಟ ಉತ್ತರಗಳಿಲ್ಲ. “ವಿಶೇಷ ಸ್ಥಾನಮಾನ ಕಳೆದ 60-70 ವರ್ಷಗಳಿಂದ ನಮ್ಮೊಂದಿಗೆ ಇತ್ತು. ಇದನ್ನು ತೆಗೆದುಹಾಕುವಂತೆ ಯಾರೂ ಒತ್ತಾಯಿಸಲಿಲ್ಲ. ನಾವು ಬಹಳಷ್ಟು ಸಂಗತಿಗಳೊಂದಿಗೆ ಬದುಕುತ್ತೇವೆ. ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂಬುದನ್ನು ಕಾಲವೇ ಉತ್ತರಿಸಲಿದೆ”ಎಂದು ಖಾನ್ ಹೇಳಿದ್ದಾರೆ.

ಇವರ ಈ ಪತ್ರಿಕಾಗೋಷ್ಟಿಯು ಉತ್ತರ ಕೊಡುವುದರ ಬದಲು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟಿಸಿದೆ. ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಮುಂದೆ ಇದು ಯಾವ ರೀತಿಯ ತಿರುವು ತೆಗೆದುಕೊಳ್ಳುತ್ತದೆ ನೋಡಬೇಕಿದೆ.

ಮಾಹಿತಿ: ದಿ ಟೆಲಿಗ್ರಾಫ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...